ತೆಂಕನಿಡಿಯೂರು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ and more Udupi News


Richard Dsouza
Kemmannu News Network, 12-09-2018 19:23:11


Write Comment     |     E-Mail To a Friend     |     Facebook     |     Twitter     |     Print


ತೆಂಕನಿಡಿಯೂರು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ

 ಉಡುಪಿ, ಸೆಪ್ಟಂಬರ್ 12 (ಕರ್ನಾಟಕ ವಾರ್ತೆ) : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇದರ 2018-19ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಉದ್ಘಾಟನಾ ಕಾರ್ಯಕ್ರಮವು ಸೆಪ್ಟಂಬರ್ 11 ರಂದು ತೆಂಕನಿಡಿಯೂರು ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

    ಉಡುಪಿ ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ - “ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ತಮ್ಮ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕ ಒತ್ತನ್ನು ನೀಡಿದರೆ ಸಂಸ್ಥೆಗೆ ಹಾಗೂ ಸಮಾಜಕ್ಕೆ ಪರಿಣಾಮಕಾರಿಯಾದ ಕೊಡುಗೆಯನ್ನು ನೀಡಬಹುದು” ಎಂದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ಮಧುಸೂದನ ಭಟ್, “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತಿಗೆ ಮತ್ತು ಸಂಸ್ಕಾರಕ್ಕೆ ಸಮಾನವಾದ ಪ್ರಾಶಸ್ತ್ಯವನ್ನು ನೀಡಿದರೆ ಪರಿಣಾಮಕಾರಿಯಾದ ವ್ಯಕ್ತಿತ್ವವನ್ನು ರಚಿಸಬಹುದು” ಎಂದು ಹಲವಾರು ಉದಾಹರಣೆಗಳ ಮೂಲಕ ವಿವರಿಸಿದರು.

     ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ವಹಿಸಿದರು. ತೆಂಕನಿಡಿಯೂರು ಗ್ರಾಮಪಂಚಾಯತ್ ಅಧ್ಯಕ್ಷ ಜಯಕುಮಾರ್ ಬೆಳ್ಕಳೆ,  ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರೊ. ಪ್ರಸಾದ್ ರಾವ್ ಎಂ., ಪ್ರೊ. ರಾಮಚಂದ್ರ ಪಾಟ್ಕರ್, ದಯಾನಂದ ಶೆಟ್ಟಿ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

     ವಿ.ಕ್ಷೇ.ಪಾ. ಸಮಿತಿ, ಅಧ್ಯಕ್ಷ ಪ್ರಜ್ವಲ್ ಸ್ವಾಗತಿಸಿದರು. ವಿ.ಕ್ಷೇ.ಪಾ. ಸಮಿತಿ, ಅಧ್ಯಕ್ಷ ಸ್ವಾತಿ ರಾವ್ ಬಿ. ವಂದಿಸಿದರು, ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಪ್ರೊ. ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು.  ಈ ಸಂದರ್ಭದಲ್ಲಿ ಕಾಲೇಜಿನ ಸಂಚಿಕೆ “ಸುದರ್ಶನ” ವನ್ನು ಶಾಸಕರು ಬಿಡುಗಡೆ ಗೊಳಿಸಿದರು.


ವಿದ್ಯಾಸಿರಿ ಯೋಜನೆ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

    ಉಡುಪಿ, ಸೆಪ್ಟಂಬರ್ 12 (ಕರ್ನಾಟಕ ವಾರ್ತೆ) :ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿನಲ್ಲಿ “ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ” ಯಡಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಅಥವಾ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ದಿನವನ್ನು  ಸೆಪ್ಟೆಂಬರ್ 19ರ  ವರೆಗೆ ವಿಸ್ತರಿಸಲಾಗಿದೆ.

    ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‍ಸೈಟ್ hಣಣಠಿs://goಞಜom.ಞಚಿಡಿ.ಟಿiಛಿ.iಟಿ  ಅಥವಾ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/uಜuಠಿi  ನಿಂದ ಪಡೆದು ಭರ್ತಿಮಾಡಿ ಎಲ್ಲಾ ದಾಖಲೆಗಳೊಂದಿಗೆ ಕಾಲೇಜಿನ ಮುಖಾಂತರ ಆಯಾ ತಾಲೂಕು ವ್ಯಾಪ್ತಿಗೆ ಬರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಮಣಿಪಾಲ, ಉಡುಪಿ, ದೂರವಾಣಿ sಸಂಖ್ಯೆ : 0820-2574596, ಕುಂದಾಪುರ ದೂರವಾಣಿ ಸಂಖ್ಯೆ : 08254-230370, ಕಾರ್ಕಳ, ದೂರವಾಣಿ : 08258-231101 ಗೆ ಸಲ್ಲಿಸುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ: ವಾರ್ಷಿಕ ಮಹಾಸಭೆ

   ಉಡುಪಿ, ಸೆಪ್ಟಂಬರ್ 12 (ಕರ್ನಾಟಕ ವಾರ್ತೆ) :ಉಡುಪಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ( ಮಣಿಪಾಲ ಪೊಲೀಸ್ ಠಾಣೆಯ ಆವರಣ, ಮಣಿಪಾಲ, ಉಡುಪಿ ಜಿಲ್ಲೆ) ಇವರ 5 ನೇ ವಾರ್ಷಿಕ ಮಹಾಸಭೆಯು ಸೆಪ್ಟಂಬರ್ 15 ರಂದು ಬೆಳಗ್ಗೆ 10 ಕ್ಕೆ ಜಗನ್ನಾಥ  ಸಭಾಭವನ, (ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಾಳಿಗೆ) ದಲ್ಲಿ ನಡೆಯಲಿದೆ.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಡಿವೈಎಸ್‍ಪಿ ಡಾ.ಪ್ರಭುದೇವ್ ಬಿ.ಮಾನೆ ವಹಿಸಲಿದ್ದಾರೆ.

ಸಾಲಿಗ್ರಾಮ ಪಟ್ಟಣ ಪಂಚಾಯತ್: ತ್ಯಾಜ್ಯ ವಿಲೇವಾರಿ

   ಉಡುಪಿ, ಸೆಪ್ಟಂಬರ್ 12 (ಕರ್ನಾಟಕ ವಾರ್ತೆ) :ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಉಳ್ತೂರಿನಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಿರುವ ಸ್ಥಳವು ಕುಂದಾಪುರ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ವ್ಯಾಜ್ಯದಲ್ಲಿರುವುದರಿಂದ ಪಟ್ಟಣ ಪಂಚಾಯತಿನಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸ್ಥಳಾವಕಾಶವಿಲ್ಲದ ಕಾರಣ ಅನೇಕ ಸಮಸ್ಯೆಗಳು ಉಂಟಾಗುತ್ತಿರುವುದರಿಂದ ಈ ವ್ಯಾಜ್ಯವು ಮುಕ್ತಾಯವಾಗಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗುವವರಗೆ ಪಟ್ಟಣ ಪಂಚಾಯತ್‍ನಿಂದ ಸೆಪ್ಟಂಬರ್ 17 ರಿಂದ ಯಾವುದೇ ಹಸಿ ಕಸವನ್ನು ಮನೆಗಳಿಂದ ಹಾಗೂ ಹೊಟೇಲ್, ಕೈಗಾರಿಕೆ, ಅಂಗಡಿ ಇತ್ಯಾದಿ ವಾಣಿಜ್ಯ ಘಟಕಗಳಿಂದ ಸಂಗ್ರಹಿಸಲಾಗುವುದಿಲ್ಲ, ಕೇವಲ ಒಣ ಕಸವನ್ನು ವಾರದಲ್ಲಿ ಒಂದು ದಿನ ಮಾತ್ರ ಪಟ್ಟಣ ಪಂಚಾಯತ್ ಟಿಪ್ಪರ್‍ಗೆ ನೀಡಬೇಕು. ಹಸಿ ಕಸವನ್ನು ಐಇಸಿ ಕಾರ್ಯಕ್ರಮದಂತೆ ಪೈಪ್ ಕಾಂಪೋಸ್ಟ್, ಪಿಟ್ ಕಾಂಪೋಸ್ಟ್, ಬಯೋ ಬಿನ್ಸ್ ಅಥವಾ ಇನ್ನಿತರ ವಿಧಾನಗಳಿಂದ ತಮ್ಮ ಸ್ವಂತ ಸ್ಥಳದಲ್ಲಿಯೇ ವಿಲೀನಗೊಳಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು. ಹಸಿ ಕಸವನ್ನು ವಿಲೇಗೊಳಿಸಲು ಇರುವ ವಿಧಾನಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಆರೋಗ್ಯ ನಿರೀಕ್ಷಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್‍ನ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕೃಷಿ ಪ್ರಶಸ್ತಿ ಯೋಜನೆ:  ನೋಂದಾವಣೆ ಅವಧಿ ವಿಸ್ತರಣೆ

    ಉಡುಪಿ, ಸೆಪ್ಟಂಬರ್ 12 (ಕರ್ನಾಟಕ ವಾರ್ತೆ) : 2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳಲು ಅನುಕೂಲವಾಗುವಂತೆ ಹಾಗೂ ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಬೆಳೆ ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ನಿಗಧಿಪಡಿಸಲಾಗಿದ್ದ, ಅಂತಿಮ ದಿನವನ್ನು ಸೆಪ್ಟಂಬರ್ 30 ರ ವರೆಗೆ ವಿಸ್ತರಿಸಲಾಗಿದ್ದು, ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ  ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ಸ್ಪರ್ಧೆಗೆ ನೋಂದಾಯಿಸಿಕೊಳ್ಳುವ ಮೂಲಕ ಇದರ ಪ್ರಯೋಜನ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆರೂರು ಗ್ರಾಮ ಪಂಚಾಯತ್: ಮಾಹಿತಿ ಹಾಗೂ ನೊಂದಣಿ ಕಾರ್ಯಕ್ರಮ

    ಉಡುಪಿ, ಸೆಪ್ಟಂಬರ್ 12 (ಕರ್ನಾಟಕ ವಾರ್ತೆ) : 21 ನೇ ಆರೂರು ಗ್ರಾಮ ಪಂಚಾಯತ್‍ನ ಕಾರ್ಮಿಕ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಸ್ಪೂರ್ತಿ ಗೆಳೆಯರ ಬಳಗ ಕುಂಜಾಲು, ಶ್ರೀ ವಿಷ್ಣುಮೂರ್ತಿ ಯುವಕ ಮಂಡಲ(ರಿ) ಸ್ಪಂದನ ಯುವ ವೃಂದ, ಮಹಾಲಿಂಗೇಶ್ವರ ಯುವಕ ವೃಂದ, ಸುಬ್ರಮಣ್ಯ ಮಿತ್ರ ಮಂಡಳಿ ಇವರ ಸಹಭಾಗಿತ್ವದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಕ್ರಮ ಮತ್ತು ನೊಂದಣಿ ಕಾರ್ಯಕ್ರಮವನ್ನು ಸೆಪ್ಟಂಬರ್ 7 ರಂದು ಪಂಚಾಯತ್ ಅಧ್ಯಕ್ಷ  ರಾಜೀವ್ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

   ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೇಪ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಮಾಹಿತಿಯನ್ನು ಕಾರ್ಮಿಕ ಇಲಾಖೆ ಎಕ್ಸಿಕ್ಯೂಟಿವ್ ಎನ್.ಎಸ್. ಶಿವಪ್ರಸಾದ್ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ 190 ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳಲಾಯಿತು. ಅಧ್ಯಕ್ಷರ ಭಾಷಣದಲ್ಲಿ ಜನರಿಗೆ ಕಾರ್ಮಿಕ ಇಲಾಖೆಯ ಪ್ರಯೋಜನವು ಹತ್ತಿರದಲ್ಲೆ ಸಿಗಬೇಕು ಎಂಬ ಕಾರಣಕ್ಕೆ ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು,  ಜನರು ಇದರ ಸದುಪಯೋಗ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

    ವೇದಿಕೆಯಲ್ಲಿ ಎಲ್ಲಾ ಸಂಘಗಳ ಅಧ್ಯಕ್ಷರು ಹಾಗೂ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಹಾಗೂ ಯುವಕ ಮಂಡಲದ ಪದಾಧಿಕಾರಿಗಳು ಭಾಗವಹಿಸಿದ್ದರು.

ಉಡುಪಿ, ಸೆಪ್ಟಂಬರ್ 12 (ಕರ್ನಾಟಕ ವಾರ್ತೆ) : ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸಮಸ್ತ ಜನತೆಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಹಾಗೂ

ಜಿಲ್ಲೆಯಲ್ಲಿ ಸಣ್ಣ ನೀರಾವರಿ ಸಚಿವರ ಪ್ರವಾಸ

 

    ಉಡುಪಿ : ಸಣ್ಣ ನೀರಾವರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಸೆಪ್ಟಂಬರ್ 14 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮಧ್ಯಾಹ್ನ 3 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ, ಉಡುಪಿಯಲ್ಲಿ ನಡೆಯುವ ಜಿಲ್ಲೆಗೆ ಸಂಬಂಧಿಸಿದ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. 7 ಗಂಟೆಗೆ ಕೊಲ್ಲೂರಿಗೆ ಭೇಟಿ ನೀಡಿ, ಕುಂದಾಪುರದಲ್ಲಿ ವಾಸ್ತವ್ಯ ಮಾಡುವರು.

 

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರು

 

    ಉಡುಪಿ, ಸೆಪ್ಟಂಬರ್ 11 (ಕರ್ನಾಟಕ ವಾರ್ತೆ) :2018-19 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಬಿಎಡ್, ಬಿಪಿಎಡ್, ಸ್ನಾತ್ತಕೋತ್ತರ ಪದವಿ, ಎಂಎಡ್, ಎಂಪಿಎಡ್, ಕೃಷಿ, ಪಶುಸಂಗೋಪನೆ, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸುಗಳಿಗೆ ಸಮಬಂಧಿಸಿದಂತೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

   ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31.

   ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಕಳುಹಿಸಬೇಕು.

   ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ದೂರವಾಣಿ ಸಂಖ್ಯೆ: 0820-2574892 ಗೆ ಕಚೇರಿ  ಸಮಯದಲ್ಲಿ ಸಂಪರ್ಕಿಸುವಂತೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

  

ಖಾದಿ ಮಂಡಳಿ :ಬಿ.ಪಿ.ಎಲ್. ಕುಟುಂಬಗಳ ಮರುಪಾವತಿ ಸಾಲ ಮನ್ನಾ ಸಮೀಕ್ಷೆ

 

    ಉಡುಪಿ, ಸೆಪ್ಟಂಬರ್ 11 (ಕರ್ನಾಟಕ ವಾರ್ತೆ) : ಖಾದಿ ಮಂಡಳಿಯಿಂದ ಸಾಲ ಪಡೆದಿರುವ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಫಲಾನುಭವಿಗಳ ಕುಟುಂಬಗಳ ಮಾಹಿತಿಯ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, 2018-19 ನೇ ಸಾಲಿನ ಆಯವ್ಯಯ ಭಾಷಣ ಖಂಡಿಕೆ 181 ರಲ್ಲಿ ರಾಜ್ಯ ಸರ್ಕಾರದ ಸಂಸ್ಥೆಯಾದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮೂಲಕ ಧನಸಹಾಯ ಸ್ವರೂಪ ಯೋಜನೆ(ಪಿ.ಬಿ.ಎಸ್.) ಮತ್ತು ಸಮೂಹ ಬ್ಯಾಂಕ್ ಯೋಜನೆ(ಸಿ.ಬಿ.ಸಿ) ಯಡಿ ಸಾಲ ಪಡೆದಿರುವ ಎಲ್ಲಾ ಬಿ.ಪಿ.ಎಲ್ ಕಾರ್ಡ್ ಕುಟುಂಬಗಳು ಮರುಪಾವತಿಗಾಗಿ ಬಾಕಿ ಇರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂಬ ಘೋಷಣೆಯಡಿ ಮಂಡಳಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಮೇರೆಗೆ ಈ ಯೋಜನೆಯನ್ನು ಜಾರಿಗೆ ತರಲು ಮಂಡಳಿಯಿಂದ ಮೇಲಿನ ಎರಡು ಯೋಜನೆಯಡಿ ಮತ್ತು ತಾಲೂಕು ಮಟ್ಟದ ವಿವಿದ್ದೋದ್ದೇಶ  ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯ ಪಡೆದಿರುವ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳ ಕುಟುಂಬಗಳ ವಿವರವನ್ನು ಸಮೀಕ್ಷೆ ಮಾಡುತ್ತಿದ್ದು, ಸರ್ಕಾರವು ಸೆಪ್ಟಂಬರ್ 25 ರ ಒಳಗೆ ಫಲಾನುಭವಿಗಳ ಯಾದಿಯನ್ನು ಸಲ್ಲಿಸಲು ಆದೇಶಿಸಿದೆ.

    ಖಾದಿ ಮಂಡಳಿ ಮೂಲಕ ಧನಸಹಾಯ ಸ್ವರೂಪ ಮತ್ತು ಸಮೂಹ ಬ್ಯಾಂಕ್ ಯೋಜನೆ ಯಡಿ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳು  ಹೆಚ್ಚಿನ ಮಾಹಿತಿಗೆ ಉಡುಪಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0820-2574855 ಅನ್ನು ಸಂಪರ್ಕಿಸಿ, ದಾಖಲಾತಿಗಳನ್ನು ಒದಗಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ  ಅಧಿಕಾರಿ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

ನಗರಸಭೆ: ದೀನದಯಾಳ್ ಅಂತ್ಯೋದಯ ಯೊಜನೆಗೆ ಅರ್ಜಿ ಆಹ್ವಾನ

    ಉಡುಪಿ, ಸೆಪ್ಟಂಬರ್ 11 (ಕರ್ನಾಟಕ ವಾರ್ತೆ) : ಉಡುಪಿ ನಗರಸಭೆಯ 2018-19 ನೇ ಸಾಲಿನ ದೀನ ದಯಾಳ್ ಅಂತ್ಯೋದಯ ಯೋಜನೆ- ನಲ್ಮ್ ಅಭಿಯಾನದಡಿ ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡತನ ರೇಖೆಗಿಂತ ಕೆಳಗಿನ ಕುಟುಂಬದ 18 ರಿಂದ 45 ವರ್ಷದೊಳಗಿನ ಆಸಕ್ತರಿಂದ ,  ವ್ಯಕ್ತಿಗತ ಸ್ವಯಂ ಉದ್ಯೋಗ ನಡೆಸಲು (ಬಡ್ಡಿ ಸಹಾಯಧನ), ಗುಂಪು ಚಟುವಟಿಕೆ ನಡೆಸಲು (ಬಡ್ಡಿ ಸಹಾಯಧನ), ಉಚಿತ ತರಬೇತಿ ಕಾರ್ಯಕ್ರಮ, ಸ್ವ-ಸಹಾಯ ಗುಂಪು ರಚನೆ(ಆವರ್ತಕ ನಿಧಿ), ಗುಂಪುಗಳಿಗೆ ಸಾಲ ನೀಡಲು, ಈ ಸೌಲಭ್ಯಗಳನ್ನು ಪಡೆಯುವ ಸಲುವಾಗಿ ಸೆಪ್ಟಂಬರ್ 29 ರ ಒಳಗೆ  ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿಯೊಂದಿಗೆ ಪಡಿತರ ಚೀಟಿ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ ಪ್ರತಿ, ವಿದ್ಯಾರ್ಹತೆಯ ಬಗ್ಗೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಈ ದಾಖಲೆಗಳನ್ನು ಸಲ್ಲಿಸಬೇಕು.

   ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ಉಡುಪಿ ನಗರಸಭೆ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ನಗರಸಭೆ: ಬಡ ವರ್ಗದ ಕುಟುಂಬದವರಿಂದ ವಿವಿಧ  ಸೌಲಭ್ಯಕ್ಕೆ ಅರ್ಜಿ ಆಹ್ವಾನ

    ಉಡುಪಿ, ಸೆಪ್ಟಂಬರ್ 11 (ಕರ್ನಾಟಕ ವಾರ್ತೆ) : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಾರ್ಷಿಕ 2.50 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿರುವ ಇತರೆ ಬಡ ವರ್ಗದ ಕುಟುಂಬದ ಸದಸ್ಯರಿಗೆ 2018-19 ನೇ ಸಾಲಿನಲ್ಲಿ ಶೇ.7.25 ರ ನಿಧಿಯಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

    ಸೌಲಭ್ಯದ ವಿವರ: ವಿದ್ಯಾರ್ಥಿವೇತನ( ಎಸ್.ಎಸ್.ಎಲ್.ಸಿ/ಐ.ಟಿ.ಐ, ದ್ವಿತೀಯ ಪಿ.ಯಿ.ಸಿ/ ಡಿಪ್ಲೋಮಾ/ ಪ್ಯಾರಾ ಮೆಡಿಕಲ್ ಪೂರ್ಣಗೊಳಿಸರಬೇಕು. ಬಿ.ಎ, ಬಿ.ಕಾಂ, ಬಿಎಸ್‍ಸಿ(2 ನೇ ಮತ್ತು 3 ನೇ ವರ್ಷದ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ), ಮಾಸ್ಟರ್ ಡಿಗ್ರಿ, ಎಂಎ, ಎಂಕಾಂ, ಎಂಎಸ್‍ಸಿ, ಬಿಇ ವಿದ್ಯಾರ್ಥಿಗಳಿಗೆ) ,ಅನಿಲ ಸಂಪರ್ಕ, ಸಣ್ಣ ಉದ್ದಿಮೆ, ನೀರಿನ ಸಂಪರ್ಕ, ಮನೆ ದುರಸ್ಥಿ.

   ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ(ಚಾಲ್ತಿ ಸಾಲಿನ), ಪಡಿತರ ಚೀಟಿ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ ಪ್ರತಿ, ಅಂಕಪಟ್ಟಿಯ ದೃಢೀಕೃತ ಪ್ರತಿ(ವಿದ್ಯಾರ್ಥಿವೇತನಕ್ಕಾಗಿ), ವ್ಯಾಸಾಂಗ ಪ್ರಮಾಣ ಪತ್ರದ ಮೂಲ ಪ್ರತಿ (ವಿದ್ಯಾರ್ಥಿವೇತನಕ್ಕಾಗಿ), ಹಿಂದುಳಿದ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯದೇ ಇರುವ ಬಗ್ಗೆ ದೃಢೀಕರಣ ಪತ್ರ, ಈ ದಾಖಲೆಗಳನ್ನು ಸೆಪ್ಟಂಬರ್ 29 ರ ಒಳಗಾಗಿ ಕಚೇರಿಗೆ ಸಲ್ಲಿಸಬೇಕು.

   ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ಉಡುಪಿ ನಗರಸಭೆ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ನಗರಸಭೆ: ಸಾರ್ವಜನಿಕ ಸೇವೆಗಳ ಬಗ್ಗೆ ದೂರು ದಾಖಲಿಸುವ ಬಗ್ಗೆ

    ಉಡುಪಿ, ಸೆಪ್ಟಂಬರ್ 11 (ಕರ್ನಾಟಕ ವಾರ್ತೆ) :ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ದಾರಿದೀಪ, ಕುಡಿಯುವ ನೀರು, ತ್ಯಾಜ್ಯವಿಲೇವಾರಿ, ಒಳಚರಂಡಿ ಹಾಗೂ ಇನ್ನಿತರ ಸಾರ್ವಜನಿಕ ಸೇವೆಗಳ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ನಗರಸಭೆಯ ಅಧಿಕೃತ ವೆಬ್‍ಸೈಟ್ ತಿತಿತಿ.mಡಿಛಿ.gov.iಟಿ/ರಿಚಿಟಿಚಿhiಣhಚಿ  ದಲ್ಲಿ ದೂರು ದಾಖಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆ: 080-23108108, ಇ-ಮೇಲ್ ರಿಚಿಟಿಚಿhiಣhಚಿ@mಡಿಛಿ.gov.iಟಿ ,ವಾಟ್ಸಾಪ್ ನಂ. 8277777728 ರಲ್ಲಿ ದೂರು ದಾಖಲಿಸಬಹುದಾಗಿದೆ.

   ಸಾರ್ವಜನಿಕರು ಈ ಸಾರ್ವಜನಿಕ ಸೇವೆಗಳ ಬಗ್ಗೆ ಯಾವುದೇ ತೊಂದರೆ ಉಂಟಾದಲ್ಲಿ ದೂರನ್ನು ದಾಖಲಿಸಿ ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರು, ನಗರಸಭೆ, ಉಡುಪಿ  ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸೆ.14 ಮಾದಕ ವ್ಯಸನ ಮಾಸಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಾಕಾಥಾನ್

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಇವರುಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಎರಡು ತಿಂಗಳುಗಳ ನಡೆಯುತ್ತಿರುವ ಮಾದಕ ವ್ಯಸನ ವಿರೋಧಿ ಮಾಸಾಚರಣೆಯ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳ ಸೆ ನೋ ಟು ಡ್ರಗ್ಸ್ ವಾಕಾಥಾನ್ ಜಾಥಾ ಸಪ್ಟೆಂಬರ್ 14ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿ ನಗರದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಇಂದ್ರಾಳಿ ರೈಲ್ವೆ ಸೇತುವೆಯ ಬಳಿ ಜಾಥಾಗೆ ಚಾಲನೆ ನೀಡಲಿದ್ದು ಅಲ್ಲಿಂದ ಆರಂಭವಾದ ಜಾಥಾವು ಎಮ್ ಜಿ ಎಮ್ ಕಾಲೇಜು, ಕಡಿಯಾಳಿ, ಕಲ್ಸಂಕ, ಸಿಟಿ ಬಸ್ಸು ನಿಲ್ದಾಣ, ಶಿರಿಬೀಡು – ಕಿದಿಯೂರು ರಸ್ತೆ ಮೂಲಕ ಸಾಗಿ ಸರ್ವಿಸ್ ಬಸ್ಸು ನಿಲ್ದಾಣ, ತ್ರೀವೇಣಿ ಸರ್ಕಲ್, ಕೆ ಎಮ್ ಮಾರ್ಗ, ಹಳೆ ಡಯಾನಾ ಹೊಟೇಲ್ ರಸ್ತೆ, ಕೋರ್ಟ್ ರಸ್ತೆ, ಹಳೆ ತಾಲೂಕು ಕಚೇರಿ, ಬಿಗ್ ಬಜಾರ್, ಡಯಾನಾ ಹೋಟೆಲ್, ಪುರಭವನ ಮೂಲಕ ಸಾಗಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾಪನಗೊಳ್ಳಲಿದೆ.

ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|ಜಯಮಾಲಾ, ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಏರ್‍ಟೆಲ್ ಸಂಸ್ಥೆಯ ಪ್ರಾಂತೀಯ ಉದ್ಯಮ ಮುಖ್ಯಸ್ಥರಾದ ಸದಾನಂದ ಉರಭಿನವರ್, ಹಾಗೂ ಉಡುಪಿ ಪ್ರಾಂತೀಯ ಸೇಲ್ಸ್ ಮ್ಯಾನೇಜರ್ ದೀಪಕ್ ಪಿವಿ ಭಾಗವಹಿಸಲಿದ್ದು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅಧ್ಯಕ್ಷತೆ ವಹಿಸಲಿದ್ದಾರೆ.

ಜಾಥಾದಲ್ಲಿ ಉಡುಪಿ ನಗರದ ಆಸುಪಾಸಿನ ವಿವಿಧ ಹೈಸ್ಕೂಲ್, ಪಿಯು ಮತ್ತು ಪದವಿ ಕಾಲೇಜಿನ ಸುಮಾರು 3000 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ  ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Rozaricho Gaanch April, 2024 - Ester issueRozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi