Brief Mumbai, Mangalore news with pictures
Kemmannu News Network, 10-09-2018 20:52:31
ಬಿಲ್ಲವರ ಅಸೋಸಿಯೇಶನ್ನಿಂದ ವಿದ್ಯಾಥಿರ್s ವೇತನ-ಪ್ರತಿಭಾ ಪುರಸ್ಕಾರ-ಶೈಕ್ಷಣಿಕ ದತ್ತು ಸ್ವೀಕಾರ - ಮನುಷ್ಯತ್ವ, ನಂಬಿಕೆ, ಗೌರವ, ಆತ್ಮವಿಶ್ವಾಸದಿಂದ ಸಾಧನೆ ಸಿದ್ಧಿಯಾಗಬೇಕು: ಸತೀಶ್ ಪೂಜಾರಿ
(ಚಿತ್ರ / ವರದಿ : ರೊನಿಡಾ ಮುಂಬಯಿ)
ಮುಂಬಯಿ, ಸೆ.08: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಆಯೋಜಿಸಿದ್ದ ವಾರ್ಷಿಕ ವಿದ್ಯಾಥಿರ್s ವೇತನ, ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮವು ಇಂದಿಲ್ಲಿ ಶನಿವಾರ ಸಂಜೆ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದ ಶ್ರೀನಾರಾಯಣ ಗುರು ಸಭಾಗೃಹದಲ್ಲಿ ನೇರವೇರಿತು.
ಅಸೋಸಿಯೇಶನ್ನ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಕಾರ್ಯಕ್ರಮವನ್ನು. ಮುಖ್ಯ ಅತಿಥಿüಯಾಗಿ ಕೈಗರಿಕೋದ್ಯಮಿ ಸತೀಶ್ ಹೆಚ್.ಪೂಜಾರಿ, ಗೌರವ ಅತಿಥಿsಯಾಗಿ ಭಾರತ್ ಬ್ಯಾಂಕ್ ನಿರ್ದೇಶಕ ಭಾಸ್ಕರ ಎಂ.ಸಾಲ್ಯಾನ್ ಉಪಸ್ಥಿತರಿದ್ದರು.
ಸತೀಶ್ ಪೂಜಾರಿ ಮಾತನಾಡಿ ನಾವೂ ಯಾವ ಕ್ಷೇತ್ರವನ್ನು ಆಯ್ಕೆ ಮಾಡುತ್ತೇವೆ ಅದೇ ಕ್ಷೇತ್ರದಲ್ಲಿ ನಾವೂ ಸಾಧನೆ ಮಾಡಬೇಕು. ಮನುಷ್ಯತ್ವ, ನಂಬಿಕೆ, ಗೌರವ, ಆತ್ಮವಿಶ್ವಾಸವನ್ನು ಅಳವಡಿಸಬೇಕು. ಇದೆಲ್ಲಾ ನಮ್ಮಲ್ಲಿ ಅಳವಡಿಸಿದಾಗ ನಾವೂ ನಮ್ಮ ಗುರಿಯನ್ನು ಸಾಧಿಸಲು ಅನುಕೂಲವಾಗುತ್ತದೆ. ಹಣದ ಹಿಂದೆ ಹೋಗುವುದಕ್ಕಿಂತ ಜ್ಞಾನ ಸಂಪಾದನೆ ಆದರೆ ಎಲ್ಲವೂ ದೊರಕಿದಂತೆ. ಸರಸ್ವತಿಯನ್ನು ಪೂಜಿಸಿದರೆ ಲಕ್ಷ್ಮೀ ಪ್ರಸಿದ್ಧಿಯಾಗುವುದು ಎಂದರು.
ಮಕ್ಕಳ ಭವಿಷ್ಯ ರೂಪಿಸುವ ಅರ್ಥಪೂರ್ಣ ಕಾರ್ಯಕ್ರಮ. ನಮ್ಮ ಕಾಲದಲ್ಲಿ ನಮಗೆ ಯಾವ ಸೌಕರ್ಯ, ಯಾರ ಬೆಂಬಲ ಇರಲಿಲ್ಲ. ನಾವೂ ಬಹಳಷ್ಟು ಕಷ್ಟಪಟ್ಟು ಮುಂದೆ ಬಂದಿದ್ದೇವೆ. ಆದರೆ ಈಗ ಎಲ್ಲಾ ತರದ ಸೌಲಭ್ಯಗಳು ಲಭ್ಯವಾಗಿವೆ. ಆದರ ಸದುಪಯೋಗ ಪಡೆಯಬೇಕು. ಅಸೋಸಿಯೇಶನ್ನ ಎಲ್ಲಾ 22 ಸ್ಥಳೀಯ ಕಛೇರಿಗಳಲ್ಲಿಯೂ ಮಕ್ಕಳಿಗೆ ಅನುಕೂಲವಾಗುವಂತಹ ಸಹಾಯ ಲಭ್ಯವಿದೆ. ಸಾಧನೆ ಮಾಡುವ ಗುರಿಯನ್ನು ವಿದ್ಯಾಥಿರ್sಗಳು ಮೈಗೂಡಿಸಬೇಕು ಎಂದÀು ಭಾಸ್ಕರ ಎಂ.ಸಾಲ್ಯಾನ್ ತಿಳಿಸಿದರು.
ಉಪಾಧ್ಯಕ್ಷÀ ಹರೀಶ್ ಜಿ.ಅವಿೂನ್ ಮಾತನಾಡಿ ಬಿಲ್ಲವರ ಅಸೋಸಿಯೇಶನ್ ಇಂತಹ ಶೈಕ್ಷಣಿಕ ನೆರವು ನೀಡುತ್ತಿರುವುದು ವಿದ್ಯಾಥಿರ್sಗಳಿಗೆ ಬಹಳಷ್ಟು ಉಪಾಯವಾಗಿದೆ. ನಾವೂ ತುಂಬಾ ಪರಿಶ್ರಮಪಟ್ಟು ಈ ಮಟ್ಟಕ್ಕೆ ಬಂದಿದ್ದೇವೆ. ಸಾಧನೆ ಗುರಿ ನಮ್ಮದಾಗಬೇಕು. ಸಹಾಯಹಸ್ತ ಸದುಪಯೋಗ ಒಳ್ಳೆಯ ರೀತಿಯಲ್ಲಿ ಆಗಬೇಕು. ಪರಿಶ್ರಮ, ಸಮರ್ಪಣೆ ನಿಮ್ಮದಾಗಬೇಕು. ಆವಾಗಲೇ ಜೀವನದಲ್ಲಿ ಸಾಧನೆ ಸಿದ್ಧಿಯಾಗುವುದು ಎಂದು ನುಡಿದರು.
ಜಯ ಸುವರ್ಣ ಅವರ ಮಾರ್ಗದರ್ಶನದಿಂದ ಬಿಲ್ಲವರ ಅಸೋಶಿಯೇಶನ್ ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜದ ಮಕ್ಕಳಿಗೆ ಸಹಾಯ ನೀಡುತ್ತದೆ. ಸುಮಾರು ಮಕ್ಕಳು ಇವತ್ತು ಸಿಎ, ಇಂಜಿನಿಯರಿಂಗ್, ಡಾಕ್ಟರ್ ಸೇರಿದಂತೆ ಅನೀಕ ಒಳ್ಳೆಯ ಹುದ್ದೆಗಳನ್ನು ಅಲಂಕರಿಸಿಕೊಂಡಿದ್ದಾರೆ. ಈ ಅಸೋಸಿಯೇಶನ್ನಿಂದ ಸಹಾಯ ಪಡೆದು ಸಾಧನೆ ಮಾಡಿದ ಎಲ್ಲಾ ವಿದ್ಯಾಥಿರ್sಗಳು ಮುಂದಿನ ಪೀಳಿಗೆಗೆ ಸಹಾಯ ಮಾಡಬೇಕು. ಐಕ್ಯತೆ ಮತ್ತು ಒಗ್ಗಟ್ಟು ನಮ್ಮೆಲಿರಬೇಕು. ಅಸೋಸಿಯೇಶನ್ನ ಮೇಲೆ ಪ್ರೀತಿ ಇರಬೇಕು. ಎಲ್ಲಾ ಮಕ್ಕಳು ಬಿಲ್ಲವರ ಅಸೋಸಿಯೇಶನ್ನ ಸದಸ್ಯರಾಗಬೇಕು ಎಂದÀು ಅಧ್ಯಕ್ಷೀಯ ಭಾಷ್ಣವನ್ನುದ್ದೇಶಿಸಿ ಚಂದ್ರಶೇಖರ ಪೂಜಾರಿ ತಿಳಿಸಿದರು.
ಅಸೋಸಿಯೇಶನ್ನ ಉಪಾಧ್ಯಕ್ಷÀ ಶಂಕರ ಡಿ.ಪೂಜಾರಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ.ಬಂಗೇರ, ಮಹಿಳಾ ವಿಭಾಗಧ್ಯಕ್ಷೆ ಜಯಂತಿ ವಿ.ಉಳ್ಳಾಲ್ ವೇದಿಕೆಯಲ್ಲಿ ಆಸೀನರಾಗಿದ್ದರು.
ಇದೇ ಸಂದರ್ಭದಲ್ಲಿ ಬಂಟ್ಸ್ ಸಂಘದ ಎಸ್.ಎಂ ಶೆಟ್ಟಿ ಕಾಲೇಜ್ ಪೆÇವಾಯಿ ಇದರ ಪ್ರಾಂಶುಪಾಲ ಡಾ| ಶ್ರೀಧರ್ ಶೆಟ್ಟಿ ಅವರು ವಿದ್ಯಾಥಿರ್üಗಳ ಸರ್ವತೋಮುಖ ಏಳಿಗೆಗಾಗಿ ಸ್ವಜ್ಞಾನೋಭಿವೃದ್ಧಿ (Seಟಜಿ ಂತಿಚಿಡಿeಟಿess ಚಿಟಿಜ ಆeveಟoಠಿmeಟಿಣ) ವಿಚಾರಿತ ದಿಕ್ಸೂಚಿ ವಿಷಯದಲ್ಲಿ ಉಪನ್ಯಾಸ ನೀಡಿದರು.
ಲೇಖಾ ಸುವರ್ಣ ಪ್ರಾರ್ಥನೆಯನ್ನಾಡಿದರು. ವಿದ್ಯಾ ಉಪಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ್ ತೋನ್ಸೆ ಸ್ವಾಗತಿಸಿದರು. ಅಸೋಸಿಯೇಶನ್ನ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್.ಕೋಟ್ಯಾನ್ ಪ್ರಸ್ತಾವಿಕ ನುಡಿಗಳ£ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾ ಸಮಿತಿ ಗೌರವ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್ ವಂದನಾರ್ಪಣೆಗೈದರು.
ದುಬಾಯಿ ವಿಶ್ವ ತುಳು ಸಮ್ಮೇಳನ-ಮುಂಬಯಿ ಸಮಿತಿ ಪೂರ್ವಭಾವಿ ಸಭೆ
ಸಮ್ಮೇಳನದಲ್ಲಿ ಭಾಗವಹಿಸಲಿಪ್ಛಿಸುವ ತುಳುವರಿಗೆ ಹೆಸರು ದಾಖಲಿಸಲು ಕರೆ ಮುಂಬಯಿ, ಸೆ.06: ಕೊಲ್ಲಿ ರಾಷ್ಟ್ರದಲ್ಲಿನ ತುಳುವ ಸಂಘ-ಸಂಸ್ಥೆಗಳು ಸಾಗರೋತ್ತರ ತುಳುವರ ಸಹಯೋಗ ದೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಖಿಲಭಾರತ ತುಳು ಒಕ್ಕೂಟಗಳ ಸಹಭಾಗಿತ್ವದಲ್ಲಿ ಬರುವ ನವೆಂಬರ್ 23-24ರ ದ್ವಿದಿನಗಳಲ್ಲಿ ದುಬಾಯಿನಲ್ಲಿ ನಡೆಯಲಿರುವ ವಿಶ್ವ ತುಳು ಪರ್ಬ ನಿಮಿತ್ತ ಮುಂಬಯಿನಲ್ಲಿ ಪ್ರಥಮ ಪೂರ್ವಭಾವಿ ಸಭೆ ನಡೆಸಿತು.
ಘಾಟ್ಕೋಪರ್ನ ಮನಿಫೆÇೀಲ್ಡ್ ಕಛೇರಿ ಸಮಾಲೋಚನಾ ಸಭಾಗೃಹದಲ್ಲಿ ಕಳೆದ ಬುಧವಾರ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟಿತು. ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು ಇದರ ಆಡಳಿತ ಮೊಕ್ತೇಸರ, ಎಸ್.ಬಿ ರಿಯಾಲಿಟಿ ಇದರ ಆಡಳಿತ ನಿರ್ದೇಶಕ ಕಡಂದಲೆ ಸುರೇಶ್ ಎಸ್.ಭಂಡಾರಿ ಅವರು ಧರ್ಮಪಾಲ್ ದೇವಾಡಿಗ ಅವರಿಗೆ ದುಬಾಯಿ ಪ್ರವಾಸ ವೀಸಾ ಪ್ರತಿ ಹಸ್ತಾಂತರಿಸಿ ಸಭೆಗೆ ಚಾಲನೆ ನೀಡಿದರು. ಸಭೆಯಲ್ಲಿ ದುಬಾಯಿನಲ್ಲಿ ನಡೆಯಲಿರುವ ವಿಶ್ವ ತುಳು ಪರ್ಬದಲ್ಲಿ ಪ್ರತಿನಿಧಿಗಳಾಗಿ ಪಾಲ್ಗೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಧರ್ಮಪಾಲ್ ದೇವಾಡಿಗ ಮಾತನಾಡಿ ಸಾಗರೋತ್ತರ ರಾಷ್ಟ್ರದಲ್ಲಿ ತುಳುವರ ಜಾಗತಿಕ ಸಮ್ಮೇಳನ ಇದೇ ಮೊದಲ ಬಾರಿ ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ನಡೆಸಲ್ಪಡಲಿದ್ದು, ತುಳು ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಒಂದು ಅಡಿಪಾಯ ಆಗಲಿದೆ. ಅರಬ್ ಸಂಯುಕ್ತ ಸಂಸ್ಥಾನದ ದುಬಾಯಿ ಅಲ್ಲಿನ ಆಲ್ನಸಾರ್ ಲೀಸರ್ ಲ್ಯಾಂಡ್ ಐಸ್ರಿಂಗ್ ಒಳಾಂಗಣದಲ್ಲಿ ಎನ್ಎಂಸಿ ಸಮೂಹ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಬಿ.ಆರ್ ಶೆಟ್ಟಿ ಘನಾಧ್ಯಕ್ಷತೆ ಹಾಗೂ ಸರ್ವೋತ್ತಮ ಶೆಟ್ಟಿ ಅವರ ದೂರದೃಷ್ಠಿತ್ವದ ಮತ್ತು ಮುಂದಾಳುತ್ವದಲ್ಲಿ ನಡೆಯಲಿರುವ ಸಮಗ್ರ ತುಳುವರ ಸಾಂಘಿಕತೆ ಸಾರುವ ಸಮ್ಮೇಳನ ಆಗಿದೆ. ಭಾರತ ರಾಷ್ಟ್ರದಾದ್ಯಂತ ನೆಲೆಯಾದ ತುಳುವರು ಮತ್ತು ತುಳು ಸಂಘಟನೆಗಳ ಮುಂದಾಳುಗಳು ಸೇರಿದಂತೆ ಹಿಂದು, ಮುಸ್ಲಿಂ ಮತ್ತು ಕ್ರೈಸ್ತ ಧಾರ್ಮಿಕ ಮುಂದಾಳುಗಳು ಮತ್ತು ಕರ್ನಾಟಕ ಹಾಗೂ ಕರಾವಳಿ, ತುಳುನಾಡಿನ ನೂರಾರು ಗಣ್ಯರು ಭಾಗವಹಿಸಲಿದ್ದಾರೆ. ಮಹಾರಾಷ್ಟ್ರ ಮತ್ತು ಗುಜರಾತ್ನಿಂದ ಇದೀಗಲೇ ನೂರಾರು ತುಳುವರು ಸಮ್ಮೇಳನದಲ್ಲಿ ಪಾಲ್ಗೊಳ್ಳುವರೇ ಹೆಸರುಗಳನ್ನು ನೋಂದಾಯಿಸಿದ್ದಾರೆ ಎಂದು ಸಮ್ಮೇಳನದ ಬಗ್ಗೆ ಸ್ಥೂಲವಾದ ಮಾಹಿತಿಯನ್ನಿತ್ತರು.
ವಿದೇಶದಲ್ಲಿನ ತುಳು ಮಾತೃಭಾಷಿಗರ ಇಂತಹ ಯೋಚನೆ ಮೆಚ್ಚುವಂತಹದ್ದು. ಹೊರನಾಡಿನಲ್ಲಿ ಇಷ್ಟೊಂದು ದೊಡ್ಡ ಯೋಜನೆಯನ್ನು ಹಮ್ಮಿಕೊಂಡ ಸಾಗರೋತ್ತರ ತುಳುವರ ಸಾಧನೆ ಸ್ತುತ್ಯರ್ಹ. ಇದು ಭಾಷಾ ಭಾವೈಕ್ಯತೆಗೆ ಪೂರಕವಾಗಿದ್ದು ಒಳನಾಡ ತುಳುವರು ಸಕ್ರೀಯವಾಗಿ ಪಾಲ್ಗೊಂಡಾಗಲೇ ಸಮ್ಮೇಳನದ ಉದ್ದೇಶ ಸಾರ್ಥಕವಾಗುವುದು ಎಂದು ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು ಇದರ ಆಡಳಿತ ಮೊಕ್ತೇಸರ, ಎಸ್.ಬಿ ರಿಯಾಲಿಟಿ ಇದರ ಆಡಳಿತ ನಿರ್ದೇಶಕ ಕಡಂದಲೆ ಸುರೇಶ್ ಎಸ್.ಭಂಡಾರಿ ತಿಳಿಸಿದರು.
ಸಮಾಜ ಸೇವಕರಾದವಿಶ್ವನಾಥ್ ಯು.ಮಾಡಾ, ಎಸ್.ಕೆ ಶ್ರೀಯಾನ್, ಬಾಲಕೃಷ್ಣ ಪಿ.ಭಂಡಾರಿ, ವಿಶ್ವನಾಥ ರೈ, ನಾಟಕಕಾರ ಸಾ.ದಯಾ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕರ ರಾಜ್ಯ ತುಳು ಅಕಾಡಮಿ ಮಾಜಿ ಸದಸ್ಯ, ಸಂಘಟಕ ಕರ್ನೂರು ಮೋಹನ್ ರೈ ಸ್ವಾಗತಿಸಿ ವಿದೇಶದ ಪ್ರಪ್ರಥಮ ವಿಶ್ವ ತುಳು ಸಮ್ಮೇಳನ ಇದಾಗಲಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ವಿಶ್ವ ತುಳುವರೆ ಪರ್ಬ ಸಮಿತಿ ಗೌರವಾಧ್ಯಕ್ಷ, ಪದ್ಮಭೂಷಣ ಡಾ| ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಪಾದರ್ಪಣೆಗೈದು ಸಮ್ಮೇಳನವನ್ನು ಸಾಂಪ್ರದಾಯಿಕವಾಗಿ ಉದ್ಘಾಟಿಸಲಿದ್ದಾರೆ ಎಂದು ಪ್ರಸ್ತಾವಿಕವಾಗಿ ತಿಳಿಸಿದರು. ಭಾರತ ತುಳು ಒಕ್ಕೂಟದ ಮಹಾರಾಷ್ಟ್ರ ಘಟಕದ ರೋನ್ಸ್ ಬಂಟ್ವಾಳ್ ಅಭಾರ ಮನ್ನಿಸಿದರು.
ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತವುಳ್ಳವರಿಗೆ ಇನ್ನೂ ಒದುವಾರದ ಅವಕಾಶ ಒದಗಿಸಲಾಗಿದೆ. ಹೆಸರು ನೋಂದಣಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ ಧರ್ಮಪಾಲ್ ದೇವಾಡಿಗ (9322506941) ಕರ್ನೂರು ಮೋಹನ್ ರೈ (9867304757) ರೋನ್ಸ್ ಬಂಟ್ವಾಳ್ (9820292974) ಇವರನ್ನು ಸಂಪರ್ಕಿಸುವಂತೆ ಎಂದು ಮೋಹನ್ ರೈ ತಿಳಿದ್ದಾರೆ.
ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯ ಸ್ವರ್ಣಮಹೋತ್ಸವಕ್ಕೆ-ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸಂಪ್ರದಾಯಿಕ ಆಹ್ವಾನ
ಮುಂಬಯಿ, ಸೆ.09: ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯು ತನ್ನ ಸುವರ್ಣ ಮಹೋತ್ಸವ ವರ್ಷಾಚರಣೆಯನ್ನು ಬರುವ ನವೆಂಬರ್ನಲ್ಲಿ ಮಹಾನಗರಿಯಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಿದ್ದು ಸಂಭ್ರಮವನ್ನು ಉದ್ಘಾಟಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪೂಜ್ಯ ಖಾವಂದರಾದ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸೊಸೈಟಿ ವತಿಯಿಂದ ಸಂಪ್ರದಾಯಿಕ ಆಹ್ವಾನ ನೀಡಲಾಯಿತು.
ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಾಬಾಳಿಕೆ ಅವರ ಮುಂದಾಳುತ್ವದಲ್ಲಿ ಇತ್ತೀಚೆಗೆ ಧರ್ಮಸ್ಥಳಕ್ಕೆ ತೆರಳಿದ ನಿಯೋಗವು ಡಾ| ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸಂಭ್ರಮಕ್ಕೆ ಆಗಮಿಸುವರೇ ಸಂಪ್ರದಾಯಿಕವಾಗಿ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ವೆಲ್ಫೇರ್ನ ಕಾರ್ಯದರ್ಶಿ ಸುಧಾಕರ ಎಲ್ಲೂರು, ಅಜೆಕಾರು ಬಾಲಕೃಷ್ಣ ಶೆಟ್ಟಿ, ದಿವಾಕರ ಶೆಟ್ಟಿ ಇಂದ್ರಾಳಿ ಮತ್ತು ಅಶೋಕ್ ಪಕ್ಕಳ ಉಪಸ್ಥಿತರಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, Kemmannu
Annual Church Feast 2024 | St. Theresa’s Church, Kemmannu
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link