Brief Udupi news with pictures
Kemmannu News Network, 28-11-2018 23:00:58
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಡಿಯಾಳಿ ಮುಕ್ತ ದಳದ ಮಕ್ಕಳಿಂದ ರೈತರೊಂದಿಗೆ ಹೊಲದಲ್ಲಿ ಸೇವಾÀ ಶಿಬಿರ
ಪ್ರತಿಯೊಂದು ಮಗುÀನಲ್ಲಿಯೂ ಒಂದು ವಿಶೇಷವಾದ ಗುಣ ಮತ್ತು ಸಾಮಥ್ರ್ಯ ವಿರುತ್ತದೆ . ಅದನ್ನು ಗುರುತಿಸಿ ಪೋತ್ಸಾಹಿಸಿ ಬೆಳೆಸಿದಾಗ ಮಾತ್ರ ಆ ಮಗು ಸಮಾಜಕ್ಕೆ ಒಂದು ಮಾದರಿಯಾಗುವಂತಹ ನಾಗರಿಕನಾಗಿ ಬೆಳೆಯುವುದರಲ್ಲಿ ಸಂದೇಹವಿಲ್ಲ . ಎಂಬ ರೀತಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಡಿಯಾಳಿ ಮುಕ್ತದಳದ ಮಕ್ಕಳು ಸಮಾಜದಲ್ಲಿ ನಾವೆಲ್ಲರೂ ಒಂದೇ ಎಂಬ ಒಗ್ಗಟ್ಟಿನಿಂದ ಹೊಲಕ್ಕೆ ಇಳಿದು , ರೈತನ ಜೀವನ ಎಷ್ಟು ಕಷ್ಟಕರ , ರೈತ ನಮ್ಮೆಲ್ಲಾರ ಹೊಟ್ಟೆ ಪಾಡಿಗಾಗಿ ಎಷ್ಟು ಕಷ್ಟ ಪಡುತ್ತಿರುತ್ತಾನೆ. ಎಂಬುದನ್ನು ಮಾದರಿಯಾಗುವಂತೆ ಸುಮಾರು 27 ಮಂದಿ ಸ್ಕೌಟ್ಸ್ ಮಕ್ಕಳು ಸಮಾಜಕ್ಕೆ ತೋರಿಸಿ ಕೊಟ್ಟಿರುತ್ತಾರೆ. ಎಂಬುದಾಗಿ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀಮತಿ ಶಾಂತಾ .ವಿ. ಆಚಾರ್ಯ ಮಕ್ಕಳನ್ನು ಹೊಗಳಿ ಗುಣಗಾನ ಮಾಡಿದರು.
ಹಿರಿಯಡಕ: ಕೌಶಲ್ಯಯುಕ್ತ ವಿದ್ಯಾರ್ಥಿಗಳಿಗೆ ವಿಪುಲ ಉದ್ಯೋಗಾವಕಾಶ
ಉಡುಪಿ, ನವೆಂಬರ್ 27 (ಕರ್ನಾಟಕ ವಾರ್ತೆ) :ಇಂದಿನ ಕಾಲೇಜು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ಬೇಕಾಗುವ ಹಾಗೂ ಖಾಸಗಿ ಕಂಪೆನಿಗಳಿಗೆ ಅಗತ್ಯವಿರುವ ಕೌಶಲ್ಯಗಳನ್ನು ಅರಿತುಕೊಂಡಲ್ಲಿ ಅವರಿಗೆ ದೊರಕುವ ಉದ್ಯೋಗಾವಕಾಶಗಳೂ ಕೂಡ ವಿಫುಲವಾಗಿರುತ್ತವೆ. ಎಂದು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಹೇಳಿದರು.
ಅವರು ಇತ್ತೀಚೆಗೆ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ ಘಟಕದ ವತಿಯಿಂದ ಹಮ್ಮಿಕೊಂಡ ಒಂದು ದಿನದ ಮಾಹಿತಿ ತರಬೇತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಸಂಧ್ಯಾ ಎಂ., ಇವರು ವಿದ್ಯಾರ್ಥಿಗಳಿಗೆ ಕಂಪೆನಿ ಉದ್ಯೋಗಗಳಿಗೆ ಬೇಕಾಗುವ ವಿವಿಧ ಕೌಶಲ್ಯಗಳ ಬಗ್ಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಕಾರ್ಯಾಗಾರವನ್ನು ನಡೆಸಿಕೊಟ್ಟರು.
ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಪ್ರೊ. ದಿನೇಶ್ ಎಂ. ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ರುಕ್ಷಿಣಿ ಶೆಡ್ತಿ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಜಯಭಾರತಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶುಭ ಹಾರೈಸಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಘಟಕದ ಸಂಚಾಲಕಿ ಪ್ರೊ. ಸುಜಯಾ ಕೆ. ಎಸ್. ಉಪಸ್ಥಿತರಿದ್ದರು. ಎಂ.ಕಾಂ. ವಿದ್ಯಾರ್ಥಿನಿ ವಿಜಯಶ್ರೀ ಪೈ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ರಶ್ಮಿ ವಂದಿಸಿದರು.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತರಕ್ಷಣಾ ಕಾಯ್ದೆಯ ಬಗ್ಗೆ
ಉಡುಪಿ, ನವೆಂಬರ್ 27 (ಕರ್ನಾಟಕ ವಾರ್ತೆ) :ಮೆ.ಗ್ರೀನ್ ಬಡ್ಸ್ ಆಗ್ರೋ ಫಾರಂ ಪ್ರೈ.ಲಿ.ಮೈಸೂರು ರವರು ರಾಜ್ಯಾದ್ಯಂತ ಹೊಂದಿದ ಶಾಖೆಗಳಲ್ಲಿ ಸಾರ್ವಜನಿಕರು ನಿಶ್ವಿತ ಠೇವಣಿ/ ರೆಕರಿಂಗ್ ಡಿಪಾಸಿಟ್/ ಮಾಸಿಕ ವಂತಿಗೆ ಹಾಗೂ ಇತರೆ ರೂಪದಲ್ಲಿ ಠೇವಣಿಯಾಗಿ ಇಡಲಾಗಿದ್ದ ಹಣವನ್ನು ಸಕಾಲದಲ್ಲಿ ಹೂಡಿಕೆದಾರರಿಗೆ ಹಿಂತಿರುಗಿಸದ ಕಾರಣ ಸದರಿ ಸಂಸ್ಥೆ ಹಾಗೂ ಅದರ ಪದಾಧಿಕಾರಿಗಳ ವಿರುದ್ದ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ದಾವಣಗೆರೆ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಕ್ರಿಮಿನಲ್ ದಾವೆಯನ್ನು ಹೂಡಲಾಗಿದ್ದು, ಅವುಗಳು ವಿಚಾರಣೆ ಹಂತದಲ್ಲಿರುತ್ತದೆ.
ಆದ್ದರಿಂದ ಸಂಸ್ಥೆಯಲ್ಲಿ ಹೂಡಲಾಗಿರುವ ಠೇವಣಿಗೆ ಸಂಬಂಧಿಸಿದಂತೆ ಅತ್ಯಾವಶ್ಯಕವಾದ ಮೂಲ ದಾಖಲೆಗಳನ್ನು ಹಾಗೂ ಸದರಿ ಸಂಸ್ಥೆಯವರು ಹೂಡಿಕೆದಾರರಿಗೆ ಭದ್ರತಾ ದೃಷ್ಟಿಯಿಂದ ನೀಡಿರುವ ಮುಖಬೆಲೆ ದಾಖಲೆಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿರುವುದರಿಂದ ಡಿಸೆಂಬರ್ 27 ರ ಒಳಗೆ ಕಚೇರಿ ವೇಳೆಯಲ್ಲಿ, ಖುದ್ದಾಗಿ ನಿಗಧಿಪಡಿಸಿದ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಮೂಲ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬಹುದಾಗಿದೆ ಹಾಗೂ ಜೆರಾಕ್ಸ್ನಿಂದ ಕೂಡಿದ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢಿಕರಿಸಿರಬೇಕು. ನಿಗದಿತ ಅವಧಿಯ ನಂತರ ಬರುವ ಕೋರಿಕೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಉಪ ವಿಭಾಗಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರ, ಮೈಸೂರು ಉಪ ವಿಭಾಗ, ಮೈಸೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಘಟಿಕೋತ್ಸವ ಭವನ ಮತ್ತು ಪ್ರಾದೇಶಿಕ ಕೇಂದ್ರ ಕಟ್ಟಡಗಳ ಉದ್ಘಾಟನೆ
ಉಡುಪಿ, ನವೆಂಬರ್ 27 (ಕರ್ನಾಟಕ ವಾರ್ತೆ) : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಘಟಿಕೋತ್ಸವ ಭವನ ಮತ್ತು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಿರ್ಮಿಸಲಾಗಿರುವ ನೂತನ ಪ್ರಾದೇಶಿಕ ಕೇಂದ್ರಗಳ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಡಿಸೆಂಬರ್ 1 ರಂದು ವಿವಿಯ ಮೈಸೂರಿನಲ್ಲಿ ಹಮ್ಮಿಕೊಂಡಿದೆ.
ರಾಜ್ಯಪಾಲರು, ಉನ್ನತ ಶಿಕ್ಷಣ ಸಚಿವರು ಹಾಗೂ ಕುಲಪತಿಗಳು ಸೇರಿ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್.ಐ.ವಿ ಕುರಿತು ಜಾಗೃತಿ ಮೂಡಿಸಿ- ವಿದ್ಯಾ ಕುಮಾರಿ
ಉಡುಪಿ, ನವೆಂಬರ್ 27 (ಕರ್ನಾಟಕ ವಾರ್ತೆ) : ಹೆಚ್.ಐ.ವಿ ಏಡ್ಸ್ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ತಿಳಿಸಿದ್ದಾರೆ.
ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ , ವಿಶ್ವ ಏಡ್ಸ್ ದಿನಾಚರಣೆ ಏರ್ಪಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಲವು ಮಂದಿ ತಮಗೆ ಅರಿವಿಲ್ಲದೆಯೇ ಹೆಚ್.ಐ.ವಿ ರೋಗಕ್ಕೆ ಒಳಗಾಗಿರುತ್ತಾರೆ, ಹೆಚ್.ಐ.ವಿ ರೋಗಿಯನ್ನು ಬೇರೆ ದೃಷ್ಠಿಯಿಂದ ನೋಡದೇ, ಸಾಮಾನ್ಯ ರೋಗಿಯಂತೆಯೇ ಕಾಣಬೇಕು, ಹೆಚ್.ಐ.ವಿ ಏಡ್ಸ್ ಕುರಿತಂತೆ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ವಿದ್ಯಾ ಕುಮಾರಿ ಹೇಳಿದರು.
ಜಿಲ್ಲೆಯಲ್ಲಿ ಡಿಸೆಂಬರ್ 1 ರಂದು ಬ್ರಹ್ಮಾವರದ ಎಸ್.ಎಂ.ಎಸ್ ಪದವಿಪೂರ್ವ ಕಾಲೇಜಿನಲ್ಲಿ “ನಿಮ್ಮ ಹೆಚ್.ಐ.ವಿ. ಸ್ಥಿತಿಯನ್ನು ತಿಳಿಯಿರಿ” ಎಂಬ ಘೋಷವಾಕ್ಯದೊಂದಿಗೆ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಆಚರಿಸುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ವಿಶ್ವ ಏಡ್ಸ್ ದಿನ ಪ್ರಯುಕ್ತ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೃಹತ್ ಜಾಥಾ ಮತ್ತು ಜನಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮ ಏರ್ಪಡಿಸುವಾಗ ರೆಡ್ ಕ್ರಾಸ್ ಹಾಗೂ ವಿವಿಧ ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆದು ಕಾರ್ಯಕ್ರಮ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಡಿಹೆಚ್ಓ ಡಾ. ರೋಹಿಣಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಚಿದಾನಂದ ಸಂಜು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಭೆ ಮುಂದೂಡಿಕೆ
ಉಡುಪಿ, ನವೆಂಬರ್ 27 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66 ಕಾಮಗಾರಿಯ ಬಗ್ಗೆ ಚರ್ಚಿಸುವ ಸಲುವಾಗಿ ನವೆಂಬರ್ 28 ರಂದು ರಜತಾದ್ರಿ, ಮಣಿಪಾಲದಲ್ಲಿ ನಿಗಧಿಪಡಿಸಲಾಗಿದ್ದ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ತಾಲೂಕು: ಪಿಂಚಣಿ, ಕಂದಾಯ ಅದಾಲತ್ ಮುಂದೂಡಿಕೆ
ಉಡುಪಿ, ನವೆಂಬರ್ 27 (ಕರ್ನಾಟಕ ವಾರ್ತೆ) : ಉಡುಪಿ ತಾಲೂಕಿನ ಉಡುಪಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ನವೆಂಬರ್ 29 ರಂದು ನಿಗಧಿಪಡಿಸಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮವು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಇರುವುದರಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಉಡುಪಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ “ಸಮೃದ್ಧಿ ಯೋಜನೆ”: ಅರ್ಜಿ ಆಹ್ವಾನ
ಉಡುಪಿ, ನವೆಂಬರ್ 27 (ಕರ್ನಾಟಕ ವಾರ್ತೆ) : 2018-19ನೇ ಸಾಲಿನಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಗ್ರಾಮೀಣ/ನಗರ ಪ್ರದೇಶಗಳಲ್ಲಿನ ಪರಿಶಿಷ್ಠ ಪಂಗಡದ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮ ಶೀಲರನ್ನಾಗಿಸಲು “ಸಮೃದ್ಧಿ ಯೋಜನೆ” ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಯಡಿ ಪರಿಶಿಷ್ಠ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ/ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವುದು.
ಈ ಯೋಜನೆಯಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನ. ಆನ್ಲೈನ್ hಣಣಠಿ://sಚಿmಡಿuಜಜhiಥಿoರಿಚಿಟಿe.ಛಿom , ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ ಞmvsಣಜಛಿಟ.ಛಿom , hಣಣಠಿ://ಞಚಿಟಥಿಚಿಟಿಚಿಞeಟಿಜಡಿಚಿ.ಛಿom ಮೂಲಕ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಉಡುಪಿ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ
ಉಡುಪಿ, ನವೆಂಬರ್ 27 (ಕರ್ನಾಟಕ ವಾರ್ತೆ) : 2018-19 ನೇ ಸಾಲಿಗೆ IIಒ, IIಖಿ, IISಛಿ, IIIಖಿs, ಓIಖಿs, IISಇಖs, ಂIIಒS, ಓಐU, ISಒ, IIP, ISI, ಎIPಒಇಖ, SPಂ ಪ್ರತಿಷ್ಟಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ, ರಾಜ್ಯದ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3 ಬಿ ಹಾಗೂ ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನ
ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ , ದೂರವಾಣಿ ಸಂಖ್ಯೆ; 080-65970004 ಹಾಗೂ 0820-2573881 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂವಿಧಾನ ದಿನಾಚರಣೆ-2018
ಉಡುಪಿ, ನವೆಂಬರ್ 27 (ಕರ್ನಾಟಕ ವಾರ್ತೆ) :ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ (ರಿ), ಬೆಲ್ ಓ ಸೀಲ್ ವಾಲ್ವ್ಸ್ ಪ್ರೈ.ಲಿ. ಸಂತೆಕಟ್ಟೆ, ಇವರುಗಳ ಜಂಟಿ ಆಶ್ರಯದಲ್ಲಿ ಬೆಲ್ ಓ ಸೀಲ್ ವಾಲ್ವ್ ್ಸ ಪ್ರೈ.ಲಿ. ಸಂತೆಕಟ್ಟೆ, ಉಡುಪಿ ಇಲ್ಲಿ ನವೆಂಬರ್ 26 ರಂದು “ಸಂವಿಧಾನ ದಿನಾಚರಣೆ-2018” ಆಚರಿಸಲಾಯಿತು.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ ನಾಯ್ಕ್ ಟಿ. ಉದ್ಘಾಟಿಸಿ, ಮಾತನಾಡಿ ಪ್ರತಿಯೊಬ್ಬರ ಜೀವನದಲ್ಲಿ ಕಾನೂನು ಅತ್ಯವಶ್ಯಕವಾಗಿದೆ. ಕಾನೂನಿನ ತಿಳುವಳಿಕೆ ಮತ್ತು ಪಾಲನೆ ನ್ಯಾಯಾಲಯಗಳಿಗಷ್ಟೇ ಸೀಮಿತವಾಗದೆ ನಮ್ಮ ಜವಾಬ್ದಾರಿಯಾಗಬೇಕು. ದೇಶದ ಸಂವಿಧಾನದ ಅಡಿಯಲ್ಲಿ ಕಾನೂನುಗಳು ರಚನೆಯಾಗಿವೆ. ಜನರು ಸರಿಯಾದ ಜೀವನ ನಡೆಸುವುದು ಮತ್ತು ನಮ್ಮ ಹಕ್ಕುಗಳ ರಕ್ಷಣೆ ಸೇರಿದಂತೆ ಕಾನೂನು ಉಲ್ಲಂಘನೆ ಮಾಡಿದವರನ್ನು ಶಿಕ್ಷಿಸುವುದಕ್ಕೂ ಅವಕಾಶ ನೀಡಲಾಗಿದೆ. ಮಾನವನ ಬದುಕಿನ ದಾರಿಯಲ್ಲಿ ನೀತಿಯುತ ಬದುಕಿಗಿಂತ ದೊಡ್ಡದು ಯಾವುದೂ ಇಲ್ಲ. ಬೆಳೆಯುವ ಎಳೆಯರು ಉತ್ತಮ ಜೀವನ ಮೌಲ್ಯಗಳನ್ನು ರೂಢಿಸಿಕೊಂಡು ಬದುಕದಿದ್ದರೆ ಮುಂದೆ ಅವರ ಜೀವನ ಹಸನಾಗುವುದಿಲ್ಲ ಎಂದರು.
ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಲತಾ, ವಕೀಲರ ಸಂಘದ ಅಧ್ಯಕ್ಷ ಹೆಚ್. ರತ್ನಾಕರ ಶೆಟ್ಟಿ, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ, ಬೆಲ್ ಓ ಸೀಲ್ ಸಂಸ್ಥೆಯ ಆಡಳಿತ ನಿರ್ದೇಶಕ ರಾಜೇಶ್ ಕುಮಾರ್ ಸ್ಯಾಲಿನ್,್ಸ ಹೆಚ್.ಆರ್ ಮತ್ತು ಕಾನೂನು ಸಲಹೆಗಾರ ಬಿ.ಕೆ.ನಾರಾಯಣ ಉಪಸ್ಥಿತರಿದ್ದರು.
ಮಾರ್ಕೆಟಿಂಗ್ ನಿರ್ದೇಶಕ ರಾಜೇಶ್ ಗಂಡಿಕೋಠಾ ಕಂಪೆನಿಯ ವಿಶೇಷ ಸಾಧನೆಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ 20, 15, 10 ವರ್ಷ ಪೂರೈಸಿದ ಉದ್ಯೋಗಿಗಳಿಗೆ ಚಿನ್ನ, ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು.
ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎನ್. ನಿತ್ಯಾನಂದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಿಲ್ಭರ್ಟ್ ಸ್ಯಾಲಿನ್ಸ್ ವಹಿಸಿದ್ದರು. ಸ್ವಪ್ನ ಸ್ಯಾಲಿನ್ಸ್ ಕಾರ್ಯಕ್ರಮವನ್ನು ನಿರೂಪಿಸಿದರು.
ಉಡುಪಿ ಬಾಸೆಲ್ ಮಿಷನ ಜ್ಯೂಬಿಲಿ ಚರ್ಚ್ ಸಮಿತಿ ಆಶ್ರಯದಲ್ಲಿ ಭಾನುವಾರದ ಸಭೆ ಯಲ್ಲಿ ಧ್ರಡೀಕರಣ ಸಂಸ್ಕಾರ ವನ್ನು ;9 ಮಕ್ಕಳಿಗೆ ಭಾನುವಾರದ ದಂದು ಸಭೆಯಾ ಸಂಚಾಲಕರಾದ ರೆವೆರೆಂಡ್ ವಿಜಯ ಕುಮಾರ ಮೂಡಲಗಿ ಮತ್ತು ರೆವೆರೆಂಡ್ ಬೆನೆಡಿಕ್ಟ್ ಅಂಚನ್ ಇವರು ನೆರವೇರಿಸಿಕೂಟ್ಟರು
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link