Udupi News in Brief 31.05.2019
Kemmannu News Network, 01-06-2019 07:53:25
Udupi News in Brief 31.05.2019:
ಸಿಇಟಿ ಸೀಟು ಹಂಚಿಕೆ- ಜಿಲ್ಲೆಯಲ್ಲಿ ದಾಖಲೆ ಪರಿಶೀಲನೆ ಕೇಂದ್ರ ಸ್ಥಾಪನೆ
ಉಡುಪಿ :2019 ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳಿಗೆ ಅಭ್ಯರ್ಥಿಗಳ ಇಚ್ಛೆಯ ಅನುಸಾರ, ಆನ್ಲೈನ್ ಮೂಲಕ ಸೀಟು ಹಂಚಿಕೆ ಮಾಡಲು ಹಾಗೂ ಅಭ್ಯರ್ಥಿಗಳ ದಾಖಲೆಯನ್ನು ಪರಿಶೀಲನೆ ಮಾಡಲು, ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಎಸ್.ಡಿ.ಎಂ ಆಯುರ್ವೇದಿಕ ಮಹಾವಿದ್ಯಾಲಯದಲ್ಲಿ 2019-20 ನೇ ಸಾಲಿನಲ್ಲಿ ಸಹಾಯಕ ಕೇಂದ್ರ ಪ್ರಾರಂಭಿಸಲಾಗಿದೆ.
ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲು ಜಿಲ್ಲೆಯ ಇಬ್ಬರು ನೋಡೆಲ್ ಅಧಿಕಾರಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರನ್ನು ನೇಮಕ ಮಾಡಿರುತ್ತಾರೆ.
ಎಸ್.ಡಿ.ಎಮ್ ಆಯುರ್ವೇದ ಮೆಡಿಕಲ್ ಕಾಲೇಜ್, ಲಕ್ಷ್ಮೀ ನಾರಾಯಣ ನಗರ, ಕುತ್ಪಾಡಿಯಲ್ಲಿ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, ನೋಡೆಲ್ ಅಧಿಕಾರಿಯಾಗಿ ಪಂಡರಿನಾಥ .ಎಸ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಪೊಲಿಪು-ಕಾಪು (ಮೊ.ನಂ: 9481963630) ಇವರನ್ನು ನೇಮಿಸಿದೆ.
ಅಡಿಶನಲ್ ನೋಡೆಲ್ ಅಧಿಕಾರಿಯಾಗಿ ರಾಘವೇಂದ್ರ ಎನ್.ಆರ್, ಉಪನ್ಯಾಸಕರು, ಪಾಲಿಟೆಕ್ನಿಕ್ ಉಡುಪಿ (ಮೊ.ನಂ: 9972511122) ಇವರನ್ನು ನೇಮಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಉಡುಪಿ- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ- ಆಕ್ಷೇಪಣೆಗೆ ಮನವಿ
ಉಡುಪಿ : ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಇವರ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಹಾಕಲಾಗಿರುತ್ತದೆ.
ಈ ಆಯ್ಕೆ ಪಟ್ಟಿಯ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಜೂನ್ 6 ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಇವರಿಗೆ ಮುದ್ದಾಂ ಆಗಿ ಅಥವಾ ಸದರಿಯವರ ಕಚೇರಿಗೆ ಸಲ್ಲಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮ್ಯಾಂಗ್ರೋವ್ ಗಿಡ ನೆಡುವ ಕಾರ್ಯಕ್ರಮ
ಉಡುಪಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಅರಣ್ಯ ಇಲಾಖೆ ಕುಂದಾಪುರ ಇವರ ನೇತೃತ್ವದಲ್ಲಿ ಮೇ 27 ರಂದು ಕುಂದಾಪುರದ ಮೂವತ್ತು ಮೂಡಿ ಎಂಬ ಸಮುದ್ರ ಮತ್ತು ನದಿ ಸೇರುವ ಸ್ಥಳದಲ್ಲಿ 3000 ಮ್ಯಾಂಗ್ರೋವ್ ಗಿಡವನ್ನು ಸ್ಕೌಟ್ಸ್-ಗೈಡ್ಸ್, ರೋವರ್-ರೇಂಜರ್ ಸಹಕಾರದಿಂದ ಗಿಡ ನೆಡುವ ಮೂಲಕ ಪ್ರಕೃತಿ ರಕ್ಷಣೆಯನ್ನು ಸ್ಕೌಟ್ಸ್ ಗೈಡ್ಸ್ಗಳು ಯಾವ ರೀತಿ ಮಾಡಬಹುದು ಎಂಬುದನ್ನು ಸಮಾಜಕ್ಕೆ ನೀದರ್ಶನ ನೀಡುವ ಒಂದು ಉತ್ತಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಲ್ಲಿನ ಅರಣ್ಯಧಿಕಾರಿಗಳು ಮ್ಯಾಂಗ್ರೋವ್ ಗಿಡದ ಬಗ್ಗೆ ಮಾಹಿತಿ ನೀಡಿದರು
ಕಾರ್ಯಕ್ರಮದಲ್ಲಿ ಕುಂದಾಪುರ ಅರಣ್ಯಧಿಕಾರಿಗಳು, ಸಿಂಬ್ಬಂದಿ ವರ್ಗ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ 50 ಸ್ಕೌಟ್ಸ್/ ಗೈಡ್ಸ್ ಹಾಗೂ ರೋವರ್ಸ್/ ರೇಂಜರ್ಸ್, ಜಿಲ್ಲಾ ಉಪಾಧ್ಯಕ್ಷೆ ಗುಣರತ್ನಾ, ಜಿಲ್ಲಾ ಸ್ಥಾನೀಯ ಆಯುಕ್ತ ಕೊಗ್ಗ ಗಾಣಿಗ, ಜಿಲ್ಲಾ ತರಬೇತಿ ಆಯುಕ್ತ ಆನಂದ್ ಆಡಿಗ ಭಾಗವಹಿಸಿದ್ದರು.
ಜಿಲ್ಲಾ ಸಂಘಟಕರಾದ ಸುಮನ್ ಶೇಖರ್ ಹಾಗೂ ನಿತೀನ್ ಅಮೀನ್ ಕಾರ್ಯಕ್ರಮವನ್ನು ಸಂಘಟಿಸಿದರು.
ಕಾರ್ಕಳ: ಪ್ರಧಾನ ಮಂತ್ರಿ ಆವಾಸ್ ಯೋಜನೆ-ಅರ್ಜಿ ಆಹ್ವಾನ
ಉಡುಪಿ : ಕೇಂದ್ರ ಸರ್ಕಾರವು 2019-20 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ (ನಗರ) ಹೌಸಿಂಗ್ ಫಾರ್ ಆಲ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಸದ್ರಿ ಯೋಜನೆ ಉದ್ದೇಶವು ಆರ್ಥಿಕ ದುರ್ಬಲ ವಿಭಾಗ, ಕಡಿಮೆ ಆದಾಯ ಗುಂಪು, ಮಧ್ಯಮ ಆದಾಯ-I, ಮಧ್ಯಮ ಆದಾಯ-II ವರ್ಗಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ಬ್ಯಾಂಕುಗಳು, ಫೈನಾನ್ಸ್ ಕಂಪನಿಗಳು ಮತ್ತು ಇತರೆ ಹಣಕಾಸು ಸಂಸ್ಥೆಗಳು ಬಡ್ಡಿ ಸಹಾಯಧನದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಅವಕಾಶ ಕಲ್ಪಿಸಿದೆ.
ಆರ್ಥಿಕ ದುರ್ಬಲ ವರ್ಗದವರಿಗೆ ವಾರ್ಷಿಕ ಆದಾಯ 3 ಲಕ್ಷದ ವರೆಗೆ ಕಟ್ಟಡ ವಿಸ್ತೀರ್ಣ 30 ಚದರ ಮೀಟರ್ವರೆಗೆ ಮನೆ ನಿರ್ಮಿಸಲು 6 ಲಕ್ಷದವರೆಗೆ ಶೇ.6.5 ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಯವರೆಗೆ ಸಾಲ ನೀಡಲಾಗುವುದು. ಬಡ್ಡಿ ದರದಲ್ಲಿ 2,67,280 ರೂ. ರಿಯಾಯಿತಿಯನ್ನು ನೀಡಲಾಗುವುದು.
ಕಡಿಮೆ ಆದಾಯ ವರ್ಗದವರಿಗೆ ವಾರ್ಷಿಕ ಆದಾಯ 3.01 ಲಕ್ಷ ದಿಂದ 6 ಲಕ್ಷದವರೆಗೆ ಕಟ್ಟಡ ವಿಸ್ತೀರ್ಣ 60 ಚದರ ಮೀಟರ್ ವರೆಗೆ ಮನೆ ನಿರ್ಮಿಸಲು 6 ಲಕ್ಷದವರೆಗೆ ಶೇ.6.5 ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಯವರೆಗೆ ಸಾಲ ನೀಡಲಾಗುವುದು. ಬಡ್ಡಿ ದರದಲ್ಲಿ 2,67,280 ರೂ. ರಿಯಾಯಿತಿ ನೀಡಲಾಗುವುದು.
ಮಧ್ಯಮ ಆದಾಯ-I ವರ್ಗದವರಿಗೆ ವಾರ್ಷಿಕ ಆದಾಯ 6.01 ಲಕ್ಷದಿಂದ 12 ಲಕ್ಷದ ವರೆಗೆ ಕಟ್ಟಡ ವಿಸ್ತೀರ್ಣ 160 ಚ.ಮೀ. ವರೆಗೆ ಮನೆ ನಿರ್ಮಿಸಲು 9 ಲಕ್ಷದವರೆಗೆ ಶೆ.4 ರ ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಯವರಿಗೆ ಸಾಲ ನೀಡಲಾಗುವುದು. ಬಡ್ಡಿ ದರದಲ್ಲಿ 2,35,068 ರೂ. ರಿಯಾಯಿತಿ ನೀಡಲಾಗುವುದು.
ಮಧ್ಯಮ ಆದಾಯ-II ವರ್ಗದವರಿಗೆ ವಾರ್ಷಿಕ ಆದಾಯ 12.01 ಲಕ್ಷದಿಂದ 18 ಲಕ್ಷದ ವರೆಗೆ ಕಟ್ಟಡ ವಿಸ್ತಿರ್ಣ 200 ಚ.ಮೀ. ವರೆಗೆ ಮನೆ ನಿರ್ಮಿಸಲು 12 ಲಕ್ಷದವರೆಗೆ ಶೇ. 3 ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಗೆ ಸಾಲ ನೀಡಲಾಗುವುದು. ಬಡ್ಡಿ ದರದಲ್ಲಿ 2,30,156 ರೂ. ರಿಯಾಯಿತಿ ನೀಡಲಾಗುವುದು.
ಈ ಮೇಲಿನ ಸೌಲಭ್ಯವನ್ನು ಪಡೆದುಕೊಳ್ಳಲು ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಕಟ್ಟಡದ ನೀಲಿ ನಕ್ಷೆ, ಆರ್.ಟಿ.ಸಿ ಪತ್ರ/ ಖಾತಾ, ಕಟ್ಟಡ ಪರವಾನಿಗೆ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ (ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು), ಭಾವಚಿತ್ರ 2 ಸೆಟ್ನೊಂದಿಗೆ ಕಾರ್ಕಲ ಪುರಸಭೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾರ್ಕಳ ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಟೆಂಡರ್ ಆಹ್ವಾನ
ಉಡುಪಿ, ಮೇ 31 ( ಕರ್ನಾಟಕ ವಾರ್ತೆ) : ಜಿಲ್ಲೆಯ ಕೃಷಿ ಇಲಾಖೆಯ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆಯಡಿ ಸಮುದಾಯ ಸಹಾಯಕರು ಹಾಗೂ ಸಮುದಾಯ ಸಂಪನ್ಮೂಲ ವ್ಯಕ್ತಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯುವ ಬಗ್ಗೆ ಟೆಂಡರ್ನ್ನು ಆಹ್ವಾನಿಸಲಾಗಿದೆ.
ಇಚ್ಛೆಯುಳ್ಳ ಸಂಸ್ಥೆಯವರು ಟೆಂಡರ್ ಅರ್ಜಿಯನ್ನು ಇ-ಪೇಮೆಂಟ್ ಮುಖಾಂತರ (ಕ್ರೆಡಿಟ್/ ಡೆಬಿಟ್ ಕಾರ್ಡ್ ಮುಖಾಂತರ ಅಥವಾ ಓಇಈಖಿ ಚಲನ್ ಮೂಲಕ) ಜೂನ್ 27 ರೊಳಗೆ ತಿತಿತಿ.eಠಿಡಿoಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಇ-ಟೆಂಡರ್ನ್ನು ಜೂನ್ 28 ರಂದು ಸಂಜೆ 4 ಗಂಟೆಗೆ ತೆರೆಯಲಾಗುವುದು ಎಂದು ಉಡುಪಿ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಅಕೌಂಟೆಂಟ್ಗಳ ಸೇವೆ ಪಡೆಯಲು ಟೆಂಡರ್ ಆಹ್ವಾನ
ಉಡುಪಿ, ಮೇ 31 ( ಕರ್ನಾಟಕ ವಾರ್ತೆ) :ಜಿಲ್ಲೆಯ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಿಗೆ ಅಗತ್ಯವಿರುವ 9 ಅಕೌಂಟೆಂಟ್ಗಳ ಸೇವೆಯನ್ನು ಖಾಸಗಿ ಸಂಸ್ಥೆಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಪಡೆದುಕೊಳ್ಳಲು ದಾಸ್ತಾವೇಜಿನಲ್ಲಿ ತಿಳಿಸಿರುವ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಟೆಂಡರ್ನ್ನು ಆಹ್ವಾನಿಸಲಾಗಿದೆ.
ಇಚ್ಛೆಯುಳ್ಳ ಸಂಸ್ಥೆಯವರು ಟೆಂಡರ್ ಅರ್ಜಿಯನ್ನು ಇ-ಪೇಮೆಂಟ್ ಮುಖಾಂತರ (ಕ್ರೆಡಿಟ್/ ಡೆಬಿಟ್ ಕಾರ್ಡ್ ಮುಖಾಂತರ ಅಥವಾ ಓಇಈಖಿ ಚಲನ್ ಮೂಲಕ) ಜೂನ್ 27 ರೊಳಗೆ ತಿತಿತಿ.eಠಿಡಿoಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಲ್ಲಿಸಬಹುದಾಗಿದೆ. ಇ-ಟೆಂಡರ್ನ್ನು ಜೂನ್ 28 ರಂದು ಸಂಜೆ 4 ಗಂಟೆಗೆ ತೆರೆಯಲಾಗುವುದು ಎಂದು ಉಡುಪಿ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ತೀವೃತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ
ಉಡುಪಿ, ಮೇ 31 ( ಕರ್ನಾಟಕ ವಾರ್ತೆ) : ರಾಷ್ಟ್ರೀಯ Iಆಅಈ (ತೀವೃತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ) ಕಾರ್ಯಕ್ರಮ ಜೂನ್ 3 ರಿಂದ 17 ರ ವರೆಗೆ ಜರುಗಲಿದೆ. 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಬೇಧಿಯಿಂದ ಸಂಭವಿಸುವ ಮರಣ ಸಂಖ್ಯೆಯನ್ನು ಕಡಿಮೆ ಮಾಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಮಕ್ಕಳ ಗುರಿ 70796 ಆಗಿದ್ದು, 5 ವರ್ಷದೊಳಗಿನ ಮಕ್ಕಳಿರುವ ಎಲ್ಲಾ ಮನೆಗಳಿಗೆ ಆಶಾ /ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಓ.ಆರ್.ಎಸ್ ಪ್ಯಾಕೆಟ್ ವಿತರಣೆ ಮಾಡುವುದು ಮತ್ತು ಅತಿಸಾರ ಬೇಧಿ ಆದಾಗ ಓ.ಆರ್.ಎಸ್ ಚಿಕಿತ್ಸೆ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು. ಆರೋಗ್ಯ ಸಂಸ್ಥೆಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಓ.ಆರ್.ಎಸ್ ಮತ್ತು ಜಿಂಕ್ ಕಾರ್ನರ್ ರಚಿಸಲಾಗುವುದು. ಅತಿಸಾರ ಬೇಧಿ ಪ್ರಕರಣಗಳಿಗೆ ಓ.ಆರ್.ಎಸ್ ಮತ್ತು ಜಿಂಕ್ ಚಿಕಿತ್ಸೆ ನೀಡಲಾಗುವುದು. ತೀವೃ ನಿರ್ಜಲೀಕರಣ ಇರುವ ಪ್ರಕರಣಗಳಿಗೆ ತಾಲೂಕು/ ಜಿಲ್ಲಾ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುವುದು.
ನವಜಾತ ಮತ್ತು ಎಳೆಯ ಮಕ್ಕಳಿಗೆ 6 ತಿಂಗಳ ಒಳಗೆ ತಾಯಿ ಎದೆ ಹಾಲು ಕೊಡುವ ಬಗ್ಗೆ ಉತ್ತೇಜಿಸುವುದು ಮತ್ತು 6 ತಿಂಗಳ ನಂತರ ತಾಯಿಯ ಎದೆ ಹಾಲಿನೊಂದಿಗೆ ಪೂರಕ ಆಹಾರ ನೀಡುವ (Iಟಿಜಿಚಿಟಿಣ & ಙouಟಿg ಅhiಟಜ ಈeeಜiಟಿg) ಬಗ್ಗೆ ಉತ್ತೇಜಿಸುವುದು.
ಈ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ನಗರಸಭೆ ಹಾಗೂ ಇತರ ಇಲಾಖೆಯ ಸಹಭಾಗಿತ್ವದಲ್ಲಿ ಯಶಸ್ವಿ ಅನುಷ್ಟಾನಗೊಳಿಸಲಾಗುತ್ತದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ, ಅಡುಗೆಯವರಿಗೆ ಮತ್ತು ಅಂಗನವಾಡಿಯಲ್ಲಿ ಅಂಗನವಾಡಿ ಸಹಾಯಕರಿಯರಿಗೆ ಮತ್ತು ಮಕ್ಕಳಿಗೆ ವೈಜ್ಞಾನಿಕವಾಗಿ ಕೈತೊಳೆಯುವ ಬಗ್ಗೆ ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಅಂಗನವಾಡಿ ಶಿಕ್ಷಕಿಯರು ಮಾರ್ಗದರ್ಶನವನ್ನು ನೀಡುವರು. ಸಾರ್ವಜನಿಕರು ಅತಿಸಾರ ಭೇದಿ ಪ್ರಕರಣಗಳಿದ್ದಲ್ಲಿ ಹತ್ತಿರ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬಹುದಾಗಿದೆ.
ಜೂನ್ 3 ರಂದು ಬೆಳಿಗ್ಗೆ 9.30 ಕ್ಕೆ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ಮತ್ತು ತಾಯಿ ಮಕ್ಕಳ ಆಸ್ಪತ್ರೆ ಉಡುಪಿಯಲ್ಲಿ ತೀವ್ರತರ ಅತಿಸಾರ ಭೇದಿ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಪ್ರತಿಯೊಬ್ಬ ವಿದ್ಯಾರ್ಥಿಯೂ ತಂಬಾಕು ಸೇವನೆಯ ದುಷ್ಪರಿಣಾಮ ಅರಿಯಲಿ- ಉದಯ ಎಸ್. ಕೋಟ್ಯಾನ್
ಉಡುಪಿ, ಮೇ 31( ಕರ್ನಾಟಕ ವಾರ್ತೆ) : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲ್ಲೂಕು ಆರೋಗ್ಯಾಧಿಕಾರಿಗಳು ಕಾರ್ಕಳ ಮತ್ತು ಬಜಗೋಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದೊಂದಿಗೆ ಮೇ-31 ತಂಬಾಕು ರಹಿತ ದಿನದ ಅಂಗವಾಗಿ “ಗುಲಾಬಿ ಆಂದೋಲನ” ಜಾಥಾ ಕಾರ್ಯಕ್ರಮ ನಡೆಯಿತು. ಸದರಿ ಜಾಥಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳಿಂದ ಒಂದು ಗುಲಾಬಿ ಹೂ ನೀಡುವುದರ ಮೂಲಕ ಪ್ರತಿ ಅಂಗಡಿಯ ಮಾಲೀಕರಿಗೆ “ತಂಬಾಕು ತ್ಯಜಿಸಿ, ಜೀವನವನ್ನು ಆಯ್ದಕೊಳ್ಳಿ” ಮತ್ತು “ತಂಬಾಕು ಮುಕ್ತ ನಾಡನ್ನು ನಿರ್ಮಿಸೋಣ” ಎಂಬ ಘೋಷಣೆಯೊಂದಿಗೆ ಅರಿವು ಮೂಡಿಸಲಾಯಿತು.
ಗುಲಾಬಿ ಆಂದೋಲನದ ಜಾಥಾ ಕಾರ್ಯಕ್ರಮವು ನಗರದ ಸಿಟಿ ಬಸ್ ಸ್ಯಾಂಡ್ನಿಂದ ಭುವನೇಶ್ವರಿ ಸರ್ಕಲ್ ಮೂಲಕ ಸಾಗಿ ಬಜಗೋಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನವರೆಗೆ ನಡೆದ ಜಾಥಾಕ್ಕೆ ಗುಲಾಬಿ ಹೂ ನೀಡುವ ಮೂಲಕ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಹಸಿರು ನಿಶಾನೆ ನೀಡಿದರು.
ನಂತರ ಬಜಗೋಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಭಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಸದಸ್ಯ ಉದಯ ಎಸ್. ಕೋಟ್ಯಾನ್ ಚಾಲನೆ ನೀಡಿ, ಮಾತನಾಡಿ, ಸಮಾಜದಲ್ಲಿತಂಬಾಕು ವ್ಯಸನಿಗಳ ಸಂಖÉ್ಯ ಹೆಚ್ಚಿದ್ದು, ಇದರಿಂದ ಹೃದಯಾಘಾತ, ಅಸ್ತಮಾ ಕಾಯಿಲೆಗಳು ಹೆಚ್ಚಾಗ ತೊಡಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಅರಿತು ಇಂತಹ ದುಶ್ಟಟಗಳಿಗೆ ಬಲಿಯಾಗದೇ, ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡು ನಾಡಿಗೆ ಉತ್ತಮ ಪ್ರಜೆಯಾಗಲಿ ಎಂದು ಹಾರೈಸಿದರು.
ಕಾರ್ಕಳ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿ, ತಂಬಾಕು ಸೇವನೆಯು ಜೀವನಕ್ಕೆ ಮಾರಕವಾಗಿದ್ದು, ಒಂದು ಧಮ್ ಎಳೆದರೆ, ಪುನಃ ಪುನಃ ಧಮ್ ಎಳೆಯಬೇಕೆಂದು ಆಸೆ ಹೆಚ್ಚಾಗುತ್ತದೆ. ದಯವಿಟ್ಟು ನಿರಾಕರಿಸಿ ಅದರಿಂದ ಆದಷ್ಟು ದೂರವಿರಿ ಎಂದು ಕಿವಿ ಮಾತು ಹೇಳಿದರು. ತಂಬಾಕನ್ನು ನಿಯಂತ್ರಣಕ್ಕೆ ತರಲು ಆರೋಗ್ಯ ಇಲಾಖೆಯಡಿಯಲ್ಲಿ ತಂಬಾಕು ನಿಯಂತ್ರಣ ಕೋಶ ಇದೆ. ಪ್ರತೀ ತಿಂಗಳು ಜಿಲ್ಲಾದ್ಯಂತ ಪ್ರತೀ ತಾಲ್ಲೂಕಿನ ಎಲ್ಲಾಅಂಗಡಿ/ ಹೋಟೇಲ್ಗಳಲ್ಲಿ ಕೋಟ್ಪಾ -2003 ಕಾಯ್ದೆಯಡಿ ದಾಳಿ ನಡೆಸಿ, ಸೂಚನಾ ಘಲಕಗಳಲ್ಲದೇ ಮಾರಾಟ ಮಾಡುತಿರುವಂತಹ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಕಡ್ಡಾಯವಾಗಿ ಸೂಚನಾ ಘಲಕಗಲನ್ನು ಅಳವಡಿಸುವಂತೆ ಸೂಚಿಸಲಾಗುತ್ತದೆ. ಈ ಕೋಟ್ಪಾ ದಾಳಿ ಪ್ರಕ್ರಿಯೆಗೆ ಮುಖ್ಯವಾಗಿ ಪೋಲೀಸರ ಸಹಕಾರ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಕಾರ್ಕಳ ತಾಲೂಕನ್ನು ಕೋಟ್ಪಾ-2003 “ಉನ್ನತ ಅನುಷ್ಠಾನ ತಾಲೂಕು”ಎಂದು ಘೋಷಿಸುತ್ತೇವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಮೂಡಾರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಗೀತಾ ಪಾಟ್ಕರ್ ಮಾತನಾಡಿ, ಆರೋಗ್ಯ ಇಲಾಖೆಯಡಿಯಲ್ಲಿ ನಡೆಯುವ ತಂಬಾಕು ದುಷ್ಪರಿಣಾಮದ ಜಾಗೃತಿ ಅಭಿಯಾನಕ್ಕೆ ಹೆಮ್ಮೆ ವ್ಯಕ್ತಪಡಿಸುತ್ತಾ, ತಂಬಾಕನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಪಂಚಾಯಿತಿ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ/ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಡಾ. ವಾಸುದೇವ ಉಪಧ್ಯಾಯ ಮಾತನಾಡಿ, ತಂಬಾಕು ವ್ಯಸನಿಗಳಿರುವ ಮನೆಯಲ್ಲಿ ಶ್ವಾಸಕೋಶದ ಕ್ಯಾನ್ಸರ್, ಉಸಿರಾಟದ ತೊಂದರೆ ಕಾಣಿಸಿಕೊಂಡರೆ ಅದರಿಂದ ಮುಕ್ತರಾಗಲು ಜಿಲ್ಲಾ ಆಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರಕ್ಕೆ ಭೇಟಿ ನೀಡಿ ಆಪ್ತಸಮಾಲೋಚಕರಿಂದ ಉಚಿತವಾಗಿ ಔಷಧವನ್ನು ಪಡೆಯಬಹುದು ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಗಣೇಶ್ ಬರ್ಲಾಯ ಮಾತನಾಡಿ, ತಂಬಾಕು ಕುರಿತು ವಿದ್ಯಾರ್ಥಿಗಳು ಹೆಚ್ಚು ಜಾಗೃತಗೊಂಡು ತಮ್ಮ ಕುಟುಂಬದವರ ಆರೋಗ್ಯವನ್ನು ಸುಸ್ಥಿರದಿಂದ ಕಾಪಾಡಿಕೊಳ್ಳಲು ಸಲಹೆ ನೀಡಿದರು.
ಕಾರ್ಯಕ್ರಮ ಸಂಯೋಜಕ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರು, ಕಾಲೇಜಿನ ಎನ್.ಎಸ್.ಎಸ್ ಶಿಕ್ಷಕ ಪ್ರವೀಣ್ ಶೆಟ್ಟಿ, ಬಜಗೋಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಾರ್ಕಳ ಕ್ಷೇತ್ರ ಆರೋಗ್ಯ ಮತ್ತು ಶಿಕ್ಷಣ ಅಧಿಕಾರಿ ಶಶಿಧರ್ ನಿರೂಪಿಸಿದರು, ಕಾರ್ಕಳ ಹಿರಿಯ ಆರೋಗ್ಯ ಸಹಾಯಕ ಶಿವರಾಮ್ ಭಟ್ ವಂದಿಸಿದರು.
ಉಚಿತ ಕಂಪ್ಯೂಟರ್ ತರಬೇತಿ- ನೋಂದಣಿಗೆ ಸೂಚನೆ
ಉಡುಪಿ, ಮೇ 31( ಕರ್ನಾಟಕ ವಾರ್ತೆ) : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ, ಇಲ್ಲಿ ಸಾಫ್ಟ್ ಸ್ಕೀಲ್ಸ್ ಮತ್ತು ಬೇಸಿಕ್ ಕಂಪ್ಯೂಟರ್, ಕನ್ನಡನುಡಿ ಟೈಪಿಂಗ್ ತರಬೇತಿಯನ್ನು ಪಡೆಯಲು ಇಚ್ಚಿಸುವ ಕೆಲಸ ಹುಡುಕುವ ಆಸಕ್ತ ಯುವಕ, ಯುವತಿಯರು, ವಿದ್ಯಾರ್ಥಿಗಳು ನೋಂದಾವಣಿ ಮಾಡಬಹುದಾಗಿದೆ.
ತರಬೇತಿಯು ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ; 0820-2574869, 9480259790 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link