Brief Udupi news with pictures
Kemmannu News Network, 24-11-2018 00:22:16
ಶ್ರೀ ರಾಮ ಮಂದಿರ ನಿರ್ಮಾಣ ಜನಾಗ್ರಹ ಸಭೆಗೆ ಭಜನಾ ಒಕ್ಕೂಟದ ಬೆಂಬಲ
ಭಕ್ತಿ ಭಾವದ ಭಜನೆಯಿಂದ ಏಕಾಗ್ರತೆ, ಮಾನಸಿಕ ನೆಮ್ಮದಿ, ಶಾರೀರಿಕ ದೃಢತೆಯ ಜೊತೆಗೆ ಭಗವಂತನ ಸಾಕ್ಷಾತ್ಕಾರ ಸಾಧ್ಯ. ‘ಕಲಿ ಯುಗದಲಿ ಹರಿನಾಮವ ನೆನೆದರೆ ಕುಲ ಕೋಟಿಗಳುದ್ದರಿಸುವವೋ...’ ಎಂದು ಹಾಡಿರುವ ದಾಸವರೇಣ್ಯರು ಪ್ರಸಕ್ತ ಸಮಾಜದಲ್ಲಿ ಭಜನೆಯ ಮಹತ್ವದ ಬಗ್ಗೆ ಉಲ್ಲೇಖಿಸಿದ್ದಾರೆ. ‘ರಾಮ ನಾಮ ಜಪಿಸಿದವರಿಗುಂಟೆ ಭವದ ಬಂಧನ’ ಎಂಬ ದಾಸವಾಣಿಯಂತೆ ಸಾವಿರಾರು ಭಜನೆಯ ಹಾಡುಗಳು ಮರ್ಯಾದಾ ಪುರುಶೋತ್ತಮ ಶ್ರೀ ರಾಮಚಂದ್ರ ಪ್ರಭುವಿನ ಕುರಿತಾಗಿ ರಚಿಸಲ್ಪಟ್ಟಿದೆ. ಕೋಟ್ಯಾಂತರ ರಾಮ ಭಕ್ತರು ಭಜನೆಯ ಮೂಲಕ ಭಗವಂತನನ್ನು ಹಾಡಿ ಹೊಗಳಿ ಸ್ತುತಿಸುತ್ತಿರುವ ಈ ಕಾಲಘಟ್ಟದಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಸ್ಥಾನದಲ್ಲಿಯೂ ಭವ್ಯ ಮಂದಿರ ನಿರ್ಮಾಣವಾಗಬೇಕೆಂಬುದು ಭಕ್ತರೆಲ್ಲರ ಅಭಿಮತವಾಗಿದೆ. ಹಿಂದೂ ಧರ್ಮದ ಹಾಗೂ ಸಮಸ್ತ ಭಕ್ತ ಸಮುದಾಯದ ಶೃದ್ಧಾಕೇಂದ್ರವಾಗಿ ಶ್ರೀರಾಮ ಮಂದಿರವು ಅತಿ ಶೀಘ್ರವಾಗಿ ನಿರ್ಮಾಣಗೊಂಡು ತಲೆಎತ್ತಿ ನಿಲ್ಲುವಂತಾಗಲಿ. ಮಂದಿರ ನಿರ್ಮಾಣಕ್ಕಾಗಿ ನಡೆಯುವ ಜನಾಗ್ರಹ ಸಭೆ ಹಾಗೂ ಭಜನಾ ಶೋಭಾ ಯಾತ್ರೆಯನ್ನು ಎಲ್ಲರೂ ಸೇರಿ ಅತ್ಯಂತ ಯಶಸ್ವಿಗೊಳಿಸೋಣ ಎಂದು ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಭೋಜರಾಜ್ ಆರ್. ಕಿದಿಯೂರು ಹೇಳಿದರು.
ಅವರು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಡಿ.2ರಂದು ಉಡುಪಿಯಲ್ಲಿ ನಡೆಯಲಿರುವ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿಯಾಗಿ ವಿ.ಹಿಂ.ಪ. ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಭಜನಾ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಶಿವಕುಮಾರ್ ಅಂಬಲಪಾಡಿ ಮಾತನಾಡಿ, ಕಳೆದ ವರ್ಷ ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ಇತಿಹಾಸ ಸೃಷ್ಠಿಸಿದೆ. ಅಂದು ನಡೆದ ಆಕರ್ಷಕ ಭಜನಾ ಶೋಭಾ ಯಾತ್ರೆಯಲ್ಲಿ ಜಿಲ್ಲೆಯಾದ್ಯಂತ ಸುಮಾರು ಮೂರೂವರೆ ಸಾವಿರಕ್ಕೂ ಮಿಕ್ಕಿ ಭಜನಾ ಮಂಡಳಿಗಳ ಸದಸ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿದ್ದಾರೆ. ಈ ಬಾರಿಯೂ ಡಿ.2ರಂದು ನಡೆಯುವ ಮಂದಿರ ನಿರ್ಮಾಣಕ್ಕಾಗಿ ಜನಾಗ್ರಹ ಸಭೆಯ ಭಜನಾ ಮೆರವಣಿಗೆಯಲ್ಲಿ ಜಿಲ್ಲೆಯಾದ್ಯಂತ ಸುಮಾರು ಮೂರು ಸಾವಿರಕ್ಕೂ ಮಿಕ್ಕಿ ಭಜನಾ ಮಂಡಳಿಗಳ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಭಜನಾ ಮಂಡಳಿಗಳ ಸರ್ವ ಸದಸ್ಯರು ಹಾಗೂ ಒಕ್ಕೂಟದ ವಿವಿಧ ಸ್ತರದ ಪದಾಧಿಕಾರಿಗಳು ಸಂಘಟಿತರಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಭಜರಂಗ ಧಳ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್., ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಶೆಟ್ಟಿ, ಭಜನಾ ಮಂಡಳಿಗಳ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷೆ ಸುಪ್ರಭಾ ಆಚಾರ್ಯ, ಉಡುಪಿ ತಾಲೂಕು ಉಪಾಧ್ಯಕ್ಷೆ ಪದ್ಮಾ ರತ್ನಾಕರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಂದರ್ ಜತ್ತನ್, ಉಡುಪಿ ನಗರ ವಲಯಾಧ್ಯಕ್ಷ ಕಿಶೋರ್ ಕುಮಾರ್, ಕರಾವಳಿ ವಲಯಾಧ್ಯಕ್ಷ ಕಿರಣ್ ಕುಂದರ್, ಕರಾವಳಿ ಸಂಘಟನಾ ಕಾರ್ಯದರ್ಶಿ ಜನಾರ್ಧನ್ ಮೆಂಡನ್, ಭಜನಾ ಮಂಡಳಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿಶ್ವ ಹಿಂದೂ ಪರಿಷದ್ ನಗರಾಧ್ಯಕ್ಷ ಸಂತೋಷ್ ಸುವರ್ಣ ಬೊಳ್ಜೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಭಜರಂಗ ಧಳ ನಗರ ಸಂಚಾಲಕ ಲೋಕೇಶ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು. ವಿಶ್ವ ಹಿಂದೂ ಪರಿಷದ್ ನಗರ ಉಪಾಧ್ಯಕ್ಷ ಸುಧಾಕರ ಆಚಾರ್ಯ ವಂದಿಸಿದರು.
ಉಡುಪಿ ಶಾಸಕರಾದ ಕೆ ರಘುಪತಿ ಭಟ್ ನೇತೃತ್ವದ ನಿಯೋಗವು ಇಂದು ಕರ್ನಾಟಕ ರಾಜ್ಯ ಸರ್ಕಾರದ ಬಂದರು ಮತ್ತು ಪೌರಾಡಳಿತ ಸಚಿವರಾದ ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾಗಿ 10 ಕೋಟಿ ಮೀನುಗಾರಿಕಾ ಜೆಟ್ ಗೆ ಮಂಜೂರಾದ ಅನುದಾನವನ್ನು ಬಂದರಿನ ಜಾಗದಲ್ಲೇ ನಿರ್ಮಿಸಲು ಮನವಿ ಮಾಡಲಾಯಿತು. ಮುಂದಿನ ವಾರದಲ್ಲೇ ಈ ಬಗ್ಗೆ ಅಧಿಕಾರಿಗಳ ಸಭೆ ಕರೆದು ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಈ ನಿಯೋಗದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಅಖಿಲ ಭಾರತ ಮೀನುಗಾರರ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಕೆ ಸುವರ್ಣ, ಆಳ ಸಮುದ್ರ ಮೀನುಗಾರಿಕ ನಿಗಮದ ಅಧ್ಯಕ್ಷರಾದ ಕಿಶೋರ್ ಡಿ. ಸುವರ್ಣ, ಮಲ್ಪೆ ಮೀನುಗಾರರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಗೋಪಾಲ ಆರ್.ಕೆ., ಮೀನು ವ್ಯಾಪರ ಸಂಘದ ಪ್ರಧಾನ ಕಾರ್ಯದರ್ಶಿ ರತ್ನಾಕರ್ ಸಾಲಿಯಾನ್,ಹಾಗೂ ಸದಸ್ಯರುಗಳಾದ ಕರುಣಾಕರ ಸಾಲಿಯಾನ್,ಸಂತೋಷ್ ಸಾಲಿಯಾನ್, ಮೊಗವೀರ ಯುವ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ವಿನಯ ಕರ್ಕೇರ, ಮತ್ತಿತರರು ಉಪಸ್ಥಿತರಿದ್ದರು.
ಕಾರ್ಕಳ: ಪಿಂಚಣಿ, ಕಂದಾಯ ಅದಾಲತ್
ಉಡುಪಿ, ನವೆಂಬರ್ 23 (ಕರ್ನಾಟಕ ವಾರ್ತೆ) : ಕಾರ್ಕಳ ತಾಲೂಕಿನ ಅಜೆಕಾರು ಹೋಬಳಿಯಲ್ಲಿ ನವೆಂಬರ್ 28 ರಂದು ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಪಿಂಚಣಿ ಅದಾಲತ್ ಹಾಗೂ 11.30 ರಿಂದ 1.30 ರ ವರೆಗೆ ಕಂದಾಯ ಅದಾಲತ್ ಕಾರ್ಯಕ್ರಮವು ಅಜೆಕಾರು ನಾಡ ಕಚೇರಿಯಲ್ಲಿ ಹಾಗೂ ಕಾರ್ಕಳ ಹೋಬಳಿಯಲ್ಲಿ ಮಧ್ಯಾಹ್ನ 3.30 ರಿಂದ 4.30 ರ ವರೆಗೆ ಕಂದಾಯ ಅದಾಲತ್ ಹಾಗೂ 4.30 ರಿಂದ 5.30 ರ ವರೆಗೆ ಪಿಂಚಣಿ ಅದಾಲತ್ ಕಾರ್ಯಕ್ರಮವು ಕಾರ್ಕಳ ತಾಲೂಕು ಕಚೇರಿಯಲ್ಲಿ, ಕುಂದಾಪುರ ಸಹಾಯಕ ಕಮೀಷನರ್ ನಡೆಸಲಿರುವರು ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ: ಪರಿಷ್ಕøತ ಪಿಂಚಣಿ, ಕಂದಾಯ ಅದಾಲತ್
ಉಡುಪಿ, ನವೆಂಬರ್ 23 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ಕುಂದಾಪುರ ತಾಲೂಕಿಗೆ ಸಂಬಂಧಿಸಿದಂತೆ ನವೆಂಬರ್ 20 ರಂದು ಪಿಂಚಣಿ ಹಾಗೂ ಕಂದಾಯ ಅದಾಲತ್ ದಿನಾಂಕ ನಿಗಧಿಪಡಿಸಲಾಗಿದ್ದು, ಸದ್ರಿ ದಿನದಂದು ಸರ್ಕಾರಿ ರಜೆಯೆಂದು ಘೋಷಿಸಿರುವುದರಿಂದ, ಈ ದಿನದ ಅದಾಲತ್ನ್ನು ಪರಿಷ್ಕರಿಸಿ, ಡಿಸೆಂಬರ್ 1 ರಂದು ಕುಂದಾಪುರ ತಾಲೂಕಿನಲ್ಲಿ ಬೆಳಗ್ಗೆ 10 ರಿಂದ 11 ರ ವರೆಗೆ ಪಿಂಚಣಿ ಅದಾಲತ್ ಹಾಗೂ 11.30 ರಿಂದ 1.30 ರ ವರೆಗೆ ಕಂದಾಯ ಅದಾಲತ್ ಕಾರ್ಯಕ್ರಮವು ನಡೆಯಲಿದೆ.
ಅದಾಲತ್ಗೆ ತಾಲೂಕು ವ್ಯಾಪ್ತಿಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಾಗುವಂತೆ ಕುಂದಾಪುರ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇನಾ ನೇಮಕಾತಿ: ಅಲ್ಪ ಸಂಖ್ಯಾತರಿಗೆ ಉಚಿತ ತರಬೇತಿ
ಉಡುಪಿ, ನವೆಂಬರ್ 23 (ಕರ್ನಾಟಕ ವಾರ್ತೆ) :ಭಾರತೀಯ ಭೂ ಸೇನೆ ನೌಕಾದಳ, ವಾಯುದಳ ಮತ್ತು ಇತರೆ ರಕ್ಷಣಾ ದಳಗಳಿಗೆ ಸೇರಲು ಆಸಕ್ತಿಯುಳ್ಳ ಅಲ್ಪಸಂಖ್ಯಾತರ ಸಮುದಾಯಗಳಿಗೆ ಸೇರಿದ ( ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಬೌದ್ಧ ಮತ್ತು ಪಾರ್ಸಿಗಳು) ವಿದ್ಯಾರ್ಥಿಗಳಿಂದ ಊಟ ಮತ್ತು ವಸತಿ ಜೊತೆಗೆ 45 ದಿನಗಳ ಉಚಿತ ಪೂರ್ವಭಾವಿ ತರಬೇತಿ ಮತ್ತು ಮಾರ್ಗದರ್ಶನಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿ ಸಂಸ್ಥೆಯ ಪ್ರತಿಯೊಬ್ಬ ಅಭ್ಯರ್ಥಿಗೆ 45 ದಿನಗಳ ತರಬೇತಿ ಅವಧಿಯಲ್ಲಿ ಸ್ಟೈಪಂಡ್ ನೀಡುವುದಿಲ್ಲ. ತರಬೇತಿಯನ್ನು ಪ್ರತಿ ವಿದ್ಯಾರ್ಥಿಗೆ ಒಮ್ಮೆ ಮಾತ್ರ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಆನ್ಲೈನ್ ಅರ್ಜಿ ಫಾರಂನ ಪ್ರಿಂಟ್ಔಟ್ಗಳನ್ನು ಅಗತ್ಯವಾದ ದಾಖಲೆ ಪತ್ರಗಳ ಜೊತೆಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು. ಅರ್ಹತಾ ಅಗತ್ಯತೆಗಳು, ದಾಖಲೆ ಪತ್ರಗಳು ಮತ್ತು ಆನ್ಲೈನ್ನಲ್ಲಿ ನೋಂದಾಯಿಸಲು ವೆಬ್ಸೈಟ್ hಣಣಠಿs://goಞಜom.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 15.
ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಧಿಕಾರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ, ದೂರವಾಣಿ ಸಂಖ್ಯೆ: 0820-2574881 ಹಾಗೂ 2574596 ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
“ಸಮೃದ್ಧಿ ಯೋಜನೆ”: ಅರ್ಜಿ ಆಹ್ವಾನ
ಉಡುಪಿ, ನವೆಂಬರ್ 23 (ಕರ್ನಾಟಕ ವಾರ್ತೆ) : 2018-19ನೇ ಸಾಲಿನಲ್ಲಿ ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಗ್ರಾಮೀಣ/ನಗರ ಪ್ರದೇಶಗಳಲ್ಲಿನ ಪರಿಶಿಷ್ಠ ಜಾತಿಯ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮ ಶೀಲರನ್ನಾಗಿಸಲು “ಸಮೃದ್ಧಿ ಯೋಜನೆ” ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಯಡಿ ಪರಿಶಿಷ್ಠ ಜಾತಿಯ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ/ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವುದು.
ಈ ಯೋಜನೆಯಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನ. ಆನ್ಲೈನ್ hಣಣಠಿ://sಚಿmಡಿuಜhiಥಿoರಿಚಿಟಿe.ಛಿom/ ಮೂಲಕ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ್ ಅಬಿವೃದ್ಧಿ ನಿಗಮ ನಿಯಮಿತ, ಉಡುಪಿ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದಲ್ಲಿ ಉಪನ್ಯಾಸ ಕಾರ್ಯಕ್ರಮ
ಉಡುಪಿ, ನವೆಂಬರ್ 23 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಶಾಖೆ ಕುಂದಾಪುರ ಶಾಖಾ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ -2018 ರ ಅಂಗವಾಗಿ ಇತ್ತೀಚೆಗೆ ಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮಟ್ಟದಿಂದ ಕಾಲೇಜು ಮಟ್ಟದವರೆಗೂ ಭಾಷಣ ಸ್ಪರ್ದೆ, ಪ್ರಬಂಧ ಸ್ಪರ್ದೆ, ಚಿತ್ರಬಿಡಿಸುವ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ ಇನ್ನಿತರ ಸ್ಪರ್ಧೆಗಳನ್ನು ಹಾಗೂ ವಿದ್ಯಾರ್ಥಿಗಳಿಗೆ ಉಪನ್ಯಾಸವನ್ನು ಹಮ್ಮಿಕೊಂಡಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಬೈಂದೂರು ಅಂಜಲಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಸುಬ್ರಹ್ಮಣ್ಯ ಭಟ್ ಇವರು ಆರೋಗ್ಯ ಮತ್ತು ಸ್ವಚ್ಛತೆ ( ಊeಚಿಟಣh ಚಿಟಿಜ ಊಥಿgieಟಿe) ಯ ಬಗ್ಗೆ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ದೆಸೆಯಲ್ಲಿಯೇ ಆರೋಗ್ಯ ಮತ್ತು ಸ್ವóóಚ್ಛತೆಗೆ ಹೆಚ್ಚಿನ ರೀತಿಯಲ್ಲಿ ಗಮನಹರಿಸುವಂತೆ ಹಾಗೂ ಆರೋಗ್ಯಕ್ಕೆ ಮಾನಸಿಕವಾಗಿ, ಭೌದ್ಧಿಕವಾಗಿ ಪ್ರಾಮುಖ್ಯತೆಯನ್ನು ನೀಡಬೇಕೇಂದು ಸಲಹೆ ನೀಡಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ, ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ಹಾಗೂ ಸಾರ್ವಜನಿಕರು ಗ್ರಂಥಾಲಯಕ್ಕೆ ಭೇಟಿ ನೀಡಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು ಹಾಗೂ ಸ್ವಾಗತಿಸಿದರು.
ದ್ವಿತೀಯ ದರ್ಜೆ ಸಹಾಯಕಿ ಶಕುಂತಳ ಕುಂದರ್ ವಂದಿಸಿದರು. ಕುಂದಾಪುರ ಶಾಖಾ ಗ್ರಂಥಾಲಯದ ಸಹಾಯಕ ಗ್ರಂಥಪಾಲಕ ಜಗದೀಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.
ಕನಕ ಯುವ ಪುರಸ್ಕಾರಕ್ಕೆ ಆಯ್ಕೆ
ಉಡುಪಿ, ನವೆಂಬರ್ 23 (ಕರ್ನಾಟಕ ವಾರ್ತೆ) :ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧೀನ ಸಂಸ್ಥೆಯಾದ ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು ನೀಡುವ 2018-19ನೇ ಸಾಲಿನ ಕನಕ ಯುವ ಪುರಸ್ಕಾರಕ್ಕೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಜಯಪ್ರಕಾಶ ಶೆಟ್ಟಿಯವರು ಆಯ್ಕೆಗೊಂಡಿದ್ದು, ಈ ಪುರಸ್ಕಾರವನ್ನು ನವೆಂಬರ್ 26 ರ ಕನಕ ಜಯಂತಿ ಆಚರಣೆ ಸಮಾರಂಭದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆಯಲಿದ್ದಾರೆ.
ಪ್ರಶಸ್ತಿಗೆ ಆಯ್ಕೆಯಾದ ಡಾ. ಜಯಪ್ರಕಾಶ್ ಶೆಟ್ಟಿಯವರನ್ನು ಕಾಲೇಜಿನ ಪ್ರಾಂಶುಪಾಲರು, ಬೋಧಕ/ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುವುದಾಗಿ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
ಕೋಟೇಶ್ವರ: ಮದ್ಯ ಮಾರಾಟ ನಿಷೇಧ
ಉಡುಪಿ, ನವೆಂಬರ್ 22 (ಕರ್ನಾಟಕ ವಾರ್ತೆ) : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ಚರ ದೇವಸ್ಥಾನದಲ್ಲಿ ಕೋಡಿ ಹಬ್ಬದ ಪ್ರಯುಕ್ತ ಸಾಂಸ್ಕøತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಹಾಗೂ ಈ ಹಿಂದೆ ಗಲಾಟೆಗಳಾಗಿರುವುದರಿಂದ ಈ ಸಮಯದಲ್ಲಿ ಬಾರ್ ಮತ್ತು ವೈನ್ಶಾಪ್ ಗಳು ತೆರೆದಿದ್ದಲ್ಲಿ, ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ, ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಿಂದ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ಶಾಪ್ಗಳ ಮದ್ಯ ಮಾರಾಟವನ್ನು ನವೆಂಬರ್ 23 ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 25 ರ ಬೆಳಗ್ಗೆ 6 ಗಂಟೆಯವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.
ಸಂವಿಧಾನ ದಿನಾಚರಣೆ
ಉಡುಪಿ, ನವೆಂಬರ್ 22 (ಕರ್ನಾಟಕ ವಾರ್ತೆ) : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ವಕೀಲರ ಸಂಘ (ರಿ) ಉಡುಪಿ ಮತ್ತು ಬೆಲ್ ಓ ಸೀಲ್ ವಾಲ್ವ್ಸ್ ಪ್ರೈ.ಲಿ.,ಸಂತೆಕಟ್ಟೆ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ-2018 ರ ಕಾರ್ಯಕ್ರಮವು ನವೆಂಬರ್ 26 ರಂದು ಬೆಳಗ್ಗೆ 9.30 ಕ್ಕೆ ಬೆಲ್ ಓ ಸೀಲ್ ವಾಲ್ವ್ಸ್ ಪ್ರೈ.ಲಿ.ಸಂತೆಕಟ್ಟೆ, ಉಡುಪಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ ನಾಯ್ಕ್ .ಟಿ ಉದ್ಘಾಟಿಸಲಿದ್ದು, ಬೆಲ್ ಓ ಸೀಲ್ ವಾಲ್ವ್ಸ್ ಪ್ರೈ.ಲಿ. ನ ಅಧ್ಯಕ್ಷ ಗಿಲ್ಬರ್ಟ್ ಸಾಲಿನ್ಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕೃಷಿ ಇಲಾಖೆ ಸವಲತ್ತು: ಮಧ್ಯವರ್ತಿಗಳಿಂದ ದೂರವಿರಿ
ಉಡುಪಿ, ನವೆಂಬರ್ 22 (ಕರ್ನಾಟಕ ವಾರ್ತೆ) : ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಹಾಗೂ ಪ್ಯಾಕೇಜ್ ಘಟಕಗಳ ಸವಲತ್ತುಗಳಿಗೆ ಸರ್ಕಾರದಿಂದ ಸಾಮಾನ್ಯ ವರ್ಗದ ರೈತರಿಗೆ ಶೇ.80 ಹಾಗೂ ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡದ ಜನರಿಗೆ ಶೇ.90 ಸಹಾಯಧನವನ್ನು ನೀಡಲಾಗುತ್ತಿದೆ.
ಪ್ರಸ್ತುತ ಕ್ಷೇತ್ರ ಮಟ್ಟದಲ್ಲಿ ನೊಂದಾಯಿತ ಏಜೆನ್ಸಿ/ ಮಧ್ಯವರ್ತಿಗಳ ಹೆಸರಿನಲ್ಲಿ ಕೃಷಿಭಾಗ್ಯ ಯೋಜನೆಯ ಸವಲತ್ತುಗಳನ್ನು ಒದಗಿಸುವುದಾಗಿ ತಿಳಿಸಿ ರೈತರಿಂದ ಹಣ ವಸೂಲು ಮಾಡಲು ಪ್ರಯತ್ನಿಸುತ್ತಿರುವ ಪ್ರಕರಣಗಳು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ರೈತರು ಕೃಷಿ ಭಾಗ್ಯ ಯೋಜನೆಯ ಸವಲತ್ತುಗಳಿಗಾಗಿ, ಯಾವುದೇ ವ್ಯಕ್ತಿ ಅಥವಾ ಏಜೆನ್ಸಿಗಳಿಗೆ ನೇರವಾಗಿ ಹಣವನ್ನು ನೀಡದೆ ಕೂಡಲೇ ಪ್ರಕರಣಗಳ ಕುರಿತು ಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತರುವುದು. ಅದೇ ರೀತಿಯಾಗಿ ಕೃಷಿಭಾಗ್ಯ ಯೋಜನೆಗಳ ಸವಲತ್ತುಗಳಿಗೆ ನೇರವಾಗಿ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ, ಅರ್ಜಿ ಸಲ್ಲಿಸುವಂತೆ ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರಕಾರಿ ನೌಕರರ, ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ
ಉಡುಪಿ, ನವೆಂಬರ್ 22 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ನವೆಂಬರ್ 29 ಹಾಗೂ 30 ರಂದು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ನ.29 ರಂದು ಬೆಳಗ್ಗೆ 10.30 ಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಸಂಸ್ಕøತಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಸಮಾರೋಪ ಸಮಾರಂಭವು ನ.30 ರಂದು ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಸರಕರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್ ತಿಳಿಸಿದ್ದಾರೆ.
ಎಸಿಬಿ ಯಿಂದ ಅಹವಾಲು ಸ್ವೀಕಾರ
ಉಡುಪಿ, ನವೆಂಬರ್ 22 (ಕರ್ನಾಟಕ ವಾರ್ತೆ) : ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ನವೆಂಬರ್ 27 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮತ್ತು ನವೆಂಬರ್ 29 ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಕಾಪು ವೀರಭದ್ರ ಸಭಾಭವನದಲ್ಲಿ ಮೊಕ್ಕಾಂ ಇದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷ ತೋರಿದ್ದಲ್ಲಿ ಮತ್ತು ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿದಿದ್ದಾರೆ.
ಮರು ಮದುವೆಯಾಗುವ ಪರಿಶಿಷ್ಟ ಜಾತಿಯ ವಿಧವೆಯರಿಗೆ ಪ್ರೋತ್ಸಾಹ ಧನ
ಉಡುಪಿ, ನವೆಂಬರ್ 22 (ಕರ್ನಾಟಕ ವಾರ್ತೆ) :ಪರಿಶಿಷ್ಟ ಜಾತಿಯವರಲ್ಲಿ ಮರು ಮದುವೆಯಾಗುವ ವಿಧವೆಯರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ತಲಾ 3 ಲಕ್ಷ ರೂ. ಗಳನ್ನು ಸರ್ಕಾರದಿಂದ ನೀಡಲಾಗುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕಚೇರಿ ಇಲಾಖಾ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ, ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಸಾಮೂಹಿಕ ಸರಳ ವಿವಾಹವಾದವರಿಗೆ ಸಹಾಯ ಧನ
ಉಡುಪಿ, ನವೆಂಬರ್ 22 (ಕರ್ನಾಟಕ ವಾರ್ತೆ) : ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದ್ದು, ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ತಲಾ 50000 ರೂ. ಗಳನ್ನು ಸರ್ಕಾರದಿಂದ ನೀಡಲಾಗುವುದು. ಈ ಸಂಬಂಧ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕಚೇರಿ ಇಲಾಖಾ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹಿರಿಯಡ್ಕ:“ಚುನಾವಣಾ ಸಾಕ್ಷರತಾ ಕ್ಲಬ್ ಉದ್ಘಾಟನೆ”
ಉಡುಪಿ, ನವೆಂಬರ್ 22 (ಕರ್ನಾಟಕ ವಾರ್ತೆ) : ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ನೆರವೇರಿಸಿ, ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆ ಬಗ್ಗೆ ಅರಿವು ಮೂಡಿಸುವುದು ಹಾಗೂ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ಯುವಜನಾಂಗವು ಅರ್ಥೈಸಿಕೊಂಡು ಪ್ರತಿಯೋರ್ವ ನಾಗರಿಕರಿಗೆ ಮತದಾನದ ಮಹತ್ವವನ್ನು ವಿವರಿಸಬೇಕಾದ ಜವಾಬ್ದಾರಿಯ ಬಗ್ಗೆ ವಿವರಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರವೀಣ ಶೆಟ್ಟಿ ಸ್ವಾಗತಿಸಿ, ರೋವರ್ ಸಂಚಾಲಕ ಅನಿಲ್ ಕುಮಾರ್ ವಂದಿಸಿದರು. ರಾಷ್ಟ್ರೀಯ ಮತದಾನ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಕಾಲೇಜು ಮಟ್ಟದಲ್ಲಿ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ನಡೆಸಲಾಯಿತು. ಗಜೇಂದ್ರ ನಾಯಕ್, ಸಂಜಯಾ ಕುಮಾರ್, ದೀಪಕ್ ಶೆಟ್ಟಿ ಸುಪ್ರೀತಾ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದರು. ಈ ಸ್ಪರ್ಧೆಗಳನ್ನು ಚುನಾವಣಾ ಸಾಕ್ಷರತಾ ಕ್ಲಬ್ನ ಸಂಯೋಜಕಿ ಸುಜಯಾ ಕೆ.ಎಸ್. ನಿರ್ವಹಿಸಿದರು. ‘ಓಟು ಹಾಕೋಣ ಬನ್ನಿ’-ಬೀದಿ ನಾಟಕಗಳ ಸಂಕಲನವನ್ನು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ನೀಡಿದರು.
ನಾರಾಯಣ ಗುರು ಜೀವನ ದರ್ಶನ -ಉಪನ್ಯಾಸ
ಉಡುಪಿ, ನವೆಂಬರ್ 22 (ಕರ್ನಾಟಕ ವಾರ್ತೆ) : ಸಾಹಿತ್ಯ ಸಂಘ, ಸರಕಾರಿ ಪದವಿ ಪೂರ್ವ ಕಾಲೇಜು, ಹಿರಿಯಡ್ಕ, ಸಂಸ್ಕøತಿ ಸಿರಿ ಟ್ರಸ್ಟ್(ರಿ) ಹಿರಿಯಡ್ಕ ಇವರ ಸಹಯೋಗದಲ್ಲಿ ಗುರುವಿನ ಅರಿವು -ನಾರಾಯಣ ಗುರು ಜೀವನ ದರ್ಶನ ವಿಶೇಷ ಉಪನ್ಯಾಸ ಮಾಲಿಕೆ 2018-19 ರ ಕಾರ್ಯಕ್ರಮವು ನವೆಂಬರ್ 23 ರಂದು ಬೆಳಗ್ಗೆ 10.30 ಕ್ಕೆ ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಮಶುಪಾಲ ಹಾಗೂ ಚಿಂತಕರಾದ ಬೈಕಾಡಿ ಜನಾರ್ದನ ಆಚಾರ್ ಉಪನ್ಯಾಸ ನೀಡಲಿದ್ದು, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link