Brief Udupi news with pictures


Richard Dsouza
Kemmannu News Network, 23-12-2018 21:14:39


Write Comment     |     E-Mail To a Friend     |     Facebook     |     Twitter     |     Print


ಡಿಸೆಂಬರ್ 23 (ಭಾನುವಾರ) ಬೆಳಗ್ಗೆ 11 ಗಂಟೆಗೆ, ರಜತಾದ್ರಿ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯುವ ಅಂತಾರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ  ಪತ್ರಕರ್ತರು ಭಾಗವಹಿಸಲು ವಾಹನ ವ್ಯವಸ್ಥೆ ಮಾಡಲಾಗಿದೆ.
ವಾಹನವು ಅಂದು ಬೆಳಗ್ಗೆ 10.40 ಕ್ಕೆ ವಾರ್ತಾ ಇಲಾಖೆಯಿಂದ ಹೊರಡಲಿದ್ದು, ಪತ್ರಕರ್ತರು ಆಗಮಿಸಲು ಕೋರಿದೆ.

ನಿರ್ಲಕ್ಷಿತ ಮಕ್ಕಳೇ ಅಪರಾಧ ಪ್ರಕರಣದಲ್ಲಿ ಭಾಗಿ- ನ್ಯಾ.ಲಾವಣ್ಯ
    ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) :ಸಮಾಜದಲ್ಲಿ ಪೋಷಕರಿಂದ, ಕುಟುಂಬದಿಂದ, ಶಾಲೆಗಳಿಂದ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಿಂದ ನಿರ್ಲಕ್ಷಕ್ಕೆ ಒಳಗಾಗುವ ಮಕ್ಕಳೇ ಮುಂದೆ ಕಾನೂನು ಸಂಘರ್ಷಕ್ಕೆ ಸಿಲುಕುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಮತ್ತು ಜಿಲ್ಲಾ ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ ಹೆಚ್.ಎನ್. ಲಾವಣ್ಯ ತಿಳಿಸಿದ್ದಾರೆ.
    ಅವರು ಶನಿವಾರ, ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಾದ ಮಕ್ಕಳ ಪ್ರಕರಣಗಳ ವೈಯಕ್ತಿಕ ಕಡತದ ದಾಖಲಾತಿ ನಿರ್ವಹಣೆ ಕುರಿತು ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿಗಳಿಗೆ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
    ಮಕ್ಕಳು ದೇಶದ ಸಂಪತ್ತು, ಮಕ್ಕಳ ಬೆಳವಣಿಗೆಯ ಯಾವುದೇ ಹಂತದಲ್ಲಿ ಅವರನ್ನು ಪೋಷಕರು, ಕುಟುಂಬ, ಶಾಲೆ ಮತ್ತು ಸಮಾಜ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ನಿರ್ಲಕ್ಷತೆಯಿಂದ ಕಂಡರೆ ಅಂತಹ ಮಕ್ಕಳು ಕಾನೂನು ಸಂಘರ್ಷಕ್ಕೆ ಸಿಲುಕಿ ಅಪರಾಧ ಪ್ರಕರಣಗಳಲ್ಲಿ ತೊಡಗುವ ಸಾಧ್ಯತೆ ಅಧಿಕವಾಗಿದೆ, ವಿವಿಧ ಕಾರಣಗಳಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗುವ ಮಕ್ಕಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ಮತ್ತು ಅವರ ಬಾಲ್ಯವನ್ನು ಅನುಭವಿಸಲು ಅಗತ್ಯ ವಾತಾವರಣ ನಿರ್ಮಾಣ ಮಾಡಬೇಕು, ಇದರಿಂದ ಮಕ್ಕಳು ಸಮಾಜದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ, ಮಕ್ಕಳ ರಕ್ಷಣೆಗೆ ಹಲವು ಕಾನೂನುಗಳಿವೆ, ಈ ಕಾನೂನುಗಳನ್ನು ಪ್ರತಿಯೊಬ್ಬರೂ ಗೌರವಿಸಿ, ಪಾಲಿಸಿ. ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗುವ ಮಕ್ಕಳನ್ನು ಪೋಷಕರ ರೀತಿ ನೋಡಿಕೊಳ್ಳಿ, ಅವರ ದಾಖಲಾತಿಗಳನ್ನು ವ್ಯವಸ್ಥಿತ ರೀತಿಯಲ್ಲಿ ಸುರಕ್ಷಿತವಾಗಿ ದಾಖಲಿಡಿ, ಈ ದಾಖಲಾತಿಗಳು ಮಕ್ಕಳ ಮುಂದಿನ ಭವಿಷ್ಯದ ದೃಷ್ಠಿಯಿಂದ ಅತ್ಯಗತ್ಯ ಎಂದು ನ್ಯಾಯಾಧೀಶರು ಹೇಳಿದರು.

     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಉದ್ದೇಶದಿಂದ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಗ್ರಾಮ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳು ಮತ್ತು ಈ ಎಲ್ಲಾ ಹಂತದಲ್ಲಿ ಕಾರ್ಯ ನಿರ್ವಹಿಸಬೇಕಾದ ಅಧಿಕಾರಿಗಳು ಹಾಗೂ ಅವರ ಕರ್ತವ್ಯದ ಕುರಿತು ಹಾಗೂ ತುರ್ತು ರಕ್ಷಣಾ ತಂಡಗಳನ್ನು ರಚಿಸುವ ನಿಯಮ ರಚಿಸಲಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ಸ್ನೇಹಿ ವಾತಾವರಣ ನಿರ್ಮಿಸಲಾಗುತ್ತಿದೆ, ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ  ಮಕ್ಕಳ ಬೆಳವಣಿಗೆಗೆ ಉತ್ತಮ ಅವಕಾಶಗಳನ್ನು ಒದಗಿಸುವ ಕೆಲಸ ನಡೆಯಬೇಕು, ಸಂಸ್ಥೆಗಳಲ್ಲಿ ಮಕ್ಕಳಿಗೆ ಉತ್ತಮ ಸೌಲಭ್ಯಗಳನ್ನು ನೀಡಿ, ಉಡುಪಿ ಜಿಲ್ಲೆ ಮಕ್ಕಳ ರಕ್ಷಣೆಯ ವಿಷಯದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಎಲ್ಲಾ ಪಾಲನಾ ಸಂಸ್ಥೆಗಳು ಮತ್ತು ಸಂಬಂದಪಟ್ಟ ಇಲಾಖೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.  
    ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೋನಲ್ಡ್ ಬಿ ಪುರ್ಟಾಡೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್, ಸಂಪನ್ಮೂಲ ವ್ಯಕ್ತಿಗಳಾದ ಸಿಸ್ಟರ್ ಲಿಲ್ಲಿ ಪುಷ್ಪಾ ಮತ್ತು ದೇವಿದಾಸ್ ಎನ್.ಕೆ ಉಪಸ್ಥಿತರಿದ್ದರು.
    ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಯಾನಂದ್ ಸ್ವಾಗತಿಸಿದರು, ಮಕ್ಕಳ ರಕ್ಷಣಾ ಘಟಕದ ಕಾನೂನು ಸಂರಕ್ಷಣಾಧಿಕಾರಿ ಪ್ರಭಾಕರ್ ನಿರೂಪಿಸಿ, ವಂದಿಸಿದರು.

ಮಲ್ಪೆ ಬೀಚ್‍ನಲ್ಲಿ ಗಾಳಿಪಟ ಉತ್ಸವ- ಜಿಲ್ಲಾಧಿಕಾರಿ
     ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) : ಮಲ್ಪೆ ಸಮುದ್ರ ತೀರದಲ್ಲಿ ಡಿಸೆಂಬರ್ 31 ರಂದು ಬೀಚ್ ಗಾಳಿಪಟ ಉತ್ಸವ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
    ಅವರು ಶನಿವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಬೀಚ್ ಗಾಳಿಪಟ ಉತ್ಸವ ಏರ್ಪಡಿಸುವ ಕುರಿತು ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು,
    ಮಲ್ಪೆ ಬೀಚ್ ಅಭಿವೃದ್ದಿ ಸಮಿತಿ ವತಿಯಿಂದ ಮಲ್ಪೆ ಬೀಚ್‍ನಲ್ಲಿ ಡಿಸೆಂಬರ್ 31 ರಂದು  ನಡೆಯುವ ಬೀಚ್ ಗಾಳಿಪಟ ಉತ್ಸವದಲ್ಲಿ ಸುಮಾರು 40 ಮಂದಿ ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೆ ಅತ್ಯಾಕರ್ಷಕ ಮಾದರಿಯ ಗಾಳಿಪಟಗಳನ್ನು ಹಾರಿಸಲಿದ್ದು, ಸಂಜೆ 6 ರಿಂದ 8 ಗಂಟೆಯವರೆಗೆ ಎಲ್.ಇ.ಡಿ ಬಲೂನ್ ಹಾರಾಟ ನಡೆಯಲಿದೆ, ಆಸಕ್ತರಿಗೆ ವಿವಿಧ ರೀತಿಯ ಗಾಳಿಪಟ ತಯಾರಿಸುವ ಕುರಿತಂತೆ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ಸಹ ನಡೆಯಲಿದೆ, ಸಂಜೆ 6.30 ರಿಂದ ಪಂಚ ವಾದ್ಯ, ಕೋರಗ ಡೋಲು, ಹುಲಿ ವೇಷ ಬ್ಯಾಂಡ್, ನಾಸಿಕ್ ಬ್ಯಾಂಡ್, ನಗಾರಿ ಬ್ಯಾಂಡ್ ಮತ್ತು ವಲ್ರ್ಡ್ ಮ್ಯೂಸಿಕ್ ಬ್ಯಾಂಡ್ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 12 ಗಂಟೆಗೆ ಆಕರ್ಷಕ ಸುಡುಮದ್ದು ಪ್ರದರ್ಶನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
    ಸಭೆಯಲ್ಲಿ, ಬೀಚ್ ಗಾಳಿಪಟ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ವಿವಿಧ ಅಧಿಕಾರಿಗಳನ್ನೊಂಡ ಸಮಿತಿಯನ್ನು ಜಿಲ್ಲಾಧಿಕಾರಿ ರಚಿಸಿದರು.
    ಸಭೆಯಲ್ಲಿ ನಗರಸಭೆ ಆಯುಕ್ತ ಆನಂದ್ ಕಲ್ಲೋಳಿಕರ್, ಮಲ್ಪೆ ಬೀಚ್ ಅಭಿವೃದ್ದಿಯ ಸುದೇಶ್ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರ ಪರಿಷ್ಕøತ ಪ್ರವಾಸ
    ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) :ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಸಂಸ್ಕøತಿ ಇಲಾಖಾ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಡಿಸೆಂಬರ್ 23 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
    ಅಂದು ಬೆಳಗ್ಗೆ 11 ಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ರಜತಾದ್ರಿ, ಮಣಿಪಾಲದಲ್ಲಿ ಅಂತರಾಷ್ಟ್ರೀಯ ರೈತರ ದಿನಾಚರಣೆ ಮತ್ತು ರೈತ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ತೆರಳುವರು.
ಸಚಿವರ ಡಿಸೆಂಬರ್ 25 ಮತ್ತು 26 ರ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.

ರಾಷ್ಟ್ರಪತಿ ಭೇಟಿ: ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ
     ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) :ಉಡುಪಿ ಜಿಲ್ಲೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಡಿಸೆಂಬರ್ 27 ರಂದು ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 4 ರ ವರೆಗೆ ಈ ಕೆಳಗೆ ನಮೂದಿಸಿದ ಸ್ಥಳಗಳಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.
     ಮಲ್ಪೆ, ಕಲ್ಮಾಡಿ ಕಡೆಯಿಂದ ಬರುವ ವಾಹನಗಳನ್ನು ಕಲ್ಮಾಡಿ ಜಂಕ್ಷನ್‍ನಿಂದ ಕಿದಿಯೂರು ಜಂಕ್ಷನ್ ಮಾರ್ಗವಾಗಿ ಅಂಬಲಪಾಡಿ ಸ್ವಾಗತ ಗೋಪುರ –ಜೋಡುಕಟ್ಟೆ ಮಾರ್ಗವಾಗಿ ಉಡುಪಿ ನಗರಕ್ಕೆ ಬರುವುದು.
     ಕುಂದಾಪುರ, ಬ್ರಹ್ಮಾವರ, ಸಂತೆಕಟ್ಟೆ ಕಡೆಯಿಂದ ಉಡುಪಿಗೆ ಬರುವ ವಾಹನಗಳು ಅಂಬಾಗಿಲಿನಿಂದ ಬಂದು ರಸಿಕ ಬಾರ್ ಜಂಕ್ಷನ್ ಮುಖೇನ ದೊಡ್ಡಣಗುಡ್ಡೆ, ಮನೋಜಿಗುಜ್ಜಿ, ಲಾ-ಕಾಲೇಜ್ ಜಂಕ್ಷನ್ ,ಎಸ್.ಎಂ.ಕೆ ಜಂಕ್ಷನ್, ಬೀಡನಗುಡ್ಡೆ ಮಾರ್ಗವಾಗಿ ನಗರಕ್ಕೆ ಬರುವುದು. ಕಾರ್ಕಳ, ಹಿರಿಯಡ್ಕ, ಮಣಿಪಾಲ ಕಡೆಯಿಂದ ಬರುವ ವಾಹನಗಳು ಎಸ್‍ಕೆಎಂ ಜಂಕ್ಷನ್, ಬೀಡನಗುಡ್ಡೆ ಎಸ್‍ಎಂಕೆ ಜಂಕ್ಷನ್, ಬೀಡನಗುಡ್ಡೆ , ಮಿಷನ್ ಕಂಪೌಂಡ್ ಮಾರ್ಗವಾಗಿ ನಗರಕ್ಕೆ ಬರುವುದು.
     ನಗರದಿಂದ ಮಲ್ಪೆ ಕಡೆಗೆ ಹೋಗುವ ವಾಹನಗಳು ಜೋಡುಕಟ್ಟೆ, ಕಿನ್ನಿಮುಲ್ಕಿ, ಅಂಬಲಪಾಡಿ-ಕಿದಿಯೂರು ಕಲ್ಮಾಡಿ ಮಾರ್ಗವಾಗಿ ಮಲ್ಪೆಗೆ ಬರುವುದು.
ರಾಷ್ಟ್ರಪತಿ ಆಗಮನ: ಡಿ.26 ರಿಂದ ಅಂಗಡಿ ಮುಂಗಟ್ಟು ಮುಚ್ಚುವ ಬಗ್ಗೆ
    ಉಡುಪಿ, ಡಿಸೆಂಬರ್ 19 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲೆಗೆ ಡಿಸೆಂಬರ್ 27 ರಂದು ರಾಷ್ಟ್ರಪತಿಗಳು ಆಗಮಿಸಿ, ಸಕ್ರ್ಯೂಟ್ ಹೌಸ್, ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವುದರಿಂದ, ಭಧ್ರತಾ ದೃಷ್ಠಿಯಿಂದ, ಉಡುಪಿಯ ಸಂಸ್ಕøತ ಕಾಲೇಜು ಪಕ್ಕದ ಗೇಟಿನಿಂದ ಸಂಪೂರ್ಣ ರಥಬೀದಿಯ ಸುತ್ತ ಹಾಗೂ ರಾಜಾಂಗಣದ ಸುತ್ತಮುತ್ತ ಇರುವ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಡಿ.26 ರ ಮಧ್ಯಾಹ್ನ 12 ಗಂಟೆಯಿಂದ 27 ರ ಮಧ್ಯಾಹ್ನ 3 ಗಂಟೆಯವರೆಗೆ ಮುಚ್ಚುವಂತೆ ಹಾಗೂ ಸಾರ್ವಜನಿಕರಿಗೆ ಸದ್ರಿ ದಿನದಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠ ಭೇಟಿ ನಿರ್ಬಂಧಿಸಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.

ಗ್ರಾಮ ಪಂಚಾಯತ್ ಚುನಾವಣೆ: ಮದ್ಯ ಮಾರಾಟ ನಿಷೇಧ-ಆದೇಶ ಹಿಂತೆಗೆತ
     ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) : ಕಾರ್ಕಳ ತಾಲೂಕು ನಿಟ್ಟೆ ಗ್ರಾಮ ಪಂಚಾಯತ್ ಹಾಗೂ ಕುಂದಾಪುರ ತಾಲೂಕು ಉಳ್ಳೂರು ಗ್ರಾಮ ಪಂಚಾಯತ್‍ಗಳ ಒಂದು ಸದಸ್ಯ ಸ್ಥಾನವು ತೆರವಾಗಿರುವುದರಿಂದ ಆ ಸ್ಥಾನಕ್ಕೆ ಉಪ ಚುನಾವಣೆ ನಡೆಸುವ ಸಲುವಾಗಿ ವೇಳಾಪಟ್ಟಿ ನಿಗಧಿಪಡಿಸಿ, ಜನವರಿ 2 ರಂದು ಮತದಾನ ನಿಗಧಿಪಡಿಸಲಾಗಿದ್ದು, ಸದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಿಸೆಂಬರ್ 17 ರಿಂದ ಜನವರಿ 4, 2019 ರ ವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿರುತ್ತದೆ.
    ಈ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದೊಂದು ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನವಾಗಿದ್ದು, ಒಬ್ಬ ಅಭ್ಯರ್ಥಿಯಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿರುತ್ತದೆ.
    ಆದ್ದರಿಂದ ಸದ್ರಿ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯದೇ ಇರುವ ಕಾರಣದಿಂದ ಡಿಸೆಂಬರ್ 15 ರಂದು ಕಾರ್ಕಳ ತಾಲೂಕು ನಿಟ್ಟೆ ಗ್ರಾಮ ಪಂಚಾಯತ್ ಹಾಗೂ ಕುಂದಾಪುರ ತಾಲೂಕು ಉಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆ
    ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) : ಉಡುಪಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯು ಡಿಸೆಂಬರ್ 21 ರಂದು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಯಿತು.
    ಸಭೆಯಲ್ಲಿ ತಾಲೂಕು ಮಟ್ಟದ ಡಿ.ಸಿ. ಮನ್ನಾ ಜಾಗ, ಅಂಬೇಡ್ಕರ್ ಭವನಗಳ ಜಾಗದ ಮಂಜೂರಾತಿ, ವಸತಿ ಹಾಗೂ ಗ್ರಾಮ ಪಂಚಾಯತ್ 25% ನಿಧಿಯ ಖರ್ಚಿನ ವಿವರ ಹಾಗೂ ಎಲ್ಲಾ ಇಲಾಖೆಯ ಕಾಮಗಾರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಬಗ್ಗೆ ಚರ್ಚಿಸಲಾಯಿತು.
    ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಎಸ್.ಎನ್ ಅಧಿಕಾರಿಗಳನ್ನು ಹಾಗೂ ಸಂಘಟನೆಯ ಪದಾಧಿಕಾರಿಗಳನ್ನು ಸ್ವಾಗತಿಸಿದರು.
ಅಲ್ಪಸಂಖ್ಯಾತರ ಯುವಕ/ಯುವತಿಯರಿಗೆ ತರಬೇತಿ : ಅರ್ಜಿ ಆಹ್ವಾನ

    ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) : ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ 3 ರಿಂದ 4 ತಿಂಗಳ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
    ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಮತ್ತು ಆನ್‍ಲೈನ್ ಮೂಲಕ ಸಲ್ಲಿಸಲಾದ ಅರ್ಜಿ ನಮೂನೆಯ ಪ್ರಿಂಟ್‍ಔಟ್ ಜೊತೆಗೆ ಅಗತ್ಯ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸುವುದು. ಇತರೆ ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳು, ಜಿಲ್ಲಾ ಕಛೇರಿ ವಿಳಾಸ ಮತ್ತು ಆನ್‍ಲೈನ್‍ನಲ್ಲಿ ನೋಂದಾಯಿಸಲು ಅರ್ಜಿಯ ಲಿಂಕ್‍ಗಳು ಇಲಾಖೆಯ ವೆಬ್‍ಸೈಟ್‍ನಲ್ಲಿ ಲಭ್ಯವಿರುತ್ತದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ಡಿಸೆಂಬರ್ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್: hಣಣಠಿs://goಞಜom.ಞಚಿಡಿ.ಟಿiಛಿ.iಟಿ  ಅಥವಾ ದೂರವಾಣಿ ಸಂಖ್ಯೆ: 0820-2574881 ಕ್ಕೆ ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
            
ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆ:  ಅರ್ಜಿ ಆಹ್ವಾನ
    ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) :ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಯನ್ವಯ ಉಡುಪಿ ಜಿಲ್ಲೆಯಲ್ಲಿರುವ ಸಿ ಪ್ರವರ್ಗದ ಒಂದು ಅಧಿಸೂಚಿತ ಸಂಸ್ಥೆ / ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾಧಿಗಳು/ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವ್ಯವಸ್ಥಾಪನಾ ಸಮಿತಿ ರಚಿಸುವ ಪ್ರವರ್ಗ ಸಿ ಸಂಸ್ಥೆ ಕಾರ್ಕಳ ತಾಲೂಕಿನ ವಿಷ್ಣುಮೂರ್ತಿ ದೇವಸ್ಥಾನ, ಮರ್ಣೆ.
    ಕನಿಷ್ಟ 25 ವರ್ಷ ವಯಸ್ಸಿನ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿಮಾಡಿ, ಜನವರಿ 19, 2019 ರ ಒಳಗೆ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಯ ದತ್ತಿಗಳ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.(ನಿಗದಿತ ಅರ್ಜಿ ನಮೂನೆ ಜಿಲ್ಲಾಧಿಕಾರಿಗಳ ಕಚೇರಿ/ ಸಹಾಯಕ ಆಯುಕ್ತರ ಕಚೇರಿಯಲ್ಲಿ ಲಭ್ಯವಿರುತ್ತದೆ) ಎಂದು ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪ್ರೆಂಟಿಸ್ ತರಬೇತಿ: ಡಿಪ್ಲೋಮಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
  ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) : ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು (ಊ.ಂ.ಐ.ಃಚಿಟಿgಚಿಟoಡಿe) ಇವರಿಂದ ಡಿಪ್ಲೋಮಾ ತಾಂತ್ರಿಕ ಪದವಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
  ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿ ತೇರ್ಗಡೆ ಜೊತೆಗೆ ಡಿಪ್ಲೋಮಾ ಎರೋನಾಟಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಮೈಕಾನಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಎಲೆಕ್ಟ್ರೀಕಲ್ ಮತ್ತು ಎಲೇಕ್ಟ್ರೋನೀಕ್ಸ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್  ಎಲೇಕ್ಟ್ರೋನೀಕ್ಸ್ & ಕಮ್ಯೂನಿಕೇಷನ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್, ಡಿಪ್ಲೋಮಾ ಕಂಪ್ಯೂಟರ್ ಸೈನ್ಸ್ & ಕಮ್ಯೂನಿಕೇಷನ್ ಇಂಜಿನಿಯರಿಂಗ್/ ಇನ್‍ಪೋರ್ಮೆಶನ್ ಸೈನ್ಸ್ & ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಮೆಟಾಲ್‍ಲೂರ್ಜಿ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಕರ್ಮಶಿಯಲ್ ಪ್ರಾಕ್ಟೀಸ್, ಟ್ರೇಡ್‍ಗಳಲ್ಲಿ ಡಿಪ್ಲೋಮಾ ವಿದ್ರ್ಯಾತೆಯನ್ನು ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
 
ಅಪ್ರೆಂಟಿಸ್ ರಿಜಿಸ್ಟ್ರೇಶನ್: ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಖಿeಛಿhಟಿiಛಿಚಿಟ ಖಿಡಿಚಿiಟಿiಟಿg Iಟಿsಣiಣuಣe, ಊiಟಿಜusಣಚಿಟಿ ಂeಡಿoಟಿಚಿuಣiಛಿs ಐimiಣeಜ, Suಡಿಚಿಟಿರಿಚಿಟಿ ಆಚಿs ಖoಚಿಜ, ಗಿimಚಿಟಿಚಿಠಿuಡಿಚಿ Posಣ ಃಚಿಟಿgಚಿಟoಡಿe 080-22323358, 22322517 ಗೆ ಅರ್ಜಿ ಸಲ್ಲಿಸಬಹುದಾಗಿದೆ.  ಸರ್ಕಾರದ ನಿಯಮದಂತೆ ಸ್ಟೈಪೆಂಡ್ ಲಭ್ಯವಿರುತ್ತದೆ.
   ಈ ಮೇಲೆ ನಮೂದಿಸಲಾದ ವಿದ್ಯಾರ್ಹತೆ ಹೊಂದಿರುವ ಉಡುಪಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಎಸ್‍ಎಸ್‍ಎಲ್‍ಸಿ ಮತ್ತು ಡಿಪ್ಲೋಮಾ ಇನ್ ಇಂಜಿನಿಯರಿಂಗ್/ಪ್ರೋವಿಷನಲ್ ಡಿಪ್ಲೋಮಾ ಪ್ರಮಾಣ ಪತ್ರವನ್ನು ಸರಕಾರ ಮಾನ್ಯತೆ ಮಾಡಿದ ತಾಂತ್ರಿಕ ಶಿಕ್ಷಣ ಮಂಡಳಿ, ಅಂಕಪಟ್ಟಿಗಳ ಮತ್ತು ಅನ್ವಯವಾಗುವ ಮೀಸಲಾತಿ ಪ್ರಮಾಣಪತ್ರಗಳ ಝೆರಾಕ್ಸ್ ಪ್ರತಿಗಳ ಸಹಿತವಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ಇವರನ್ನು ಸಂಪರ್ಕಿಸಿ, ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 10, 2019 ಕೊನೆಯ ದಿನವಾಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
 ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ, ಕಚೇರಿ ದೂರವಾಣಿ ಸಂಖ್ಯೆ (0820)2574869, 9480259790, 8618599698, 9945856670 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಾಗಾರ
    ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) :ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಖeseಚಿಡಿಛಿh ಒeಣhoಜoಟogಥಿ ಚಿಟಿಜ ಆಚಿಣಚಿ ಂಟಿಚಿಟಥಿsis usiಟಿg Sಣಚಿಣisಣiಛಿಚಿಟ ಖಿooಟs ಎಂಬ ವಿಷಯದ ಮೇಲೆ 2019 ಜನವರಿ, 2, 3 ಮತ್ತು 4 ರಂದು ಒಟ್ಟು ಮೂರು ದಿನಗಳ ಕಾರ್ಯಾಗಾರವನನ್ನು ಅಕಾಡೆಮಿಯ ಕಚೇರಿಯಲ್ಲಿ( ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಬೆಂಗಳೂರು) ಆಯೋಜಿಸಲಾಗಿದೆ.
    ಈ ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಸದರಿ ಕಾರ್ಯಾಗಾರಕ್ಕೆ ಪ್ರವೇಶ ದರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 100 ರೂ. ಹಾಗೂ ಅಧ್ಯಾಪಕರಿಗೆ / ಸಂಶೋಧನ ವಿದ್ಯಾರ್ಥಿಗಳಿಗೆ 200 ರೂ.ಗಳಾಗಿದ್ದು, ಮೊದಲು ನೋಂದಾಯಿಸಿಕೊಂಡವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ನೋಂದಾಯಿಸಿಕೊಳ್ಳಲು ಡಿಸೆಂಬರ್ 31 ಕೊನೆಯ ದಿನ.
     ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ವೆಬ್‍ಸೈಟ್ (hಣಣಠಿ://ತಿತಿತಿ.ಞsಣಚಿಛಿಚಿಜemಥಿ.iಟಿ)  ಹಾಗೂ ವೈಜ್ಞಾನಿಕಾಧಿಕಾರಿ ವಿ.ಕೆ.ಶ್ರೀನಿವಾಸ್ (ಮೊ.9620767819) ರವರನ್ನು ಸಂಪರ್ಕಿಸುವಂತೆ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಕಾರ್ಕಳ: 15 ನೇ ಕನ್ನಡ ಸಾಹಿತ್ಯ ಸಮ್ಮೇಳನ
ಉಡುಪಿ, ಡಿಸೆಂಬರ್ 22 (ಕರ್ನಾಟಕ ವಾರ್ತೆ) :ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಕಳ ತಾಲೂಕು ಘಟಕದಲ್ಲಿ ಹದಿನೈದನೆ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 29 ರಂದು ಶ್ರೀ ಮಹಾಗಣಪತಿ ಭಜನಾ ಮಂಡಳಿ ಸಭಾಭವನ, ಗಣಪತಿ ಕಟ್ಟೆ, ನಲ್ಲೂರು, ಕಾರ್ಕಳದಲ್ಲಿ  ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಸಾಹಿತ್ಯ ಚಿಂತಕ ಮುನಿರಾಜ ರೆಂಜಾಳ ವಹಿಸಲಿದ್ದಾರೆ.

ರೈತರಿಗೆ 10 ಲಕ್ಷದ ವರೆಗೆ ಬಡ್ಡಿರಹಿತ ಸಾಲ ನೀಡಲು ಪ್ರಯತ್ನ- ಡಾ.ಜಯಮಾಲಾ

ಉಡುಪಿ : ರೈತರು ಮನೆ ನಿರ್ಮಾಣ, ತೋಟ ಅಭಿವೃದ್ಧಿ, ಬೇಲಿ ನಿರ್ಮಾಣ ಮುಂತಾದ ಅಭಿವೃದ್ದಿ ಕಾರ್ಯಕ್ರಮಗಳನ್ನು ಮಾಡಲು ರೂ.10 ಲಕ್ಷ ದ ವರೆಗೆ ಬಡ್ಡಿ ರಹಿತ ಸಾಲ ನೀಡುವ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಜಾರಿಗೆ ಪ್ರಯತ್ನಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಭರವಸೆ ನೀಡಿದ್ದಾರೆ.

     ಅವರು ಅವರು ಭಾನುವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ಕೃಷಿ ಸಂಬಂದಿತ ಇಲಾಖೆಗಳು ಹಾಗೂ ಕೃಷಿಕ ಸಮಾಜದ ವತಿಯಿಂದ ಆಯೋಜಿಸಿದ್ದ  ಅಂತಾರಾಷ್ಟ್ರೀಯ ರೈತರ ದಿನಾಚರಣೆ ಮತ್ತು ರೈತ ಜನ ಸಂಪರ್ಕ ಸಭೆಯಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.

 ರೈತರಿಗೆ ಸಾಲ ನೀಡಿ, ಮನ್ನಾ ಮಾಡುವ ಬದಲು ಮನೆ ನಿರ್ಮಾಣ, ತೋಟ ಅಭಿವೃದ್ಧಿ, ಬೇಲಿ ನಿರ್ಮಾಣ ಮುಂತಾದ ಅಭಿವೃದ್ದಿ ಕಾರ್ಯಕ್ರಮಗಳನ್ನು ಮಾಡಲು ರೂ.10 ಲಕ್ಷ ದ ವರೆಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಎಂದು ಸಭೆಯಲ್ಲಿ ರೈತರು ಸಚಿವರನ್ನು ಕೋರಿದರು, ಈ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಜಾರಿಗೆ ಪ್ರಯತ್ನಿಸಲಾಗುವುದು ಎಂದ ಸಚಿವರು ಎಲ್ಲಾ ರೈತರು ತಮ್ಮ ಬೆಳೆಗಳಿಗೆ ಬೆಲೆ ವಿಮೆ ಮಾಡಿಸುವಂತೆ ತಿಳಿಸಿ, ರೈತರಿಗೆ ಈ ಕುರಿತು ಪ್ರತಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಗಳು ಮಾಹಿತಿ ನೀಡುವಂತೆ ಸೂಚಿಸಿದರು.

      ಜಿಲ್ಲೆಯಲ್ಲಿ ಜಲಾನಯನ ಯೋಜನೆಯಡಿ ಹಲವು ಅಕ್ರಮ ನಡೆದಿರುವ ಬಗ್ಗೆ ರೈತರು ಸಚಿವರ  ಗಮನಕ್ಕೆ ತಂದರು, ಈ ಕುರಿತಂತೆ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ವರದಿ ಪಡೆಯಲಾಗುವುದು ಎಂದು ಸಚಿವರು ಹೇಳಿದರು.

     ಜಿಲ್ಲೆಯಲ್ಲಿ ಅಡಿಕೆ ಕೊಳೆ ರೋಗ ಪರಿಹಾರ ವಿತರಣೆ ಸಮರ್ಪಕವಾಗಿ ನಡೆದಿಲ್ಲ ಎಂಬ ರೈತರ ದೂರಿಗೆ ಉತ್ತರಿಸಿದ ಜಿಲ್ಲಾ ತೋಟಗಾರಿಕಾ ಇಲಖೆಯ ಉಪ ನಿರ್ದೇಶಕು ಭುವನೇಶ್ವರಿ, ಜಿಲ್ಲೆಯಲ್ಲಿ 5770 ಹೆಕ್ಟೆರ್ ಅಡಿಕೆ ಕೊಳೆ ರೋಗ ಹಾನಿ ಬಗ್ಗೆ ಅರ್ಜಿ ಸಲ್ಲಿಕೆಯಾಗಿದ್ದು, ಆನ್‍ಲೈನ್ ಮೂಲಕ ಅರ್ಜಿಗಳನ್ನು ವಿಲೆವಾರಿ ಮಾಡುತ್ತಿದ್ದು, ಇನ್ನು 2600 ಅರ್ಜಿ ಗಳು ಆನ್ ಲೈನ್ ನಲ್ಲಿ ದಾಖಲಿಸಲು ಬಕಿ ಇದ್ದು, ತಾಂತ್ರಿಕ ಕಾರಣಗಳಿಂದ ದಾಖಲಾತಿ ವಿಳಂಬವಾಗಿದೆ, ಈಗಾಗಲೇ 512 ಮಂದಿಗೆ 47.38 ಲಕ್ಷ ಪರಿಹಾರ ಪಾವತಿಸಲಾಗಿದೆ ಎಂದರು, ಬಾಕಿ ಉಳಿದ ಅರ್ಜಿಗಳನ್ನು ಡಿಸೆಂಬರ್ 31 ರೊಳಗೆ ವಿಲೇವಾರಿ ಮಾಡುವಂತೆ ಸಚಿವರು ಸೂಚನೆ ನೀಡಿದರು.

 ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವ ಕುರಿತಂತೆ ನಡೆದ ಚರ್ಚೆಯಲ್ಲಿ, ಸಕ್ಕರೆ ಬೆಳೆಯಲು ತಾವು ಸಿದ್ದರಿದ್ದು ಕಾರ್ಖಾನೆಯ ಅವಶ್ಯಕತೆಯಿದೆ ಎಂದು ರೈತರು ತಿಳಿಸಿದರು, ಈಗಾಗಲೇ 2800 ರೈತರು ಕಬ್ಬು ಬೆಳೆಯಲು ಸಿದ್ದರಿರುವುದಾಗಿ ಒಪ್ಪಿಗೆ ಪತ್ರ ನೀಡಿರುವುದಾಗಿ ರೈತ ಸಂಘದ ನಾಯಕರು ತಿಳಿಸಿದರು, ಅದರೆ ವಾರಾಹಿ ಯೋಜನೆ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ಶೀಘ್ರವಾಗಿ ಯೋಜನೆಯ ಪೂರ್ಣಗೊಂಡು ಸಂಪೂರ್ಣ ನೀರಾವರಿ ದೊರೆತಲ್ಲಿ ಸಕ್ಕರೆ ಕಾರ್ಖಾನೆಗೆ ಕಬ್ಬಿನ ಕೊರತೆಯಾಗುವುದಿಲ್ಲ, ಕಾರ್ಖಾನೆಯನ್ನು ಪುನಃಶ್ಚೇತನ ಮಾಡುವ ಬದಲು ಮರು ನಿರ್ಮಾಣ ಮಾಡಬೇಕು ಎಂದು ರೈತರು ಕೋರಿದರು.

ವಾರಾಹಿ ಯೋಜನೆಯ ಪ್ರಗತಿ ಕುರಿತು ಸಚಿವರ ಪ್ರಶ್ನೆಗೆ ಉತ್ತರಿಸಿದ ಅಧಿಕಾರಿಗಳು, ಎಡದಂಡೆ ಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು, ಬಲದಂಡೆ ಕಾಮಗಾರಿಯ ಯೋಜನೆಗೆ ಅಂತಿಮ ಅನುಮೋದನೆ ದೊರೆಯುವುದು ಬಾಕಿ ಇದ್ದು, 2019 ರಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದರು, ವಾರಾಹಿ ಯೋಜನೆಯ ಬಿಲ್ಲಾಡಿ ಬಳಿ ಕಾಲುವೆ ನಡುವೆ ಬಂಡೆ ಬಂದಿದ್ದು, ಈ ಬಂಡೆಯನ್ನು ಒಡಯದೆ ಅದರ ನಂತರದ ಭಾಗದ ಕಾಮಗಾರಿಯನ್ನು  ಮುಂದುರೆಸಿರುವುದರಿಂದ ಕಾಲುವೆ ವ್ಯಾಪ್ತಿಯ  3 ಗ್ರಾಮಗಳಿಗೆ ನೀರು ದೊರೆಯುತ್ತಿಲ್ಲ ಈ ಕುರಿತಂತೆ ಅಧಿಕಾರಿಗಳ ನಿರ್ಲಕ್ಷತೆ ವಿರುದ್ದ ರೈತರು ಅಸಮಧಾನ ವ್ಯಕ್ತಪಡಿಸಿದರು. ಕಾಲುವೆ ನಡುವೆ ಇರುವ ಬಂಡೆ ಒಡೆಯುವ ಕುರಿತಂತೆ ಇರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಶೀಘ್ರದಲ್ಲಿ ಬಂಡೆ ಒಡೆದು ಗ್ರಾಮಗಳಿಗೆ ನೀರಿನ ಸೌಲಭ್ಯ ಒದಗಿಸುವಂತೆ ಸಚಿವರು ಸೂಚಿಸಿದರು. ವಾರಾಹಿ ಯೋಜನೆಯ ಕುರಿತಂತೆ ಪ್ರತ್ಯೇಕ ಸಭೆ ನಡೆಸುವಂತೆ ಸಚಿವರನ್ನು ರೈತರು ಕೋರಿದರು.

ಭತ್ತ ಮತ್ತು ತೆಂಗಿಗೆ ಬೆಂಬಲ ಬೆಲ ನೀಡುವ ಕುರಿತು, ಅಡಿಕೆ ಕೊಳೆ ರೋಗಕ್ಕೆ ಸೂಕ್ತ ಔಷಧಿ ಕಂಡು ಹಿಡಿಯುವ ಬಗ್ಗೆ,  ಕಾಡುಪ್ರಾಣಿ ಹಾವಳಿಯಿಂದ  ಬೆಳ ರಕ್ಷಿಸುವ ಬಗ್ಗೆ, ಕೃಷಿ ಅಧಿಕಾರಿಗಳು ಗ್ರಾಮಗಳಿಗೆ ಬಂದು ರೈತರಿಗೆ  ಸೌಲಭ್ಯಗಳ ಕುರಿತು ಮಾಹಿತಿ ನೀಡುವ ಬಗ್ಗೆ , ಡ್ರೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ  ಸಭೆಯಲ್ಲಿ ಚರ್ಚೆ ನಡೆಯಿತು.

  ವಿವಿಧ ರೈತ ಸಂಘಟನೆಗಳ ಮುಖಂಡರು, ರೈತರು ಸಭೆಯಲ್ಲಿ ಉಪಸ್ಥಿತರಿದ್ದರು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Rozaricho Gaanch April, 2024 - Ester issueRozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi