Brief Mumbai, Mangalore news with pictures
Kemmannu News Network, 26-12-2018 20:18:00
ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್ ಮೂಡುಬಿದಿರೆಯ ಪದ್ಮಾವತಿ ಕಲಾಮಂದಿರದಲ್ಲಿ ಭಾನುವಾರ (ಡಿ.23) ಆಯೋಜಿಸಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ವಸಹಾಯ ಸಂಘಗಳ ಸಮಾವೇಶವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಮೂಡುಬಿದಿರೆ ಶ್ರೀ ಜೈನ ಮಠದ ‘ಭಾರತಭೂಷಣ’ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ನೇಮಿರಾಜ ಆರಿಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
ಸ್ವಸಹಾಯ ಸಂಘಗಳಿಂದ ಸ್ವಾವಲಂಬಿ ಜೀವನ: ಡಾ.ಡಿ.ವೀರೇಂದ್ರ ಹೆಗ್ಗಡೆ
ಮೂಡಬಿದ್ರೆ(ದಕ್ಷಿಣ ಕನ್ನಡ ಜಿಲ್ಲೆ): ಸ್ವಸಹಾಯ ಸಂಘಗಳು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ನೆರವಾಗಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.
ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್ಮೂಡುಬಿದಿರೆ ಪದ್ಮಾವತಿ ಕಲಾಮಂದಿರದಲ್ಲಿ ಭಾನುವಾರ (ಡಿ.23) ಆಯೋಜಿಸಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ವಸಹಾಯ ಸಂಘಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, ಸಣ್ಣಪುಟ್ಟ ಖರ್ಚಿಗೂ ಪುರಷರನ್ನು ಅವಲಂಬಿಸಬೇಕಿದ್ದ ಮಹಿಳೆಯರು ಇಂದು ಸ್ವಸಹಾಯ ಸಂಘಗಳಲ್ಲಿ ತೊಡಗಿ ಪುರಷರಿಗೇ ಆರ್ಥಿಕವಾಗಿ ನೆರವಾಗುವಷ್ಟು ಸಬಲರಾಗಿದ್ದಾರೆ ಎಂದರು.
ಸ್ವಯಂಸೇವೆಯಿಂದ ವ್ಯಕ್ತಿ ಬಲಿಷ್ಟನಾದರೆ, ಸ್ವಸಹಾಯ ಸಂಘಗಳು ಸಂಸಾರ ಹಾಗೂ ಸಮಾಜವನ್ನು ಸದೃಢಗೊಳಿಸುತ್ತವೆ ಎಂದ ಅವರು,
ಪುರಷರು ಉದ್ಯೋಗ, ವ್ಯವಹಾರದಲ್ಲೇ ಮುಳಿಗಿರುವ ಇಂದಿನ ಕಾಲದಲ್ಲಿ ಸಂಸಾರದ ಜತೆಗೆ ಧರ್ಮ ರಕ್ಷಣೆಯ ಜವಾಬ್ದಾರಿಯೂ ಮಹಿಳೆಯರ ಮೇಲಿದೆ ಎಂದು ನುಡಿದರು.
ಪಂಚಮಹಾವೈಭವ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2019ರ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದಲ್ಲಿ ಈ ಬಾರಿ ಪಂಚಕಲ್ಯಾಣದ ಬದಲು ಶ್ರೀ ಬಾಹುಬಲಿ ಸ್ವಾಮಿಯ ಪಂಚಮಹಾ ವೈಭವ ಆಯೋಜಿಸುವ ಮೂಲಕ ಐತಿಹಾಸಿಕ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು.
ಮೂಡುಬಿದಿರೆ ಶ್ರೀ ಜೈನಮಠದ‘ಭಾರತಭೂಷಣ’ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಆಶೀರ್ವಚನ ನೀಡಿ, ರಾಜಕಾರಣ ಗಳನ್ನು, ಅಧಿಕಾರಿಗಳನ್ನು ಸಂದೇಹದಿಂದ ನೋಡುವುದನ್ನು ಬಿಟ್ಟು ದೇಶದ ಪ್ರಗತಿಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಬೇಕು ಎಂದು ಹೇಳಿದರು.
ಜೈನ ಧರ್ಮೀಯರನ್ನು 2ಬಿ ಪ್ರವರ್ಗಕ್ಕೆ ಸೇರಿಸುವ ಬೇಡಿಕೆಗೆ ಕುರಿತು ಮಾತನಾಡಿ, ಸರಕಾರ ಈ ಬೇಡಿಕೆಯನ್ನು ಗಂಭೀರವಾಗಿ ತೆಗೆದುಕೊಂಡು ಬೇರೆ ಸಮುದಾಯದವರೊಂದಿಗೆ ಜೈನ ಸಮುದಾಯದ ಪ್ರಗತಿಗೆ ನೆರವಾಗಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.
ಜೈನ ಧರ್ಮೀಯರನ್ನು 2ಬಿ ಪ್ರವರ್ಗಕ್ಕೆ ಸೇರಿಸುವುದು, ಜೈನ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮತ್ತಿತರ ಬೇಡಿಕೆಗಳ ಹಕ್ಕೋತ್ತಾಯ ಪತ್ರವನ್ನು ಟ್ರಸ್ಟ್ನಿಂದ ಸ್ವೀಕರಿಸಿ ಮಾತನಾಡಿದ ಶಾಸಕ ಉಮಾನಾಥ ಕೋಟ್ಯಾನ್ ಅವರು ತಾವು ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಸಮಿತಿ ಸದಸ್ಯರಾಗಿದ್ದು ಸಮಿತಿಯ ಮುಂದಿನ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಬೇಡಿಕೆ ಈಡೇರಿಸುವ ಪ್ರಾಮಾಣ ಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಸ್ವಸಹಾಯ ಸಂಘಗಳಿಂದ ‘ನಾನು’ ಶಬ್ಧದ ಬಳಕೆ ಕಡೆಮೆಯಾಗಿ ‘ನಾವು’ ಶಬ್ಧ ಬಳಕೆ ಹೆಚ್ಚಾಗಿರುವುದು ಉತ್ತಮ ಬೆಳವಣ ಗೆ ಎಂದು ನುಡಿದರು.
ಸಮಾವೇಶದಲ್ಲಿ ಟ್ರಸ್ಟಿ ಶಮಂತ್ ಕುಮಾರ್ ಜೈನ್, ಅಂತಾರಾಷ್ಟ್ರೀಯ ಕರಾಟೆ ಸಾಧಕ ಸುಪಾಶ್ರ್ವ ಕೊಂಬ, ರಾಷ್ಟ್ರಪ್ರಶಸ್ತಿ ಪುರಸ್ಕøತ ಪ್ರತಿಭೆ ಪಂಚಮಿ ಮಾರೂರು, ಮಂಗಳೂರು ಎಪಿಎಂಸಿ ನೂತನ ಅಧ್ಯಕ್ಷ ಪ್ರವೀಣ್ ಜೈನ್, ಕಾರ್ಕಳ ಎಪಿಎಂಸಿ ಅಧ್ಯಕ್ಷ ಮಪಾಲು ಜಯವರ್ಮ ಜೈನ್ ಅವರನ್ನು ಸನ್ಮಾನಿಸಲಾಯಿತು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನೇಮಿರಾಜ ಆರಿಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ, ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮಾಹಿತಿ ಸಂಯೋಜಕ ಅಬ್ದುಲ್ ಖಾದರ್, ಮೂಡುಬಿದಿರೆ ಜೈನ್ ಮಿಲನ್ ಅಧ್ಯಕ್ಷೆ ಶ್ವೇತಾ ಜೈನ್, ಸಂಘದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸಲಹಾ ಸಮಿತಿ ಅಧ್ಯಕ್ಷೆಶ್ವೇತಾ ಪ್ರವೀಣ್, ಸಂಚಾಲಕ ಸುದೀಪ್ ಜೈನ್, ನ್ಯಾಯವಾದಿ ಶಶಿಕಿರಣ್ ಜೈನ್, ಸ್ವಸಹಾಯ ಸಂಘಗಳ ಮೇಲ್ವಿಚಾರಕ ಶಿವರಾಜ್ ಜೈನ್, ಟ್ರಸ್ಟಿಗಳಾದ ಎ.ವಿ.ಶೆಟ್ಟಿ ಧರ್ಮಸ್ಥಳ, ಶಶಿಕಿರಣ್, ಶಮಂತ್ ಕುಮಾರ್ ಜೈನ್, ಸುಜಾತಾ ಎನ್.ಆರಿಗ ಉಪಸ್ಥಿತರಿದ್ದರು. ತ್ರಿಶಲಾ, ಪ್ರಮೀಳಾ, ಧನಶ್ರೀ ಪ್ರಾರ್ಥಿಸಿದರು.ಸರಳಾ ಸಂಪತ್ ಸ್ವಾಗತಿಸಿದರು. ಜೀವಿತಾ, ಅಭಿಲಾಷಾ ಕಾರ್ಯಕ್ರಮ ನಿರೂಪಿಸಿದರು. ತ್ರಿಶಲ ವಂದಿಸಿದರು.
ಈ ಸಂದರ್ಭದಲ್ಲಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಹಾಗೂ ಸದಸ್ಯರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಮಹಾಸಭೆ
ಮುಂಬಯಿ (ಬ್ರಹ್ಮಾವರ), ಡಿ.25: ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿಯ ಮಹಾಸಭೆ ಕಳೆದ ಭಾನುವಾರ ಕರ್ನಾಟಕ ವಿಶ್ವಕರ್ಮ ಅಸೋಶೀಯೇಶನ್ ಮುಂಬಯಿ ಮಾಜಿ ಅಧ್ಯಕ್ಷ ಜಿ.ಟಿ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಯಾವುದೇ ವ್ಯಕ್ತಿ ಅಧಿಕಾರಕ್ಕಾಗಿ ಅಧಿಕಾರಕ್ಕೆ ಬರಬಾರದು ದೇವಸ್ಥಾನದ ಅಭಿವೃದ್ಧಿಗೆ ಮತ್ತು ಸಮಾಜದ ಅಭಿವೃದ್ಧಿಗೆ ಆಡಳಿತ ಮಂಡಳಿ ಪೂರಕವಾಗುವರು ಬೇಕು ಎಂದರು.
ಕೂಡುವಳಿಕೆಯ ನಾನಾ ಭಾಗದಿಂದ ಆಡಳಿತ ಮಂಡಳಿಗೆ ಆಕಾಂಕ್ಷಿಗಳ ಪಟ್ಟಿ ಬಂದಿದ್ದು ಸಭಾಧ್ಯಕ್ಷರು ದೇವಸ್ಥಾನದ ಅಭಿವೃದ್ಧಿ ಮತ್ತು ಪರಂಪರೆಗೆ ಅನುಕೂಲವಾಗುವ ರೀತಿಯಲ್ಲಿ ಆಯ್ದ ಕೆಲವರ ಹೆಸರನ್ನು ಹೇಳಿದಾಗ ಸರ್ವಾನುಮತದಿಂದ ಆಯ್ಕೆ ನಡೆಯಿತು.
ಆಡಳಿತ ಮೋಕ್ತೇಸರರಾಗಿ ವಿ.ಶ್ರೀಧರ ಆಚಾರ್ಯ ವಡೆಯರಹೋಬಳಿ ಪುನರಾಯ್ಕೆಗೊಂಡರು.2ನೇ ಮೋಕ್ತೇಸರರಾಗಿ ಪ್ರವೀಣ ಆಚಾರ್ಯ ರಂಗನಕೆರೆ 3ನೇ ಮೊಕ್ತೇಸರರಾಗಿ ರವಿ ಆಚಾರ್ಯ ಕೆಳಾರ್ಕಳ ಬೆಟ್ಟು ಮತ್ತು ಇನ್ನಿತರ ಸದಸ್ಯರ ಆಯ್ಕೆ ನಡೆಯಿತು. ಬ್ರಹ್ಮಾವರ ವೃತ್ತ ನೀರೀಕ್ಷಕ ಶ್ರೀಕಾಂತ್, ಪಿಎಸ್ಐ ರಾಘವೇಂದ್ರ ದೇವಸ್ಥಾನದ ತಂತ್ರಿಗಳಾದ ಲಕ್ಷ್ಮೀಕಾಂತ ಶರ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೇವಸ್ಥಾನದ ಎಲ್ಲಾ ಗ್ರಾಮ ಮೋಕ್ತೇಸರ ಸಮಕ್ಷಮದಲ್ಲಿ ಮತ್ತು ಸಂಘ ಸಂಸ್ಥೆಗಳ ಪಧಾಧಿಕಾರಿಗಳು ಆಯ್ಕೆ ಪ್ರಕ್ರೀಯೆಯಲ್ಲಿದ್ದರು. ದಯಾನಂದ ಕೃಷ್ಣಯ್ಯ ಆಚಾರ್ಯ ಸ್ವಾಗತಿಸಿದರು. ವಿ.ಶ್ರೀಧರ ಆಚಾರ್ಯ ಪ್ರಸ್ತವನೆಗೈದರು. ಟಿ.ಜಿ ಆಚಾರ್ಯ ಸಭಾಕಲಾಪ ನಿರೂಪಿಸಿದರು. ಗಣಪತಿ ಆಚಾರ್ಯ ವರದಿ ವಾಚಿಸಿದರು. ಹರೀಶ ಆಚಾರ್ಯ ಕುಳಾಯಿ ಲೆಕ್ಕಪತ್ರ ಮಂಡಿಸಿ, ನಾಗರಾಜ ಆಚಾರ್ಯ ವಂದಿಸಿದರು.
Mumbai, Dec.26: Santaclauz Celebration with Sex workers Kids at Byculla at SAI NGO Organisation in Mumbai.
ಮಹಾರಾಷ್ಟ್ರ ಕುರುಬರ ಸಂಘ ಸಂಭ್ರಮಿಸಿದ 531ನೇ ದಾಸಶ್ರೇಷ್ಠ ಕನಕದಾಸರ ಜಯಂತೋತ್ಸವ
ಕನಕದಾಸರ ಕೀರ್ತನೆಗಳು ಸರ್ವಕಾಲಿಕ ಶ್ರೇಷ್ಠವು : ಸಚಿವ ಮಹಾದೇವ್ ಜಾನಕರ್
ಮುಂಬಯಿ, ಡಿ.25: ಸಮ ಸಮಾಜದ ನಿರ್ಮಾಣಕ್ಕೆ ಹಾಗೂ ಸಮುದಾಯದ ಸಮಗ್ರ ಬೆಳವಣಿಗೆಗೆ ತೊಡಕಾಗಿರುವ ಜಾತಿ ವ್ಯವಸ್ಥೆಯನ್ನು ಕಿತ್ತೊಗೆದಾಗ ಮಾತ್ರ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂಬ ಸರ್ವಶ್ರೇಷ್ಠ ಸಂದೇಶವನ್ನು ತಮ್ಮ ಕೀರ್ತನೆಗಳ ತಿಳಿಸಿಕೊಡುವ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸಿದ ಕನಕದಾಸರ ಕೀರ್ತನೆಗಳು ಸರ್ವಕಾಲಿಕ ಶ್ರೇಷ್ಠವಾಗಿದೆ ಎಂದು ಮಹಾರಾಷ್ಟ್ರ ಸರಕಾರದ ಪಶುವೈದ್ಯ ಹಾಗೂ ಹೈನುಗಾರಿಕೆ, ಮೀನುಗಾರಿಕೆ ಅಭಿವೃದ್ಧಿ ಸಚಿವ ಮಹಾದೇವ್ ಜಾನಕರ್ ಹೇಳಿದರು.
ಇತ್ತೀಚೆಗೆ ಮುಂಬಯಿ ಮಹಾನಗರದ ಮಸ್ಜಿದ್ಬಂದರ್ ಇಲ್ಲಿನ ದರಿಯಸ್ತನ್ ಮಂದಿರದಲ್ಲಿ ಮಹಾರಾಷ್ಟ್ರ ಕುರುಬರ ಸಂಘದ ಅಧ್ಯಕ್ಷ ಮಂಜೇ ಚಿಕ್ಕೇಗೌಡ ಅವರ ಅಧ್ಯಕ್ಷತೆ ಹಾಗೂ ಚೆಂಬೂರು ಶ್ರೀ ಶನೇಶ್ವರ ದೇವಾಲಯದ ಧರ್ಮಾಧಿಕಾರಿ ಕೆ.ಎಂ ರಾಮಸ್ವಾಮಿ ಆಶೀರ್ವಚನದೊಂದಿಗೆ ಕುರುಬರ ಸಂಘವು 531ನೇ ದಾಸಶ್ರೇಷ್ಠ ಕನಕದಾಸರ ಜಯಂತೋತ್ಸವ ಆಚರಿಸಿದ್ದು ಕಾರ್ಯಕ್ರಮ ಉದ್ಘಾಟಿಸಿ ಸಚಿವ ಜಾನಕರ್ ಮಾತನಾಡಿದರು.
ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲಯನೇನದರೂ ಬಲ್ಲಿರ ಎಂಬ ಕನಕದಾಸರ ಅದ್ಬುತ ಕೀರ್ತನೆಯ ಸಾಲು ಜಾತಿ ವ್ಯವಸ್ಥೆಯನ್ನು ಕಿತ್ತು ಹಾಕಲು ಸಹಕಾರಿಯಾಗುತ್ತದೆ. ಹುಟ್ಟುವಾಗ ನಾವೆಲ್ಲರೂ ಬರಿಗೈಯಲ್ಲಿ ಬರುತ್ತೇವೆ. ಹೋಗುವಾಗಲು ಬರಿಗೈಯ್ಯಲ್ಲಿ ಹೋಗುತ್ತೇವೆ ಆದರೆ ಇರುವ ಮಧ್ಯೆ ಏಕೆ ಜಾತಿ, ಮತ, ಪಂಥ, ಧರ್ಮ ಏಕೆ ಬೇಕು ಎಂದು ಕನಕದಾಸರು ಜಾತಿ ಜಾತಿ ಎಂದು ಬಡಿದಾಡುವವರಿಗೆ 500ವರ್ಷಗಳ ಕಿವಿ ಮಾತು ಹೇಳಿದ್ದಾರೆ. ಆದರೆ ಇಂದಿಗೂ ಜಾತಿ ವ್ಯವಸ್ಥೆ ದೂರವಾಗದೇ ಇರುವುದು ಸರಿಯಲ್ಲ ಎಂದರು. ಶೋಷಿತ ಸಮುದಾಯದಿಂದ ಬಂದ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಏಳಿಗೆಯನ್ನು ಮುಖ್ಯ ಗುರಿಯನ್ನಾಗಿಸಿಕೊಂಡು ಉತ್ತಮ ನೂರಾರು ಕೀರ್ತನೆಗಳನ್ನು ಬರೆದಿದ್ದಾರೆ. ಕನಕದಾಸರ ಶ್ರೇಷ್ಠ ಸಂದೇಶ ಸಾರುವ ಕೀರ್ತನೆಗಳನ್ನು ಮೇಲ್ವರ್ಗದ ಪುರಂದರದಾಸರು ಬರೆದಿದ್ದಾರೆ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಿದೆ ಹಾಗಾಗಿ ಸಾಹಿತ್ಯ ಸಂಶೋಧಕರು ಇದನ್ನು ತಡೆಯುವ ಮೂಲಕ ಕನಕ ದಾಸರ ಕೀರ್ತನೆಗಳನ್ನು ಅವರ ಹೆಸರಿನಲ್ಲಿಯೇ ಉಳಿಯುವಂತೆ ಅಗತ್ಯ ಕ್ರಮ ವಹಿಸಬೇಕಾದ ಅಗತ್ಯವಿದೆ. ಸಮಾಜದಲ್ಲಿ ಜಾತಿಯ ಹೆಸರಿನಲ್ಲಿ ನಡೆಯುತ್ತಿದ್ದ ದೌರ್ಜನ್ಯ ದಬ್ಬಾಳಿಕೆ ವಿರುದ್ಧ ತಮ್ಮ ವಚನಗಳ ವಿರುದ್ದ ಹೋರಾಟ ಮಾಡಿದರು. ಶೋಷಿತ ಸಮಾಜವನ್ನು ಜಾಗೃತಿಗೊಳಿಸುವ ಕೆಲಸ ಮಾಡಿದರು. ಅಲ್ಲದೆ ಜಗಜ್ಯೋತಿ ಬಸವಣ್ಣನಂತೆಯೇ ಕನಕದಾಸರೂ ಸಹ ಜಾತಿ ಪದ್ಧತಿಯ ವಿರುದ್ಧ ತಮ್ಮ ವೈಚಾರಿಕ ಅಭಿಪ್ರಾಯವನ್ನು ಸ್ಪಷ್ಠವಾಗಿ ಹೇಳುವ ಮೂಲಕ ಸಮಾಜದ ಅಭಿವೃದ್ಧಿ ಜಾತಿಗಳು ನಾಶವಾಗಬೇಕು. ಎಂಬುದನ್ನು ಸಮಾಜಕ್ಕೆ ತೋರಿಸಿಕೊಟ್ಟಿರುವ ಸಾಮಾಜಿಕ ಕ್ರಾಂತಿಯ ಹರಿಕಾರ ಭಕ್ತ ಕನಕದಾಸರು ಕನಕದಾಸರು ಕೇವಲ ಒಂದೇ ಒಂದು ಸಮಾಜಕ್ಕೆ ಸೀಮಿತರಾದವರಲ್ಲ ಹಾಗಾಗಿ ಕನಕದಾಸರ ತತ್ವಾದರ್ಶಗಳು ಹಾಗೂ ಸಂದೇಶಗಳನ್ನು ಸಮಾಜದ ಪ್ರತಿಯೊಬ್ಬರೂ ಪಾಲಿಸುವ ಮೂಲಕ ಕನಕದಾಸರ ಆಶಯದಂತೆ ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು. ನಮ್ಮ ಕುರುಬ ಸಮಾಜವು ದೇಶಾದ್ಯಂತ ಸುಮಾರು 18ಕೋಟಿಗೂ ಹೆಚ್ಚು ಜನಸಂಖ್ಯೆ ಇದೆ. ನಮ್ಮ ಸಮಾಜಕ್ಕೆ ರಾಜಕೀಯ ಸ್ಥಾನ ಮಾನಗಳು ಇನ್ನೂ ಹೆಚ್ಚು ಸಿಗಬೇಕು. ನಮ್ಮ ಸಮಾಜವು ಅಖಿಲ ಭಾರತ ಮಟ್ಟದಲ್ಲಿ ಸಂಘಟಿತರಾಗುವ ಮೂಲಕ ನಮ್ಮ ಸಮಾಜದ ಹಿರಿಯ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ಮಟ್ಟದಲ್ಲಿ ನಾಯಕನ್ನಾಗಿ ರೂಪಿಸಿದರೆ ನಮ್ಮ ಸಮಾಜವು ಹೆಚ್ಚಿನ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ. ನಮ್ಮ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಬಂದು ನೆಲೆ ನಿಂತಿರುವ ಕನ್ನಡಿಗರು ಸಂಘಟಿತರಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಇದು ಅಭಿವೃದ್ಧಿಯ ದಿಕ್ಕಿನತ್ತ ಸಾಗಲು ಉತ್ತಮ ದಾರಿಯಾಗಿದೆ ಎಂದು ಸಚಿವ ಮಹಾದೇವ್ ಜಾನಕರ್ ಹೇಳಿದರು.
ಹಿಂದುಳಿದ ವರ್ಗಗಳು ಅಭಿವೃದ್ಧಿಯಾಗಬೇಕಾದರೆ ಮೊದಲು ಸಂಘಟಿತರಾಗಬೇಕು ಹಾಗೂ ಕಡ್ಡಾಯವಾಗಿ ಶಿಕ್ಷಣ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಂಘಟಿತರಾಗಿ ತಮಗೆ ಸಂವಿಧಾನ ಬದ್ದವಾಗಿ ಸಿಗಬೇಕಾದ ಸೌಲಭ್ಯಗಳನ್ನು ಕೇಳಿ ಪಡೆದುಕೊಳ್ಳಬೇಕು ಎಂದು ರಾಮಸ್ವಾಮಿ ನೆರೆದ ಸದ್ಭಕ್ತರನ್ನು ಹರಸಿದರು.
ಆರ್ಎಸ್ಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಕ್ಕಿಸಾಗರ್, ಮಸ್ಜಿದ್ ಬಂದರ್ ಕಾಂಗ್ರೆಸ್ ಕಿಮಿಟಿ ಅಧ್ಯಕ್ಷ ವಿನೋದ್ ದೇವಿಚ್ಚಾ, ವಲ್ಲಿ ಎಂ.ಶೇಖ್, ಅಮಾನ್ ಬೈ, ಕುಮಾರ್, ಮಂಡ್ಯ ಜಿಲ್ಲಾ ಪಂಚಾಯಿತಿ ಸದಸ್ಯ ಕೋಡಿಮಾರನಹಳ್ಳಿ ದೇವರಾಜು, ಕೆ.ಆರ್ ಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ರವೀಂದ್ರಬಾಬು, ರಾಷ್ಟ್ರೀಯ ಭಾರತ್ ಜ್ಯೋತಿ ಸರ್ವೋತ್ಕೃಷ್ಟ ಪ್ರಶಸ್ತಿ ಪುರಸ್ಕøತ ಕೆ.ಆರ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಡಾ| ಮೀನಾಕ್ಷಿ ರಮೇಶ್, ಕೆ.ಆರ್.ಪೇಟೆ ತಾಲೂಕು ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ಸಣ್ಣನಿಂಗೇ ಗೌಡ, ಕೆ.ಆರ್ ಪೇಟೆ ಪುರಸಭೆಯ ಮಾಜಿ ಸದಸ್ಯ ಸ್ನೇಹಿತರಮೇಶ್, ಮಹಾರಾಷ್ಟ್ರ ಕುರುಬರ ಸಂಘದ ಉಪಾಧ್ಯಕ್ಷ ಯೋಗೇಶ್ ಸಣ್ಣಪ್ಪಗೌಡ, ಶಿವ ಪುಟ್ಟೇಗೌಡ, ಕೋಶಾಧಿಕಾರಿ ಗಂಗಾಧರ ಕಾಳೇಗೌಡ, ಹೆಚ್.ಕೆ ಮಂಜೇಗೌಡ, ಸಲಹೆಗಾರ ಉಮೇಶ್ ಕಾಳೇಗೌಡ, ನಿರ್ದೇಶಕರಾದ ದೇವರಾಜು ಬೀರೇಗೌಡ, ಮಂಜೇಗೌಡ, ರಮೇಶ್ ನಂಜೇಗೌಡ, ಉಮೇಶ್ ಅಣ್ಣಪ್ಪ ಗೌಡ, ಷಣ್ಮುಖ (ಮುತ್ತಣ್ಣ) ದೊಡ್ಡೇಗೌಡ, ರವಿ ಜವರೇಗೌಡ, ಉದ್ಯಮಿ ರಮೇಶ್ಗೌಡ, ಅಣ್ಣೇ ಚೌಡೇನಹಳ್ಳಿ ರವಿಗೌಡ, ಉಪಾಧ್ಯಕ್ಷೆ ರತ್ನಮ್ಮ ಆರ್, ಗೌಡ, ಕಾರ್ಯದರ್ಶಿ ಸರಸ್ವತಿ ಆರ್.ಮಂಡಲ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿವಿಧ ಸಂಘ ಸಂಸ್ಥೆಗಳ ಹಾಗೂ ಸಮಾಜದ ಮುಖಂಡರು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಕನಕದಾಸರ ಭಾವಚಿತ್ರವನ್ನು ಪ್ರಮುಖ ರಸ್ತೆಗಳಲ್ಲಿ ಪೂರ್ಣಕುಂಭ ಮೆರವಣಿಗೆ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆಯೊಂದಿಗೆ ವೇದಿಕೆಗೆ ತರಲಾಯಿತು. ಗೌರವ ಕಾರ್ಯದರ್ಶಿ ರವಿಕುಮಾರ್ ಕಾಳೇಗೌಡ ಸ್ವಾಗತಿಸಿದರು. ಅಮೃತಾಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಘಟಕಧ್ಯಕ್ಷೆ ರೇಷ್ಮಾಪಿ.ಗೌಡ ವಂದಿಸಿದರು. ಬೆಂಗಳೂರಿನ ಹೆಸರಾಂತ ಗಾಯಕರಾದ ಶಿವಕುಮಾರ್ಎಂ.ಮೌರ್ಯ ಮತ್ತು ಸಂಗಡಿಗರು ಕನಕದಾಸರ ಕೀರ್ತನೆಗಳನ್ನು ಪ್ರಸ್ತುತಪಡಿಸಿದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link