Brief Udupi news with pictures
Kemmannu News Network, 21-11-2018 11:33:01
ನ.20: ಈದ್ ಮಿಲಾದ್ ರಜೆ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ನವೆಂಬರ್ 20 ರಂದು ಆಚರಿಸುವುದಾಗಿ ರಾಜ್ಯ ವಕ್ಫ್ ಮಂಡಳಿಯು ಸಹ ತನ್ನ ಅಭಿಪ್ರಾಯವನ್ನು ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗಳಿಗೆ ಅನ್ವಯಿಸುವಂತೆ ನವೆಂಬರ್ 21 ರಂದು ಘೋಷಿಸಿರುವ ಸಾರ್ವತ್ರಿಕ ರಜೆಯನ್ನು ಹಿಂಪಡೆಯಲಾಗಿದೆ ಹಾಗೂ ಜಿಲ್ಲೆಯಲ್ಲಿ ನವೆಂಬರ್ 20 ರಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯೆಂದು ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
22ರಿಂದ ಜಿಲ್ಲೆಯಾದ್ಯಂತ ‘ಪಾಪು ಗಾಂಧಿ-ಗಾಂಧಿ ಬಾಪು’ ನಾಟಕ ಪ್ರದರ್ಶನ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ): ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯಾದ್ಯಂತ ‘ಪಾಪು ಗಾಂಧಿ-ಗಾಂಧಿ ಬಾಪು’ ಎಂಬ ನಾಟಕ ಪ್ರದರ್ಶನ ನಡೆಯಲಿದ್ದು, ಉಡುಪಿ ಜಿಲ್ಲೆಯಲ್ಲಿ ನ.22 ರಿಂದ ಪ್ರಾರಂಭವಾಗಲಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಕಟಿಸಿದಂತೆ, ಗಾಂಧೀ ಸಂದೇಶವನ್ನು ಸಾರಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮಹಾತ್ಮಾ ಗಾಂಧೀಜಿಯವರ ಜೀವನಚರಿತ್ರೆ ಹಾಗೂ ಹೋರಾಟ ಸಂದೇಶವನ್ನೊಳಗೊಂಡ ಈ ನಾಟಕವನ್ನು ರಂಗಾಯಣ, ನೀನಾಸಂ ಮತ್ತಿತರ ರಾಜ್ಯದ ಖ್ಯಾತ ರಂಗಶಾಲೆಗಳಲ್ಲಿ ತರಭೇತಿ ಪಡೆದ ವೃತ್ತಿ ಕಲಾವಿದರು ನಡೆಸಿಕೊಡಲಿದ್ದಾರೆ.
ಈ ಕುರಿತು ಪೂರ್ವಭಾವಿ ಸಭೆ ಸೋಮವಾರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿಉಪ ಕಾರ್ಯದರ್ಶಿ ಅವರು ಮಾತನಾಡಿ ಇದೊಂದು ರಾಜ್ಯ ಸರಕಾರದ ಮಹತ್ವದ ಸಾಂಸ್ಕøತಿಕ ಕಾರ್ಯಕ್ರಮವಾಗಿದ್ದು, ಜಿಲ್ಲೆಯ ಪ್ರಮುಖ ಶಾಲಾ ಕಾಲೇಜುಗಳಲ್ಲಿ, ವಿದ್ಯಾರ್ಥಿನಿಲಯಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯಲಿದೆ. ಎಲ್ಲಾ ಇಲಾಖೆಗಳು ಇದರ ಯಶಸ್ವಿಗೆ ಸಹಕರಿಸಬೇಕು. ಸ್ಥಳೀಯವಾಗಿ ಸಾಂಸ್ಕøತಿಕ ಹಾಗೂ ಯುವ ಸಂಘಟನೆಗಳನ್ನು ಕಾರ್ಯಕ್ರಮಕ್ಕೆ ಸಹಕಾರ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಮಾತನಾಡಿ, ನ.21ರಿಂದ ಡಿಸೆಂಬರ್ 8ರವೆರೆಗ ಉಡುಪಿ ಜಿಲ್ಲೆಯಲ್ಲಿ ‘ಪಾಪು ಗಾಂಧಿ-ಗಾಂಧಿ ಬಾಪು’ ನಾಟಕ ಪ್ರದರ್ಶನ ನಡೆಯಲಿದೆ.ಪ್ರತೀ ದಿನ ಎರಡು ಪ್ರದರ್ಶನ ನಡೆಯಲಿದೆ. ಪ್ರಮುಖವಾಗಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮದ ಕಲಾವಿದರಿಗೆ ಈಗಾಗಲೇ ರಾಜ್ಯ ಮಟ್ಟದಲ್ಲಿ ತರಭೇತಿ ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಸುಬ್ರಹ್ಮಣ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪೂರ್ಣಿಮಾ, ನಾಟಕ ಪ್ರದರ್ಶನದ ಸಂಘಟಕ ಪ್ರಥ್ವಿನ್ ಉಪಸ್ಥಿತರಿದ್ದರು.
ನಾಟಕ ಪ್ರದರ್ಶನದ ವಿವರ:
ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಪ್ರವಾಸ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ನವೆಂಬರ್ 19, 20 ಮತ್ತು 21 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನವೆಂಬರ್ 19 ರಂದು ರಾತ್ರಿ 10.50 ಕ್ಕೆ ಉಡುಪಿಗೆ ಆಗಮಿಸಿ, ಸಕ್ರ್ಯೂಟ್ ಹೌಸ್, ಉಡುಪಿಯಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 20 ರಂದು ಬೆಳಗ್ಗೆ 10 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ, ಉಡುಪಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ಉಡುಪಿಯಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 21 ರಂದು ಬೆಳಗ್ಗೆ 10 ಕ್ಕೆ ಉಡುಪಿ ಜಿಲ್ಲಾಸ್ಪತ್ರೆ ಪಕ್ಕದ ಜಿಲ್ಲಾ ಆಯುಷ್ ಆಸ್ಪತ್ರೆಯ ಉದ್ಘಾಟನೆಯಲ್ಲಿ ಭಾಗವಹಿಸಿವರು. 10.30 ಕ್ಕೆ ಜಿಲ್ಲಾಸ್ಪತ್ರೆ ಉಡುಪಿಯಲ್ಲಿ ಸಿಟಿಸ್ಕ್ಯಾನ್ ಉದ್ಘಾಟನೆ, ಶವಾಗಾರ ಲೋಕಾರ್ಪಣೆ ಮತ್ತು ಕಣ್ಣಿನ ಶಸ್ತ್ರ ಚಿಕಿತ್ಸಾ ಕೊಠಡಿಯ ಶಂಕುಸ್ಥಾಪನೆಯಲ್ಲಿ ಭಾಗವಹಿಸಿ, 11.30 ಕ್ಕೆ ಕುಂದಾಪುರ ಶಾಸ್ತ್ರೀ ಸರ್ಕಲ್ನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, ಮಧ್ಯಾಹ್ನ 12 ಕ್ಕೆ ಕುಂದಾಪುರದ ಜೂನಿಯರ್ ಕಾಲೇಜಿನ ಲಕ್ಷ್ಮೀ ನಾರಾಯಣ ಕಲಾಮಂದಿರದಲ್ಲಿ ಕುಂದಾಪುರ ಕ್ಷೇತ್ರದ ಫಲಾನುಭವಿಗಳಿಗೆ ಸವಲತ್ತು ವಿತರಣೆ, 3 ಕ್ಕೆ ಕಾರ್ಕಳದ ಬಂಡೀಮಠದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 3.30 ಕ್ಕೆ ಕಾರ್ಕಳ ತಾಲೂಕು ಪಂಚಾಯತ್ ಸಭಾಭವನದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಸಂಜೆ 4.30 ಕ್ಕೆ ಕಾರ್ಕಳದ ಕುಕ್ಕಂದೂರಿನಲ್ಲಿ ಎ.ಎನ್.ಎಂ. ಉಪಕೇಂದ್ರದ ಉದ್ಘಾಟನೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳುವರು.
ಪಿಂಚಣಿ ಹಾಗೂ ಕಂದಾಯ ಅದಾಲತ್
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ಈ ಕೆಳಕಂಡ ದಿನಾಂಕಗಳಂದು ತಾಲೂಕು ವ್ಯಾಪ್ತಿಯಲ್ಲಿ ಪಿಂಚಣಿ ಅದಾಲತ್ ಮತ್ತು ಕಂದಾಯ ಅದಾಲತ್ ನಡೆಸಲಾಗುವುದು. ಸದ್ರಿ ಅದಾಲತ್ಗೆ ತಮ್ಮ ತಾಲೂಕು ವ್ಯಾಪ್ತಿಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಜರಾಗಲು ಸೂಚಿಸಲಾಗಿದೆ.
ನವೆಂಬರ್ 20 ರಂದು ಕುಂದಾಪುರ ತಾಲೂಕಿನಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆಯ ವರೆಗೆ ಪಿಂಚಣಿ ಅದಾಲತ್ ಮತ್ತು 4 ರಿಂದ 5.30 ರ ವರೆಗೆ ಕಂದಾಯ ಅದಾಲತ್ ನಡೆಯಲಿದೆ.
ನವೆಂಬರ್ 22 ರಂದು ಬ್ರಹ್ಮಾವರ ತಾಲೂಕಿನಲ್ಲಿ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಪಿಂಚಣಿ ಅದಾಲತ್ ಮತ್ತು 11.30 ರಿಂದ ಮಧ್ಯಾಹ್ನ 1.30 ರ ವರೆಗೆ ಕಂದಾಯ ಅದಾಲತ್ ನಡೆಯಲಿದೆ.
ನವೆಂಬರ್ 23 ರಂದು ಕಾಪು ತಾಲೂಕಿನಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆಯ ವರೆಗೆ ಪಿಂಚಣಿ ಅದಾಲತ್ ಮತ್ತು 4 ರಿಂದ 5.30 ರ ವರೆಗೆ ಕಂದಾಯ ಅದಾಲತ್ ನಡೆಯಲಿದೆ.
ನವೆಂಬರ್ 27 ರಂದು ಬೈಂದೂರು ತಾಲೂಕಿನಲ್ಲಿ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಪಿಂಚಣಿ ಅದಾಲತ್ ಮತ್ತು 11.30 ರಿಂದ ಮಧ್ಯಾಹ್ನ 1.30 ರ ವರೆಗೆ ಕಂದಾಯ ಅದಾಲತ್ ನಡೆಯಲಿದೆ. ವಂಡ್ಸೆ ಹೋಬಳಿಯಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆಯ ವರೆಗೆ ಪಿಂಚಣಿ ಅದಾಲತ್ ಮತ್ತು 4 ರಿಂದ 5.30 ರ ವರೆಗೆ ಕಂದಾಯ ಅದಾಲತ್ ನಡೆಯಲಿದೆ.
ನವೆಂಬರ್ 28 ರಂದು ಅಜೆಕಾರುವಿನಲ್ಲಿ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಪಿಂಚಣಿ ಅದಾಲತ್ ಮತ್ತು 11.30 ರಿಂದ ಮಧ್ಯಾಹ್ನ 1.30 ರ ವರೆಗೆ ಕಂದಾಯ ಅದಾಲತ್ ನಡೆಯಲಿದೆ. ಕಾರ್ಕಳ ತಾಲೂಕಿನಲ್ಲಿ ಮಧ್ಯಾಹ್ನ 3.30 ರಿಂದ 4.30 ಗಂಟೆಯ ವರೆಗೆ ಪಿಂಚಣಿ ಅದಾಲತ್ ಮತ್ತು 4.30 ರಿಂದ 5.30 ರ ವರೆಗೆ ಕಂದಾಯ ಅದಾಲತ್ ನಡೆಯಲಿದೆ.
ನವೆಂಬರ್ 29 ರಂದು ಉಡುಪಿ ತಾಲೂಕಿನಲ್ಲಿ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಪಿಂಚಣಿ ಅದಾಲತ್ ಮತ್ತು 11.30 ರಿಂದ ಮಧ್ಯಾಹ್ನ 1.30 ರ ವರೆಗೆ ಕಂದಾಯ ಅದಾಲತ್ ನಡೆಯಲಿದೆ.
ನವೆಂಬರ್ 30 ರಂದು ಕೋಟದಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆಯ ವರೆಗೆ ಪಿಂಚಣಿ ಅದಾಲತ್ ಮತ್ತು 4 ರಿಂದ 5.30 ರ ವರೆಗೆ ಕಂದಾಯ ಅದಾಲತ್ ನಡೆಯಲಿದೆ ಎಂದು ಕುಂದಾಪುರ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ:ಜಿಲ್ಲಾ ಬಾಲಭವನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಜಿಲ್ಲಾ ಬಾಲಭವನ, ಉಡುಪಿ ಇಲ್ಲಿ ನವೆಂಬರ್ 24 ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಂದ, 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರಕಲೆ, ಕನ್ನಡಗೀತೆ, ರಂಗೋಲಿ ಮತ್ತು ವೇಷಭೂಷಣ ಸ್ಪಧೆಗಳನ್ನು ಏರ್ಪಡಿಸಲಾಗಿದೆ.
6 ರಿಂದ 8 ವರ್ಷ, 9 ರಿಂದ 12 ವರ್ಷ ಮತ್ತು 13 ರಿಂದ 16 ವರ್ಷದ ಮಕ್ಕಳಿಗೆ ಚಿತ್ರಕಲೆ, ಕನ್ನಡಗೀತೆ, ರಂಗೋಲಿ ಮತ್ತು ವೇಷಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ, ದೂರವಾಣಿ ಸಂಖ್ಯೆ; 2574978 ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಖಾದಿ ಮಂಡಳಿಯಿಂದ ಸಾಲ ಪಡೆದ ಬಿ.ಪಿ.ಎಲ್. ಕುಟುಂಬಗಳ ಮಾಹಿತಿ ಸಮೀಕ್ಷೆ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಖಾದಿ ಮಂಡಳಿಯಿಂದ ಸಾಲ ಪಡೆದಿರುವ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಫಾಲಾನುಭವಿಗಳ ಕುಟುಂಬಗಳ ಮಾಹಿತಿಯ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. 2018-19 ನೇ ಸಾಲಿನ ಆಯವ್ಯಯ ಭಾಷಣ ಖಂಡಿಕೆ 181 ರಲ್ಲಿ ರಾಜ್ಯ ಸರ್ಕಾರದ ಸಂಸ್ಥೆಯಾದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮೂಲಕ ಧನಸಹಾಯ ಸ್ವರೂಪ ಯೋಜನೆ(ಪಿ.ಬಿ.ಎಸ್) ಮತ್ತು ಸಮೂಹ ಬ್ಯಾಂಕ್ ಯೋಜನೆ (ಸಿ.ಬಿ.ಸಿ) ಯಡಿ ಸಾಲ ಪಡೆದಿರುವ ಎಲ್ಲಾ ಬಿ.ಪಿ.ಎಲ್. ಕಾರ್ಡ್ ಕುಟುಂಬಗಳು ಮರುಪಾವತಿಗಾಗಿ ಬಾಕಿ ಇರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂಬ ಘೋಷಣೆಯಡಿ ಮಂಡಳಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಮೇರೆಗೆ ಈ ಯೋಜನೆಯನ್ನು ಜಾರಿಗೆ ತರಲು ಮಂಡಳಿಯಿಂದ ಎರಡು ಯೋಜನೆಯಡಿ ಮತ್ತು ತಾಲೂಕು ಮಟ್ಟದ ವಿವಿದ್ದೋದ್ದೇಶ ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯವನ್ನು ಪಡೆದಿರುವ, ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಫಲಾನುಭವಿಗಳ ಕುಟುಂಬಗಳ ವಿವರವನ್ನು ಸಮೀಕ್ಷೆ ಮಾಡುವ ಅವಧಿಯನ್ನು ನವೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ.
ಖಾದಿ ಮಂಡಳಿ ಮೂಲಕ ಧನಸಹಾಯ ಸ್ವರೂಪ (ಪಿ.ಬಿ.ಎಸ್) ಮತ್ತು ಸಮೂಹ ಬ್ಯಾಂಕ್ ಯೋಜನೆ(ಸಿ.ಬಿ.ಸಿ) ಯಡಿ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾ ಕಚೇರಿ(0820-2574855) ಅನ್ನು ಸಂಪರ್ಕಿಸಿ, ದಾಖಲಾತಿಗಳನ್ನು ಒದಗಿಸುವಂತೆ ಉಡುಪಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ.ಪಿ.ಎಲ್. ಪಡಿತರ ಚೀಟಿ ಅರ್ಜಿಗಳ ವಿಲೇವಾರಿ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) :ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ಜನವರಿ 2017 ರಿಂದ 2018 ಏಪ್ರಿಲ್ವರೆಗೆ ಹೊಸ ಬಿ.ಪಿ.ಎಲ್. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರು ಅರ್ಜಿ ಸ್ವೀಕೃತಿ, ಕುಟುಂಬ ಸದಸ್ಯರೊಬ್ಬರ ಜಾತಿ ಮತ್ತು ಆದಾಯ ಧೃಡಪತ್ರ ಹಾಗೂ ಆಧಾರ್ ಕಾರ್ಡ್, ಮನೆ ತೆರಿಗೆ ರಸೀತಿ, ಬಾಡಿಗೆ ಮನೆಯಾಗಿದ್ದಲ್ಲಿ ಬಾಡಿಗೆ ಕರಾರು ಪತ್ರದ ಪ್ರತಿಗಳನ್ನು ಉಡುಪಿ, ಕಾಪು ನಗರ ಪ್ರದೇಶ ಮತ್ತು ಉಡುಪಿ, ಬ್ರಹ್ಮಾವರ ಗ್ರಾಮಾಂತರ ಪ್ರದೇಶದವರು ತಮ್ಮ ವ್ಯಾಪ್ತಿಯ ಗ್ರಾಮ ಕರಣಿಕರ ಕಚೇರಿಗೆ ಸಲ್ಲಿಸುವಂತೆ, ಉಡುಪಿ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಯು ಪಡೆ ನೇಮಕಾತಿ ರ್ಯಾಲಿ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಭಾರತೀಯ ವಾಯುಪಡೆಯು ಗ್ರೂಪ್ ವೈ(ಐಎಎಫ್(ಎಸ್)) ಟ್ರೇಡ್ನಲ್ಲಿ ಏರ್ಮೆನ್ರನ್ನು ಆಯ್ಕೆ ಮಾಡುವುದಕ್ಕೆ ಸಂಬಂಧಿಸಿದಂತೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್ಬಾದ್, ಮೈಸೂರು(ಕರ್ನಾಟಕ), ಇಲ್ಲಿ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.
ಡಿಸೆಂಬರ್ 5 ರಂದು ದೇಹದಾಢ್ಯತೆ, ಲಿಖಿತ ಪರೀಕ್ಷೆ(ಎಟಿ-I, ಏಟಿ-II, ಡಿಎಫ್ಟಿ ಮತ್ತು ಡಿಸೆಂಬರ್ 6 ರಂದು ಅರ್ಜಿಗಳ ಭರ್ತಿಯು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಧಾರವಾಡ ಮತ್ತು ಉತ್ತರ ಕನ್ನಡ(ಕಾರವಾರ) ಜಿಲ್ಲೆಯಲ್ಲಿ ನಡೆಯಲಿದೆ.
ಡಿಸೆಂಬರ್ 7 ರಂದು ದೇಹದಾಢ್ಯತೆ, ಲಿಖಿತ ಪರೀಕ್ಷೆ(ಎಟಿ-I, ಏಟಿ-II, ಡಿಎಫ್ಟಿ ಮತ್ತು ಡಿಸೆಂಬರ್ 8 ರಂದು ಅರ್ಜಿಗಳ ಭರ್ತಿಯು ಬೆಂಗಳೂರು, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಡಿಕೇರಿ, ದಕ್ಷಿಣ ಕನ್ನಡ(ಮಂಗಳೂರು), ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಗದಗ, ಕೊಪ್ಪಳ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಯಲಿದೆ.
ಡಿಸೆಂಬರ್ 5 ಮತ್ತು 7 ರಂದು ನಡೆಯುವ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂಥ ಅಭ್ಯರ್ಥಿಗಳು ನಂತರದ ದಿನದಂದು ಉಳಿದ ಆಯ್ಕೆ ಪ್ರಕ್ರಿಯೆಗಾಗಿ ನಡೆಯುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕಾಗಿರುತ್ತದೆ.
ಕರ್ನಾಟಕ ರಾಜ್ಯಕ್ಕೆ ಸೇರಿದ ಭಾರತೀಯ ನಾಗರಿಕರು ಅಥವಾ ಕರ್ನಾಟಕ ರಾಜ್ಯದಲ್ಲಿ ಪಿ.ಯು.ಸಿ/ 10+2/ ಇಂಟರ್ಮೀಡಿಯೇಟ್ ಪೂರ್ಣಗೊಳಿಸಿರುವಂಥ ಅವಿವಾಹಿತ ಪುರುಷರು ಮಾತ್ರ ಅರ್ಹರಾಗಿರುತ್ತಾರೆ. ಅಭ್ಯರ್ಥಿಯು ಜುಲೈ 14, 1998 ರಿಂದ 26 ನೇ ಜೂನ್ 2002 ರ ನಡುವೆ ಜನಿಸಿರಬೇಕು. ಕನಿಷ್ಟ 152.5 ಸೆಂ.ಮೀ. ಎತ್ತರವಿರಬೇಕು.
ವಿದ್ಯಾರ್ಹತೆ: ಪಿ.ಯು.ಸಿ/ 10+2/ ಇಂಟರ್ಮೀಡಿಯೇಟ್/ ಮಾಧ್ಯಮಿಕ ಶಿಕ್ಷಣ ಮಂಡಳಿಗಳ ಸಮಿತಿಯು ಅನುಮೋದಿಸಿರುವ ಸಮಾನ ಪರೀಕ್ಷೆಯನ್ನು ಯಾವುದೇ ವಿಭಾಗ/ ವಿಷಯಗಳಲ್ಲಿ ಸರಾಸರಿ ಕನಿಷ್ಟ ಶೇ. 50 ರಷ್ಟು ಅಂಕಗಳು ಮತ್ತು ಇಂಗ್ಲೀಷ್ನಲ್ಲಿ ಕನಿಷ್ಟ ಶೇ. 50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಅರ್ಹ ಅಭ್ಯರ್ಥಿಗಳು ಡಿಸೆಂಬರ್ 5 ಮತ್ತು 7 ರಮದು 9 ಗಂಟೆಗೆ ಮೊದಲು, ಅಂಕ ಪಟ್ಟಿಯ ಮೂಲ ಪ್ರತಿ ಮತ್ತು ಮೆಟ್ರಿಕ್ಯಲೇಷನ್, ಇಂಟರ್ಮೀಡಿಯೇಟ್(10+2/ 11 ನೇ ಪಿ.ಯು.ಸಿ) ಉತ್ತೀರ್ಣ ಪ್ರಮಾಣ ಪತ್ರ ಮತ್ತು ಎಲ್ಲ ಪ್ರಮಾಣಪತ್ರಗಳ ಸ್ವಯಂ ಧೃಢೀಕೃತ 4 ನಕಲು ಪ್ರತಿಗಳು, ವಾಸಸ್ಥಳದ ಪ್ರಮಾಣ ಪತ್ರ( ಬೇರೆ ಕಡೆ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳಿಗೆ) ಮತ್ತು 8 ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಬಣ್ಣದ ಭಾವಚಿತ್ರಗಳೊಂದಿಗೆ ರ್ಯಾಲಿ ಸ್ಥಳದಲ್ಲಿ ವರದಿ ಮಾಡಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಾಯುಪಡೆಯ ಜಾಲತಾಣವಾದ ತಿತಿತಿ.ಚಿiಡಿmeಟಿseಟeಛಿಣioಟಿ.ಛಿಜಚಿಛಿ.iಟಿ ಗೆ ಲಾಗ್ ಆನ್ ಆಗಿ ಮಾಡುವುದು ಅಥವಾ 7 ಏರ್ಮೆನ್ ಆಯ್ಕೆ ಕೇಂದ್ರ, ಕಬ್ಬನ್ ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ; 080-25592199, ಇ- ಮೇಲ್ ಛಿo.7ಚಿsಛಿ-ಞಚಿ@gov.iಟಿ ಅನ್ನು ಸಂಪರ್ಕಿಸಬಹುದಾಗಿದೆ. ಅಭ್ಯರ್ಥಿಗಳು ಹತ್ತಿರದ ಜಿಲ್ಲಾ ಉದ್ಯೋಗ ಅಧಿಕಾರಿಯವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕಾಪು : ಮತದಾರರ ಪಟ್ಟಿ ವಿಶೇಷ ನೋಂದಣಿ ಕಾರ್ಯಕ್ರಮ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) :ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ, ಕಾಪು ಕ್ಷೇತ್ರದ ಮತದಾರರ ಪಟ್ಟಿಯನ್ನು, ಜನವರಿ 1, 2019 ನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಸದ್ರಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 10 ರಂದು ಆಯಾ ಮತದಾನ ಕೇಂದ್ರಗಳಲ್ಲಿ ತಾಲೂಕು ಕಚೇರಿ ಉಡುಪಿ ಹಾಗೂ ಸಹಾಯಕ ಆಯುಕ್ತರ ಕಚೇರಿ ಕುಂದಾಪುರ ಇಲ್ಲಿ ಪ್ರಕಟಿಸಲಾಗಿದೆ.
2019 ನೇ ಜನವರಿ 1 ರಂದು 18 ವರ್ಷ ತುಂಬಿದ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸಿನವರು, ಈವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸದೇ ಇದ್ದವರು ಅಥವಾ ಹೆಸರು ಬಿಟ್ಟು ಹೋಗಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ತಪ್ಪುಗಳಿದ್ದಲ್ಲಿ ಸರಿಪಡಿಸಲು ನವೆಂಬರ್ 23, 24 ಮತ್ತು 25 ನೇ ದಿನಗಳಂದು ವಿಶೇಷ ನೋಂದಣಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ದಿನಗಳಲ್ಲಿ ಆಯಾ ಮತಗಟ್ಟೆಗಳಲ್ಲಿರುವ ಮತಗಟ್ಟೆ ಮಟ್ಟದ ಅಧಿಕಾರಿಯವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮತದಾರರ ಪಟ್ಟಿಗೆ ಹೆಸರು ಸೇರಿಸುವವರು ತಮ್ಮ ಮುಖ ಪೂರ್ಣವಾಗಿ ಕಾಣಿಸುವ ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರದೊಂದಿಗೆ ವಯಸ್ಸಿನ ಹಾಗೂ ವಾಸ್ತವ್ಯದ ಬಗ್ಗೆ ಪೂರಕವಾದ ದಾಖಲೆಗಳೊಂದಿಗೆ ನಮೂನೆ 6 ರಲ್ಲಿಯೂ, ದಾಖಲಾಗಿರುವ ಮತದಾರರ ಹೆಸರುಗಳ ಬಗ್ಗೆ ಆಕ್ಷೇಪಣೆಗಳಿದ್ದರೆ ಹಾಗೂ ಮತದಾರರ ಪಟ್ಟಿಯಲ್ಲಿ ಈಗಾಗಲೇ ಹೆಸರು ನೋಂದಾಯಿಸಿರುವ ವ್ಯಕ್ತಿ ಮೃತಪಟ್ಟಿದ್ದರೆ ಅಥವಾ ವಿಳಾಸ ಬದಲಾವಣೆಯಾಗಿದ್ದರೆ(ವಲಸೆ ಹೋಗಿದ್ದರೆ) ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕುವ ಬಗ್ಗೆ ನಮೂನೆ 7ರಲ್ಲಿಯೂ, ಮತದಾರರ ಪಟ್ಟಿಯಲ್ಲಿ ಯಾವುದೇ ನಮೂದು ತಪ್ಪಾಗಿ ಮುದ್ರಿಸಲ್ಪಟ್ಟಿದ್ದರೆ ಅದನ್ನು ಸರಿಪಡಿಸುವ ಬಗ್ಗೆ ಅರ್ಜಿಯನ್ನು ನಮೂನೆ -8 ರಲ್ಲಿಯೂ, ಒಬ್ಬ ವ್ಯಕ್ತಿಯು ತನ್ನ ಹೆಸರನ್ನು ಅದೇ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಇನ್ನೊಂದು ಭಾಗಕ್ಕೆ ವರ್ಗಾಯಿಸುವ ಬಗ್ಗೆ ಅರ್ಜಿಯನ್ನು ನಮೂನೆ -8 ಎ ರಲ್ಲಿ, ನವೆಂಬರ್ 23, 24 ಮತ್ತು 25 ರಂದು ವಿಶೇಷ ನೋಂದಣಿ ಕಾರ್ಯಕ್ರಮದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರ ವರೆಗೆ ಆಯಾ ಮತಗಟ್ಟೆಗಳಲ್ಲಿ, ಮತಗಟ್ಟೆ ಮಟ್ಟದ ಅಧಿಕಾರಿಯವರಿಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸದ್ರಿ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದಂತೆ ಉಡುಪಿ ತಾಲೂಕು ಕಚೇರಿಯಲ್ಲಿ ಸಹಾಯ ವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಅಗತ್ಯ ಮಾಹಿತಿಗಾಗಿ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 0820-2521198 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಉಡುಪಿ/ ಕಾಪು ವಿಧಾನಸಭಾ ಕ್ಷೇತ್ರ ಹಾಗೂ ಉಡುಪಿ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಇಲಾಖೆ ಸವಲತ್ತು: ಮಧ್ಯವರ್ತಿಗಳಿಂದ ದೂರವಿರಿ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಹಾಗೂ ಪ್ಯಾಕೇಜ್ ಘಟಕಗಳ ಸವಲತ್ತುಗಳಿಗೆ ಸರ್ಕಾರದಿಂದ ಸಾಮಾನ್ಯ ವರ್ಗದ ರೈತರಿಗೆ ಶೇ.80 ಹಾಗೂ ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡದ ಜನರಿಗೆ ಶೇ.90 ಸಹಾಯಧನವನ್ನು ನೀಡಲಾಗುತ್ತಿದೆ.
ಪ್ರಸ್ತುತ ಕ್ಷೇತ್ರ ಮಟ್ಟದಲ್ಲಿ ನೊಂದಾಯಿತ ಏಜೆನ್ಸಿ/ ಮಧ್ಯವರ್ತಿಗಳ ಹೆಸರಿನಲ್ಲಿ ಕೃಷಿಭಾಗ್ಯ ಯೋಜನೆಯ ಸವಲತ್ತುಗಳನ್ನು ಒದಗಿಸುವುದಾಗಿ ತಿಳಿಸಿ ರೈತರಿಂದ ಹಣ ವಸೂಲು ಮಾಡಲು ಪ್ರಯತ್ನಿಸುತ್ತಿರುವ ಪ್ರಕರಣಗಳು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ರೈತರು ಕೃಷಿ ಭಾಗ್ಯ ಯೋಜನೆಯ ಸವಲತ್ತುಗಳಿಗಾಗಿ, ಯಾವುದೇ ವ್ಯಕ್ತಿ ಅಥವಾ ಏಜೆನ್ಸಿಗಳಿಗೆ ನೇರವಾಗಿ ಹಣವನ್ನು ನೀಡದೆ ಕೂಡಲೇ ಪ್ರಕರಣಗಳ ಕುರಿತು ಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತರುವುದು. ಅದೇ ರೀತಿಯಾಗಿ ಕೃಷಿಭಾಗ್ಯ ಯೋಜನೆಗಳ ಸವಲತ್ತುಗಳಿಗೆ ನೇರವಾಗಿ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ, ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೇಷ್ಠ ಪುಸ್ತಕ ಅಕಾಡೆಮಿ ಪುರಸ್ಕಾರ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) :ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿದ್ದು, ಕನ್ನಡದಲ್ಲಿ ವಿಜ್ಞಾನ ವಿಷಯದ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ 2009 ರಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ಶ್ರೇಷ್ಠ ಪುಸ್ತಕ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.
2018-19 ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ , ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪುಸ್ತಕಗಳ ಸಂಖ್ಯೆಗನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಟ 2 ಪ್ರಶಸ್ತಿಗಳನ್ನು ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ 25 ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವುದು.
ಜನವರಿ 2017 ರಿಂದ ಡಿಸೆಂಬರ್ 2018 ರ ಒಳಗೆ ಮೇಲ್ಕಂಡ ವಿಷಯಗಳಲ್ಲಿ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ. ಲೇಖಕರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಜನವರಿ 5, 2019 ರೊಳಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು ಇವರಿಗೆ ಕಳುಹಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗೆ ಅಕಾಡೆಮಿಯ ವೆಬ್ಸೈಟ್ ತಿತಿತಿ.ಞsಣಚಿಛಿಚಿಜemಥಿ.iಟಿ ಅನ್ನು ಸಂಪರ್ಕಿಸುವಂತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ ಶಾಖಾ ಗ್ರಂಥಾಲಯ: ವಿಸ್ತರಣಾ ಕಟ್ಟಡ ಹಾಗೂ ಬ್ರೌಸಿಂಗ್ ಸೆಂಟರ್ ಉದ್ಘಾಟನೆ ಹಾಗೂ ಸಿಬ್ಬಂದಿ ಸೇವಾ ಪುರಸ್ಕಾರ ಸಮಾರಂಭ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಶಾಖೆ ಕುಂದಾಪುರ ಶಾಖಾ ಗ್ರಂಥಾಲಯದಲ್ಲಿ ನವೆಂಬರ್ 17 ರಂದು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ -2018 ರ ಪುಸ್ತಕ ಪ್ರದರ್ಶನ ಹಾಗೂ ಸದಸ್ಯತ್ವಅಭಿಯಾನ, ಕುಂದಾಪುರ ಶಾಖಾ ಗ್ರಂಥಾಲಯ ವಿಸ್ತರಣಾ ಕಟ್ಟಡ ಹಾಗೂ ಬ್ರೌಸಿಂಗ್ ಸೆಂಟರ್ ಉದ್ಘಾಟನೆ ಹಾಗೂ ಸಿಬ್ಬಂದಿ ಸೇವಾ ಪುರಸ್ಕಾರ ಸಮಾರಂಭವು ನಡೆಯಿತು.
ಬೆಂಗಳೂರಿನ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ ಕುಮಾರ .ಎಸ್ ಹೊಸಮನಿಯವರು ಆಶಯ ನುಡಿಗಳೊಂದಿಗೆ ಪುಸ್ತಕ ಅಭಿಯಾನದ ಚಿತ್ರಣವನ್ನು ತೆರೆದಿಟ್ಟರು. ಕುಂದಾಪುರ ಪುರಸಭಾ ಸದಸ್ಯೆ ರೋಹಿಣಿ ಉದಯಕುಮಾರ್ ಉದ್ಘಾಟಿಸಿ, ಶುಭ ಹಾರೈಸಿದರು. ಸಾಹಿತಿಗಳು ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷರಾದ ವಸಂತಿ ಶೆಟ್ಟಿ ಬ್ರಹ್ಮಾವರ, ಇವರು ಅಧ್ಯಕ್ಷತೆ ವಹಿಸಿದ್ದು, ಗ್ರಂಥಾಲಯ ಪಿತಾಮಹ ರಂಗನಾಥ್ರವರ ಜೀವನ ಚರಿತ್ರೆಯನ್ನು ಮೆಲುಕು ಹಾಕುತ್ತಾ ಉತ್ತಮ ಪುಸ್ತಕವು ಜ್ಞಾನಿಯ ಚಿರಂತನ ಚೈತನ್ಯರೂಪ. ಹಾಗೆಯೇ ಗ್ರಂಥಾಲಯವು ನಗರದ ಜಾÐನಭಂಡಾರವೂ, ಉತ್ತಮ ಗ್ರಂಥ ಎಂದೆಂದಿಗೂ ಅತ್ಯುತ್ತಮ ಸ್ನೇಹಿತರೆಂದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರು ಮಾತನಾಡಿ, ಪುಸ್ತಕಗಳ ಓದು ಮನುಷ್ಯರಲ್ಲಿ ಮೌಲ್ಯಯುತ ಬದುಕು ಹೃದಯವಂತಿಕೆ ಹುಟ್ಟಿಸುತ್ತದೆ. ನಮಗೆ ಪುಸ್ತಕಗಳಿಂದ ಜ್ಞಾನವೂ ದೊರೆಯುತ್ತದೆ. ಓದಿನ ಮೂಲಕ ಮನುಷ್ಯನ ಮೈಂಡ್ ಸೆಟ್ ಮಾಡಿಕೊಳ್ಳುವುದು ಮುಖ್ಯ. ಇಂದಿನ ಟಿ.ವಿ. ಧಾರವಾಹಿಗಳು ಮನುಷ್ಯರನ್ನು ಮೂರ್ಖರನ್ನಾಗಿ ಮಾಡುತ್ತಿದೆ ಎಂದರು.
ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣರು, ಗ್ರಂಥಗಳ ಓದುವಿಕೆಯಯಿಂದ ಆಗುವ ಪ್ರಯೋಜನಗಳನ್ನು ಹಾಗೂ ಬಾಲ್ಯದಲ್ಲಿ ಗ್ರಂಥಾಲಯದಲ್ಲಿ ಕಳೆದ ದಿನಗಳನ್ನು ಮೆಲುಕು ಹಾಕಿದರು.
ಈ ಸಂದರ್ಭದಲ್ಲಿ ಕುಂದಾಪುರ ವಿಭಾಗದ ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಣೇಶ್ರವರನ್ನು ಗೌರವಿಸಲಾಯಿತು. ಹಾಗೂ ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರವನ್ನು ಹಾಗೂ ಅತೀ ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಮೇಲ್ವಿಚಾರಕರನ್ನೂ ಗೌರವಿಸಲಾಯಿತು. ಹಾಗೂ ಸ್ಪರ್ದೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಸ್ವಾಗತಿಸಿದರು. ದ್ವಿತೀಯ ದರ್ಜೆ ಸಹಾಯಕರಾದ ಶಕುಂತಳಾ ಕುಂದರ್ ವಿಜೇತರ ಬಹುಮಾನ ಪಟ್ಟಿಯನ್ನು ವಾಚಿಸಿದರು. ಗ್ರಂಥಾಲಯ ಸಹಾಯಕಿ ಶ್ಯಾಮಲ ಸನ್ಮಾನಿತರ ಹೆಸರನ್ನು ವಾಚಿಸಿದರು. ಸಹಾಯಕ ಗ್ರಂಥಪಾಲಕಿ ವನಿತಾ ವಂದನಾರ್ಪಣೆ ಮಾಡಿದರು. ಕುಂದಾಪುರ ಶಾಖಾ ಗ್ರಂಥಾಲಯದ ಗ್ರಂಥಾಲಯ ಸಹಾಯಕ ಜಗದೀಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.
ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಶಾಖೆ ಕುಂದಾಪುರ ಶಾಖಾ ಗ್ರಂಥಾಲಯದಲ್ಲಿ ನವೆಂಬರ್ 17 ರಂದು ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ -2018ರ ಪುಸ್ತಕ ಪ್ರದರ್ಶನ ಹಾಗೂ ಸದಸ್ಯತ್ವಅಭಿಯಾನ, ಕುಂದಾಪುರ ಶಾಖಾ ಗ್ರಂಥಾಲಯ ವಿಸ್ತರಣಾಕಟ್ಟಡ ಹಾಗೂ ಬ್ರೌಸಿಂಗ್ ಸೆಂಟರ್ ಉದ್ಘಾಟನೆ ಹಾಗೂ ಸಿಬ್ಬಂದಿ ಸೇವಾ ಪುರಸ್ಕಾರ ಸಮಾರಂಭವು ನಡೆಯಿತು.
ಈ ಸಂದರ್ಭದಲ್ಲಿ ಅಯಾಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಂಥಾಲಯ ಮೇಲ್ವೀಚಾರಕರು ಅತೀ ಹೆಚ್ಚು ಸದಸ್ಯರನ್ನು ನೋದಾಯಿಸಿದವರಲ್ಲಿ 300 ಕ್ಕಿಂತ ಹೆಚ್ಚು ಸದಸ್ಯರನ್ನು ಹೆಬ್ರಿ ಪುಷ್ಷಾವತಿ ವಿ. ಶೆಟ್ಟಿ, ಪಳ್ಳಿ ಸುಷ್ಮಾ, ಅನಗಳ್ಳಿ ಕಮಲ ಇವರುಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು ಹಾಗೂ ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರವನ್ನು ಅಲೆವೂರು, ಸರಸ್ವತಿ, ನಾವುಂದ ಚಂದ್ರಾವತಿ, ಸಾಣೂರು ಜ್ಯೋತಿ ಎಂ. ಗ್ರಾ.ಪಂ.ಗ್ರಂ. ಮೇಲ್ವಿಚಾರಕರಾದ ಇವರನ್ನು ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕುಂದಾಪುರ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಬಾಲಭವನ ಸೊಸೈಟಿ, ಕುಂದಾಪುರದ ವತಿಯಿಂದ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕನ್ನಡ ಗೀತೆಗಳ ಸ್ಪರ್ಧೆಯನ್ನು ನವೆಂಬರ್ 24 ರಂದು ಕುಂದಾಪುರ ಗಾಂದಿ ಮೈದಾನದ ಬಾಲಭವನ ಸಭಾಂಗಣದಲ್ಲಿ ಬೆಳಗ್ಗೆ 9.30 ಕ್ಕೆ ಆಯೋಜಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ದಿ ಯೋಜನಾ ಕಚೇರಿ, ಕುಂದಾಪುರ , ದೂರವಾಣಿ ಸಂಖ್ಯೆ: 08254-230807 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಉದ್ಯಮಿಗಳು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ದೀ ಯೋಜನೆ ಕುಂದಾಪುರ ತಾಲೂಕು, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ, ಕುಂದಾಪುರ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕಿನ ಕೋಟಿ ಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ(ಕೊಡಿಹಬ್ಬ) ನವೆಂಬರ್ 23 ರಿಂದ 25 ರ ವರೆಗೆ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು ಮತ್ತು ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ ಭಾಗವಹಿಸುವವರಿಗೆ ಉಚಿತ ಮಾರಾಟ ಮಳಿಗೆಯನ್ನು ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ದಿ ಯೋಜನಾ ಕಚೇರಿ, ಕುಂದಾಪುರ, ದೂರವಾಣಿ ಸಂಖ್ಯೆ; 08254-230807 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ
ಉಡುಪಿ, ನವೆಂಬರ್ 19 (ಕರ್ನಾಟಕ ವಾರ್ತೆ) :2018 ನೇ ಸಾಲಿನಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತ್ತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ ಶೇ. 70 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 30.
ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅನ್ನು ನೋಡಬಹುದಾಗಿದೆ. ಅನುದಾನ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಮತ್ತು ಮೀಸಲಾತಿ ಅನ್ವಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574881 ಹಾಗೂ 0820-2573881 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ದಲ್ಲಿ ಪ್ರಧಾನ ಅರ್ಚಕ ರವೀಂದ್ರ ಭಟ್ ತುಳಸಿ ಪೂಜೆ ನೆರವೇರಿಸಿದರು ದೇವಳದ ಆಡಳಿತ ಮುಕ್ತೇಶ್ವರಾದ ಪಿ ವಿ ಶೆಣೈ , ರೋಹಿತಾಕ್ಷ ಪಡಿಯಾರ್, ವಿಶಾಲ್ ಶೆಣ್ಣ್ಯ್,ಗಿರೀಶ್ ಭಟ್ ,ಸುರೇಶ ಭಟ್ .ನರಸಿಂಹ ಕಿಣಿ ,ವಿಠಲ ನಾಯಕ ಮತ್ತು ಜಿ ಎಸ್ ಬಿ ,ಸಮಾಜ ಭಾಂದವರು ಉಪಸಿರಿದರು
ಗಿನ್ನಿಸ್ ರೆಕಾರ್ಡ್ ಮಾಡಿದ ಯೋಗ ಸಾಧಕಿ ಕು| ತನುಶ್ರೀ ಪಿತ್ರೋಡಿ ಸಂಮಾನ
ಉದ್ಯಾವರ: ಸೇವಾ ಮತ್ತು ಸಾಂಸ್ಕøತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರೂರವರ ಜನ್ಮದಿನದ ಪ್ರಯುಕ್ತ ಮಕ್ಕಳ ದಿನಾಚರಣೆಯ ಹಿನ್ನಲೆಯಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಮೂಹ ನೃತ್ಯ ಸ್ಪರ್ಧೆ “ಯು.ಎಫ್.ಸಿ. ಮಕ್ಕಳ ಹಬ್ಬ 2018”ರ ಉದ್ಘಾಟನಾ ಸಮಾರಂಭದಲ್ಲಿ ಒಂದು ನಿಮಿಷದಲ್ಲಿ 19 ನಿರಾಲಂಬ ಚಕ್ರಾಸನ ಮಾಡಿ ಗೋಲ್ಡನ್ ಬುಕ್ ಆಪ್ ರೆಕಾರ್ಡ್ ಮಾಡಿದ ಮತ್ತು ಎದೆಯನ್ನು ನೆಲದಲ್ಲಿ ಸ್ಥಿರೀಕರಿಸಿ ದೇಹವನ್ನು ಒಂದು ನಿಮಿಷದಲ್ಲಿ 42 ಸುತ್ತು ತಿರುಗಿಸಿ ಗಿನ್ನಿಸ್ ದಾಖಲೆಯನ್ನು ಮಾಡಿದ ಯೋಗ ಸಾಧಕಿ ಕು| ತನುಶ್ರೀ ಪಿತ್ರೋಡಿ ಇವರನ್ನು ಸಂಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ| ಮಂಜುನಾಥ ಕೋಟ್ಯಾನ್, ಶಂಕರಪುರ ಸೈಂಟ್ ಜೋನ್ಸ್ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಶ್ರೀಮತಿ ಭಾಗ್ಯಲಕ್ಷ್ಮಿ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಗಂಧಿ ಶೇಖರ್, ಉಡುಪಿ ನ್ಯಾಯವಾದಿಗಳಾದ ಹಬೀಬ್ ಆಲಿ, ಸಂಸ್ಥೆಯ ಅಧ್ಯಕ್ಷರಾದ ಶ್ರೀ ತಿಲಕ್ರಾಜ್ ಸಾಲ್ಯಾನ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗುಡ್ಡೆಅಂಗಡಿ, ಉಪಾಧ್ಯಕ್ಷರಾದ ಲೋಕನಾಥ್ ಬೊಳ್ಜೆ, ಕೋಶಾಧಿಕಾರಿ ಸೋಮಶೇಖರ್ ಸುರತ್ಕಲ್, ನಿರ್ದೇಶಕರುಗಳಾದ ಉದ್ಯಾವರ ನಾಗೇಶ್ ಕುಮಾರ್, ಶರತ್ ಕುಮಾರ್, ಚಂದ್ರಾವತಿ ಭಂಡಾರಿ, ಯು. ಪಧ್ಮನಾಭ ಕಾಮತ್, ಸದಸ್ಯರಾದ ರಮೇಶ್ ಕುಮಾರ್ ಉದ್ಯಾವರ್, ಅನ್ಸಾರ್ ಸತ್ತಾರ್, ಸತೀಶ್ ಡಿ. ಸಾಲ್ಯಾನ್ ಮತ್ತು ಲಿಖಿತ್ ಉಮೇಶ್ ಕರ್ಕೇರ ಉಪಸ್ಥಿತರಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link