Brief Udupi news with pictures
Kemmannu News Network, 28-08-2018 21:41:50
ನಾರಾಯಣಗುರುಗಳು ಶಾಂತಿ ಸಂದೇಶ ನೀಡಿದ ದಾರ್ಶನಿಕರು
ಉಡುಪಿ, ಆಗಸ್ಟ್ 27 (ಕರ್ನಾಟಕ ವಾರ್ತೆ) : ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟುಗೂಡಿಸಿ ಶಾಂತಿ ಸಂದೇಶ ನೀಡಿದ ಜಗತ್ತಿನ ಪ್ರಥಮ ದಾರ್ಶನಿಕರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ವಿಧಾನ ಪರಿಷತ್ ನ ವಿರೋಧ ಪಕ್ಷದ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಸೋಮವಾರ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಜಿಲ್ಲಾ ಬಿಲ್ಲವ ಸಮುದಾಯ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾರಾಯಣಗುರುಗಳು ಒಂದೇ ಜಾತಿ, ಒಂದೆ ಮತ, ಒಂದೇ ದೇವರು ಎಂಬ ಸಂದೇಶ ನೀಡಿದ್ದು, ಇವರ ಆಶ್ರಮಕ್ಕೆ ಭೇಟಿ ನೀಡಿದ್ದ ಮಹಾತ್ಮ ಗಾಂಧೀ ಅವರು ಅಲ್ಲಿನ ಪರಿಸರ ಕಂಡು ಪ್ರಭಾವಿತರಾಗಿದ್ದರು, ನಾರಾಯಣಗುರುಗಳು ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದ ಕೋಟಾ ಶ್ರೀನಿವಾಸ ಪೂಜಾರಿ, ಶಿಕ್ಷಣದಿಂದ ಉನ್ನತಿ ಪಡೆಯಬೇಕು ಹಾಗೂ ಸಂಘಟನೆಯಿಂದ ಶಕ್ತಿ ಪಡೆಯಬೇಕು ಎನ್ನುವ ಅವರ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಮೌಡ್ಯ ತುಂಬಿದ್ದ ಸಮಾಜದಲ್ಲಿ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಚಳುವಳಿಯ ಮೂಲಕ ಅನಿಷ್ಠ ಪದ್ದತಿಗಳನ್ನು ಕೊನೆಗಾಣಿಸಿದ ನಾರಾಯಣಗುರುಗಳ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶಿಯಾಗಬೇಕು ಎಂದು ಹೇಳಿದರು.
ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ , ಆದರ್ಶದ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ತೋನ್ಸೆ, ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಎಎಸ್ಪಿ ಕುಮಾರ ಚಂದ್ರ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಅಶೋಕ್ ಎಂ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಕೆ.ಎಸ್.ಓ.ಯು ನ ಪ್ರಾದೇಶಿಕ ನಿರ್ದೇಶಕ ಡಾ. ಕೆ.ಪಿ. ಮಹಾಲಿಂಗು ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ಸ್ವಾಗತಿಸಿದರು.
ಯಂತ್ರೋಪಕರಣಗಳ ಖರೀದಿಗೆ ಸಹಾಯಧನ
ಉಡುಪಿ, ಆಗಸ್ಟ್ 27 (ಕರ್ನಾಟಕ ವಾರ್ತೆ) : 2018-19 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಯಂತ್ರೋಪಕರಣಗಳನ್ನು ಖರೀದಿಸಲು ಅವಕಾಶವಿರುತ್ತದೆ.
ಯಂತ್ರೋಪಕರಣ ಖರೀದಿಸುವ ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ಸಣ್ಣ ಮತ್ತು ಅತೀ ಸಣ್ಣ ರೈತರು, ಮಹಿಳೆಯರು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ರೈತರಿಗೆ ಶೇ.50 ರಂತೆ ಕನಿಷ್ಟ ಒಂದುಸಾವಿರ ರೂಪಾಯಿಯಿಂದ ಗರಿಷ್ಟ 1.25 ಲಕ್ಷ ರೂ.ಸಹಾಯಧನವನ್ನು ಗರಿಷ್ಟ 5 ಯಂತ್ರೋಪಕರಣಗಳಿಗೆ ನೀಡಲು ಅವಕಾಶವಿದ್ದು, ರೈತರು ಇದರ ಪ್ರಯೋಜನ ಪಡೆಯಬಹುದಾಗಿದೆ.
ಸಹಾಯಧನವನ್ನು ಆನ್ಲೈನ್ ಅಪ್ಲಿಕೇಶನ್ ಸಾಫ್ಟ್ವೇರ್ ನಂತೆ ಜೇಷ್ಟತೆ ಆಧಾರದಲ್ಲಿ ನೀಡಬೇಕಾಗಿರುವುದರಿಂದ ರೈತರು ಹೊಸದಾಗಿ 2018-19 ನೇ ಸಾಲಿಗೆ ಅನ್ವಯವಾಗುವಂತೆ ಅರ್ಜಿ ನೀಡಬೇಕಾಗಿರುತ್ತದೆ.
ಆದ್ದರಿಂದ ರೈತರು ತಮ್ಮ ಹತ್ತಿರದ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ್, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಓಖಿSಇ/ಓಒಒS ಪರೀಕ್ಷೆ: ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 27 (ಕರ್ನಾಟಕ ವಾರ್ತೆ) : 2018-19 ನೇ ಸಾಲಿನಲ್ಲಿ ಓಖಿSಇ/ಓಒಒS ಪರೀಕ್ಷೆಗಳನ್ನು ನವೆಂಬರ್ 4 ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದು, ಸರ್ಕಾರಿ, ಅನುದಾನಿತ, ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಯ 10 ನೇ ತರಗತಿಯ ವಿದ್ಯಾರ್ಥಿಗಳು ಓಖಿSಇ ಪರೀಕ್ಷೆಗೆ, ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಯ 8 ನೇ ತರಗತಿಯ ವಿದ್ಯಾರ್ಥಿಗಳು
ಓಒಒS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಶಾಲಾ ಮುಖ್ಯಸ್ಥರಿಂದ ವಿದ್ಯಾರ್ಥಿಗಳು ಅರ್ಜಿಯನ್ನು ಪಡೆದು ಮಾಹಿತಿಯನ್ನು ತುಂಬಿ ಸೆಪ್ಟಂಬರ್ 21 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸುವಂತೆ ಶಾಲಾ ಮುಖ್ಯಸ್ಥರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಬೇಕು. ಈ ಹಿಂದೆ ಓಒಒS ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಅರ್ಹರಾದ ವಿದ್ಯಾರ್ಥಿಗಳು ಆನ್ ಲೈನ್ನಲ್ಲಿ ಮಾಹಿತಿಯನ್ನು ತುಂಬಿಸಿ ಸಂಬಂಧಿಸಿದ ಶಾಲಾ ಮುಖ್ಯಸ್ಥರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಜಿಲ್ಲಾ ನೋಡೆಲ್ ಅಧಿಕಾರಿ ಚಂದ್ರನಾಯಕ್, ಉಪನ್ಯಾಸಕರು, ಡಯಟ್, ಉಡುಪಿ ದೂರವಾಣಿ ಸಂಖ್ಯೆ: 93810241292 ಇವರನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ: ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 27 (ಕರ್ನಾಟಕ ವಾರ್ತೆ) :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2018-19 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ನಾತಕ ಪದವಿಗಳು: ಬಿ.ಎ., ಬಿ.ಕಾಂ., 3 ವರ್ಷಗಳು(ವಾರ್ಷಿಕ), ಬಿ.ಲಿಬ್.ಐ.ಎಸ್ಸಿ. 1 ವರ್ಷ (ವಾರ್ಷಿಕ).
ಸ್ನಾತಕೋತ್ತರ ಪದವಿಗಳು: ಎಂ.ಎ(ಕನ್ನಡ/ಇಂಗ್ಲೀಷ್/ಹಿಂದಿ/ಉರ್ದು/ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ/ ಇತಿಹಾಸ/ಅರ್ಥಶಾಸ್ತ್ರ/ರಾಜ್ಯಶಾಸ್ತ್ರ/ಸಾರ್ವಜನಿಕ ಆಡಳಿತ/ಸಮಾಜಶಾಸ್ತ್ರ/ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ) 2 ವರ್ಷಗಳು( ವಾರ್ಷಿಕ), ಎಂ.ಕಾಂ. 2 ವರ್ಷಗಳು( ವಾರ್ಷಿಕ), ಎಂ.ಎಸ್ಸಿ(ಪರಿಸರ ವಿಜ್ಞಾನ) 2 ವರ್ಷಗಳು (ಸೆಮಿಸ್ಟರ್), ಎಂ.ಲಿಬ್.ಐ.ಎಸ್ಸಿ 1 ವರ್ಷ ವಾರ್ಷಿಕ.
ಅರ್ಹ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ ತಿತಿತಿ.ಞsoumಥಿsoಡಿe.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಅರ್ಜಿ, ವಿವರಣಾ ಪುಸ್ತಕ ಹಾಗೂ ಶುಲ್ಕ ಪಾವತಿಸುವ ಚಲನ್ ಡೌನ್ಲೋಟ್ ಮಾಡಿಕೊಂಡು, ವಿವರಣಾ ಪುಸ್ತಕದಲ್ಲಿ ನಮೂದಿಸಿರುವ ಶುಲ್ಕವನ್ನು ಯಾವುದಾದರೊಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯಲ್ಲಿ ಪಾವತಿ ಮಾಡಿ, ನಂತರ ವಿದ್ಯಾರ್ಹತೆಯ ಬಗ್ಗೆ ಅಗತ್ಯವಿರುವ ದಾಖಲೆಗಳ ಪ್ರತಿಯೊಂದಿಗೆ ಭರ್ತಿ ಮಾಡಿದ ಅರ್ಜಿ, ಶುಲ್ಕ ಪಾವತಿಸಿರುವ ಚಲನ್ನೊಂದಿಗೆ ಸಲ್ಲಿಸಬಹುದಾಗಿದೆ.
ಖುದ್ದಾಗಿ ಅರ್ಜಿಗಳನ್ನು ಕರಾಮುವಿ ಪ್ರಾದೇಶಿಕ ಕೇಂದ್ರ ಕಛೇರಿ, ಹಳೇ ಜಿಲ್ಲಾ ಪಂಚಾಯತ್ ಕಟ್ಟಡ, ಬನ್ನಂಜೆ, ಉಡುಪಿ ಇಲ್ಲಿ ಅಕ್ಟೋಬರ್ 1 ರ ಒಳಗೆ ಸಲ್ಲಿಸಿ, ಪ್ರವೇಶಾತಿ ಹೊಂದಿ ಸಿದ್ಧಪಾಠಗಳನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಉಡುಪಿ ಜಿಲ್ಲಾ ವಿದ್ಯಾರ್ಥಿಗಳು ಉಡುಪಿ ಪ್ರಾದೇಶಿಕ ಕೇಂದ್ರ ಕಛೇರಿಯಲ್ಲಿ ಪ್ರವೇಶಾತಿ ಪಡೆಯಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2522247 ಅನ್ನು ಸಂಪರ್ಕಿಸುವಂತೆ ಪ್ರಾದೇಶಿಕ ಉಪನಿರ್ದೇಶಕರು, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಹಿಂದುಳಿದ ವರ್ಗ: ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 27 (ಕರ್ನಾಟಕ ವಾರ್ತೆ) :ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ಮೆಡಿಕಲ್ ಮತ್ತು ಇಂಜಿನಿಯರಿಂಗ್, ಸ್ನಾತ್ತಕೋತ್ತರ, ವೃತ್ತಿಪರ ಹಾಗೂ ನರ್ಸಿಂಗ್ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2018-19 ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಆಗಸ್ಟ್ 24 ರಿಂದ ಆಗಸ್ಟ್ 30 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸಬಹುದಾಗಿದೆ.
sಞiಟಟ ಜeveಟoಠಿmeಟಿಣ ತರಬೇತಿ ಕಾರ್ಯಕ್ರಮ
ಉಡುಪಿ, ಆಗಸ್ಟ್ 27 (ಕರ್ನಾಟಕ ವಾರ್ತೆ) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಐಸಿಐಸಿಐ ಫೌಂಡೇಶನ್ ರವರ ಮೂಲಕ ಹಿಂದುಳಿದ ವರ್ಗಗಳ ಯುವಕ /ಯುವತಿಯರಿಗೆ ಜೀವನೋಪಾಯ ಹಾಗೂ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಲು 3 ತಿಂಗಳ ಅವಧಿಯ ಎob-oಡಿieಟಿಣeಜ voಛಿಚಿಣioಟಿಚಿಟ sಞiಟಟ ಜeveಟoಠಿmeಟಿಣ ತರಬೇತಿಯನ್ನು ಔಜಿಜಿiಛಿe ಂಜmiಟಿisಣಡಿಚಿಣioಟಿ, ಖeಣಚಿiಟ Sಚಿಟes ಎಂಬ ವಿಷಯಗಳಲ್ಲಿ ಬೆಂಗಳೂರು ಮತ್ತು ಮೈಸೂರಿನ ತರಬೇತಿ ಕೇಂದ್ರಗಳಲ್ಲಿ ನೀಡಲಿದ್ದಾರೆ.(ಬೆಂಗಳೂರು ತರಬೇತಿ ಕೇಂದ್ರದಲ್ಲಿ ಪುರುಷ/ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಮೈಸೂರಿನ ತರಬೇತಿ ಕೇಂದ್ರದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ತರಬೇತಿಯನ್ನು ನಡೆಸಲು ಉದ್ದೇಶಿಸಲಾಗಿರುತ್ತದೆ)
ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಟಿಫಿಕೇಟ್ ನೀಡಲಾಗುವುದು. ಊಟ ಹಾಗೂ ವಸತಿಯ ವೆಚ್ಚವನ್ನು ಭರಿಸಲು ನಿಗಮದಿಂದ ತರಬೇತಿ ಭತ್ಯೆಯನ್ನು ನೀಡಲಾಗುವುದು.
ಅಭ್ಯರ್ಥಿಯು 18 ರಿಂದ 30 ವರ್ಷಗಳ ವಯೋಮಾನದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪರಿಶೀಲನೆ( ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 40000ರೂ. ಮತ್ತು ನಗರ ಪ್ರದೇಶದವರಿಗೆ 55000 ರೂ.ಒಳಗಿರಬೇಕು).10 ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು(ಪದವಿಯವರೆಗೆ ವಿದ್ಯಾಭ್ಯಾಸ ಹೊಂದಿರಬಹುದು). ಅಭ್ಯರ್ಥಿಯ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್/ ಚುನಾವಣಾ ಗುರುತಿನ ಚೀಟಿ/ ರೇಷನ್ ಕಾರ್ಡ್, ಈ ಅರ್ಹತೆ ಇರುವ ಆಸಕ್ತರು ಆಗಸ್ಟ್ 31 ರ ಒಳಗೆ ಜಿಲ್ಲಾ ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕ ಕಳುಹಿಸುವ ಬಗ್ಗೆ
ಉಡುಪಿ, ಆಗಸ್ಟ್ 27 (ಕರ್ನಾಟಕ ವಾರ್ತೆ) : 2018 ನೇ( ಜನವರಿ 1, 2018 ರಿಂದ ಆಗಸ್ಟ್ 30, 2018 ರವರೆಗೆ) ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಬೆಂಗಳೂರು ಇಲ್ಲಿ ಆಗಸ್ಟ್ 31 ರೊಳಗೆ ಕಾಪಿರೈಟ್ ಮಾಡಿಸಿರಬೇಕು. ಕಾಪಿರೈಟ್ ಮಾಡಿಸಿದ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು ಇಲ್ಲಿಗೆ ಸಲ್ಲಿಸುವ ಅವಧಿಯನ್ನು ಆಗಸ್ಟ್ 31 ರ ವರೆಗೆ ವಿಸ್ತರಿಸಲಾಗಿದೆ.
ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳನ್ನು ವೆಬ್ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿಠಿubಟiಛಿಟibಡಿಚಿಡಿಥಿ.gov.iಟಿ ಹಾಗೂ ಎಲ್ಲಾ ಜಿಲ್ಲಾ/ ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ ಮುಖ್ಯ ಗ್ರಂಥಾಲಯಾದಿಕಾರಿಗಳ ಕಚೇರಿಯಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 080-22864990/22867358 ಅನ್ನು ಸಂಪರ್ಕಿಸುವಂತೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನ
ಉಡುಪಿ, ಆಗಸ್ಟ್ 27 (ಕರ್ನಾಟಕ ವಾರ್ತೆ) :2016 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಮುಂದೆ ಮಂಡಿಸಲಾಗಿದ್ದು, ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುತ್ತದೆ. ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಆಗಸ್ಟ್ 23 ರಿಂದ 27 ರ ವರೆಗೆ ಗ್ರಂಥಾಂಗಣ, ನಗರ ಕೇಂದ್ರ ಗ್ರಂಥಾಲಯ, ಹಂಪಿನಗರ, ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ವಿತರಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಸೆಪ್ಟಂಬರ್ 5 ರ ಒಳಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು ಇಲ್ಲಿಗೆ ಲಿಖಿತ ರೂಪದಲ್ಲಿ ಮನವಿಗಳನ್ನು ಸಲ್ಲಿಸಬಹುದಾಗಿದೆ. ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಕಾಣೆಯಾದವರ ಕುರಿತು
ಉಡುಪಿ, ಆಗಸ್ಟ್ 27 (ಕರ್ನಾಟಕ ವಾರ್ತೆ) : ಸದಾನಂದ ಗೌಡ ಪಾಟೀಲ (35 ವರ್ಷ) ಎಂಬುವವರು ಆಗಸ್ಟ್ 20 ರಂದು, ಚಿತ್ರಪಾಡಿ ಗ್ರಾಮದ ಕೋಟ, ತಸ್ಮಯಿ ರೆಸಿಡೆನ್ಸಿ ಇಲ್ಲಿಂದ ಕಾಣೆಯಾಗಿದ್ದು, 5 ಅಡಿ 7 ಇಂಚು ಎತ್ತರವಿದ್ದು, ಗೋಧಿ ಮೈಬಣ್ಣ , ಕನ್ನಡ, ಬ್ಯಾರಿ ಭಾಷೆ ಬಲ್ಲವರಾಗಿದ್ದು, ಇವರ ಪತ್ತೆಯಾದಲ್ಲಿ ಪೊಲೀಸ್ ಉಪನಿರೀಕ್ಷಕರು, ಕೋಟಾ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2564155 / 9480805454 ಅಥವಾ ಪೊಲೀಸ್ ವೃತ್ತ ನಿರೀಕ್ಷಕರು, ಬ್ರಹ್ಮಾವರ ವೃತ್ತ ದೂರವಾಣಿ ಸಂಖ್ಯೆ: 0820-2561966 / 9480805432 ಗೆ ಮಾಹಿತಿ ನೀಡುವಂತೆ ಕೋಟ ಪೊಲೀಸ್ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.
ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮದ್ಯ ಮಾರಾಟ ನಿಷೇಧ
ಉಡುಪಿ, ಆಗಸ್ಟ್ 28 (ಕರ್ನಾಟಕ ವಾರ್ತೆ) : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2018 ಕ್ಕೆ ಸಂಬಂಧಿಸಿದಂತೆ ಉಡುಪಿ ನಗರಸಭಾ, ಪುರಸಭಾ ಕುಂದಾಪುರ, ಕಾರ್ಕಳ ಪಟ್ಟಣ ಪಂಚಾಯತ್, ಸಾಲಿಗ್ರಾಮದ ಎಲ್ಲಾ ವಾರ್ಡುಗಳಿಗೆ ಆಗಸ್ಟ್ 31 ರಂದು ಮತದಾನ ಹಾಗೂ ಸೆಪ್ಟಂಬರ್ 3 ರಂದು ಮತ ಎಣಿಕೆ ಕಾರ್ಯವು ನಡೆಯಲಿರುತ್ತದೆ.
ಆದ್ದರಿಂದ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಉಡುಪಿ ನಗರಸಭೆ, ಪುರಸಭೆ ಕುಂದಾಪುರ, ಕಾರ್ಕಳ ಪಟ್ಟಣ ಪಂಚಾಯತ್, ಸಾಲಿಗ್ರಾಮದ ವ್ಯಾಪ್ತಿಯಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಗಡಿಯಿಂದ 3 ಕಿ.ಮೀ. ಪರಿಧಿಯಲ್ಲಿ ಪಾನ ನಿರೋಧಕ ದಿನವೆಂದು ಘೋಷಿಸಿ, ಯಾವುದೇ ಹೊಟೇಲ್ಗಳಲ್ಲಿ, ಕ್ಲಬ್ಗಳಲ್ಲಿ, ಮದ್ಯ ಮಾರಾಟ /ಸರಬರಾಜು ಮಾಡುವುದನ್ನು ನಿಷೇಧಿಸಲಾಗಿರುತ್ತದೆ.
ಆ ಪ್ರಯುಕ್ತ ಆಗಸ್ಟ್ 30 ರಂದು ಬೆಳಗ್ಗೆ 6 ರಿಂದ ಆಗಸ್ಟ್ 31 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಸೆಪ್ಟಂಬರ್ 3 ರಂದು ಬೆಳಗ್ಗೆ 6 ಗಂಟೆಯಿಂದ ಮದ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್ ಆದೇಶ ಹೊರಡಿಸಿರುತ್ತಾರೆ.
ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ: ಮುಂದೂಡಿಕೆ
ಉಡುಪಿ, ಆಗಸ್ಟ್ 28 (ಕರ್ನಾಟಕ ವಾರ್ತೆ) : ಸೆಪ್ಟಂಬರ್ 4 ರಂದು ನಿಗಧಿಪಡಿಸಿದ್ದ ಜಿಲ್ಲಾ ಪಂಚಾಯತ್ನ ಸಾಮಾನ್ಯ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಸಭೆಯು ಸೆಪ್ಟಂಬರ್ 6 ರಂದು ಬೆಳಗ್ಗೆ 11 ಕ್ಕೆ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಇವರ ಅಧ್ಯಕ್ಷತೆಯಲ್ಲಿ ಡಾ. ವಿ.ಎಸ್.ಆಚಾರ್ಯ ಸಭಾಂಗಣ, ರಜತಾದ್ರಿ ಯಲ್ಲಿ ನಡೆಯಲಿದೆ.
ಬಹಿರಂಗ ಪ್ರಚಾರ ನಿಷೇಧದ ಬಗ್ಗೆ
ಉಡುಪಿ, ಆಗಸ್ಟ್ 28 (ಕರ್ನಾಟಕ ವಾರ್ತೆ) : ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ 2018 ಕ್ಕೆ ಸಂಬಂಧಿಸಿದಂತೆ ಉಡುಪಿ ನಗರಸಭೆ, ಪುರಸಭೆ ಕುಂದಾಪುರ, ಕಾರ್ಕಳ ಪಟ್ಟಣ ಪಂಚಾಯತ್, ಸಾಲಿಗ್ರಾಮ ವ್ಯಾಪ್ತಿಯಲ್ಲಿ ಆಗಸ್ಟ್ 31 ರಂದು ಮತದಾನ ನಡೆಯಲಿರುತ್ತದೆ. ಮತದಾನವನ್ನು ಶಾಂತಿಯುತವಾಗಿ ಮುಕ್ತ ನ್ಯಾಯ ಸಮ್ಮತವಾಗಿ ನಡೆಸುವ ಉದ್ದೇಶದಿಂದ ಮತದಾನ ಪ್ರಾರಂಭವಾಗುವ 48 ಗಂಟೆಗಳ ಮುಂಚೆ ಅಂದರೆ ಆಗಸ್ಟ್ 29 ರ ಬೆಳಗ್ಗೆ 7 ಗಂಟೆಯ ನಂತರ ಬಹಿರಂಗ ಪ್ರಚಾರವನ್ನು ನಿಷೇಧಿಸಲಾಗಿದೆ.
ಆದ್ದರಿಂದ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ನಲ್ಲಿ ವಾರ್ಡ್ಗೆ ಸಂಬಂಧ ಪಡೆದ ರಾಜಕೀಯ ಪಕ್ಷದವರಾಗಲೀ ಅಥವಾ ಚುನಾವಣೆ ಪ್ರಚಾರಕ್ಕಾಗಿ ಹೊರಗಿಂದ ಬಂದವರಾಗಲಿ ಉಳಿಯುವಂತಿಲ್ಲ , ಚುನಾವಣೆಗೆ ಸಂಬಂಧಿಸಿದ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಏರ್ಪಡಿಸುವಂತಿಲ್ಲ, ಮತದಾರರಿಗೆ ಮೊಬೈಲ್ ಮೂಲಕ ಎಸ್.ಎಂ.ಎಸ್. ಕಳುಹಿಸುವಂತಿಲ್ಲ, ರೇಡಿಯೋ, ಟಿ.ವಿ. ಮೂಲಕ ಪ್ರಚಾರ ಮಾಡುವಂತಿಲ್ಲ. ಈ ವಿಚಾರದ ಬಗ್ಗೆ ಎಲ್ಲಾ ಚುನಾವಣಾ ಅಭ್ಯರ್ಥಿಗಳಿಗೆ, ಎಲ್ಲಾ ಪಕ್ಷ ಮುಖಂಡರಿಗೆ ಸೂಕ್ತ ಸೂಚನೆಗಳನ್ನು ನೀಡುವಂತೆ ಹಾಗೂ ಯಾವುದೇ ಬಹಿರಂಗ ಪ್ರಚಾರ ಕೈಗೊಳ್ಳದಂತೆ ಅಪರ ಅಪರ ಜಿಲ್ಲಾಧಿಕಾರಿ ಶ್ರೀ ವಿದ್ಯಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮತದಾನ ದಿನ : ಕಾರ್ಮಿಕರಿಗೆ ವೇತನ ಸಹಿತ ರಜೆ
ಉಡುಪಿ, ಆಗಸ್ಟ್ 28 (ಕರ್ನಾಟಕ ವಾರ್ತೆ) : ರಾಜ್ಯ ಚುನಾವಣಾ ಆಯೋಗವು 105 ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31 ರಂದು ಮತದಾನ ನಡೆಸಲಿದ್ದು, ಆ ದಿನದಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಔದ್ಯೋಗಿಕ ಸಂಸ್ಥೆಗಳ ಕಾಯ್ದೆಯನ್ವಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಕಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹಿರಿಯಡಕ ಕಾಲೇಜಿನಲ್ಲಿ ರೋಟರ್ಯಾಕ್ಟ್ ಪದಪ್ರಧಾನ ಸಮಾರಂಭ
ಉಡುಪಿ, ಆಗಸ್ಟ್ 28 (ಕರ್ನಾಟಕ ವಾರ್ತೆ) : ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇದರ 2018-19ನೇ ಸಾಲಿನ ರೋಟರ್ಯಾಕ್ಟ್ ಪದಪ್ರಧಾನ ಸಮಾರಂಭವು ರೋಟರಿ ಪರ್ಕಳ ಇದರ ಸಹಯೋಗದೊಂದಿಗೆ ಆಗಸ್ಟ್ 27 ರಂದು ಬೆಳಗ್ಗೆ 11 ಕ್ಕೆ ಕಾಲೇಜಿನ ಸಭಾಭವನದಲ್ಲಿ ಜರುಗಿತು.
ರೋಟರಿ ಪರ್ಕಳ ಇದರ ಅಧ್ಯಕ್ಷ ರೋ| Pಊಈ ಗುರುಪ್ರಸಾದ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ವಿದ್ಯಾರ್ಥಿಗಳಿಗೆ ಪದಪ್ರಧಾನ ಕಾರ್ಯಕ್ರಮವನ್ನು ನಿರ್ವಹಿಸಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಮಾತನಾಡಿ, ಸೇವಾ ಮನೋಭಾವ ಹಾಗೂ ಸಮುದಾಯ ಐಕ್ಯತೆಗೆ ಸಂಬಂಧಿಸಿದಂತೆ ರೋಟರಿ ಕ್ಲಬ್ನ ಚಟುವಟಿಕೆಗಳು ಬಹಳಷ್ಟು ಸಹಾಯಕಾರಿಯೆಂದು ತಿಳಿಸಿದರು.
ಕಾಲೇಜಿನ ರೋಟರ್ಯಾಕ್ಟ್ ಸಂಚಾಲಕಿ ಸುಮನಾ ಬಿ. ರೋಟರಿ ಸಂಸ್ಥೆಯ ಕುರಿತಂತೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿ ಪ್ರತಿನಿಧಿಗಳನ್ನು ಸಭೆಗೆ ಪರಿಚಯಿಸಿದರು. ರೋಟರಿ ಸುಶೀಲಾ ಪೂಂಜ ಕಾರ್ಯಕ್ರಮವನ್ನು ನಿರ್ವಹಿಸಿದರು. ರೋಟರ್ಯಾಕ್ಟ್ ವಿದ್ಯಾರ್ಥಿ ಅಧ್ಯಕ್ಷರಾಗಿ ಆಕಾಶ್ ಶೆಟ್ಟಿ ಹಾಗೂ ರೋಟರ್ಯಾಕ್ಟ್ ವಿದ್ಯಾರ್ಥಿ ಕಾರ್ಯದರ್ಶಿಯಾಗಿ ಅನುಷಾ ಇವರಿಗೆ Pಊಈ ಗುರುಪ್ರಸಾದ್ ಕಾಮತ್ ಇವರು ಪದಗ್ರಹಣ ಮಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸುಜಯಾ ಕೆ.ಎಸ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 28 (ಕರ್ನಾಟಕ ವಾರ್ತೆ) :ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) 2018-19 ನೇ ಸಾಲಿನಲ್ಲಿ ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿ.ಹೆಚ್.ಡಿ. ಸಂಶೋಧನೆಗೆ ಡಿ.ಎಸ್.ಟಿ. ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಕೈಗೆತ್ತಿಕೊಂಡಿದ್ದು, ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ/ ಕಾಲೇಜುಗಳಲ್ಲಿ ಪಿ.ಹಚ್.ಡಿ. ಪದವಿಗೆ ಈಗಾಗಲೇ ನೊಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ದಾಖಾಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 24 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳನ್ನು hಣಣಠಿ://ಞsಣeಠಿs.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿನಿಲಯ ಸೇರ್ಪಡೆ ಬಗ್ಗೆ
ಉಡುಪಿ, ಆಗಸ್ಟ್ 28 (ಕರ್ನಾಟಕ ವಾರ್ತೆ) : ಉಡುಪಿ ತಾಲೂಕಿನ ಸಮಾಜ ಕಲ್ಯಾಣ / ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂಧ ನಡೆಸುತ್ತಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಶೇ. 25 ರಷ್ಟು ಸ್ಥಾನಗಳನ್ನು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವರ್ಗಗಳ ಮಕ್ಕಳಿಗೆ ಅಂದರೆ ಪ್ರವರ್ಗ-1 ರ ಶೇ.3, ಪ್ರವರ್ಗ 2ಎ ಯಿಂದ ಶೇ.12 ರಷ್ಟು, ಪ್ರವರ್ಗ 2ಬಿ ಯಿಂದ ಶೇ.3, ಪ್ರವರ್ಗ 3ಎ ಯಿಂದ ಶೇ.3, ಪ್ರವರ್ಗ 3 ಬಿ ಯಿಂದ ಶೇ.4 ರಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಸೇರ್ಪಡೆಗೆ ಅವಕಾಶವಿರುತ್ತದೆ.
ಹಾಸ್ಟೆಲ್ಗಳ ವಿವರ: ಪ.ಜಾತಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬನ್ನಂಜೆ, ಪ.ಜಾತಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉಡುಪಿ ಟೌನ್, ಪ.ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ದೊಡ್ಡಣಗುಡ್ಡೆ, ಪ.ಜಾತಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ 76 ಬಡಗುಬೆಟ್ಟು, ಪ.ಪಂಗಡದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ತೊಟ್ಟಂ.
ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಪಡೆದು, ಸೆಪ್ಟಂಬರ್ 30 ರ ಒಳಗೆ ಎಲ್ಲಾ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2528884 ಅನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ತುಳುವೇಶ್ವರ ತುಳುನಾಡಿನ ಪ್ರತೀಕ - ಡಾ. ಆರೂರು ಪ್ರಸಾದ್ ರಾವ್ತುಳುನಾಡಿನಲ್ಲಿ ಜಾತಿ, ಮತ, ಭಾಷಾ ಸೌಹಾರ್ದತೆ
ತುಳುನಾಡೋಚ್ಚಯ-2018 ಬಸ್ರೂರಿನಲ್ಲಿ
ಒಂದು ಊರಿಗೆ ಆ ಊರಿನ ದೇವಾಲಯ ಅಥವಾ ಆ ಊರಿನ ದೇವರ ಹೆಸರಲ್ಲಿ ಕರೆಯುವುದು ಸಾಮಾನ್ಯ. ಹಾಗಿರುವಾಗ ತುಳುವೇಶ್ವರನಿಂದ ತುಳುನಾಡಾಗಿರಬಹುದು. ಅದುದರಿಂದ ತುಳುವೇಶ್ವರನು ತುಳುನಾಡಿನ ದೇವನಾಗಿರುವನು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತುಳುವೇಶ್ವರನ ದರ್ಶನಪಡೆದು ಕೃತಾರ್ಥರಾಗಬಹುದು ಎಂದು ಡಾ. ಆರೂರು ಪ್ರಸಾದ್ ರಾವ್ ಅಭಿಪ್ರಾಯ ಪಟ್ಟರು. ಅವರು ಡಿಸಂಬರ್ ತಿಂಗಳಲ್ಲಿ ಬಸ್ರೂರಿನಲ್ಲಿ ನಡೆಯಲಿರುವ ತುಳುನಾಡೋಚ್ಚಯ-2018 ಕಾರ್ಯಕ್ರಮದ ಸಮಾಲೋಚನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮೀಸಲಾತಿಯಿಂದ ನಮ್ಮ ಅಭಿವೃದ್ದಿ ಕುಂಠಿತ - ಅಪ್ಪಣ್ಣ ಹೆಗ್ಡೆ
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಸ್ರೂರು ಅಪ್ಪಣ್ಣ ಹೆಗ್ಡೆ ಮಾತನಾಡಿ ತುಳು ಹಲವು ಶತಮಾನಗಳ ಭಾಷೆ, ಜಗತ್ತಿನಲ್ಲಿ ಕರಾವಳಿಗರನ್ನು ಗುರುತಿಸುವ ಸಂಪರ್ಕ ಭಾಷೆ ತುಳು. ನಾವು ಭಾರತೀಯರು ವಿಶಾಲ ಹೃದಯದವರು, ಅದರಲ್ಲೂ ತುಳುನಾಡಿನ ನಾವು ಮಹಾ ಸಾಧಕರು, ಧೈರ್ಯಶಾಲಿಗಳು, ಅದರೆ ಇಂದು ಮೀಸಲಾತಿಯಿಂದ ನಮ್ಮ ಅಭಿವೃದ್ದಿ ಕುಂಠಿತವಾಗಿದೆ. ಜನರು ಮೀಸಲಾತಿಗಾಗಿ ತಮ್ಮ ಶಕ್ತಿ-ಸಾಮಥ್ರ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಹಿಂದೆ ನಮ್ಮ ಬಂಟ ಸಮುದಾಯದವರು.ಮೀಸಲಾತಿಗಾಗಿ ಒತ್ತಾಯಿಸಿದಾಗ ಇದರ ದುಷ್ಪರಿಣಾಮವನ್ನರಿತ ನಮ್ಮ ಹಿರಿಯರು ಅದಕ್ಕೆ ಸಮ್ಮತಿಸಿರಲಿಲ್ಲ. ಅದುದರಿಂದಲೇ ಬಂಟ ಸಮಾಜ ಬಲಿಷ್ಠವಾಗಿ ಬೆಳೆದು ನಿಂತಿದೆ ಎಂದರು.
ಕುಂದಾಪುರ ಜಿಲ್ಲಾನ್ಯಾಯಲಯದ ನ್ಯಾಯಾಧೀಶರಾದ ಪ್ರಕಾಶ್ ಖಂಡೇರಿಯವರು ಮಾತನಾಡಿ ತುಳುಭಾಷೆ, ನಾಡು, ಸಂಸ್ಕøತಿಗೆ ಅದ್ಭುತ ಶಕ್ತಿಯಿದೆ. ನಾವು ಎಷ್ಟೇ ಉನ್ನತ ಮಟ್ಟಕ್ಕೆ ಏರಿದರೂ ಅದರ ಕಾಂತೀಯ ವಲಯ ನಮ್ಮನ್ನು ಆಕರ್ಷಿಸುತ್ತದೆ ಎಂದರು. ಸಭೆಯಲ್ಲಿ ಕಾರ್ಯಕ್ರಮವನ್ನು ಡಿಸೆಂಬರ್ ತಿಂಗಳ ಕೊನೆಯಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು. ತುಳುನಾಡಿನಲ್ಲಿ ಜಾತಿ, ಮತ, ಭಾಷಾ ಸೌಹಾರ್ದತೆಯ ನಿಟ್ಟಿನಲ್ಲಿ ನಡೆಯುವ ಸಮ್ಮೇಳನದಲ್ಲಿ ಕನ್ನಡ, ತುಳು, ಕುಂಧಗನ್ನಡ, ಕೊಂಕಣಿ, ಮರಾಠಿ, ಹವ್ಯಕ, ಶಿವಳ್ಳಿ, ಮಲೆಯಾಳ, ಮಾವಿಲ, ಉರ್ದು, ಬೈರಕನ್ನಡ, ಕರ್ಹಾಡ, ಅರೆಗನ್ನಡ, ಕೊಡವ, ಕೊರಗ ಮತ್ತು ಬ್ಯಾರಿ ಭಾಷೆಗಳ ಸಾಹಿತ್ಯ, ಸಾಂಸ್ಕøತಿಕ, ಜನಪದ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಯಿತು. ಮುಂದಿನ ಸ್ವಾಗತ ಸಮಿತಿ ರೂಪೀಕರಣ ಸಭೆಯನ್ನು ಎಲ್ಲಾ ಸಮುದಾಯ ಮತ್ತು ಸಂಘ ಸಂಸ್ಥೆಗಳನ್ನು ಆಹ್ವಾನಿಸಿ ಸಪ್ಟೆಂಬರ್ 16ರಂದು ಆದಿತ್ಯವಾರ ಸಂಜೆ 3ಗಂಟೆಗೆ ನಿವೇದಿತಾ ಪ್ರೌಢಶಾಲೆಯ ವಿಶಾಲಾಕ್ಷಿ ಪೂಂಜ ಸಭಾ ಭವನದಲ್ಲಿ ನಡೆಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಶ್ರೀ ಆದಿಶಕ್ತಿ ದೇವಸ್ಥಾನದ ಧರ್ಮದರ್ಶಿ ಶ್ರೀ ಮೋಹನ್ ಸ್ವಾಮೀಜಿ, ಕುಂದಾಪುರ ತಾಲೂಕು ಪಂಚಾಯತ್ ಸದಸ್ಯ ರಾಮಕಿಶನ್ ಹೆಗಡೆ ಬಸ್ರೂರು, ಅಖಿ¯ ಭಾರತ ತುಳು ಒಕ್ಕೂಟದ ಕಾರ್ಯದರ್ಶಿ ನಿಟ್ಟೆ ಶಶಿಧರ ಶೆಟ್ಟಿ, ಮಮತ ರಾಮಕಿಶನ್ ಹೆಗಡೆ, ಒಡಿಪು ತುಳು ಕೂಟದ ತಾರಾ ಆಚಾರ್ಯ, ಕುಡ್ಲ ತುಳು ಪತ್ರಿಕೆಯ ಯಶೋದಾ ಕೇಶವ್, ಸರ್ಗ ಯಶವಂತ್, ಪುರುಷೋತ್ತಮ ಬಲ್ಯಾಯ, ನಮ ತುಳುವೆರ್ ಸಂಘಟನೆಯ ಸುಕುಮಾರ್ ಮೋಹನ್, ರಾಮಪ್ರಸಾದ್ ಭಟ್, ತುಳುವೆರೆ ಆಯನೊ ಕೂಟ ಕುಡ್ಲದ ಆಶಾ ಶೆಟ್ಟಿ ಆತ್ತಾವರ, ಹರೀಶ್ ಶೆಟ್ಟಿ ಫಣಿಯೂರು, ವಿಜಯಕುಮಾರ್ ಶೆಟ್ಟಿ ಬೈಂದೂರು, ಚಂದ್ರಿಕಾ ಶೆಟ್ಟಿ, ವಿನಯ ಮಲ್ಲಿ, ಎ. ರಾಜಾರಾಮ್ ರಾವ್, ದಿನೇಶ್ ಕಿಣಿ, ಮಹೇಶ್ ಕಿಣಿ, ನಾಗರಾಜ್ ಕುದ್ರೊಳಿ, ಪೃಥ್ವಿರಾಜ್ ಶೆಟ್ಟಿ, ಮಹೇಶ್ ಶೆಟ್ಟಿ, ಮೊದಲಾದವರು ಸಲಹೆ ಸೂಚನೆಗಳನ್ನು ನೀಡಿದರು. ನಿವೇದಿತಾ ಪ್ರೌಢಶಾಲೆಯ ಪ್ರಾಧ್ಯಾಪಕರಾದ ದಿನಕರ ಶೆಟ್ಟಿ ಸ್ವಾಗತಿಸಿ ತುಳುವೆರೆ ಆಯನೊ ಕೂಟ ಕುಡ್ಲದ ಕಾರ್ಯದರ್ಶಿ ಪ್ರಸಾದ್ ಎಸ್. ಕೊಂಚಾಡಿ, ಕೃತಜÐತೆ ಸಲ್ಲಿಸಿದರು, ವಿಶ್ವ ತುಳುವೆರೆ ಆಯನೊ ಕೂಟದ ಪ್ರಧಾನ ಸಂಚಾಲಕ ಡಾ. ರಾಜೇಶ್ ಆಳ್ವ ಬದಿಯಡ್ಕ ಕಾರ್ಯಕ್ರಮದ ರೂಪುರೇಷೆಗಳನ್ನು ನೀಡಿದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link