Brief Udupi news with pictures
Kemmannu News Network, 17-09-2018 18:30:08
ಕಿಂಡಿ ಅಣೆಕಟ್ಟುಗಳಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ: ಸಚಿವ ಪುಟ್ಟರಾಜು
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ) : ಸಣ್ಣ ನೀರಾವರಿ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾಗುವ ಕಿಂಡಿ ಅಣೆಕಟ್ಟುಗಳನ್ನು ಅವುಗಳ ಮೇಲೆ ಲಘು ವಾಹನಗಳು ಸಂಚರಿಸಲು ಅನುಕೂಲವಾಗು ಮಾದರಿಯಲ್ಲಿ ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಅವರು ತಿಳಿಸಿದ್ದಾರೆ.
ಅವರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೀರಾವರಿ ಅಭಿವೃದ್ಧಿ ದೃಷ್ಟಿಯಿಂದ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುತ್ತಿದೆ. ಆದರೆ ಇವುಗಳ ಮೇಲೆ ವಾಹನಗಳ ಸಂಚಾರಕ್ಕೂ ಅವಕಾಶ ಮಾಡಬೇಕು ಎಂದು ಸಾರ್ವಜನಿಕರ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ನಿರ್ಮಿಸಲಾಗುವ ಎಲ್ಲಾ ಕಿಂಡಿ ಅಣೆಕಟ್ಟುಗಳ ಮೇಲೆ ಸ್ಥಳೀಯ ವಾಹನ ಸಾಂದ್ರತೆ ಆಧರಿಸಿ ವಾಹನಗಳ ಸಂಚಾರಕ್ಕೆ ಪೂರಕವಾಗುವಂತೆ ನಿರ್ಮಿಸಲಾಗುವುದು. ಗರಿಷ್ಠ 7 ಮೀಟರ್ ಅಗಲದವರೆಗೂ ವಾಹನ ಸಂಚಾರಕ್ಕೆ ಅವಕಾಶ ನೀಡಲು ಸಾಧ್ಯವಿದೆ ಎಂದು ಸಚಿವರು ತಿಳಿಸಿದರು.
ನೆರೆ ಬಂದಾಗ ಕಿಂಡಿ ಅಣೆಕಟ್ಟುಗಳಲ್ಲಿ ಮರಮಟ್ಟುಗಳು, ಕಸಕಡ್ಡಿಗಳು ತುಂಬಿ ನೀರಿನ ಸರಾಗ ಹರಿವಿಗೆ ತೊಂದರೆಯಾಗುತ್ತಿದ್ದು, ಇಂತಹ ಕಡೆಗಳಲ್ಲಿ ತ್ವರಿತವಾಗಿ ಇವುಗಳನ್ನು ತೆಗಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ರೂ. 20 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಸಚಿವರು ತಿಳಿಸಿದರು. ಕಿಂಡಿ ಅಣೆಕಟ್ಟುಗಳ ಮತ್ತು ಚಿಕ್ಕ ಡ್ಯಾಂಗಳಲ್ಲಿ ನೀರು ಸಂಗ್ರಹಿಸಲು ಅಳವಡಿಸಲಾದ ಹಲಗೆಗಳು ಬಹಳ ಕಾಲ ಬಾಳಿಕೆ ಬರುತ್ತಿಲ್ಲವಾದ್ದರಿಂದ ಮಹಾರಾಷ್ಟ್ರ, ತೆಲಂಗಾಣ ಮಾದರಿಯಲ್ಲಿ ಇಂತಹ ಅಣೆಕಟ್ಟುಗಳಿಗೆ ಹಲಗೆ ಅಳವಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಮುದ್ರದ ಉಪ್ಪು ನೀರು ನದಿ ಸಿಹಿನೀರಿನೊಂದಿಗೆ ಸೇರುವುದನ್ನು ತಪ್ಪಿಸಲು ಅಗತ್ಯವಿರುವ ಕಡೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಇದರಿಂದ ಕುಡಿಯುವ ನೀರು ಸಾಕಷ್ಟು ಪ್ರಮಾಣದಲ್ಲಿ ದೊರೆಯುವುದಲ್ಲದೇ, ಕೃಷಿ ಚಟುವಟಿಕೆಗಳಿಗೂ ನೀರು ದೊರೆಯಲಿದೆ. ರಾಜ್ಯದಲ್ಲಿರುವ ಎಲ್ಲಾ ಕೆರೆಗಳನ್ನು ಸಂಪೂರ್ಣವಾಗಿ ರಕ್ಷಿಸಲು ರಾಜ್ಯ ಸರಕಾರ ಸರ್ವ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ನುಡಿದರು.
ಪಶ್ಚಿಮವಾಹಿನಿ ಯೋಜನೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸುಮಾರು 673 ಕೋಟಿ ಅಂದಾಜು ಮೊತ್ತದ 408 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದರಲ್ಲಿ ಮೊದಲ ಹಂತದಲ್ಲಿ ರೂ. 52.60 ಕೋಟಿ ರೂ. ಮೊತ್ತದ 14 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ಎಂದು ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಲಾಲಾಜಿ ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಪ್ರತಾಪ್ ಚಂದ್ರ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮತ್ತಿತರರು ಇದ್ದರು.
ಸಣ್ಣ ನೀರಾವರಿ ಇಲಾಖೆ ಕಾರ್ಯಕಾರಿ ಅಭಿಯಂತರ ಗೋಕುಲದಾಸ್ ಅವರು ಜಿಲ್ಲೆಯಲ್ಲಿ ಸಣ್ಣ ನೀರಾವರಿ ಕಾಮಗಾರಿಗಳ ಮಾಹಿತಿ ನೀಡಿದರು
ಕುಂದಾಪುರ: ಮದÀ್ಯ ಮಾರಾಟ ನಿಷೇಧ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಗಣೇಶ ಚತುರ್ಥಿ ಹಬ್ಬ ಆಚರಿಸುವ ಹಿನ್ನೆಲೆಯಲ್ಲಿ ಮೆರವಣಿಗೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಸಂದರ್ಭ ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲಾದಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಈ ಕೆಳಕಂಡ ಪ್ರದೇಶಗಳಲ್ಲಿ ಮಧ್ಯ ಮಾರಾಟವನ್ನು ನಿಷೇಧಿಸಿರುತ್ತಾರೆ.
ಕುಂದಾಪುರ ಠಾಣಾ ವ್ಯಾಪ್ತಿಯ ಗ್ರಾಮಗಳಾದ ಕುಂದಾಪುರ ಕಸಬಾ, ವಡೇರ ಹೋಬಳಿ, ಹಂಗಳೂರು, ಕೋಟೇಶ್ವರ, ಬೀಜಾಡಿ, ಗೋಪಾಡಿ, ಆನಗಳ್ಳಿ, ತಲ್ಲೂರು, ಹೆಮ್ಮಾಡಿ, ಉಪ್ಪಿನಕುದ್ರು, ಕೋಣಿ, ಕುಂಭಾಶಿ, ವಕ್ವಾಡಿ ಯಲ್ಲಿ ಸೆಪ್ಟಂಬರ್ 15 ರಂದು ಬೆಳಗ್ಗೆ 6 ರಿಂದ ರಾತ್ರಿ 12 ರವರೆಗೆ ಹಾಗೂ ಸೆಪ್ಟಂಬರ್ 17 ರಂದು ಬೆಳಗ್ಗೆ 6 ರಿಂದ 18 ರ ರಾತ್ರಿ 12 ಗಂಟೆಯವರೆಗೆ.
ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗ್ರಾಮಗಳಾದ ಕಾವ್ರಾಡಿ, ಕುರ್ಕುಂಜೆ, ಕಾಳಾವರ, ಬಸ್ರೂರು, ಬಳ್ಕೂರು, ಕುಂದಾವರ, ಕನ್ಯಾನ, ಹಟ್ಟಿಯಂಗಡಿಯಲ್ಲಿ ಸೆಪ್ಟಂಬರ್ 13 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 15 ರಂದು ಬೆಳಗ್ಗೆ 6 ಗಂಟೆಯವರೆಗೆ.
ಶಂಕರನಾರಾಯಣ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ಸೆಪ್ಟಂಬರ್ 13 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 16 ರ ಬೆಳಗ್ಗೆ 6 ಗಂಟೆಯವರೆಗೆ, ಶಂಕರನಾರಾಯಣದಲ್ಲಿ ಸೆಪ್ಟಂಬರ್ 13 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 15 ರ ಬೆಳಗ್ಗೆ 6 ಗಂಟೆಯವರೆಗೆ, ಅಂಪಾರು ಗ್ರಾಮದಲ್ಲಿ ಸೆಪ್ಟಂಬರ್ 13 ರಂದು ಬೆಳಗ್ಗೆ 6 ರಿಂದ 24 ಗಂಟೆಗಳ ಕಾಲ ಮತ್ತು 15 ರ ಬೆಳಗ್ಗೆ 6 ಗಂಟೆಯಿಂದ ಸೆಪ್ಟಂಬರ್ 16 ರ ಬೆಳಗ್ಗೆ 6 ಗಂಟೆಯವರೆಗೆ, ಆಜ್ರಿ, ಬೆಳ್ವೆ, ಹಾಲಾಡಿ ವ್ಯಾಪ್ತಿಯಲ್ಲಿ ಸೆಪ್ಟಂಬರ್ 14 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 15 ರ ಬೆಳಗ್ಗೆ 6 ಗಂಟೆಯವರೆಗೆ, ಆಜ್ರಿ ವ್ಯಾಪ್ತಿಯಲ್ಲಿ ಸೆಪ್ಟಂಬರ್ 14 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 16 ರ ಬೆಳಗ್ಗೆ 6 ಗಂಟೆಯವರೆಗೆ, ಗೋಳಿಯಂಗಡಿ ವ್ಯಾಪ್ತಿಯಲ್ಲಿ ಸೆಪ್ಟಂಬರ್ 15 ರ ಬೆಳಗ್ಗೆ 6 ಗಂಟೆಯಿಂದ ಸೆಪ್ಟಂಬರ್ 16 ರ ಬೆಳಗ್ಗೆ 6 ಗಂಟೆಯವರೆಗೆ, ಮತ್ತು ಸೆಪ್ಟಂಬರ್ 17 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 18 ರ ಬೆಳಗ್ಗೆ 6 ರ ವರೆಗೆ.
ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಸಿ, ಹೊಸಾಡು, ತ್ರಾಸಿ, ಆಲೂರು, ಮರವಂತೆ, ನಾಡಾ ಗ್ರಾಮಗಳಲ್ಲಿ ಸೆಪ್ಟಂಬರ್ 16 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 18 ರ ಬೆಳಗ್ಗೆ 6 ರ ವರೆಗೆ.
ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್, ವಂಡ್ಸೆ, ಚಿತ್ತೂರು ಗ್ರಾಮಗಳಲ್ಲಿ ಸೆಪ್ಟಂಬರ್ 13 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 15 ರ ಬೆಳಗ್ಗೆ 6 ಗಂಟೆಯವರೆಗೆ, ಹಾಗೂ ಬೈಂದೂರು ಠಾಣಾ ವ್ಯಾಪ್ತಿಯ ಗ್ರಾಮಗಳಾದ ಶಿರೂರು, ಬೈಂದೂರು, ಯೆಡ್ತೆರೆ, ಹೆರೂರು, ಉಪ್ಪುಂದ, ನಾವುಂದ, ಕಿರಿಮಂಜೇಶ್ವರ ವ್ಯಾಪ್ತಿಯಲ್ಲಿ ಸೆಪ್ಟಂಬರ್ 13 ರಂದು ಬೆಳಗ್ಗೆ 6 ರಿಂದ ಸೆಪ್ಟಂಬರ್ 16 ರ ಬೆಳಗ್ಗೆ 6 ಗಂಟೆಯವರೆಗೆ ಮಧ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ಶಾಪ್ಗಳನ್ನು ಮುಚ್ಚಲು ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರ, ಕುಂದಾಪುರ ಗ್ರಾಮಾಂತರ, ಶಂಕರನಾರಾಯಣ, ಗಂಗೊಳ್ಳಿ, ಕೊಲ್ಲೂರು, ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ ಮಧ್ಯ ಮಾರಾಟವನ್ನು ನಿಷೇಧಿಸಲಾಗಿರುತ್ತದೆ.
ನಗರ ಸ್ಥಳೀಯ ಸಂಸ್ಥೆ: ಚುನಾವಣಾಧಿಕಾರಿಗಳ ನೇಮಕ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಚುನಾವಣೆ ನಡೆದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ಉಡುಪಿ ನಗರಸಭೆಗೆ ಕುಂದಾಪುರ ಸಹಾಯಕ ಆಯುಕ್ತರು, ಸಾಲಿಗ್ರಾಮ ಪಟ್ಟಣ ಪಂಚಾಯತ್ಗೆ ಉಡುಪಿ ತಹಶೀಲ್ದಾರ್, ಕುಂದಾಪುರ ಪುರಸಭೆಗೆ ಕುಂದಾಪುರ ತಹಶೀಲ್ದಾರ್, ಕಾರ್ಕಳ ಪುರಸಭೆಗೆ ಕಾರ್ಕಳ ತಹಶೀಲ್ದಾರ್ ಚುನಾವಣಾಧಿಕಾರಿಗಳಾಗಿರುತ್ತಾರೆ.
ಆಯಾ ಚುನಾವಣಾಧಿಕಾರಿಗಳು ಕೂಡಲೇ ಚುನಾವಣಾ ದಿನಾಂಕ ಗೊತ್ತುಪಡಿಸಿ, ಸದಸ್ಯರಿಗೆ ಸಾಕಷ್ಟು ಕಾಲಾವಕಾಶ ನೀಡಿ, ನೋಟೀಸ್ ಜಾರಿ ಮಾಡಿ ನಿಯಮಾನುಸಾರ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಿ ವರದಿ ಸಲ್ಲಿಸಲು ಜಿಲ್ಲಾದಿಕಾರಿ ಸೂಚಿಸಿದ್ದಾರೆ.
ಮೀಸಲಾತಿ ವಿವರ: ಉಡುಪಿ ನಗರಸಭೆ: ಅಧ್ಯಕ್ಷ ಸ್ಥಾನ(ಹಿಂದುಳಿದ ವರ್ಗ ಎ ಮಹಿಳೆ ), ಉಪಾಧ್ಯಕ್ಷ ( ಪರಿಶಿಷ್ಟ ಜಾತಿ), ಸಾಲಿಗ್ರಾಮ ಪಟ್ಟಣ ಪಂಚಾಯತ್: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳೆರಡೂ ಸಾಮಾನ್ಯ ಮಹಿಳೆ, ಕುಂದಾಪುರ ಪುರಸಭೆ: ಅಧ್ಯಕ್ಷ ಸ್ಥಾನ(ಹಿಂದುಳಿದ ವರ್ಗ(ಬಿ) ಮಹಿಳೆ), ಉಪಾಧ್ಯಕ್ಷ ಸ್ಥಾನ (ಪರಿಶಿಷ್ಟ ಜಾತಿ), ಕಾರ್ಕಳ ಪುರಸಭೆ: ಅಧ್ಯಕ್ಷ ಸ್ಥಾನ( ಪರಿಶಿಷ್ಟ ಜಾತಿ ಮಹಿಳೆ), ಉಪಾಧ್ಯಕ್ಷ ಸ್ಥಾನ( ಸಾಮಾನ್ಯ ಮಹಿಳೆ).
ವಿದೇಶಗಳಲ್ಲಿ ಅವಿದ್ಯಾವಂತ ಕಾರ್ಮಿಕರ ಸಂರಕ್ಷಣೆ: 18ರಂದು ಕಾರ್ಯಾಗಾರ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಹೊರ ದೇಶಗಳಲ್ಲಿ ದುಡಿಯುವ ಅವಿದ್ಯಾವಂತ ಕಾರ್ಮಿಕರ ಹಿತರಕ್ಷಣೆಯಲ್ಲಿ ಸಂಘ ಸಂಸ್ಥೆಗಳ ಹಾಗೂ ಸರಕಾರಿ ಅಧಿಕಾರಿಗಳ ಪಾತ್ರ ಎಂಬ ವಿಚಾರದ ಕುರಿತು ಕಾರ್ಯಾಗಾರವನ್ನು ಸೆ. 18ರಂದು ಉಡುಪಿಯಲ್ಲಿ ಆಯೋಜಿಸಲಾಗಿದೆ.
ಸೆಪ್ಟಂಬರ್ 18 ರಂದು ಬೆಳಗ್ಗೆ 10.30ಕ್ಕೆ ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಾಗಾರದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಭಾಗವಹಿಸುತ್ತಿದ್ದು, ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನದ ಅಧ್ಯಕ್ಷ ಡಾ. ರವೀಂದ್ರನಾಥ ಶಾನ್ಭಾಗ್ ಈ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಕಾರ್ಯಾಗಾರದಲ್ಲಿ ಹೊರ ದೇಶದಲ್ಲಿ ಉದ್ಯೋಗ ಪಡೆದಿರುವವರು ಹಾಗೂ ಉದ್ಯೋಗ ಆಕಾಂಕ್ಷಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆಯುವಂತೆ ಅನಿವಾಸಿ ಭಾರತೀಯರ ಹಿತರಕ್ಷಣಾ ಸಮಿತಿ ಉಡುಪಿ ಜಿಲ್ಲೆಯ ಸಂಚಾಲಕರಾದ ಕುಂದಾಪುರ ಸಹಾಯಕ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪರಿಶಿಷ್ಟ ಜಾತಿ ಮಹಿಳೆಯರಿಗೆ ಆರ್ಥಿಕ ನೆರವು : ಅರ್ಜಿ ಆಹ್ವಾನ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): 2018-19ನೇ ಸಾಲಿಗೆ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಯಡಿ( ಕನಿಷ್ಟ 10 ಪರಿಶಿಷ್ಟ ಜಾತಿ ಸದಸ್ಯರಿರುವ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಮೂಹಿಕ ಉತ್ಪಾದನಾ/ ಸೇವಾ ಘಟಕಗಳಿಗೆ ಆರ್ಥಿಕ ನೆರವು) ಪರಿಶಿಷ್ಟ ಜಾತಿ ಮಹಿಳಾ ಫಲಾಪೇಕ್ಷಿಗಳಿಗೆ ನಿಗಮದಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಮತ್ತು ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರಿ ಸಂಸ್ಧೆಯಲ್ಲಿ ನೌಕರಿಯಲ್ಲಿರಬಾರದು ಹಾಗೂ ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು 18 ವರ್ಷ ಮೇಲ್ಪಟ್ಟವರಾಗಿದ್ದು, ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ 1.50 ಲಕ್ಷ ರೂ. ಹಾಗೂ ನಗರ ಪ್ರದೇಶದವರಿಗೆ 2 ಲಕ್ಷ ರೂ.
ಅರ್ಜಿಯನ್ನು ಜಿಲ್ಲಾ ಕಚೇರಿಯಿಂದ ಉಚಿತವಾಗಿ ಪಡೆದು, ಅರ್ಜಿಯೊಂದಿಗೆ ಪಾಸ್ಪೋರ್ಟ್ ಸೈಜಿನ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಉಳಿತಾಯ ಖಾತೆಯ ಪ್ರತಿ, ಯೋಜನಾ ವರದಿ / ದರಪಟ್ಟಿ (ಅನ್ವಯವಾಗುವ ಘಟಕಗಳಿಗೆ) ವಾಹನ ಸೌಲಭ್ಯ ಪಡೆಯಲು ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ನ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಅಕ್ಟೋಬರ್ 14 ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ ಇವರಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ.
ಉಡುಪಿ: ತಾಲೂಕು ಮಟ್ಟದ ಸಾರ್ವಜನಿಕ ಜನಸಂಪರ್ಕ ಸಭೆ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಉಡುಪಿ ತಾಲೂಕು ಮಟ್ಟದ ಸಾರ್ವಜನಿಕ ಜನಸಂಪರ್ಕ ಸಭೆಯು ಸೆಪ್ಟಂಬರ್ 25 ರಂದು ಮಧ್ಯಾಹ್ನ 3 ಕ್ಕೆ ಶ್ರೀ ನಾರಾಯಣ ಗುರು ಸಭಾಭವನ, ಬನ್ನಂಜೆ, ಉಡುಪಿಯಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಉಡುಪಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿರಿಯಡಕ: ಸೋನದ ಸೇಸೆ ಕಾರ್ಯಕ್ರಮ ಉದ್ಘಾಟನೆ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ತುಳುಭಾಷೆ ಮತ್ತು ಸಂಸ್ಕøತಿಯನ್ನು ಅರ್ಥೈಸಿಕೊಂಡು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಯುವಶಕ್ತಿಗಳಾದ ವಿದ್ಯಾರ್ಥಿಗಳಲ್ಲಿದೆ. ‘ಸೋನದ ಸೇಸೆ’ ಕಾರ್ಯಕ್ರಮ ಸೋನ ತಿಂಗಳಿನ ಮಹತ್ವವನ್ನು ವಿವರಿಸುವ ತುಳುವರ ಬದುಕಿನ ಸಂಭ್ರಮವನ್ನು ದಾಖಲಿಸುವ ಕಾರ್ಯಕ್ರಮವಾಗಿ ಮೂಡಿಬಂದಿದೆ”-ಎಂದು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತುಳುಕೂಟ, ಉಡುಪಿ ಹಾಗೂ ತುಳುಸಂಘ ಹಿರಿಯಡಕ ಸಂಘಟಿಸಿದ ‘ಸೋನದ ಸೇಸೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಇಂದ್ರಾಳಿ ಜಯಕರ ಶೆಟ್ಟಿ ನುಡಿದರು.
ಪ್ರಧಾನ ಭಾಷಣಕಾರರಾಗಿ ಬನ್ನಂಜೆ ಬಾಬು ಅಮೀನ್ ವಿದ್ಯಾರ್ಥಿಗಳಿಗೆ ತುಳುಭಾಷೆ-ಸಂಸ್ಕøತಿ ಬದುಕಿನ ಸಮಗ್ರ ಮಾಹಿತಿಗಳನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಡಾ. ನಿಕೇತನ ಇವರು ವಹಿಸಿದರು. ತುಳುಕೂಟ ಉಡುಪಿಯ ಕಾರ್ಯಕ್ರಮ ಸಂಚಾಲಕ ರತ್ನಾಕರ ಇಂದ್ರಾಳಿ ಪ್ರಾಸ್ತಾವಿಕವಾಗಿ ನುಡಿದರು.
ವೇದಿಕೆಯಲ್ಲಿ ಉಡುಪಿ ತುಳುಕೂಟದ ಸದಸ್ಯರಾದ ಮಹಮ್ಮದ್ ಮೌಲನಾ, ತಾರಾ ಆಚಾರ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ತುಳು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ವಿದ್ಯಾರ್ಥಿಗಳಿಂದ ‘ಸೋನದ ಸೇಸೆ’ ಕಾರ್ಯಕ್ರಮದಲ್ಲಿ ತುಳುನಾಡಿನ ಹೊಸ್ತಿಲುಪೂಜೆ ಹಾಗೂ ಅಜ್ಜಿ ಗಿಡಾಪಾವುನು ವಿಶಿಷ್ಟ ಕಾರ್ಯಕ್ರಮ ಜರಗಿತು. ರತ್ನಾಕರ ಇಂದ್ರಾಳಿ ಕಾಲೇಜಿನ ತುಳು ಸಂಘದ ಸಂಚಾಲಕಿ ಸುಜಯಾ ಕೆ.ಎಸ್. ಸ್ವಾಗತಿಸಿದರು. ತುಳು ಸಂಘದ ವಿದ್ಯಾರ್ಥಿ ಸಂಚಾಲಕ ರಾಘವೇಂದ್ರ ಹಾಗೂ ತುಳು ಸಂಘದ ವಿದ್ಯಾರ್ಥಿ ಸಂಚಾಲಕಿ ಶ್ವೇತಾ ಕಾರ್ಯಕ್ರಮ ಸಂಘಟಿಸಿದರು. ಕಾಲೇಜಿನ ಸಾಂಸ್ಕøತಿಕ ವಿದ್ಯಾರ್ಥಿ ಸಂಚಾಲಕ ಸಂದೀಪ್ ವಂದಿಸಿದರು.
ವಿಶ್ವಕರ್ಮ ಜಯಂತಿ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ವಿಶ್ವ ಕರ್ಮ ಜಯಂತಿ ಆಚರಣೆಯು ಸೆಪ್ಟಂಬರ್ 17 ರಂದು ಬೆಳಗ್ಗೆ 9.30 ಕ್ಕೆ ಗಾಯತ್ರಿ ಕಲ್ಯಾಣ ಮಂಟಪ, ಕುಂಜಿಬೆಟ್ಟು, ಉಡುಪಿಯಲ್ಲಿ ಜರುಗಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ, ಮಕ್ಕಳ ಅಭಿವೃದ್ಧಿ ಮತ್ತು ಕನ್ನಡ ಸಂಸ್ಕøತಿ ಸಚಿವೆ ಡಾ. ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕೊಳೆರೋಗ ಪರಿಹಾರಕ್ಕೆ ಅರ್ಜಿ ನೀಡಲು ಸೆ.17 ಅಂತಿಮ ದಿನ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ):ಗ್ರಾಮ ಪಂಚಾಯತ್,ಗ್ರಾಮ ಲೆಕ್ಕಿಗರ ಕಚೇರಿ ಹಾಗೂ ತೋಟಗಾರಿಕೆ ಇಲಾಖೆಯಲ್ಲಿ ಸೆಪ್ಟಂಬರ್ 7 ರಿಂದ ಕೊಳೆರೋಗ ಪರಿಹಾರಕ್ಕಾಗಿ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ವರದಿಯನ್ನು ಕ್ಲಪ್ತ ಸಮಯದಲ್ಲಿ ಸರಕಾರಕ್ಕೆ ನೀಡಬೇಕಾಗಿರುವುದರಿಂದ ಅರ್ಜಿ ನೀಡುವ ಪ್ರಕ್ರಿಯೆಯನ್ನು ಸೆಪ್ಟಂಬರ್ 17 ಕ್ಕೆ ಅಂತಿಮಗೊಳಿಸಲಾಗಿದ್ದು, ರೈತರು ನಿಗದಿತ ಸಮಯದೊಳಗೆ ಅರ್ಜಿ ನೀಡಬೇಕಾಗಿ ಜಿಲ್ಲಾಧಿಕಾರಿಗಳು, ಉಡುಪಿ ಜಿಲ್ಲೆ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾರ್ಯಕ್ರಮ ಸಂಯೋಜಕ ಹಾಗೂ ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಉಡುಪಿ ಜಿಲ್ಲಾ ಬಾಲಭವನದಲ್ಲಿ ಮಕ್ಕಳ ಚಟುವಟಿಕೆ ನಡೆಸಲು ತಾತ್ಕಾಲಿಕವಾಗಿ ಗೌರವಧನ ಆಧಾರದಲ್ಲಿ ಕಾರ್ಯಕ್ರಮ ಸಂಯೋಜಕ ಹಾಗೂ ಕಚೇರಿ ಸಹಾಯಕರ ಹುದ್ದೆಗಳಿಗೆ ಆಸಕ್ತ 21 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟಂಬರ್ 26.
ಕಾರ್ಯಕ್ರಮ ಸಂಯೋಜಕರ ಹುದ್ದೆ-1: ಪದವಿ, ಕಂಪ್ಯೂಟರ್ ಜ್ಞಾನ, 5 ವರ್ಷದ ಅನುಭವ, ಸೃಜನಾತ್ಮಕ ಕಲೆ, ಬರವಣಿಗೆ , ಪ್ರದರ್ಶನ ಕಲೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಪ್ರಾವೀಣ್ಯತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಮಾಸಿಕ ಗೌರವಧನ 15000 ರೂ.ಗಳು.
ಕಚೇರಿ ಸಹಾಯಕರ ಹುದ್ದೆ-1: ಪಿ,ಯು.ಸಿ ಅಥವಾ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮಾಸಿಕ ಗೌರವಧನ 10000 ರೂ.ಗಳು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹಿರಿಯ ನಾಗರಿಕರಿಗೆ ಸಾಂಸ್ಕøತಿಕ ಮತ್ತು ಕ್ರೀಡಾ ಸ್ಪರ್ಧೆ
ಉಡುಪಿ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಸೆಪ್ಟಂಬರ್ 11 ರಂದು ಬೆಳಗ್ಗೆ 9 ಕ್ಕೆ ಜಿಲ್ಲಾ ರೆಡ್ ಕ್ರಾಸ್ ಭವನ, ಅಜ್ಜರಕಾಡು, ಉಡುಪಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಇಲಾಖೆಯಿಂದ ವಿವಿಧ ಸಾಂಸ್ಕøತಿಕ ಮತ್ತು ಕ್ರೀಡಾ ಸ್ಪರ್ಧೆಯನ್ನು ಏರ್ಪಡಿಸಲಾಯಿತು.
ತೀರ್ಪುಗಾರರಿಗೆ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ರಾಜ್ಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ ಇವರು ಸ್ಪರ್ಧೆಗಳನ್ನು ಉದ್ಘಾಟಿಸಿದರು.ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರಂಜನ್ ಭಟ್ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು ಮತ್ತು ಹಿರಿಯ ನಾಗರಿಕರನ್ನು ಸ್ವಾಗತಿಸಿದರು.
ವಿವಿಧ ಸಾಂಸ್ಕøತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಸುಮಾರು 125 ಹಿರಿಯ ನಾಗರಿಕರು ಉತ್ಸಾಹದಿಂದ ಭಾಗವಹಿಸಿ, 15 ಮಂದಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯುವ ಸ್ಪರ್ಧೆಗೆ ಆಯ್ಕೆಯಾದರು.
ಮೊದಲ ಮೂರು ಸ್ಥಾನಗಳನ್ನು ಪಡೆದ ಹಿರಿಯ ನಾಗರಿಕರಿಗೆ ಅಕ್ಟೋಬರ್ 1 ರಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದು ಬಹುಮಾನ ನೀಡಿ ಗೌರವಿಸಲಾಗುವುದೆಂದು ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.18: ರಫೇಲ್ ಯುದ್ಧ ವಿಮಾನ ಖರೀದಿ ಹಗರಣ : ಕೇಂದ್ರ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ನಿಂದ ಬ್ರಹತ್ ಪ್ರತಿಭಟನಾ ಮೆರವಣಿಗೆ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ 45 ಸಾವಿರ ಕೋಟಿ ರೂಪಾಯಿ ಮೊತ್ತದ ರಪೇಲ್ ಯುದ್ಧ ವಿಮಾನ ಹಗರಣದ ಮೂಲಕ ದೇಶವನ್ನು ಕೊಳ್ಳೆಹೊಡೆಯುತ್ತಿದೆ. ಈ ಹಗರಣದ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸೆಪ್ಟೆಂಬರ್ 18 ರಂದು ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಮಣಿಪಾಲ ಟೈಗರ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಛೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರಿ ಜನಾರ್ದನ ತೋನ್ಸೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀಯುತ ಓಸ್ಕರ್ ಫೆರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಡಾ| ಜಯಮಾಲ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರುಗಳಾದ ಶ್ರೀ ವಿನಯ ಕುಮಾರ್ ಸೊರಕೆ, ಶ್ರೀ ಪ್ರಮೋದ್ ಮಧ್ವರಾಜ್, ಹಾಗೂ ಮಾಜಿ ಶಾಸಕರುಗಳಾದ ಶ್ರೀ ಗೋಪಾಲ ಪೂಜಾರಿ ಮತ್ತು ಶ್ರೀ ಗೋಪಾಲ ಭಂಡಾರಿ, ರಾಜ್ಯ ಇಂಟಕ್ ಅಧ್ಯಕ್ಷರಾದ ಶ್ರೀ ರಾಕೇಶ್ ಮಲ್ಲಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವಾ ಹಾಗೆಯೇ ಹಲವಾರು ರಾಜ್ಯ ಹಾಗೂ ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.
ಯುಪಿಎ ಅವಧಿಯಲ್ಲಿ ಭಾರತ ಸರಕಾರ ಸೌಮ್ಯದ ಎಚ್.ಎ.ಎಲ್.ಗೆ 126 ಯುದ್ಧ ವಿಮಾನಗಳನ್ನು ಖರೀದಿಸಲು 90 ಸಾವಿರ ಕೋಟಿ ರುಪಾಯಿಗಳ ವಿಮಾನ ತಯಾರಿ ಮತ್ತು ಮೇಲುಸ್ತುವಾರಿ ಒಪ್ಪಂದವಾಗಿತ್ತು. ಈ ಒಪ್ಪಂದವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮುರಿದು ಹೊಸ ಒಪ್ಪಂದ ಆಗುವ ಕೆಲವೇ ತಿಂಗಳುಗಳ ಮುಂಚೆ ಹುಟ್ಟಿದ ರಿಲಯನ್ಸ್ ಡಿಫೆನ್ಸ್ ಸಂಸ್ಥೆಯು ಫ್ರಾನ್ಸ್ನ ಡಸಾಲ್ಟ್ ಏವಿಯೇಷನ್ ಸಂಸ್ಥೆಯೊಂದಿಗೆ ಸೇರಿಕೊಂಡು 36 ವಿಮಾನಗಳನ್ನು 60,000 ಕೋಟಿ ಅಂದರೆ ಪ್ರತೀ ವಿಮಾನಕ್ಕೆ 1660 ಕೋಟಿಯಂತೆ ದರ ನಿಗದಿ ಪಡಿಸಿ ಪಡೆಯಲು ಒಪ್ಪಂದ ಮಾಡಿಕೊಂಡಿರುವುದು ದೊಡ್ಡ ಹಗರಣವಾಗಿದೆ. ರಫೆಲ್ ವಿಮಾನ ಉತ್ಪಾದನೆ ಕೈತಪ್ಪಿದ್ದರಿಂದ ಹೆಚ್.ಎ.ಎಲ್. ಕಂಪೆನಿಯ 10 ಸಾವಿರ ಕಾರ್ಮಿಕರಿಗೆ ಉದ್ಯೋಗ ನಷ್ಟ ಹಾಗೂ ಉದ್ಯೋಗ ನೇಮಕಾತಿಯಿಂದ ವಂಚಿತವಾಗಿದೆ. ಈ ಸತ್ಯಾಂಶವನ್ನು ಜನತೆಗೆ ತಿಳಿಸುವ ಉದ್ದೇಶದಿಂದ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತೋನ್ಸೆಯವರು ತಿಳಿಸಿರುತ್ತಾರೆ.
ಉಡುಪಿ ಮೀನು ಮಾರಾಟಗಾರರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 8ನೇ ವಾರ್ಷಿಕ ಮಹಾಸಭೆ
ಮೀನುಗಾರ ಮಹಿಳೆಯರ ಆರ್ಥಿಕ ಸಂಸ್ಥೆಯಲ್ಲೇ ಮಹಿಳೆಯರು ವ್ಯವಹಾರ ನಡೆಸಬೇಕು
-ಬೇಬಿ ಎಚ್.ಸಾಲ್ಯಾನ್
ಉಡುಪಿ: ಮೀನುಗಾರ ಮಹಿಳೆಯರು ತಮ್ಮ ಮೀನುವ್ಯಾಪಾರ ಕುಲಕಸುಬನ್ನು ಅವಲಂಬಿಸಿಕೊಂಡು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸದೃಢರಾಗಬೇಕು. ಮಹಿಳೆಯರಿಂದ ಸ್ಥಾಪನೆಯಾದ ಆರ್ಥಿಕ ಸಂಸ್ಥೆಯಲ್ಲಿ ಹೆಚ್ಚು ಹೆಚ್ಚು ಮಹಿಳೆಯರು ವ್ಯವಹಾರ ನಡೆಸಿದಾಗ ಸಂಘದ ಹೆಚ್ಚಿನ ಲಾಭವನ್ನು ನೇರವಾಗಿ ಸದಸ್ಯರಿಗೆ ವಿನಿಯೋಗಿಸಲು ಸಾಧ್ಯ ಎಂದು ಉಡುಪಿ ಮೀನು ಮಾರಾಟಗಾರರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಬೇಬಿ ಎಚ್.ಸಾಲ್ಯಾನ್ ತಿಳಿಸಿದ್ದಾರೆ.
ಅವರು ಉಡುಪಿ ಕಿನ್ನಿಮೂಲ್ಕಿಯ ವೀರಭದ್ರ ದೇವಸ್ಥಾನದ ಸಭಾಭವನ ಸಭಾಂಗಣದಲ್ಲಿ ಶನಿವಾರ ನಡೆದ ಮೀನು ಮಾರಾಟಗಾರರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 8ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಹಸಿಮೀನು ಮಾರಾಟಗಾರ ಮಹಿಳೆಯರ ನೇತೃತ್ವದಲ್ಲಿ ತಾಲೂಕಿನ 30 ಮೀನುಮಾರುಕಟ್ಟೆಗಳ ಸಹಕಾರದೊಂದಿಗೆ ಮೀನುಮಾರಾಟಗಾರರ ಸಹಕಾರಿ ಸಂಘವನ್ನು ಸ್ಥಾಪಿಸಲಾಗಿದ್ದು, ಯಾವುದೇ ರೀತಿಯ ಮೀನಿನಂಗಡಿಗಳನ್ನು ಸ್ಥಾಪಿಸಲು ಸಂಘ ಬಿಡುವುದಿಲ್ಲ. ಆದ್ದರಿಂದ ಮೀನುವ್ಯಾಪಾರ ಮಾಡುವ ಎಲ್ಲಾ ಮಹಿಳೆಯರು ಸಂಘದ ಸದಸ್ಯರಾಗಿ ಸಂಘಟನೆಯ ಬಲಹೆಚ್ಚಿಸಬೇಕು ಎಂದರು.
ಉಡುಪಿ ಮಹಾಲಕ್ಷ್ಮೀ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಹಕಾರಿಯ ನಿರ್ದೇಶಕ ಯಶ್ಪಾಲ್ ಎ.ಸುವರ್ಣ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಇದೇ ವೇಳೆ ಸಹಕಾರಿಯ ಸದಸ್ಯರ 54ಮಂದಿ ಮಕ್ಕಳಿಗೆ ರೂ. 75000 ವಿದ್ಯಾರ್ಥಿ ವೇತನ, ದೊಡ್ಡಣಗುಡ್ಡೆ ಮೀನುಮಾರುಕಟ್ಟೆಯ ಬೇಬಿ ಮೈಂದನ್ ಗುಜ್ಜರಬೆಟ್ಟು ಅವರಿಗೆ ರೂ. 10000 ಆರೋಗ್ಯ ನೆರವು ಹಾಗೂ ಮಡಿಕೇರಿ ಮತ್ತು ಕೇರಳ ಜಲಾವೃತ ಸಂತ್ರಸ್ತರಿಗೆ ರೂ.5000 ದೇಣಿಗೆಯನ್ನು ವಿತರಿಸಿಲಾಯಿತು. ಪಿಎಚ್ಡಿ ಪದವಿ ಪಡೆದ ಬಬಿತ ಶಶಿಕಲ ಸುವರ್ಣ ಉಚ್ಚಿಲ, ಕರಾಠೆಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದ ಮಾಣಿಕ್ ಸುವರ್ಣ ಕಟಪಾಡಿ ಅವರನ್ನು ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷೆ ಜಯಂತಿ ಗುರುದಾಸ್ ಬಂಗೇರ, ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಫೇಡರೇಶನ್ ನಿರ್ದೇಶಕ ಮಂಜುನಾಥ್ ಎಸ್.ಕೆ, ನಿರ್ದೇಶಕರುಗಳಾದ ಸುರೇಶ್ ಬಿ.ಕುಂದರ್, ನಾರಾಯಣ ಪಿ ಕುಂದರ್, ಹರೀಶ್ ಜಿ. ಕರ್ಕೇರ,ಲಕ್ಷ್ಮೀ ಆನಂದ್, ಸರೋಜ ಕಾಂಚನ್, ಸುನೀತ ಜೆ.ಬಂಗೇರ,ಇಂದಿರಾ ವಿ.ಕಾಂಚನ್,ಭಾನುಮತಿ ಕಾಂಚನ್, ಜಯಂತಿ ಎನ್. ಕೋಟ್ಯಾನ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಕಾಶ ಸುವರ್ಣ ಕಟಪಾಡಿ ಸ್ವಾಗತಿಸಿ, ವಂದಿಸಿದರು.
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠ ಮತ್ತು ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿಯ ಹೆಜ್ಜೆ-ಗೆಜ್ಜೆ ಪ್ರತಿಷ್ಠಾನ (ರಿ) ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ಇಂದು, ರವಿವಾರ, ದಿನಾಂಕ ಸೆಪ್ಟೆಂಬರ್ 16 ರಂದು ಆಯೋಜಿಸಿದ ರಾಷ್ಟ್ರ ಮಟ್ಟದ ಸೀನಿಯರ್ ಭರತನಾಟ್ಯ ಸ್ಪರ್ಧಾ ಕಾರ್ಯಕ್ರಮವನ್ನು ಹಿರಿಯ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಪ್ರತಿಭಾ ಎಂ.ಎಲ್.ಸಾಮಗ ರವರು ಉದ್ಘಾಟನೆ ಮಾಡಿದರು. ಹೆಜ್ಜೆ ಗೆಜ್ಜೆ ಸಂಸ್ಥೆಯ ರಜತಮಹೋತ್ಸವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳು ಶ್ರೀ ಕೃಷ್ಣ-ಮುಖ್ಯಪ್ರಾಣ ದೇವರು ಮತ್ತು ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಆಶೀರ್ವಾದದಿಂದ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ; ಮತ್ತು ಮುಂದಿನ ಎಲ್ಲಾ ಕಾರ್ಯಕ್ರಮಗಳು ಉತ್ತಮ ರೀತಿಯಲ್ಲಿ ನಡೆಯಲಿ ಎಂದು ಶುಭ ಕೋರಿದರು.
ಇಂದಿನ ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ ಡಾ.ಶ್ರೀವಿದ್ಯಾ ಮುರಳೀಧರ್ ಮಂಗಳೂರು, ವಿದ್ವಾನ್ ಸಾಗರ್ ಟಿ.ಎಸ್. ತುಮಕೂರು ಹಾಗೂ ವಿದ್ವಾನ್ ಪ್ರಮೋದ್ ಉಳ್ಳಾಲ್ ಮಂಗಳೂರು, ಹೆಜ್ಜೆ ಗೆಜ್ಜೆ ಸಂಸ್ಥೆಯ ಉಪಾಧ್ಯಕ್ಷರಾದ ಡಾ.ರಾಮಕೃಷ್ಣ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ದೇಶದ ವಿವಿಧ ಭಾಗಗಳಿಂದ 33 ಸ್ಪರ್ಧಾಳುಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಹೆಜ್ಜೆ ಗೆಜ್ಜೆ ಸಂಸ್ಥೆಯ ನಿರ್ದೇಶಕಿ ವಿದುಷಿ ಶ್ರೀಮತಿ ಯಶಾ ರಾಮಕೃಷ್ಣ ರವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, Kemmannu
Annual Church Feast 2024 | St. Theresa’s Church, Kemmannu
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link