Brief Udupi News with Pictures
Kemmannu News Network, 25-08-2018 21:06:05
ಆಗಸ್ಟ್ 29: ರಾಷ್ಟ್ರೀಯ ಹೆದ್ದಾರಿ ಭೂ ಸಂತ್ರಸ್ತರ ಕುಂದುಕೊರತೆ ಸಭೆ
ಉಡುಪಿ, ಆಗಸ್ಟ್ 24 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66(17) ಅಗಲೀಕರಣಕ್ಕಾಗಿ ಭೂಸ್ವಾಧೀೀನಗೊಳ್ಳುತ್ತಿರುವ ಜಮೀನುಗಳ ಭೂ ಸಂತ್ರಸ್ತರಿಗೆ ಪರಿಹಾರ ಹಣ ಪಾವತಿಸುವಲ್ಲಿ ವಿಳಂಬ ಆಗುತ್ತಿರುವುದಾಗಿ ಅನೇಕ ಅರ್ಜಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಚರ್ಚಿಸಲು ಭೂ ಸಂತ್ರಸ್ತರ ಕುಂದುಕೊರತೆಗಳ ಸಭೆಯನ್ನು ಆಗಸ್ಟ್ 29 ರಂದು ಬೆಳಗ್ಗೆ 11 ಕ್ಕೆ ಬೈಂದೂರು ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.
ಈ ಸಭೆಗೆ ಭೂ ಸಂತ್ರಸ್ತರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ, ಪ್ರಿಯಾಂಕ ಮೇರಿ ಪ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಗಸ್ಟ್ 26: ಮಾದಕ ವ್ಯಸನ ವಿರೋಧಿ ಅಭಿಯಾನದ ಪ್ರಯುಕ್ತ ಸೈಕ್ಲಾಥನ್
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಇವರ ಜಂಟಿ ಸಹಯೋಗದೊಂದಿಗೆ ಆಯೋಜಿಸಿರುವ ಎರಡು ತಿಂಗಳುಗಳ ಕಾಲ ಮಾದಕ ವ್ಯಸನ ವಿರೋಧಿ ಅಭಿಯಾನದ ಪ್ರಯುಕ್ತ ಸೈಕ್ಲಾಥನ್ ಕಾರ್ಯಕ್ರಮವನ್ನು ಭಾನುವಾರ ಅಗಸ್ಟ್ 26ರಂದು ಬೆಳಿಗ್ಗೆ ಉಡುಪಿಯಲ್ಲಿ ಆಯೋಜಿಸಲಾಗಿದೆ.
ಸೈಕ್ಲಥಾನ್ ಕಾರ್ಯಕ್ರಮ ಬೆಳಿಗ್ಗೆ 6 ಗಂಟೆಗೆ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಮುಂಬಾಗದಲ್ಲಿ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಹಸಿರು ನಿಶಾನೆ ತೋರಲಿದ್ದಾರೆ.
ಸೈಕ್ಲಾಥಾನ್ ಮಾರ್ಗವು ಈ ರೀತಿ ಇದೆ. ಬಡಗಬೆಟ್ಟು ಕೋ ಅಪರೇಟಿವ್ ಸೊಸೈಟಿ ಬಳಿಯಿಂದ ಆರಂಭವಾಗಿ, ಲಯನ್ಸ್ ಸರ್ಕಲ್, ಬಿಗ್ ಬಜಾರ್ – ಡಯಾನಾ ಹೋಟೆಲ್, ಅಜ್ಜರಕಾಡಿ, ಬ್ರಹ್ಮಗಿರಿ- ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ, ಕರಾವಳಿ ಬೈಪಾಸ್, ಸಂತೆಕಟ್ಟೆ ಮಾರ್ಗವಾಗಿ ಅಲ್ಲಿಂದ ತಿರುಗಿ ಸಂತೆಕಟ್ಟಿ, ಅಂಬಾಗಿಲು, ಕಲ್ಸಂಕ, ಕಡಿಯಾಳಿ, ಎಮ್ ಜಿ ಎಮ್ ಕಾಲೇಜು ಬಸ್ಟ್ಯಾಂಡ್, ಸಾಗಿ ಸಿಟಿ ಬಸ್ ಸ್ಟ್ಯಾಂಡ್, ಬನ್ನಂಜೆ, ಎಸ್ಪಿ ಕಚೇರಿ, ಬ್ರಹ್ಮಗಿರಿ, ಅಜ್ಜರಕಾಡಿ, ಡಯಾನಾ ಹೊಟೇಲ್, ಬಿಗ್ ಬಜಾರ್, ಲಯನ್ಸ್ ಸರ್ಕಲ್ ಮೂಲಕ ಬಡಗಬೆಟ್ಟಿ ಸೊಸೈಟಿ ಬಳಿ ಸಮಾಪನಗೊಳ್ಳಲಿದೆ. ಸೈಕ್ಲಾಥಾನ್ ಕಾರ್ಯಕ್ರಮದಲ್ಲಿ 300ಕ್ಕೂ ಅಧಿಕ್ ಸೈಕ್ಲಿಂಗ್ ಉತ್ಸಾಹಿಗಳು ಭಾಗವಹಿಸಲಿದ್ದು, ಭಾಗವಹಿಸಿದವರಿಗೆಲ್ಲರಿಗೂ ಉಪಹಾರದ ವ್ಯವಸ್ಥೆ ಮಾಡಲಾಗಿದೆ.
ಸೈಕ್ಲಾಥಾನ್ ಕಾರ್ಯಕ್ರಮಕ್ಕೆ ಬಡಗಬೆಟ್ಟು ಕೊ ಅಪರೇಟಿವ್ ಸೊಸೈಟಿ, ಇಂಡಿಯನ್ ಮೆಡಿಕಲ್ ಎಸೋಸೀಯೇಶನ್, ಉಡುಪಿ ಹಾಗೂ ಉಡುಪಿ ಸೈಕ್ಲಿಂಗ್ ಅಸೊಶೀಯೇಶನ್ ಸಹಕಾರ ನೀಡಲಿದ್ದು ಹೆಚ್ಚಿನ ಸಂಖೆಯ ಸೈಕಲಿಂಗ್ ಉತ್ಸಾಹಿಗಳು ಭಾಗವಹಿಸುವಂತೆ ಕೋರಿದ್ದಾರೆ. ಸೈಕ್ಲಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸುವವರು ತಮ್ಮ ಹೆಸರನ್ನು ದಿವಾಕರ್ ಹಿರಿಯಡ್ಕ (9900407474), ಪಲ್ಲವಿ ಸಂತೋಷ್ (9632767780).
ಮಾಧ್ಯಮ ಮಿತ್ರರೇ, ತಾವು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿವುದಲ್ಲದೆ ಕಾರ್ಯಕ್ರಮದ ವರದಿಯನ್ನು ಮಾಡುವಂತೆ ಕೋರುತ್ತಿದ್ದೇವೆ.
ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಸಮೀಕ್ಷೆ: ಮೊಬೈಲ್ ಆಪ್ ಬಳಸುವ ಬಗ್ಗೆ
ಉಡುಪಿ, ಆಗಸ್ಟ್ 24 (ಕರ್ನಾಟಕ ವಾರ್ತೆ) : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018 ಸಮೀಕ್ಷೆಯು ಜಿಲ್ಲೆಯಲ್ಲಿ ನಡೆಯುತ್ತಿದ್ದು, ಸಾರ್ವಜನಿಕರು SSಉ-2018 ಒobiಟe ಂಠಿಠಿ ಡೌನ್ ಲೋಡ್ ಮಾಡಿಕೊಂಡು , ಸರಳವಾದ 4 ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಅಭಿಪ್ರಾಯ ನೀಡಿ ಉಡುಪಿ ಜಿಲ್ಲೆಯನ್ನು ದೇಶದಲ್ಲಿ ಉತ್ತಮ ಸ್ಥಾನ ಪಡೆಯುವಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ: ತಾತ್ಕಾಲಿಕ ಪಟ್ಟಿ ಪ್ರಕಟ
ಉಡುಪಿ, ಆಗಸ್ಟ್ 24 (ಕರ್ನಾಟಕ ವಾರ್ತೆ) : ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಕೋರಿಕೆ ವರ್ಗಾವಣೆಗೆ ಸಂಬಂಧಿಸಿದ ತಾತ್ಕಾಲಿಕ ಪಟ್ಟಿಯನ್ನು ಆಯಕ್ತರ ಕಚೇರಿ, ಬೆಂಗಳೂರು ಇವರಿಂದ ಆಗಸ್ಟ್ 23 ರಂದು ಶಿಕ್ಷಕರ ವರ್ಗಾವಣಾ ತಂತ್ರಾಂಶದಲ್ಲಿ ಬಿಡುಗಡೆಗೊಳಿಸಲಾಗಿದ್ದು, ಈ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಪಕ ದಾಖಲಾತಿಗಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ನೀಡುವಂತೆ ಉಪನಿರ್ದೇಶಕರು(ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಬಾಲ ಸ್ನೇಹಿ ಕಾನೂನು ಸೇವೆಗಳು: ಮಾಹಿತಿ ಕಾರ್ಯಕ್ರಮ
ಉಡುಪಿ, ಆಗಸ್ಟ್ 24 (ಕರ್ನಾಟಕ ವಾರ್ತೆ) : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ (ರಿ) ಉಡುಪಿ ಮತ್ತು ವಾಸುದೇವ ಕೃಪ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಬೈಲೂರು ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳಿಗೆ ಬಾಲ ಸ್ನೇಹಿ ಕಾನೂನು ಸೇವೆಗಳು ಮತ್ತು ಅವುಗಳ ಸಂರಕ್ಷಣೆ ಯೋಜನೆ 2015 ರ ಮಾಹಿತಿ ಕಾರ್ಯಕ್ರಮವು ಆಗಸ್ಟ್ 25 ರಂದು ಬೆಳಗ್ಗೆ 10 ಕ್ಕೆ ವಾಸುದೇವ ಕೃಪ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಬೈಲೂರಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರಾಮ್ಪ್ರಶಾಂತ್ ಎಂ.ಎನ್ ಉದ್ಘಾಟಿಸಲಿದ್ದು, ಶಾಲೆಯ ಸಂಚಾಲಕ ಕೆ.ಅಣ್ಣಪ್ಪ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ
ಉಡುಪಿ, ಆಗಸ್ಟ್ 24 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಭಾಗ ಹಾಗೂ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ರಾಜ್ಯದ 6 ವಿಭಾಗಗಳಲ್ಲಿ ಆಯೋಜಿಸಲಾಗಿದ್ದು, ರಾಜ್ಯದ ಯಾವುದೇ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜಿನಲ್ಲಿ ಬಿ.ಎಸ್.ಸಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ಕೇಂದ್ರ ವಿಷಯ ಮನುಕುಲಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರ ಆಗಿದ್ದು, ಶುಧ್ದ ಮತ್ತು ಹಸಿರು ಶಕ್ತಿ, ಆಹಾರ ಆರೋಗ್ಯ ಮತ್ತು ನೈರ್ಮಲ್ಯ, ಬಾಹ್ಯಾಕಾಶ ಹುಡುಕಾಟ, ಪರಿಸರ ಸ್ನೇಹಿ ತಂತ್ರಜ್ಞಾನ ಮತ್ತು ಪ್ಲಾಸ್ಟಿಕ್ ಮಾಲಿನ್ಯ ಹಿಮ್ಮೆಟ್ಟಿಸುವುದು ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಆರೋಗ್ಯ ಎಂಬ ಐದು ವಿಷಯಗಳ ಮೇಲೆ ವಿದ್ಯಾರ್ಥಿಗಳು ಮಾದರಿ ತಯಾರಿಸಬಹುದಾಗಿದೆ.
ಧಾರವಾಡ ವಿಭಾಗದ ಸ್ಪರ್ಧೆಯನ್ನು ಸೆಪ್ಟಂಬರ್ 8 ರಂದು ಬೆಳಗಾವಿಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದಲ್ಲಿ, ಮಂಗಳೂರು ವಿಭಾಗದ ಸ್ಪರ್ಧೆಯನ್ನು ಸೆಪ್ಟಂಬರ್ 12 ರಂದು ಪುತ್ತೂರಿನ ಸೆಂಟ್ ಫಿಲೋಮಿನಾ ವಿಜ್ಞಾನ ಮಹಾವಿದ್ಯಾಲಯದಲ್ಲಿ, ಕಲ್ಬುರ್ಗಿ ವಿಭಾಗದ ಸ್ಪರ್ಧೆಯನ್ನು ಸೆಪ್ಟಂಬರ್ 15 ರಂದು ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಶಿವಮೊಗ್ಗ ವಿಭಾಗದ ಸ್ಪರ್ಧೆಯನ್ನು ಸೆಪ್ಟಂಬರ್ 17 ರಂದು ಚಿಕ್ಕಮಗಳೂರಿನ ಆದಿಚುಂಚನಗಿರಿ ಇನ್ಸ್ಟಿಸ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಮೈಸೂರು ವಿಭಾಗದ ಸ್ಪರ್ಧೆಯನ್ನು ಸೆಪ್ಟಂಬರ್ 8 ರಂದು ಕೊಳ್ಳೆಗಾಲದ ನಿಸರ್ಗ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ನಲ್ಲಿ ಹಾಗೂ ಬೆಂಗಳೂರು ವಿಭಾಗದ ಸ್ಪರ್ಧೆಯನ್ನು ಸೆಪ್ಟಂಬರ್ 15 ರಂದು ಸ್ಕೂಲ್ ಆಫ್ ಸೈನ್ಸಸ್ ಜೈನ್ ಯುನಿವರ್ಸಿಟಿಯಲ್ಲಿ ಆಯೋಜಿಸಲಾಗಿರುತ್ತದೆ.
ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರತಿ ಉಪ ವಿಷಯದಲ್ಲಿ ಮೊದಲ ಸ್ಥಾನಗಳಿಸಿದ ವಿದ್ಯಾರ್ಥಿಗಳು ಅಕ್ಟೋಬರ್ ಮೊದಲ ವಾರದಲ್ಲಿ ಕಲ್ಬುರ್ಗಿಯಲ್ಲಿ ಜರುಗುವ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಸೆಪ್ಟಂಬರ್ 3 ರ ಒಳಗೆ ಕರಾವಿಪ ಕೇಂದ್ರ ಕಚೇರಿಗೆ ನಿಗದಿತ ಅರ್ಜಿ ಭರ್ತಿ ಮಾಡಿ, ಈ ಮೇಲ್, ವ್ಯಾಟ್ಸಪ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳೊಂದಿಗೆ ಪ್ರಶಸ್ತಿ ಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ದೂರವಾಣಿ ಸಂಖ್ಯೆ: 080-26718939, ಮೊ.ನಂ. 9449530245/9008442557, ಇ-ಮೇಲ್: ಞಡಿvಠಿ.iಟಿಜಿo@gmಚಿiಟ.ಛಿom ಅನ್ನು ಸಂಪರ್ಕಿಸುವಂತೆ ಕರ್ನಾಟಕ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ್ ಕಡ್ಲೇವಾಡ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕನ್ನಡ ಪುಸ್ತಕ ಮುದ್ರಣ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 24 (ಕರ್ನಾಟಕ ವಾರ್ತೆ) : ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಜನವರಿ 2017 ರಿಂದ ಡಿಸೆಂಬರ್ 2017 ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ ಗುಣಮಟ್ಟವನ್ನು ಪರಿಗಣಿಸಿ ಮುದ್ರಕರಿಗೆ ಕನ್ನಡ ಪುಸ್ತಕ ಮುದ್ರಣ ಸೊಗಸು 2017 ಬಹುಮಾನವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮುದ್ರಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಮುದ್ರಕರ ಹೆಸರು ಈ ಎಲ್ಲಾ ವಿಷಯಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಆಗಸ್ಟ್ 27 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು ಇಲ್ಲಿಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು, ವೆಬ್ಸೈಟ್
ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom , ದೂರವಾಣಿ ಸಂಖ್ಯೆ: 080-22484516/ 22107704 ಅನ್ನು ಸಂಪರ್ಕಿಸುವಂತೆ ಆಡಳಿತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
"ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು: ಭಾಷಣ ಸ್ಪರ್ಧೆ
ಉಡುಪಿ, ಆಗಸ್ಟ್ 24 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲೆಯ ಯುವಕರಿಗೆ ತಮ್ಮ ಪ್ರತಿಬೆಯನ್ನು ತೊರ್ಪಡಿಸಲು, ನೆಹರು ಯುವ ಕೇಂದ್ರ ಸಂಘಟನೆ ಪ್ರತಿ ವರ್ಷದಂತೆ ಈ ವರ್ಷವು ಕೂಡ "ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು" ಕುರಿತ ಭಾಷಣಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ದೇಶದ ಎಲ್ಲಾ 623 ಜಿಲ್ಲಾ ಮಟ್ಟದ ನೆಹರು ಯುವ ಕೇಂದ್ರಗಳಿಗೆ ವಹಿಸಿಕೊಟ್ಟಿದ್ದು, ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ನೆಹರು ಯುವ ಕೇಂದ್ರ, ತಾಲೂಕು, ಹಾಗೂ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಿದ್ದು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಆಕರ್ಷಕ ಬಹುಮಾನಗಳನ್ನು ಭಾರತ ಸರ್ಕಾರ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೀಡಲಿದ್ದು ಅವುಗಳ ವಿವರಗಳು ಹೀಗಿವೆ.
ತಾಲೂಕು ಮಟ್ಟದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಥಮ, ದ್ವಿತಿಯ ಮತ್ತು ತೃತೀಯ ಬಹುಮಾನವಾಗಿ ಪಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದ ವಿಜೇತರಿಗೆ ಪ್ರಥಮ 5000 ರೂ., ದ್ವಿತಿಯ 2000 ರೂ ಹಾಗೂ ತೃತೀಯ ಬಹುಮಾನವಾಗಿ 1000 ರೂ,ಗಳನ್ನು ನೀಡಲಾಗುವುದು.
ರಾಜ್ಯ ಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 25000 ರೂ., ದ್ವಿತೀಯ ಬಹುಮಾನವಾಗಿ 10000 ರೂ. ಹಾಗೂ ತೃತೀಯ ಬಹುಮಾನವಾಗಿ 5000 ರೂ. ಗಳನ್ನು ನೀಡಲಾಗುವುದು. ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಪ್ರಥಮ ಬಹುಮಾನವಾಗಿ 2 ಲಕ್ಷ ರೂ.ಗಳು, ದ್ವಿತೀಯ ಬಹುಮಾನವಾಗಿ 1 ಲಕ್ಷ ರೂ. ಹಾಗೂ ತೃತೀಯ ಬಹುಮಾನವಾಗಿ 50000 ರೂ. ಗಳನ್ನು ನೀಡಲಾಗುವುದು.
ತಾಲೂಕು ಮಟ್ಟದ ಆಯ್ಕೆಯು ನಡೆಯುವ ದಿನ, ಸ್ಥಳ ಹಾಗೂ ಸಂಪರ್ಕಿಸಬೇಕಾದ ವ್ಯಕ್ತಿಯ ವಿವರಗಳು ಹೀಗಿವೆ.
ಸೆಪ್ಟಂಬರ್ 11 ರಂದು ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕುಗಳಿಗೆ ಎಂ.ಜಿ.ಎಂ. ಕಾಲೇಜು ಉಡುಪಿಯಲ್ಲಿ ಬೆಳಗ್ಗೆ 10 ಗಂಟೆಗೆ ಸ್ಪರ್ಧೆ ನಡೆಯಲಿದ್ದು, ಶಮಂತ್ ಕುಮಾರ್, ಎನ್.ಎಸ್.ಎಸ್. ಅಧಿಕಾರಿ, ಎಂ.ಜಿ.ಎಂ. ಕಾಲೇಜು, ಉಡುಪಿ ದೂರವಾಣಿ ಸಂಖ್ಯೆ; 9741913123 ಅನ್ನು ಸಂಪರ್ಕಿಸಬಹುದಾಗಿದೆ.
ಸೆಪ್ಟಂಬರ್ 15 ರಂದು ಕಾರ್ಕಳ, ಹೆಬ್ರಿ ತಾಲೂಕುಗಳಿಗೆ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿ ಬೆಳಗ್ಗೆ 10 ಕ್ಕೆ ಸ್ಪರ್ಧೆ ನಡೆಯಲಿದ್ದು, ಶಿವಶಂಕರ್, ಸುಚಿತ್ರಾ, ಎನ್.ಎಸ್.ಎಸ್. ಅಧಿಕಾರಿಗಳು, ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ, ದೂರವಾಣಿ ಸಂಖ್ಯೆ: 7204779899/ 8722795311 ಇವರನ್ನು ಸಂಪರ್ಕಿಸಬಹುದಾಗಿದೆ.
ಸೆಪ್ಟಂಬರ್ 17 ರಂದು ಕುಂದಾಪುರ, ಬೈಂದೂರು ತಾಲೂಕುಗಳಿಗೆ ಭಂಡಾರ್ಕರ್ಸ್ ಕಾಲೇಜು, ಕುಂದಾಪುರ ಇಲ್ಲಿ 10 ಗಂಟೆಗೆ ಸ್ಪರ್ಧೆ ನಡೆಯಲಿದ್ದು, ಅರುಣ್ ಕುಮಾರ್, ಎನ್.ಎಸ್.ಎಸ್. ಅಧಿಕಾರಿ, ಭಂಡಾರ್ಕರ್ಸ್ ಕಾಲೇಜು, ಕುಂದಾಪುರ ಇವರನ್ನು ಸಂಪರ್ಕಿಸಬಹುದಾಗಿದೆ.
ಭಾಷಣದ ವಿಷಯವು "Pಚಿಣಡಿioಣism & ಓಚಿಣioಟಿ ಃuiಟಜiಟಿg" ಆಗಿದ್ದು, ಭಾಷಣ ಸ್ಪರ್ಧೆಯ ಕಾಲಾವಕಾಶ 9-10 ನಿಮಿಷಕ್ಕೆ ಮೀರಬಾರದು. ಹಿಂದಿ ಅಥವಾ
ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಭಾಷಣ ಮಾಡಲು ಅವಕಾಶ.
ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವ ಪ್ರತಿಭಾವಂತ ಅಭ್ಯರ್ಥಿಗಳು 18-29 ವಯೋಮಿತಿಯ ಯುವಜನರಾಗಿರಬೇಕು ಹಾಗೂ ಉಡುಪಿ ಜಿಲ್ಲೆಯ ನಿವಾಸಿಗಳಾಗಿರಬೇಕು. ಆಯಾ ತಾಲೂಕಿನ ಆಸಕ್ತರು ಯಾವುದೇ ವರ್ಗದ, ಉದ್ಯೋಗ ಅಥವಾ ಉದ್ಯೋಗದಲ್ಲಿರದ ಯುವಜನರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಆಧಾರ್ ಕಾರ್ಡ್( ಕಡ್ಡಾಯವಾಗಿ), ಪ್ಯಾನ್ ಕಾರ್ಡ್/ ಶಾಲಾ ಕಾಲೇಜಿನಿಂದ ಅಥವಾ ಆಫೀಸ್/ಸಂಸ್ಥೆಗಳಿಂದ ಜಾರಿಯಾದ ಅಧಿಕೃತ ಫೋಟೊ ಇರುವ ಗುರುತಿನ ಚೀಟಿಯನ್ನು, ವಯೋಮಿತಿಯ ತಪಾಸಣೆಗಾಗಿ ಅಗತ್ಯವಾಗಿ ತರಲು ನಿರ್ಧೇಶಿಸಲಾಗಿದೆ.
ಪಿಯು/ಪ್ರಥಮ ದರ್ಜೆ ಕಾಲೇಜು ಅಥವಾ ವಿದ್ಯಾ ಸಂಸ್ಥೆಗಳು ಮೊದಲು ತಮ್ಮ ತಮ್ಮ ಕಾಲೇಜುಗಳಲ್ಲಿ ಮೆಲ್ಕಂಡ ವಿಷಯದಲ್ಲಿ ಭಾಷಣ ಸ್ಪರ್ಧೆ ನಡೆಸಿ ವಿಜೇತರಾದ ಮೊದಲ 3 ಅಭ್ಯರ್ಥಿಗಳನ್ನು ತಾಲೂಕು ಮಟ್ಟದಲ್ಲಿ ಪಾಲ್ಗೊಳ್ಳಲು ಮೇಲ್ಕಂಡ ಕೇಂದ್ರಗಳಿಗೆ ತಿಳಿಸಲ್ಪಟ್ಟ ದಿನ ಹಾಗೂ ಸಮಯಕ್ಕೆ ಸರಿಯಾಗಿ ಕಳಿಸತಕ್ಕದ್ದು, ಆಯಾ ತಾಲೂಕಿನಿಂದ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ಮೇಲೆ ತಿಳಿಸಿದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ ಉಡುಪಿ ದೂರವಾಣಿ ಸಂಖ್ಯೆ: 0820-2574992, ಅನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ವಿಲ್ಲ್ಫ್ರೆಡ್ ಡಿಸೋಜ, ಜಿಲ್ಲಾ ಯುವ ಸಮನ್ವಯ ಅಧಿಕಾರಿ,ನೆಹರು ಯುವ ಕೇಂದ್ರ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link