Brief Udupi News with pictures
Kemmannu News Network, 16-10-2018 21:17:28
ಮಗುವಿನ ಪೋಷಕತ್ವ ಯೋಜನೆ
ಉಡುಪಿ ಅಕ್ಟೋಬರ್ 15 (ಕರ್ನಾಟಕ ವಾರ್ತೆ):- ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 44 ರ ಅನ್ವಯ ಮಕ್ಕಳನ್ನು ಪೋಷಕತ್ವ ಯೋಜನೆಯಡಿಯಲ್ಲಿ ಪಾಲನೆ ಹಾಗೂ ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಮಗುವಿಗೆ ಸಂಬಂಧವಿಲ್ಲದ ಕುಟುಂಬಕ್ಕೆ ತಾತ್ಕಾಲಿಕವಾಗಿ ಅಥವಾ ವಿಸ್ತರಿಸಲ್ಪಟ್ಟ ಒಂದು ವರ್ಷದ ಅವಧಿಗೆ ಮೀರದಂತೆ ಮಗುವನ್ನು ಪೋಷಕತ್ವ ಯೋಜನೆಯಡಿಯಲ್ಲಿ ನಿಯೋಜನೆ ಮಾಡಬಹುದಾಗಿದೆ. ಮಗು ಹಾಗೂ ಕುಟುಂಬದ ಹೊಂದಾಣಿಕೆಯ ಆಧಾರದ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿಯು ಮಗುವನ್ನು 18 ವರ್ಷದ ವಯಸ್ಸಿನವರೆಗೂ ಪೋಷಕತ್ವವನ್ನು ಮುಂದುವರೆಸಲು ಅವಕಾಶ ಕಲ್ಪಿಸುತ್ತದೆ.
ಪ್ರತಿಯೊಂದು ಮಗುವಿಗೂ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಹಕ್ಕಿರುತ್ತದೆ ಆದರೆ ಕಾರಣಾಂತರಗಳಿಂದ ಕೆಲವು ಮಕ್ಕಳನ್ನು ಸರ್ಕಾರಿ, ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮಗುವನ್ನು ಮಗುವಿನ ಸ್ವಂತ ಕುಟುಂಬದಲ್ಲಿ ಇರಿಸಲು ಸಾಧ್ಯವಾಗದಿದ್ದಾಗ ಅಂತಹ ಮಕ್ಕಳಿಗೆ ಪೋಷಕತ್ವ ಯೋಜನೆಯಡಿ ಯಲ್ಲಿ ಇತರೆ ಕುಟುಂಬದಲ್ಲಿ ಬೆಳೆಯಲು ಮಗುವಿನ ಹಿತದೃಷ್ಟಿಯಿಂದ ಮಕ್ಕಳ ಕಲ್ಯಾಣ ಸಮಿತಿಯು ತೀರ್ಮಾನವನ್ನು ತೆಗೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ 6 ರಿಂದ 18 ವರ್ಷದ ಒಳಗಿನ ವಿವಿಧ ರೀತಿಯ ಸಂಕಷ್ಟಕ್ಕೊಳಗಾಗಿ ಉಡುಪಿ ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳನ್ನು ಪೋಷಕತ್ವ ಯೋಜನೆಯಡಿಯಲ್ಲಿ ನೋಡಿಕೊಳ್ಳಲು ಆಸಕ್ತಿಯಿರುವ ಪೋಷಕರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ, ಉಡುಪಿ, ದೂ.ಸಂಖ್ಯೆ: 0820-2574964 ಕ್ಕೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ , ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಗಾಂಧಿ-150 ಅಭಿಯಾನಕ್ಕೆ ಉಡುಪಿಯಲ್ಲಿ ಸ್ವಾಗತ
ಉಡುಪಿ ಅಕ್ಟೋಬರ್ 16 (ಕರ್ನಾಟಕ ವಾರ್ತೆ):-ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ 150 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಅಭಿಯಾನ-150 ಜಾಥಾ ಮಂಗಳವಾರ ಉಡುಪಿಗೆ ಆಗಮಿಸಿತು.
ಜಿಲ್ಲಾಡಳಿತದ ಪರವಾಗಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರು ಅಭಿಯಾನವನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಾಂಧೀಜಿಯವರ ಸಂದೇಶಗಳು ಸರ್ವಕಾಲಕ್ಕೂ ಸಲ್ಲುವಂತದ್ದಾಗಿದೆ. ಈ ನಿಟ್ಟಿನಲ್ಲಿ ಇದನ್ನು ನಿರಂತರವಾಗಿ ಪಾಲಿಸುತ್ತಾ ಬರಬೇಕು. ವಾರ್ತಾ ಇಲಾಖೆಯು ಗಾಂಧೀ 150 ನೇ ಜಯಂತಿ ಪ್ರಯುಕ್ತ ಅಭಿಯಾನ ಏರ್ಪಡಿಸಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗಾಂಧೀ ಅಭಿಯಾನ ರಥಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ ಉಪಸ್ಥಿತರಿದ್ದರು.
ಗಾಂಧೀಜಿಯವರ ಸಂದೇಶಗಳನ್ನು ಸಾರುವ ಸ್ಥಬ್ದಚಿತ್ರ ಹಾಗೂ ಗಾಂಧೀಜಿಯವರ ಪ್ರಿಯವಾದ ಭಜನೆ, ಸಂಗೀತಗಳನ್ನು ಸಾರುತ್ತಾ ಈ ಅಭಿಯಾನ ಸಂಚರಿಸಲಿದೆ. ಬುಧವಾರ ಬ್ರಹ್ಮಾವರ, ಕುಂದಾಪುರಕ್ಕೆ ಗಾಂಧೀ-150 ಅಭಿಯಾನ ಆಗಮಿಸಲಿದೆ.
ನವರಾತ್ರಿಯ ಆಯುಧ ಪೂಜೆಯ ಪ್ರಯುಕ್ತ ವಾಹನಪೂಜೆ
ಉಡುಪಿ ಅಕ್ಟೋಬರ್ 16 (ಕರ್ನಾಟಕ ವಾರ್ತೆ):-ಉಡುಪಿ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ, ಸಾರಥಿ ಭವನ, ಅಜ್ಜರಕಾಡು, ಉಡುಪಿ ಇವರ ವತಿಯಿಂದ ಎಲ್ಲಾ ಸರಕಾರಿ ವಾಹನಗಳಿಗೆ ಅಕ್ಟೋಬರ್ 18 ರಂದು ಬೆಳಗ್ಗೆ 10 ಗಂಟೆಗೆ ನವರಾತ್ರಿಯ ಆಯುಧ ಪೂಜೆಯ ಪ್ರಯುಕ್ತ ವಾಹನ ಪೂಜೆ ನಡೆಸಲಾಗುವುದು.
ಸಂಘದ ಸದಸ್ಯರು ಹಾಗೂ ಎಲ್ಲಾ ಸರಕಾರಿ ವಾಹನ ಚಾಲಕರು ಪೂಜೆಗೆ ಹಾಜರಿರುವಂತೆ ಉಡುಪಿ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ, ಉಡುಪಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಉಡುಪಿ ಅಕ್ಟೋಬರ್ 16 (ಕರ್ನಾಟಕ ವಾರ್ತೆ):- 2014, 2015 ಮತ್ತು 2016 ನೇ ಸಾಲಿನ ಓಒಒS ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ತಾವು ವ್ಯಾಸಾಂಗ ಮಾಡುತ್ತಿರುವ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಆನ್ಲೈನ್ ಮೂಲಕ ವಿದ್ಯಾರ್ಥಿವೇತನಕ್ಕಾಗಿ ತಮ್ಮ ವಿವರಗಳನ್ನು ನವೀಕರಿಸಿ ಶಾಲೆಗೆ ಸಲ್ಲಿಸುವುದು. 2017 ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹೊಸದಾಗಿ ದಾಖಲಿಸಿ, ವಿವರಗಳನ್ನು ನಮೂದಿಸಿ ಸಂಸ್ಥೆಯ ಮುಖ್ಯಸ್ಥರಿಗೆ ಸಲ್ಲಿಸುವುದು. ಮುಖ್ಯಸ್ಥರು ಪರಿಶೀಲಿಸಿ ಮುಂದಿನ ಹಂತಕ್ಕೆ ಸಲ್ಲಿಸಲು ಸೂಚಿಸಿದೆ. ಸಂಸ್ಥೆಯ ಮುಖ್ಯಸ್ಥರು ಈ ಬಗ್ಗೆ ತಮ್ಮ ಸಂಸ್ಥೆಗಳಲ್ಲಿ ಈ ಹಿಂದೆ ಓಒಒS ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕ್ರಮ ವಹಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 31.
ಈ ವರ್ಷದ ಓಒಒS ಮತ್ತು ಓಖಿSಇ ಪರೀಕ್ಷೆಯು ನವೆಂಬರ್ 4 ರಂದು ಎಲ್ಲಾ ವಲಯಗಳಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನೋಡೆಲ್ ಅಧಿಕಾರಿ, ಉಡುಪಿ ಡಯಟ್ ಉಪನ್ಯಾಸಕ ಚಂದ್ರನಾಯ್ಕ್ ಮೊ.ನಂ. 9380241292 ಇವರನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಡಯಟ್ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಜಿಲ್ಲೆಯ 4 ಜನ ಸ್ಕೌಟ್ಸ್ ಗೈಡ್ಸ್ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ
ಉಡುಪಿ ಅಕ್ಟೋಬರ್ 16 (ಕರ್ನಾಟಕ ವಾರ್ತೆ):- ಭಾರತ್ ಸ್ಕೌಟ್ಸ್ ಗೈಡ್ಸ್ ಚಳುವಳಿಯಲ್ಲಿ ಸುದೀರ್ಘವಾಗಿ ಅವಿಸ್ಮರಣಿಯ ಸೇವೆ ಸಲ್ಲಿಸಿದ ಉಡುಪಿ ಜಿಲ್ಲೆಯ 4 ಜನ ಶಿಕ್ಷಕರಿಗೆ ಇತ್ತೀಚಿಗೆ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ ದಿ.|ವಿ.ಪಿ ದೀನಾ ದಯಾಳು ನಾಯ್ಡು ಇವರ ಜನ್ಮ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತಯರಾದ ಪಿ.ಜಿ.ಅರ್ ಸಿಂದ್ಯಾ ಇವರು ಸನ್ಮಾನ ಪತ್ರ ಹಾಗೂ ಬೆಳ್ಳಿ ಪದಕ ನೀಡಿ ಗೌರವಿಸಿದರು.
ಕುಂದಾಪುರ ಸ್ಕೌಟ್ಸ್ ಮಾಸ್ಟರ್ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಸುಬ್ರಮಣ್ಯ ಎಸ್., ಕುಕ್ಕಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯಶೋಧ ಹೆಗ್ಡೆ, ಉಡುಪಿ ಕಬ್ ಮಾಸ್ಟರ್ ಸಿಲಾಸ್ ಇಂಟರ್ ನ್ಯಾಶನಲ್ ಸ್ಕೂಲ್ನ ಶ್ರೀಪಾದ್ ನಾಯಕ್, ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲೆ ಬುಲ್ ಬುಲ್ ಶಿಕ್ಷಕಿ ವೀಣಾ ಬಾಯಿ ಸನ್ಮಾನಿತರಾದರು.
ಇವರ ಸಾಧನೆಗೆ ಜಿಲ್ಲಾ ಆಯುಕ್ತೆ ಶಾಂತಾ ವಿ ಆಚಾರ್ಯ ಸೇರಿದಂತೆ ಎಲ್ಲಾ ಜಿಲ್ಲಾ ಪಧಾದಿಕಾರಿಗಳು ಆಭಿನಂದಿಸಿದ್ದಾರೆ.
ಹಿರಿಯಡಕ: ದಿಕ್ಸೂಚಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಕ್ರಮ
ಉಡುಪಿ ಅಕ್ಟೋಬರ್ 16 (ಕರ್ನಾಟಕ ವಾರ್ತೆ):- ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ, ಐಕ್ಯುಎಸಿ ಘಟಕ ಹಾಗೂ ಉದ್ಯೋಗ ಮಾಹಿತಿ ಘಟಕ ಸಹಯೋಗದೊಂದಿಗೆ ಅಕ್ಟೋಬರ್ 12 ರಂದು ದಿಕ್ಸೂಚಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ವಜ್ಞ ಐ.ಎ.ಎಸ್. ಅಕಾಡೆಮಿ, ಮಂಗಳೂರು ಇದರ ನಿರ್ದೇಶಕ ಸುರೇಶ್ ಎಂ.ಎಸ್., ಇವರು ನೆರವೇರಿಸಿದರು. ಸತತ ಪ್ರಯತ್ನ ಹಾಗೂ ಪರೀಕ್ಷಾ ಕೌಶಲ್ಯಗಳ ಅಂತರಂಗೀಕರಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಎದುರಿಸಲು ಸಾಧ್ಯವೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ನಿಕೇತನ ಇವರು ಶಿಕ್ಷಕರೇ ಕಾಲೇಜಿನ ಸಂಪನ್ಮೂಲಗಳು. ಪ್ರತಿ ಬೋಧಕರಲ್ಲಿರುವ ವಿಷಯ ಜ್ಞಾನ ಕೌಶಲ್ಯವನ್ನು ಬಳಸಿ ಈ ಸ್ಪರ್ಧಾತ್ಮಕ ಪರೀಕ್ಷಾ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು. ವಿದ್ಯಾರ್ಥಿಗಳು ತಮ್ಮ ಏಳಿಗೆಗಾಗಿ ಈ ವಿಶಿಷ್ಟ ಕಾರ್ಯಕ್ರಮದ ಸದ್ಬಳಕೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದರು.
ಬಿ.ಐಕ್ಯುಎಸಿ ಸಂಚಾಲಕಿ ಸುಮನಾ ಸ್ವಾಗತಿಸಿ ಕಾರ್ಯಕ್ರಮದ ಕುರಿತಂತೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಥಮ ಎಂ.ಕಾಂ. ವಿದ್ಯಾರ್ಥಿನಿ ವಿಜಯಶ್ರೀ ಪೈ, ಧನ್ಯವಾದ ಅರ್ಪಿಸಿದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕರು ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಿನೇಶ್ ಎಂ., ಇವರು ಉಪಸ್ಥಿತರಿದ್ದರು.
ಕಾಣೆಯಾದವರ ಕುರಿತು
ಉಡುಪಿ ಅಕ್ಟೋಬರ್ 16 (ಕರ್ನಾಟಕ ವಾರ್ತೆ):- ಮೊಹಮ್ಮದ್ ಸುಹೈಲ್ ಬೆಲ್ಲಿ (39 ವರ್ಷ) ಎಂಬುವವರು ಅಕ್ಟೋಬರ್ 6 ರಂದು, ದುಬೈನಿಂದ ಕಾಣೆಯಾಗಿದ್ದು, 170 ಸೆಂ.ಮೀ. ಎತ್ತರವಿದ್ದು, ಗೋಧಿ ಮೈಬಣ್ಣ , ಕನ್ನಡ, ಹಿಂದಿ, ಇಂಗ್ಲೀಷ್, ಉರ್ದು ಭಾಷೆ ಬಲ್ಲವರಾಗಿದ್ದು, ಇವರ ಪತ್ತೆಯಾದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Maundy Thursday 2024 | LIVE From St. Theresa’s Church, Kemmannu | Udupi |
2 BHK Flat for sale on the 6th floor of Eden Heritage, Santhekatte, Kallianpur, Udupi
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, Kemmannu
Annual Church Feast 2024 | St. Theresa’s Church, Kemmannu
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link