Brief Udupi news with pictures


Richard Dsouza
Kemmannu News Network, 01-10-2018 05:30:40


Write Comment     |     E-Mail To a Friend     |     Facebook     |     Twitter     |     Print


ವಾಹನ ಸಂಚಾರ ನಿರ್ಬಂಧ- ಬದಲಿ ವ್ಯವಸ್ಥೆ
    ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಕುಂದಾಪುರ ತಾಲೂಕು ಸೋಮೇಶ್ವರ-ಕೋಟೇಶ್ವರ( ಹಾಲಾಡಿ- ಕೋಟೇಶ್ವರ ರಸ್ತೆ) ರಸ್ತೆಯನ್ನು ಅಗಲಗೊಳಿಸಿ ಕಾಂಕ್ರಿಟಿಕರಣಗೊಳಿಸಲು ಮತ್ತು ಕಾಂಕ್ರೀಟ್ ಚರಂಡಿ ನಿರ್ಮಿಸುವ ಕಾಮಗಾರಿಯನ್ನು ಪ್ರಾರಂಭಿಸಿ ಪೂರ್ಣಗೊಳಿಸಲು 15 ರಿಂದ 20 ದಿವಸ ಬೇಕಾಗಿದ್ದು, ಕಾಂಕ್ರೀಟ್ ಕ್ಯೂರಿಂಗ್ ಸಮಯ ಸೇರಿದಂತೆ ಒಟ್ಟು 45 ದಿವಸಗಳ ಕಾಲ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಬೇಕಾಗಿರುತ್ತದೆ. ಆದ್ದರಿಂದ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅಕ್ಟೋಬರ್ 1 ರಿಂದ ನವೆಂಬರ್ 15 ರ ವರೆಗೆ ಈ ಭಾಗದ ಜಿಲ್ಲಾ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂದಿಸಿ ಬದಲಿ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ.
   ಕುಂದಾಪುರ ಹಾಗೂ ಉಡುಪಿ ಕಡೆಯಿಂದ ಹಾಲಾಡಿ ಕಡೆಗೆ ಹೋಗುವ ಬಸ್‍ಗಳು ಹಾಗೂ ಇತರೆ ವಾಹನಗಳು ಹಳೆ ಗೋಪಾಡಿ ಪಂಚಾಯತ್ ( ಹೂವಿನಕೆರೆ ಸ್ವಾಗತ ಗೋಪುರ) ಮೂಲಕ ಜೀಜಾಡಿ- ವಕ್ವಾಡಿ- ಕಾಳಾವರ ರಸ್ತೆಯಲ್ಲಿ ಚಲಿಸಿ, ವಕ್ವಾಡಿಯ ಗುರುಕುಲ ಶಾಲೆಗೆ ಹೋಗುವ ಕಾಂಕ್ರೀಠ್ ರಸ್ತಗೆ( ರಸ್ತೆ ಎಡಕ್ಕೆ) ಚಲಿಸಿದಲ್ಲಿ,  ಗುರುಕುಲ ಶಾಲೆಯ ಬಳಿ  ಶಾಲೆಯ ಬಳಿ ಸನ್ ರೈಸ್ ಫ್ಯಾಕ್ಟರಿ ಬಳಿಯ ಯುವ ಮೆರಿಡಿಯನ್ ಹಾಲ್‍ಗೆ ಸಂಪರ್ಕಿಸಿದರೆ, ಬಲಕ್ಕೆ ರಸ್ತೆಗಳು ಕವಲೊಡೆದು ಹೋಗುತ್ತಿದ್ದು, ಈ ಎರಡು ರಸ್ತೆಗಳ ಪೈಕಿ ರಸ್ತೆಯ  ಎಡಕ್ಕೆ( ಪಶ್ಚಿಮ) ಚಲಿಸಿದರೆ, ಸನ್ ರೈಸ್ ಫ್ಯಾಕ್ಟರಿಯ ಬಳಿಯ ಯುವ ಮೆರೆಡಿಯನ್ ಹಾಲ್ ಗೆ ಸಂಪರ್ಕಿಇಸಿದರೆ , ಬಲಕ್ಕೆ ಪೂರ್ವ  ವಾಹನಗಳು ಚಲಿಸಿ ಮುಂದೆ ಕಾಳಾವರ ಬಸ್ ಸ್ಟಾಪ್ ಸಂಪರ್ಕಿಸುವ ಕೋಟೇಶ್ವರ- ಹಾಲಾಡಿ- ಸೋಮೇಶ್ವರ ರಸ್ತೆಗೆ ಸಂಪರ್ಕಿಸಲು ಅನುಕೂಲವಾಗುತ್ತದೆ.
     ಗುರುಕುಲ ಶಾಲೆಯ ಬಳಿ ಎರಡು ರಸ್ತೆಗಳ ಪೈಕಿ ರಸ್ತೆಯ ಬಲಕ್ಕೆ (ಪೂರ್ವ ದಿಕ್ಕಿಗೆ) ಘನ ವಾಹನಗಳು ಚಲಿಸಿ ಕಾಳಾವರ ಬಸ್‍ಸ್ಟಾಪ್ ( ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಂಕ್ಷನ್) ನಲ್ಲಿ ಕೋಟೇಶ್ವರ- ಹಾಲಾಡಿ-ಸೋಮೇಶ್ವರ ರಸ್ತೆ ಸಂಪರ್ಕಿಸಿದ್ದು, ಹಾಲಾಡಿ- ಸೋಮೇಶ್ವರ  ಕಡೆ ವಾಹನಗಳಿಗೆ ಸಂಚರಿಸಲು ಯೋಗ್ಯವಾದ ಮಾರ್ಗವಾಗಿರುತ್ತದೆ. ಅಲ್ಲದೇ ಬೀಜಾಡಿ- ವಕ್ವಾಡಿ- ಕಾಳಾವರ ರಸ್ತೆಯಲ್ಲಿ ಚಲಿಸಿ ಬಂದ ವಾಹನಗಳು ವಕ್ವಾಡಿ ರಸ್ತೆಯಲ್ಲಿ ನೇರವಾಗಿ ಬಂದು ಚಾರುಕೊಟ್ಟಿಯಿಂದಾಗಿ ಸಂಚರಿಸಿದರೆ ಕೋಟೇಶ್ವರ- ಹಾಲಾಡಿ-ಸೋಮೇಶ್ವರ ರಸ್ತೆ ಸಂಪರ್ಕಿಸುತ್ತದೆ. ಈ ರಸ್ತೆಯು ತೆಕ್ಕಟ್ಟೆ,ಕೆದೂರು ಕಡೆಗೆ ಹೋಗುವ ವಾಹನಗಳಿಗೆ ಅನುಕೂಲವಾಗುವ ಮಾರ್ಗವಾಗಿರುತ್ತದೆ.
  ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೈಂದೂರು ಕಡೆಯಿಂದ ಹುಣ್ಸೆಮಕ್ಕಿ, ಬಿದ್ಕಲ್ ಕಟ್ಟೆ, ಹಾಲಾಡಿ- ಸೋಮೇಶ್ವರ ಕಡೆಗೆ ತೆರಳುವ ಎಲ್ಲಾ ವಾಹನಗಳಿಗೆ ಬಸ್ರೂರು ಮೂರು ಕೈ ಜಂಕ್ಷನ್ ರಾ.ಹೆ.66 ರಸ್ತೆಯಲ್ಲಿ ಪೂರ್ವಕ್ಕೆ ಚಲಿಸಿ, ಕೋಣಿ, ಬಸ್ರೂರು, ಬಿ.ಹೆಚ್. ಕ್ರಾಸ್ ಮಾರ್ಗವಾಗಿ ಜಪ್ತಿ ಮುಖೇನ ಹುಣ್ಸೆಮಕ್ಕಿ ತಲುಪಿದರೆ ಕೋಟೇಶ್ವರ- ಹಾಲಾಡಿ- ಸೋಮೇಶ್ವರ ರಸ್ತೆ ಸಂಪರ್ಕಿಸುತ್ತದೆ. ಸದ್ರಿ ರಸ್ತೆಯು ಮೇಲೆ ತಿಳಿಸಿದ ಸ್ಥಳಳಗಳಿಂದ ಬರುವ ವಾಹನಗಳಿಗೆ ಅತ್ಯಂತ ಸೂಕ್ತ ಮಾರ್ಗವಾಗಿರುತ್ತದೆ.
  ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೈಂದೂರು ಕಡೆಯಿಂದ ಹುಣ್ಸೆಮಕ್ಕಿ, ಬಿದ್ಕಲ್‍ಕಟ್ಟೆ, ಹಾಲಾಡಿ-ಸೋಮೆಶ್ವರ ಕಡೆಗೆ ಹೋಗುವ ಲಘು ವಾಹನಗಳಿಗೆ ಕೋಣಿ ಶಾಲೆ ಹಾಗೂ ಹೆಚ್.ಎಮ್.ಟಿ. ರಸ್ತೆ ಮುಖೇನ ಚಲಿಸಿ ಕಟ್ಗೆರೆ ಕಡೆಗೆ ಸಂಚರಿಸಿದರೆ ಕೋಟೇಶ್ವರ- ಹಾಲಾಡಿ-ಸೋಮೇಶ್ವರ ರಸ್ತೆ ಸಂಪರ್ಕಿಸುತ್ತದೆ. ಈ ರಸ್ತೆಯು ಲಘು ವಾಹನಗಳಿಗೆ ಸೂಕ್ತವಾದ ಮಾರ್ಗವಾಗಿರುತ್ತದೆ.
ಮೇಲಿನ ಎಲ್ಲಾ ಬದಲಿ ಮಾರ್ಗಗಳು ಹಾಲಾಡಿ ಕಡೆಯಿಂದ ಉಡುಪಿ ಅಥವಾ ಕುಂದಾಪುರ ಕಡೆಗೆ ಚಲಿಸುವ ವಾಹನಗಳಿಗೆ ಸೂಕ್ತ ಮಾರ್ಗಗಳಾಗಿರುತ್ತದೆ ಎಂದು ಜಿಲ್ಲಾದಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪರಿಯಾಮಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕೋಟತಟ್ಟು ಗ್ರಾಮ ಪಂಚಾಯತ್: ಗ್ರಾಮ ಸಭೆ
     ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) :1 ನೇ ಕೋಟತಟ್ಟು ಗ್ರಾಮ ಪಂಚಾಯತ್‍ನ 2018-19 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಸೆಪ್ಟಂಬರ್ 28 ರಂದು ಬೆಳಗ್ಗೆ 11 ಕ್ಕೆ ಕೋಟ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‍ನಲ್ಲಿ ನಡೆಯಲಿದೆ.
ಸಾರಿಗೆ ಸಮಸ್ಯೆ:ಸಾರ್ವಜನಿಕ ಕುಂದುಕೊರತೆ ಸಭೆ
   ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) :ಉಡುಪಿ ಜಿಲ್ಲೆಯಾದ್ಯಂತ ಸಾರಿಗೆ ಸಮಸ್ಯೆಗಳ ಕುರಿತು ಸೆಪ್ಟಂಬರ್ 29 ರಂದು ಬೆಳಗ್ಗೆ 10.30 ಕ್ಕೆ ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರು ಸಭೆಗೆ ಹಾಜರಾಗಿ ಸಾರಿಗೆ ಸಮಸ್ಯೆಗಳನ್ನು ತಿಳಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ತೆಂಕನಿಡಿಯೂರು ಕಾಲೇಜು : ಮಂಗಳೂರು ವಿ.ವಿ.ಅಂಚೆ ತೆರಪಿನ ಶಿಕ್ಷಣ ಸೌಲಭ್ಯ
ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) :ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೊತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 2015-16 ನೇ ಸಾಲಿನಿಂದ ಮಂಗಳೂರು ವಿಶ್ವವಿದ್ಯಾನಿಲಯದ ಅಂಚೆ ತೆರಪಿನ ಶಿಕ್ಷಣ ನಿರ್ದೇಶನಾಲಯದ ಪ್ರಾದೇಶಿಕ ಕೇಂದ್ರವನ್ನು ತೆರೆಯಲಾಗಿದ್ದು, 2018-19 ನೇ ಸಾಲಿನ ಪ್ರಥಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
   ಬಿ.ಎ, ಬಿ.ಕಾಂ. ಪದವಿ, ಎಂ.ಎ. ಕನ್ನಡ, ಇಂಗ್ಲಿಷ್, ಸಮಾಜಶಾಸ್ತ್ರ, ರಾಜಕೀಯ ಶಾಸ್ತ್ರ, ಅರ್ಥಶಾಸ್ತ್ರ, ಹಿಂದಿ ಮತ್ತು  ಎಂ.ಕಾಂ. ಕೋರ್ಸುಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಅಕ್ಟೋಬರ್ 1 ರ ಒಳಗೆ ತೆಂಕನಿಡಿಯೂರು ಅಂಚೆ ತೆರಪಿನ ಶಿಕ್ಷಣ ಪ್ರಾದೇಶಿಕ ಕೇಂದ್ರದಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ. 
    ಹೆಚ್ಚಿನ ಮಾಹಿತಿ ಮತ್ತು ಅರ್ಜಿ ವಿವರಗಳಿಗಾಗಿ mಚಿಟಿgಚಿಟoಡಿeuಟಿiveಡಿsiಣಥಿ.ಚಿಛಿ.iಟಿ  ಅಥವಾ ಅಂಚೆ ತೆರಪಿನ ಶಿಕ್ಷಣ ಪ್ರಾದೇಶಿಕ ಕೇಂದ್ರ, ತೆಂಕನಿಡಿಯೂರು, ಉಡುಪಿ 0820 -2583604(ಔ), ಡಾ. ದುಗ್ಗಪ್ಪ ಕಜೆಕಾರ್, ಸಂಯೋಜಕರು (9448428604) ಇವರನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಕಟಣೆ ತಿಳಿಸಿದೆ.
ಗ್ರಾಮ ಸಹಾಯಕ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
   ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲೆಯ ಕಾಪು ತಾಲೂಕು  ಪಾದೆಬೆಟ್ಟು ಗ್ರಾಮದ ಗ್ರಾಮ ಸಹಾಯಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
 ಅರ್ಜಿಯನ್ನು ಕಾಪು ತಾಲೂಕು ಕಚೇರಿಗೆ ಸೆಪ್ಟಂಬರ್ 28 ರ ಒಳಗೆ ಸಲ್ಲಿಸಬೇಕು.
ಅರ್ಹತೆ: ಮೊದಲು ಗ್ರಾಮ ಸಹಾಯಕರಾಗಿದ್ದು, ಸೇವೆಯಲ್ಲಿರುವಾಗಲೇ ಮರಣ ಹೊಂದಿದವರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ನಿಯಮಾನುಸಾರ ಗ್ರಾಮ ಸಹಾಯಕರ ಕೆಲಸ ನೀಡಲು ಆದ್ಯತೆ ನೀಡಬಹುದಾಗಿದೆ. ಅರ್ಜಿದಾರರು ಅದೇ ಗ್ರಾಮದವರಾಗಿರಬೇಕು. ಅಭ್ಯರ್ಥಿಯು ಆ ಗ್ರಾಮದ ಪರಿಪೂರ್ಣ ಮಾಹಿತಿಯನ್ನು ಹೊಂದಿರಬೇಕು. ಅಭ್ಯರ್ಥಿಯು 25 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ಅಭ್ಯರ್ಥಿಯು ಓದು, ಬರಹದ ಜ್ಞಾನ ಹೊಂದಿರಬೇಕು. ಮೊದಲು ಸ್ಥಳೀಯ ಕಚೇರಿಯಲ್ಲಿ ಕೆಲಸ ನಿರ್ವಹಿಸಿದ ಅನುಭವವಿದ್ದಲ್ಲಿ ಖಾತ್ರಿ ಪಡಿಸಿಕೊಂಡು ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.
    ಹೆಚ್ಚಿನ ಮಾಹಿತಿಗಾಗಿ ಕಾಪು ತಹಶೀಲ್ದಾರರ ಕಛೇರಿ ದೂರವಾಣಿ ಸಂಖ್ಯೆ: 0820-2591444 ನ್ನು ಸರ್ಕಾರಿ ಕೆಲಸದ ದಿನಗಳಲ್ಲಿ ಬೆಳಗ್ಗೆ 10 ರಿಂದ 5.30 ರ ಒಳಗೆ ಸಂಪರ್ಕಿಸುವಂತೆ ತಹಶೀಲ್ದಾರರು , ಕಾಪು ತಾಲೂಕು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಜಿಲ್ಲೆಯಲ್ಲಿ ವಾಣಿಜ್ಯ ಮತ್ತು ಕಂಪ್ಯೂಟರ್ ಶಾಲೆಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ
    ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಸಾರ್ವಜನಿಕರಿಗೆ ಮತ್ತು ಕಲಿಯಲು ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ಮಾಹಿತಿಗಾಗಿ ಮೈಸೂರು ವಿಭಾಗದಲ್ಲಿ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಾಣಿಜ್ಯ ಮತ್ತು ಕಂಪ್ಯೂಟರ್ ಶಾಲೆಗಳು ಅನ್ನಪೂರ್ಣ ಸ್ಕೂಲ್ ಆಫ್ ಕಾಮರ್ಸ್, ಶಂಕರನಾರಾಯಣ, ಕುಂದಾಪುರ ತಾಲೂಕು ಉಡುಪಿ ಜಿಲ್ಲೆ, ಮೂರ್ತಿ ವಾಣಿಜ್ಯ ವಿದ್ಯಾ ಸಂಸ್ಥೆ ವಿದ್ಯಾರತ್ನ ಕಟ್ಟಡ 2 ನೇ ಮಹಡಿ ಸ್ಟುಡಿಯೋ ಮುಂಭಾಗ, ಉಡುಪಿ ಮತ್ತು ದ ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ, ಗಣಕಯಂತ್ರ ಶಿಕ್ಷಣ ಶಾಲೆ, ಕಂಬಳ ಕ್ರಾಸ್, ಬಜಗೋಳಿ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಕರ್ನಾಟಕ ಫ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.

ಕ.ರಾ.ಮು.ವಿ.ನಿಲಯದ ಕೋರ್ಸುಗಳ ಪ್ರವೇಶಾತಿ ಬಗ್ಗೆ
    ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2018-19ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ.., ಎಂ.ಎ/ಎಂ.ಕಾಂ.., ಬಿ.ಲಿಬ್.ಐಸ್ಸಿ,/ಎಂ.ಲಿಬ್.ಐಸ್ಸಿ ಮತ್ತು ಎಂ.ಎಸ್ಸಿ (ಪರಿಸರ ವಿಜ್ಞಾನ) ವಿಷಯಗಳ ಪ್ರವೇಶಾತಿಗೆ ಅಕ್ಟೋಬರ್ 01, ರಂದು 200 ರೂ.  ದಂಡ ಶುಲ್ಕದೊಂದಿಗೆ ಕಡೆಯ ದಿನವಾಗಿರುತ್ತದೆ.
   ಅರ್ಜಿಗಳನ್ನು ಖುದ್ದಾಗಿ ಕರಾಮುವಿ ಪ್ರಾದೇಶಿಕ ಕೇಂದ್ರ ಕಛೇರಿ, ಹಳೇ ಜಿಲ್ಲಾ ಪಂಚಾಯತ್ ಕಟ್ಟಡ, ಬನ್ನಂಜೆ, ಉಡುಪಿ, ಇಲ್ಲಿ ಪಡೆದುಕೊಂಡು, ಅಕ್ಟೋಬರ್ 1 ರ ಒಳಗೆ ಪ್ರಾದೇಶಿಕ ಕೇಂದ್ರ ಕಛೇರಿ ಉಡುಪಿ. ಇಲ್ಲಿಗೆ ಸಲ್ಲಿಸಿ, ಸಿದ್ಧಪಾಠಗಳನ್ನು ತೆಗೆದುಕೊಳ್ಳಬಹುದು ಹಾಗೂ ಸೆಪ್ಟಂಬರ್ 30 ರ ಭಾನುವಾರ ಸಹ ಕಛೇರಿ ತೆರೆದಿರುತ್ತದೆ ಪ್ರವೇಶಾತಿ ಶುಲ್ಕವನ್ನು ಸಹ ಕಛೇರಿಯಲ್ಲೆ ಸಂದಾಯ ಮಾಡಬಹುದಾಗಿದೆ.
   ಹೆಚ್ಚಿನ ವಿವಿರಗಳಿಗೆ ವಿವಿ ನಿಲಯದ ವೆಬ್‍ಸೈಟ್ ತಿತಿತಿ.ಞsoumಥಿsoಡಿe.ಞಚಿಡಿಟಿಚಿಣಚಿಞಚಿ.gov.iಟಿ   ಅಥವಾ ಪ್ರಾದೇಶಿಕ ಕೇಂದ್ರ ಉಡುಪಿ, ದೂರವಾಣಿ ಸಂಖ್ಯೆ:- 0820-2522247 ಮತ್ತು 9972526647 ರಿಂದ ಮಾಹಿತಿ ಪಡೆಯುವಂತೆ ಪ್ರಾದೇಶಿಕ ನಿರ್ದೇಶಕರು, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

ಉಚಿತ ಆರೋಗ್ಯ ತಪಾಸಣಾ ಶಿಬಿರ
    ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಸೆಪ್ಟಂಬರ್ 25 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಆಸ್ಪತ್ರೆ ಮತ್ತು ಎನ್.ಪಿ.ಸಿ.ಡಿ.ಎಸ್. ಹಾಗೂ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಆಸ್ಪತ್ರೆಯ ಹಿರಿಯ ನಾಗರಿಕ ವಾರ್ಡ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು.
   ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಮಧುಸೂದನ್ ನಾಯಕ್ ಅಧ್ಯಕ್ಷತೆ ವಹಿಸಿ, ಅಸಾಂಕ್ರಾಮಿಕ ರೋಗಗಳು ಮತ್ತು ಅದರ ಪರಿಣಾಮಗಳ ಬಗ್ಗೆ ಮಾತನಾಡಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು ಹಾಗೂ ಕಾರ್ಯಕ್ರಮವನ್ನು ತಜ್ಞ ವೈದ್ಯರು ಮತ್ತು ನಿವಾಸಿ ವೈದ್ಯಾಧಿಕಾರಿ, ಜಿಲ್ಲಾ ಆಸ್ಪತ್ರೆ, ಉಡುಪಿಯ ಡಾ. ಚಂದ್ರಶೇಖರ್ ಅಡಿಗ ಉದ್ಘಾಟಿಸಿದರು. ಹಿರಿಯ ತಜ್ಞ ವೈದ್ಯಾಧಿಕಾರಿ ಡಾ .ನಾಗೇಶ್, ಮಾನಸಿಕ ತಜ್ಞರಾದ ಡಾ. ವಾಸುದೇವ್, ಹಿರಿಯ ವೈದ್ಯಾಧಿಕಾರಿ ಡಾ. ಶಶಿಕಲಾ, ಡಾ. ಪ್ರಕಾಶ್ ಮತ್ತು  ಡಾ. ರವೀಂದ್ರ ಉಪಸ್ಥಿತರಿದ್ದರು ಹಾಗೂ ಎನ್.ಪಿ.ಸಿ.ಡಿ.ಎಸ್. ಹಾಗೂ ಎನ್.ಟಿ.ಸಿ.ಪಿ  ಸಿಬ್ಬಂದಿಗಳು ಶಿಬಿರದಲ್ಲಿ ಬಾಗವಹಿಸಿ ತಮ್ಮ ಸೇವೆಯನ್ನು ಒದಗಿಸಿದರು. ಆಪ್ತ ಸಮಾಲೋಚಕರಾದ ಮನು  ಎಸ್.ಬಿ ಕಾರ್ಯಕ್ರಮ ನಿರೂಪಿಸಿದರು. ಕೃತಿ  ಸ್ವಾಗತಿಸಿದರು. ಶಿಬಿರದ ಎಲ್ಲಾ ಶಿಬಿರಾರ್ಥಿಗಳಿಗೆ ಉಚಿತ ರಕ್ತ ಪರೀಕ್ಷೆ ಹಾಗೂ ಇ.ಸಿ.ಜಿ. ಎಕ್ಸರೇ ಮಾಡಲಾಯಿತು ಹಾಗೂ ಅಸಾಂಕ್ರಾಮಿಕ ರೋಗಗಳ ಮತ್ತು ತಂಬಾಕಿನ ಬಗ್ಗೆ ಆಪ್ತ ಸಮಾಲೋಚನೆ ಮೂಲಕ ಅಗತ್ಯ ಮಾಹಿತಿಯನ್ನು ನೀಡಲಾಯಿತು.

“ಅನಾಥಪ್ರಜ್ಞೆ ಕಾಡದಂತೆ ವಿದ್ಯಾರ್ಥಿಗಳನ್ನು ಸಲಹುವುದು ನಮ್ಮೆಲ್ಲರ ಆದ್ಯ ಕರ್ತವ್ಯ”-ಜ್ಯೋತಿ ಗುರುಪ್ರಸಾದ್
    ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇಲ್ಲಿ 2018-19ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಕಾರ್ಯಾಗಾರವು ಸೆಪ್ಟಂಬರ್ 22 ರಂದು ಕಾಲೇಜು ಸಭಾಂಗಣದಲ್ಲಿ ಜರಗಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ಸಾಹಿತಿ, ಚಿಂತಕರು, ಕಾರ್ಕಳದ ಜ್ಯೋತಿ ಗುರುಪ್ರಸಾದ್, ಮಾತನಾಡಿ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಮತ್ತು ಶಿಕ್ಷಣ ಸಂಸ್ಥೆಯಲ್ಲಿ ಅನಾಥ ಪ್ರಜ್ಞೆ ಕಾಡದಂತೆ ಸಲಹುವುದು ಪಾಲಕರ ಹಾಗೂ ಶಿಕ್ಷಕರ ಪ್ರಮುಖ ಕರ್ತವ್ಯವಾಗಿದ್ದು ಹೆತ್ತವರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ವಿಶಾಲ ವಿಶ್ವಕ್ಕೆ ಕೊಡುಗೆಯಾಗುವ ಒಳ್ಳೆಯ ಮನುಷ್ಯರಾಗಿ ರೂಪಿಸಬೇಕು ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ನಿಕೇತನ ಇವರು ವಹಿಸಿ, ಶಿಕಕ್ಷ-ರಕ್ಷಕ ಸಂಘದ ಪ್ರಾಧಾನ್ಯತೆಯನ್ನು ವಿವರಿಸಿದರು. ಶಿಕ್ಷಕ-ರಕ್ಷಕ ಸಂಘದ ಸಂಚಾಲಕರಾದ ಸುಮನಾ ಬಿ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಜಯಾ ಕೆ. ಎಸ್. ಸ್ವಾಗತಿಸಿದರು. ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ಶೆಟ್ಟಿ, ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಗಾಯತ್ರಿ ಪ್ರಾರ್ಥಿಸಿದರು, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ದಿನೇಶ್ ಎಂ. ಧನ್ಯವಾದ ಸಮರ್ಪಿಸಿದರು.
   2018-19ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ರಾಮದಾಸ ಐತಾಳ್, ಉಪಾಧ್ಯಕ್ಷರಾಗಿ ಸುಕನ್ಯಾ ಹಾಗೂ ಕಾರ್ಯದರ್ಶಿಯಾಗಿ ವಿಜಯಲಕ್ಷ್ಮೀ ಆಯ್ಕೆಯಾದರು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸುಕೇಶ್, ಎಂ. ಪ್ರಭಾಕರ, ಕುಮಾರಿ, ಸುಗುಣ ನಾಯಕ್, ಅನಿತಾ, ಶ್ಯಾಮಲಾ  ನೇಮಕಗೊಂಡರು.
 
 
ಆಟೋ ರಿಕ್ಷಾದವರು ಸ್ಟಿಕ್ಕರನ್ನು ತೆರವುಗೊಳಿಸುವ ಬಗ್ಗೆ
    ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಉಡುಪಿ ನಗರದ ಕೆಲವು ಆಟೋ ರಿಕ್ಷಾಗಳಲ್ಲಿ ಆಟೋ ಚಾಲಕರ ಮಾಲೀಕರ ಸಂಘಟನೆ(ರಿ) ಉಡುಪಿ ನಗರಸಭೆ ವ್ಯಾಪ್ತಿ ಪರವಾನಗಿ ಆಟೋ, ಹೊರಗಿನ ಆಟೋ ಎಂದು ತಾವೇ ಸ್ಟಿಕ್ಕರನ್ನು ಅಂಟಿಸಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಸ್ಟಿಕ್ಕರ್ ಅಂಟಿಸಿಕೊಂಡ ರಿಕ್ಷಾದವರು ಅಂತಹ ಸ್ಟಿಕ್ಕರನ್ನು ಕೂಡಲೇ ತೆರವುಗೊಳಿಸುವಂತೆ ತಪ್ಪಿದ್ದಲ್ಲಿ ಕಾನೂನು ರಿತ್ಯಾ ಕ್ರಮ ವಹಿಸಲಾಗುವುದೆಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಕಸ ವಿಲೇವಾರಿಯಲ್ಲಿ ವ್ಯತ್ಯಯ
   ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಸೆಪ್ಟಂಬರ್ 27 ರಂದು ಬೆಳಗ್ಗೆ 11 ಕ್ಕೆ ಉಡುಪಿ ಅಜ್ಜರಕಾಡಿನ ಪುರಭವನದ ಡೈನಿಂಗ್ ಹಾಲ್‍ನಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸುವ ಪ್ರಯುಕ್ತ ಈ ದಿನದಂದು ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿಯಲ್ಲಿ ವ್ಯತ್ಯಯ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತ ಜಿ.ಜನಾರ್ಧನ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾಣೆಯಾದವರ ಕುರಿತು
    ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಫಿದೋರ್ಸ್ (28 ವರ್ಷ) ಎಂಬುವವರು  ಸೆಪ್ಟಂಬರ್ 19 ರಂದು, ಮಲ್ಲಾರು ಗ್ರಾಮ, ಉಡುಪಿ ಇಲ್ಲಿಂದ ಕಾಣೆಯಾಗಿದ್ದು, ಗೋಧಿ ಮೈಬಣ್ಣ , ಕನ್ನಡ, ತುಳು, ಇಂಗ್ಲೀಷ್, ಹಿಂದಿ ಭಾಷೆ ಬಲ್ಲವರಾಗಿದ್ದು, ಇವರ ಪತ್ತೆಯಾದಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ.9480805449 ಅಥವಾ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಉಡುಪಿ ದೂರವಾಣಿ ಸಂಖ್ಯೆ: 0820-2520333 /9480805431 ಗೆ ಮಾಹಿತಿ ನೀಡುವಂತೆ ಪೊಲೀಸ್ ಉಪನಿರೀಕ್ಷಕರು, ಕಾಪು ಪೊಲೀಸ್ ಠಾಣೆ ಇವರ ಪ್ರಕಟಣೆ ತಿಳಿಸಿದೆ.
ಕಾಣೆಯಾದವರ ಕುರಿತು
    ಉಡುಪಿ, ಸೆಪ್ಟಂಬರ್ 26 (ಕರ್ನಾಟಕ ವಾರ್ತೆ) : ಸುಶೀಲ (63 ವರ್ಷ) ಎಂಬುವವರು  ಸೆಪ್ಟಂಬರ್ 18 ರಂದು, ಹೆಬ್ರಿ ಗ್ರಾಮದ ಕನ್ಯಾನ, ಹೊಸೂರು ಇಲ್ಲಿಂದ ಕಾಣೆಯಾಗಿದ್ದು, ಎಣ್ಣೆ ಕಪ್ಪು ಮೈಬಣ್ಣ , ಕನ್ನಡ, ತುಳು, ಭಾಷೆ ಬಲ್ಲವರಾಗಿದ್ದು, ಇವರ ಪತ್ತೆಯಾದಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಮೊ.ನಂ.9480805463 ಅಥವಾ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ, ದೂರವಾಣಿ ಸಂಖ್ಯೆ: 08258-231083 / 9480805435 ಗೆ ಮಾಹಿತಿ ನೀಡುವಂತೆ ಪೊಲೀಸ್ ಉಪನಿರೀಕ್ಷಕರು, ಹೆಬ್ರಿ ಪೊಲೀಸ್ ಠಾಣೆ ಇವರ ಪ್ರಕಟಣೆ ತಿಳಿಸಿದೆ.

ಬೆಳೆ ಸಮೀಕ್ಷೆಯಿಂದ ಅನುಕೂಲ
    ಉಡುಪಿ, ಸೆಪ್ಟಂಬರ್ 28 (ಕರ್ನಾಟಕ ವಾರ್ತೆ) :ಬೆಳೆ ಸಮೀಕ್ಷೆ ಯೋಜನೆಯು ಯಶಸ್ವಿಯಾಗಿ ಅನುಷ್ಟಾನಗೊಳ್ಳ ಬೇಕಾದರೆ ರೈತರು ಈ ಯೋಜನೆಯಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರದ ಬೆಳೆಯ ವಿವರಗಳನ್ನು ಖಾಸಗಿ ನಿವಾಸಿಗಳು ದಾಖಲಿಸಲು ಸಹಾಯ ಮಾಡಬೇಕಾಗುತ್ತದೆ. ಸಮೀಕ್ಷೆ ಸಮಯದಲ್ಲಿ ರೈತರ ಮೊಬೈಲ್ ನಂಬರ್ ಪಡೆಯುವುದು ಸಹ ಅಗತ್ಯವಿರುತ್ತದೆ.
ಬೆಳೆ ಸಮೀಕ್ಷೆಯಿಂದ ಸರ್ಕಾರಕ್ಕೆ ಅನುಕೂಲಗಳು: ಖಚಿತವಾಗಿ ಯಾವ ಬೆಳೆ ಎಷ್ಟು  ವಿಸ್ತೀರ್ಣದಲ್ಲಿ ಬೆಳೆದಿದೆ ಎಂಬುದನ್ನು ತಿಳಿಯಬಹುದಾಗಿದೆ.ಯಾವುದೇ ಪ್ರದೇಶದಲ್ಲಿ ಪ್ರಕೃತಿ ವಿಕೋಪದಿಂದ ನಷ್ಟವಾದಲ್ಲಿ ಯಾವ ಪ್ರದೇಶದಲ್ಲಿ ಯಾವ ಬೆಳೆ ನಷ್ಟ ಎಂದು ಅಂದಾಜಿಸಬಹುದು, ರಾಜ್ಯದಲ್ಲಿ ಯಾವ ಬೆಳೆಯ ಉತ್ಪಾದನೆ ಎಷ್ಟಿದೆ?, ಯಾವ ಬೆಳೆಯ ಉತ್ಪಾದನೆ ಕಡಿಮೆ ಇದೆ. ಉತ್ಪಾದನೆ ಕಡಿಮೆಯಾದ್ದರಿಂದ ಬೆಲೆಯಲ್ಲಿ ಏರುಪೇರಾಗಲಿದೆಯೇ? ಈ ಬಗ್ಗೆ ಸರ್ಕಾರ ಏನ್ ಕ್ರಮ ಕೈಗೊಳ್ಳಬಹುದು ಎಂದು ಅಂದಾಜಿಸಬಹುದು. ಹಾಗೂ ಯಾವ ಬೆಳೆಗಳಿಗೆ ಬೆಂಬಲಿತ ಬೆಲೆ ನೀಡಬೇಕು ಎಂಬ ನಿರ್ಧಾರ ಕೈಗೊಳ್ಳಬಹುದು. ಬೆಳೆ ವಿಮೆಯಲ್ಲಿ ವಿಮಾ ಘಟಕದ ಖಚಿತವಾದ ವಿಸ್ತೀರ್ಣ ಲಭ್ಯವಾಗಲಿದೆ. ಸರ್ಕಾರದಿಂದ ನೀಡುವ ಸೌಲಭ್ಯಗಳಿಗೆ ಉಪಯೋಗ. ಯಾವ ಬೆಳೆಗಳು ನಶಿಸುತ್ತಿವೆ? ಯಾವ ಬೆಳೆಗಳು ಹೊಸದಾಗಿ ಬೆಳೆಯಲಾಗುತ್ತಿದೆ ಎಂದು ತಿಳಿಯಬಹುದು.
ಬೆಳೆ ಸಮೀಕ್ಷೆಯಿಂದ ಸರ್ಕಾರಕ್ಕೆ ಅನುಕೂಲಗಳು: ಪಹಣಿಯಲ್ಲಿ ಅವರ ಸರ್ವೆ ನಂಬರಿನಲ್ಲಿ ಯಾವ ಬೆಳೆ ಬೆಳೆದಿದೆಯೋ ಆ ಬೆಳೆಯ ಹೆಸರು ಮತ್ತು ವಿಸ್ತೀರ್ಣ ಸರಿಯಾಗಿ ದಾಖಲಾಗಲಿದೆ. ಪ್ರತಿ ಸರ್ವೆ ನಂಬರಿನಲ್ಲಿ ಬೆಳೆಯ ವಿಸ್ತೀರ್ಣ ಲಭ್ಯವಿರುವುದರಿಂದ ಸರ್ಕಾರದಿಂದ ಸೌಲಭ್ಯ ಪಡೆಯಲು ನೇರವಾಗಿ ಉಪಯೋಗಿಸುವುದರಿಂದ ರೈತರು ಪುನಃ ಪಹಣಿಯಲ್ಲಿ ದಾಖಲಿಸುವ ಬಗ್ಗೆ ಕ್ರಮವಹಿಸುವ ಅಗತ್ಯವಿರುವುದಿಲ್ಲ. ಬೆಳೆ ವಿಮೆಯಲ್ಲಿ ಆ ಬೆಳೆಯ ಸಮರ್ಪಕ ವಿಸ್ತೀರ್ಣ ಸಿಗುವುದರಿಂದ ರೈತರಿಗೆ ವಿಮಾ ಪರಿಹಾರದಲ್ಲಿ ಕಡಿತ ಇರುವುದಿಲ್ಲ. ಬೆಳೆಯು ನಷ್ಟವಾದಲ್ಲಿ ಅವರು ಬೆಳೆ ಬೆಳೆದ ವಿಸ್ತೀರ್ಣಕ್ಕೆ ಸರಿಯಾಗಿ ವಿಮೆ ಸಿಗುತ್ತದೆ. ಬೆಳೆಯ ವಿಸ್ತೀರ್ಣ ತಿಳಿಯುವುದರಿಂದ ಉತ್ಪಾದನೆ ಬಗ್ಗೆ ಕೂಡಾ ತಿಳಿಯಬಹುದಾಗಿದ್ದು, ಬೆಲೆ ಏರಿಕೆ/ ಇಳಿಕೆ ಬಗ್ಗೆ ತಿಳಿದು ಒSP  ಯನ್ನು ನಿರ್ಧರಿಸಿ ರೈತರಿಗೆ ಸಮರ್ಪಕವಾಗಿ ವಿತರಣೆಯನ್ನು ಮಾಡಬಹುದು.
 ಈ ಎಲ್ಲಾ ಕಾರಣಗಳಿಂದ ಸರ್ಕಾರ ರೈತರಲ್ಲಿ ವಿನಂತಿಸುವುದೇನೆಂದರೆ: ನಿಮ್ಮಲ್ಲಿ ಬೆಳೆ ಸಮೀಕ್ಷೆಯನ್ನು ನಿಮ್ಮ ಹಳ್ಳಿಯಲ್ಲೇ ವಾಸಿಸುವ ಪಿಯುಸಿ ಅಥವಾ ಹೆಚ್ಚಿನ ವಿದ್ಯಾರ್ಹತೆಯುಳ್ಳ ಯುವ ಖಾಸಗಿ ಅಥವಾ ಸರ್ಕಾರಿ ಸಿಬ್ಬಂದಿಗಳಿಂದ ಕೈಗೊಳ್ಳಲಾಗುತ್ತಿದೆ. ರೈತರು ಬೆಳೆ ಸಮೀಕೆದಾರರ ಖಾಸಗಿ/ ಸರ್ಕಾರಿ ಸಿಬ್ಬಂದಿಗಳಿಗೆ ದಯವಿಟ್ಟು ಸಹಕರಿಸಿ. ತಾವು ತಮ್ಮ ಹಳ್ಳಿಯಲ್ಲಿ ಬೆಳೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಸಮೀಕ್ಷೆದಾರರಿಗೆ ಸಹಕಾರ ನೀಡುವುದರ ಮೂಲಕ ಸರ್ಕಾರದ ಉದ್ದೇಶ ಸಫಲವಾಗಲು ತಾವು ಕಾರಣೀಕರ್ತರಾಗಬೇಕು.
    ನಿಮ್ಮ ಜಮೀನಿಗೆ ಬರುವ ಪೂರ್ವದಲ್ಲಿ ತಮಗೆ ತಿಳಿಸುತ್ತಾರೆ ತಾವು ಅವರ ಜೊತೆಯಲ್ಲಿದ್ದು ನಿಮ್ಮ ಸರ್ವೆ ನಂಬರನ್ನು ಗುರುತಿಸುವಲ್ಲಿ ಮತ್ತು ಸರ್ವೆ ನಂಬರಿನಲ್ಲಿ ಬೆಳೆಯ ವಿವರಗಳನ್ನು ಸರಿಐಆಗಿ ದಾಖಲಿಸಲು ಸಹಕರಿಸಿರಿ. ಸಮೀಕ್ಷೆದಾರರು ನಿಮ್ಮ ಸರ್ವೆ ನಂಬರಿನ ಪೋಟೊ ತೆಗೆದುಕೊಳ್ಳುವಾಗ ಕನಿಷ್ಟ ಒಂದು ಪೋಟೊದಲ್ಲಿಯಾದರೂತಾವೂ ಕೂಡಾ ಇರಬೇಕೆಂದು ಕೋರಿದೆ. ಬೆಳೆ ಸಮೀಕ್ಷೆದಾರರಿಗೆ ನಿಮ್ಮ ಮೊಬೈಲ್ ಸಂಖ್ಯೆ ನೀಡಿರಿ. ಇತರೆ ರೈತು ಬಂದಿಲ್ಲವಾದಲ್ಲಿ ಅವರ ಸರ್ವೆ ನಂಬರನ್ನು ಗುರುತಿಸುವಲ್ಲಿ ಸಹಕರಿಸಿ ಮತ್ತು ಅಂತಹ ಮೊಬೈಲ್ ಸಂಖ್ಯೆಯನ್ನು ಸಮೀಕ್ಷೆದಾರರಿಗೆ ನೀಡಿರಿ.
    ಈ ಬೆಳೆ ಸಮೀಕ್ಷೆಯು ಬೆಳೆಗಳ ಮಾಹಿತಿಯನ್ನು ಸರ್ಕಾರಿ ದಾಖಲೆಗಳಲ್ಲಿ ದಾಖಲಿಸುವ ಹಾಗೂ ಇದನ್ನು ವಿವಿಧ ರೈತ ಫಲಾನುಭವಿ ಯೋಜನೆಗಳಲ್ಲಿ ಬಳಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದೆ. ಭೂ ದಾಖಲಾತಿ ಸಂಬಂಧಿತ ಇತರೆ ಎಲ್ಲಾ ವಿಷಯಗಳಿಗಾಗಿ ಹಿಂದಿನ ಕಾರ್ಯವಿಧಾನಗಳು ಮುಂದುವರಿಯಲಿವೆ.
ವಿಶ್ವ ಹೃದಯ ದಿನಾಚರಣೆ
    ಉಡುಪಿ, ಸೆಪ್ಟಂಬರ್ 28 (ಕರ್ನಾಟಕ ವಾರ್ತೆ) :ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಎನ್.ಪಿ.ಸಿ.ಡಿ.ಸಿ.ಎಸ್. & ಎನ್.ಟಿ.ಸಿ.ಪಿ. ವಿಭಾಗ ಉಡುಪಿ, ಭಾರತೀಯ ವೈದ್ಯಕೀಯ ಮಂಡಳಿ ಉಡುಪಿ ಕರಾವಳಿ, ನ್ಯೂಸಿಟಿ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮವು ಸೆಪ್ಟಂಬರ್ 29 ರಂದು ಬೆಳಗ್ಗೆ 8 ಕ್ಕೆ ಸರ್ವಿಸ್ ಬಸ್  ಸ್ಟ್ಯಾಂಡ್, ಕ್ಲಾಕ್ ಟವರ್ ಹತ್ತಿರ, ಉಡುಪಿಯಲ್ಲಿ ನಡೆಯಲಿದೆ.
 ವಿಶ್ವ ಹೇದಯ ದಿನದ ಅಂಗವಾಗಿ , ಉಡುಪಿ ಸರ್ವಿಸ್ ಬಸ್ ಸ್ಟಾಂಡ್ ನಿಂದ ಜಿಲ್ಲಾ ಆಸ್ಪತ್ರೆ ವರೆಗೆ ಜಾಥಾ ನಡೆಯಲಿದೆ.
    ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಮಧುಸೂಧನ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶ್ವ ಹಿರಿಯ ನಾಗರಿಕರ ದಿನಾಚರಣೆ
   ಉಡುಪಿ, ಸೆಪ್ಟಂಬರ್ 28 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಕೀಲರ ಸಂಘ(ರಿ) ಉಡುಪಿ, ಹಿರಿಯ ನಾಗರಿಕರ ಸಂಸ್ಥೆಗಳು ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ(ರಿ), ವೃದ್ದಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್ 1 ರಂದು ಬೆಳಗ್ಗೆ 10.30 ಕ್ಕೆ  ರವೀಂದ್ರ ಮಂಟಪ, ಎಂ.ಜಿ.ಎಂ ಕಾಲೇಜು, ಕುಂಜಿಬೆಟ್ಟು, ಉಡುಪಿ ಇಲ್ಲಿ ನಡೆಯಲಿದೆ.
    ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಮತ್ತು ಕನ್ನಡ ಸಂಸ್ಕøತಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅದ್ಯಕ್ಷತೆ ವಹಿಸಲಿದ್ದಾರೆ.
    ದಿನಾಚರಣೆಯ ಅಂಗವಾಗಿ ಪೂರ್ವಾಹ್ನ 8.30ರಿಂದ 10.30ರವರೆಗೆ ಆರೋಗ್ಯ ಇಲಾಖೆ ವತಿಯಿಂದ ಹಿರಿಯ ನಾಗರಿಕರಿಗೆ ನೇತ್ರ ಹಾಗೂ ಆರೋಗ್ಯ ತಪಾಸಣೆಯನ್ನು ಉಚಿತವಾಗಿ ನಡೆಸಲಾಗುವುದು.
ಬಾಲ ಕಾರ್ಮಿಕ ನಿರ್ಮೂಲನೆ -  ತರಬೇತಿ ಕಾರ್ಯಾಗಾರ
    ಉಡುಪಿ, ಸೆಪ್ಟಂಬರ್ 28 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತ ಉಡುಪಿ, ಕಾರ್ಮಿಕ ಇಲಾಖೆ ಉಡುಪಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಅರಿವು ಮೂಡಿಸುವ ಮತ್ತು ಗ್ರಾಮ ಮಟ್ಟದಲ್ಲಿ  “ಬಾಲಕಾರ್ಮಿಕ ಮತ್ತು  ಕಿಶೋರ ಕಾರ್ಮಿಕ ಮುಕ್ತ ಗ್ರಾಮ” ಗಳನ್ನಾಗಿ ಘೋಷಣೆ ಮಾಡುವ ಕುರಿತು ತರಬೇತಿ ಕಾರ್ಯಾಗಾರವನ್ನು  ಅಕ್ಟೋಬರ್ 5 ರಂದು ಬೆಳಗ್ಗೆ 10 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ, ರಜತಾದ್ರಿ, ಮಣಿಪಾಲ ಇಲ್ಲಿ ಹಮ್ಮಿಕೊಳ್ಳಲಾಗಿದೆ.
    ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಉದ್ಘಾಟಿಸಲಿದ್ದು, ಉಡುಪಿ ಜಿಲ್ಲೆ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ್ ಜೋಗೂರ್ ಅಧ್ಯಕ್ಷತೆ ವಹಿಸಲಿದ್ದಾರೆ.

ನಾರೀಶಕ್ತಿ ಪುರಸ್ಕಾರ: ಅರ್ಹ  ವ್ಯಕ್ತಿ/ ಸಂಸ್ಥೆಗಳಿಂದ ಪ್ರಸ್ತಾವನೆಗಳ ಆಹ್ವಾನ
   ಉಡುಪಿ, ಸೆಪ್ಟಂಬರ್ 28 (ಕರ್ನಾಟಕ ವಾರ್ತೆ) : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಮಾರ್ಚ್ 8, 2019 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ 2018-19 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಾಡುವ ನಾರೀಶಕ್ತಿ ಪುರಸ್ಕಾರ ಪ್ರಶಸ್ತಿಗಾಗಿ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
    ಕೇಂದ್ರ  ಸರ್ಕಾರದ ಮಾರ್ಗಸೂಚಿಯಂತೆ ನಾರೀಶಕ್ತಿ ಪುರಸ್ಕಾರ ಪ್ರಶಸ್ತಿಗಳಿಗೆ ವಿವಿಧ ಸಂಘ ಸಂಸ್ಥೆಗಳಿಂದ ಹಾಗೂ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಮಹಿಳೆಯರಿಂದ ಶೌರ್ಯ ಪ್ರಶಸ್ತಿ ಹಾಗೂ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಮಹಿಳೆಯರಿಗೆ ಸಂಬಂಧಸಿದಂತೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ಅರ್ಜಿಗಳನ್ನು ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಇವರಿಗೆ ಅಕ್ಟೋಬರ್ 10 ರ ಒಳಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಸಾಲಿಗ್ರಾಮ ಪಟ್ಟಣ ಪಂಚಾಯತ್: ಪೌರಕಾರ್ಮಿಕ ದಿನಾಚರಣೆ
    ಉಡುಪಿ, ಸೆಪ್ಟಂಬರ್ 28 (ಕರ್ನಾಟಕ ವಾರ್ತೆ) :ಸಾಲಿಗ್ರಾಮ ಪಟ್ಟಣ ಪಂಚಾಯತ್‍ನಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಸೆಪ್ಟಂಬರ್ 23 ರಂದು ಬೆಳಗ್ಗೆ 10 ಕ್ಕೆ ಮುಖ್ಯಾಧಿಕಾರಿ ಆರ್. ಶ್ರೀಪಾದ್ ಇವರು ಹಗ್ಗ ಜಗ್ಗಾಟಕ್ಕೆ ಸೀಟಿ ಊದುವ ಮೂಲಕ ಚಾಲನೆ ನೀಡಿದರು ಮತ್ತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೌರಕಾರ್ಮಿಕರಿಗೆ ವಿವಿಧ ಒಳಾಂಗಣ ಮತ್ತು ಹೊರಾಂಗಣ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
   ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ಬ್ರಹ್ಮಾವರ ತಹಶೀಲ್ದಾರರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್‍ನ  ಆಡಳಿತಾಧಿಕಾರಿ ಅನಿಲ್ ಕುಮಾರ್ ಮಾತನಾಡಿ, ಯಾವುದೇ ಕೆಲಸವು ನಿಕೃಷ್ಟವಲ್ಲ, ಎಲ್ಲಾ ಕೆಲಸಗಳು ಉತ್ಕøಷ್ಟವೇ, ಪೌರಕಾರ್ಮಿಕರು  ಕೀಳರಿಮೆ ಬಿಟ್ಟು, ದುವ್ರ್ಯಸನಗಳನ್ನು ತ್ಯಜಿಸಿ, ಸಮಾಜದ ಮುಖ್ಯ ಭಾಗದಲ್ಲಿ ಸೇರುವುದರೊಂದಿಗೆ ಪ್ರಗತಿ ಸಾದ್ಯ ಎಂದು ತಿಳಿಸಿದರು. ಮುಖ್ಯಾಧಿಕಾರಿ ಶ್ರೀ ಪಾದ್ ಇವರು ಪೌರಕಾರ್ಮಿಕರಿಗೆ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
   ಸ್ಪರ್ಧೆಗಳ ಮತ್ತು ವಿಜೇತರ ವಿವರ: ಹಗ್ಗ ಜಗ್ಗಾಟದಲ್ಲಿ ಶ್ರೀಕೃಷ್ಣ ಮತ್ತು ತಂಡ ಪ್ರಥಮ ಬಹುಮಾನ ಪಡೆಯಿತು. ಠಿiಛಿಞ ಚಿಟಿಜ ಂಛಿಣ  ನಲ್ಲಿ ಜೈರಾಜ್ ಪ್ರಥಮ, ಸುರೇಶ ಬಿ. ದ್ವಿತೀಯ, ಬೋಯಿಂಗ್ ಸ್ಟೇಷನ್‍ನಲ್ಲಿ ಪಾರ್ವತಿ ಪ್ರಥಮ, ಕೃಷ್ಣ ದ್ವಿತೀಯ, ಮ್ಯೂಸಿಕಲ್ ಚೇರ್‍ನಲ್ಲಿ ಜೈರಾಜ್ ಪ್ರಥಮ, ಮಹಾಬಲ ದ್ವಿತೀಯ, ಬಾಲ್ ಪಾಸಿಂಗ್‍ನಲ್ಲಿ ಜೈರಾಜ್ ಪ್ರಥಮ, ಕೃಷ್ಣ ದ್ವಿತೀಯ, ಸಂಗೀತ ಸ್ಪರ್ಧೆಯಲ್ಲಿ ರತ್ನಾಕರ ಪ್ರಥಮ, ಪಾರ್ವತಿ ದ್ವಿತೀಯ, ಲಿಂಬೂ ಚಮಚ ಸ್ಪರ್ಧೆಯಲ್ಲಿ ಕೃಷ್ಣ ಪ್ರಥಮ, ಸುರೇಶ.ಬಿ. ದ್ವಿತೀಯ, ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ನಳಿನಿ ಪ್ರಥಮ, ರಸ ಪ್ರಶ್ನೆಯಲ್ಲಿ ಕೃಷ್ಣ ಪ್ರಥಮ, ನಳಿನಿ ದ್ವಿತೀಯ, ತಲೆಗೆ ಸ್ಟ್ರೋ ಜೋಡಿಸುವ ಸ್ಪರ್ಧೆಯಲ್ಲಿ ಸುಗುಣ ಪ್ರಥಮ, ಇಂದಿರಾ ದ್ವಿತೀಯ, ಸ್ಟ್ರೋ ದಿಂದ ಲೋಟ ಪಾಸ್ ಸ್ಪರ್ಧೆಯಲ್ಲಿ ಸುರೇಶ ಕೆ. ಪ್ರಥಮ, ಸುರೇಶ ನಾಯ್ಕ್ ದ್ವಿತೀಯ, ಸೂಜಿಗೆ ನೂಲು ಹಾಕುವ ಸ್ಪರ್ಧೆಯಲ್ಲಿ ಜೈರಾಜ್ ಪ್ರಥಮ, ನಳಿನಿ ದ್ವಿತೀಯ, ಸ್ಕೇಲ್‍ನಲ್ಲಿ ಪಿರಮಿಡ್ ರಚನೆಯಲ್ಲಿ ರತ್ನಾಕರ ಪ್ರಥಮ, ನಳಿನಿ ದ್ವಿತೀಯ, ಬಲೂನು ಗೇಮ್ ಸ್ಪರ್ಧೆಯಲ್ಲಿ ಉದಯ ನಾಯ್ಕ್ ಪ್ರಥಮ, ರತ್ನಾಕರ ದ್ವಿತೀಯ ಸ್ಥಾನ ಪಡೆದರು ಹಾಗೂ ಚಾಂಪಿಯನ್ ಆಗಿ ಕೃಷ್ಣನವರು ಟ್ರೋಪಿ ಪಡೆದರು. ತಹಶೀಲ್ದಾರರು ಬಹುಮಾನ ವಿತರಿಸಿದರು.
    ಕಾರ್ಯಕ್ರಮವನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್‍ನ ಕಿರಿಯ ಆರೋಗ್ಯ ನಿರೀಕ್ಷಕರಾದ ಮಮತಾ ಸಂಘಟಿಸಿ, ನಿರೂಪಿಸಿದರು.  ಸಿಬ್ಬಂದಿ ಕೆ.ಚಂದ್ರಶೇಖರ ಸೋಮಯಾಜಿ ಸ್ವಾಗತಿಸಿ, ಧನ್ಯವಾದಗೈದರು.
ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ: ಜವಾನ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಸೆಪ್ಟಂಬರ್ 28 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಕಛೇರಿ ಜವಾನ-1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಯು ಕರಾರಿನ ಆಧಾರದ ಮೇಲಿದ್ದು, ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ಗೌರವಧನ ನೀಡಲಾಗುವುದು.
ವಿದ್ಯಾರ್ಹತೆ ಮತ್ತುಅನುಭವ: ಎಸ್.ಎಸ್.ಎಲ್.ಸಿ ಉತ್ತೀರ್ಣ ಹೊಂದಿರಬೇಕು, ಓದಲು ಬರೆಯಲು ಬರಬೇಕು, ಮಾಸಿಕ ಗೌರವಧನ 8,000 ರೂ., ಗರಿಷ್ಠ ವಯೋಮಿತಿ 40ವರ್ಷ ಮೀರಿರಬಾರದು.
ಅಭ್ಯರ್ಥಿಗಳು ಅರ್ಜಿಯನ್ನು ಬಿಳಿ ಹಾಳೆಯಲ್ಲಿ ವಿವರಗಳನ್ನು ನಮೂದಿಸಿ ಸೂಕ್ತ ದಾಖಲಾತಿಗಳೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸಂಘ ಉಡುಪಿ ಜಿಲ್ಲೆ, ಉಡುಪಿ ಇವರ ಹೆಸರಿಗೆ ಅರ್ಜಿ ಬರೆದು, ಸದರಿ ಅರ್ಜಿಯನ್ನು ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ಅಧಿಕಾರಿಗಳ ಕಛೇರಿ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆಇವರಿಗೆ ಸಲ್ಲಿಸಬೇಕು.
ಅರ್ಜಿಯನ್ನು ಅಕ್ಟೋಬರ್ 12 ರ ಒಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ವೃದ್ಧೆಯ ಮಾಹಿತಿ ಪತ್ತೆ ಬಗ್ಗೆ
     ಉಡುಪಿ, ಸೆಪ್ಟಂಬರ್ 28 (ಕರ್ನಾಟಕ ವಾರ್ತೆ) :ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿ ಅಸಹಾಯಕರಾಗಿದ್ದ ಸುಮಾರು 80 ವರ್ಷದ ವೃದ್ಧೆಯನ್ನು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು ರಕ್ಷಿಸಿ ಉಡುಪಿ ಕೃಷ್ಣಮಠದ ಪಲಿಮಾರು ಮಠದಲ್ಲಿ ಆಶ್ರಯ ಒದಗಿಸಿರುತ್ತಾರೆ. ವೃದ್ಧೆಯು ಬ್ರಾಹ್ಮಣ ಸಮಾಜದವರಾಗಿದ್ದು, ಹೆಸರು ಜಯಮ್ಮ ಎಂದು ತಿಳಿಸಿರುತ್ತಾರೆ.
     ವೃದ್ಧೆಯ ವಾರಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ದೂರವಾಣಿ ಸಂಖ್ಯೆ; 0820-2526394 ಅನ್ನು ಸಂಪರ್ಕಿಸುವಂತೆ ಸಹಾಯವಾಣಿಯ ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 2, ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯು ಸೂಚಿಸಿದ “ಲೋಕ ಸಂಪರ್ಕ ಅಭಿಯಾನ” ಕಾರ್ಯಕ್ರಮದ ಬಗ್ಗೆ ಸಮಾಲೋಚನೆಗಾಗಿ ಉಡುಪಿ ಬ್ಲಾಕ್ ವ್ಯಾಪ್ತಿಯ ಸರ್ವ ಕಾರ್ಯಕರ್ತರ ಸಭೆಯನ್ನು ತಾ. 02.10.2018ರ ಸಂಜೆ 4.00 ಗಂಟೆಗೆ ಕಾಂಗ್ರೆಸ್ ಭವನ ಬ್ರಹ್ಮಗಿರಿಯಲ್ಲಿ ಕರೆಯಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಜಯಮಾಲ, ಶ್ರೀ ಪ್ರಮೋದ್ ಮಧ್ವರಾಜ್ ನಿಕಟಪೂರ್ವ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆಯವರ ಅಧ್ಯಕ್ಷತೆಯಲ್ಲಿ ಸಭೆ ಜರಗಲಿದೆ. ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi