Brief Udupi News with pictures
Kemmannu News Network, 22-02-2019 20:31:00
ಪತ್ರಿಕಾ ಆಹ್ವಾನ
ಫೆಬ್ರವರಿ 23 (ನಾಳೆ) ಬೆಳಗ್ಗೆ 10.30 ಕ್ಕೆ ರಜತಾದ್ರಿಯ ವಾಜಪೇಯಿ ಸಭಾಂಗಣದಲ್ಲಿ, ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ವಿತರಣೆ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ನಡೆಯಲಿರುವ ಕಾರ್ಯಾಗಾರದಲ್ಲಿ ಪತ್ರಕರ್ತರು ಭಾಗವಹಿಸಲು ವಾಹನ ವ್ಯವಸ್ಥೆ ಮಾಡಲಾಗಿದೆ.
ವಾಹನವು ಅಂದು ಬೆಳಗ್ಗೆ 10.10 ಕ್ಕೆ ವಾರ್ತಾ ಇಲಾಖೆಯಿಂದ ಹೊರಡಲಿದ್ದು, ಪತ್ರಕರ್ತರು ಆಗಮಿಸಲು ಕೋರಿದೆ.
ಮತದಾರರ ವಿಶೇಷ ಆಂದೋಲನಾ ಕಾರ್ಯಕ್ರಮ
ಉಡುಪಿ, ಫೆಬ್ರವರಿ 22 (ಕರ್ನಾಟಕ ವಾರ್ತೆ): ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂಬ ಹಿನ್ನೆಲೆಯಲ್ಲಿ, ಇನ್ನೂ ಕೂಡಾ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಲು ಬಾಕಿ ಇರುವ ಮತದಾರರು ಅದರಲ್ಲೂ ಪ್ರಮುಖವಾಗಿ ಯುವ ಹಾಗೂ ವಿಕಲಚೇತನ ಮತದಾರರಿಗೆ ತಮ್ಮ ಹೆಸರನ್ನು ನೊಂದಾಯಿಸಲು ಅನುಕೂಲವಾಗುವಂತೆ ಫೆಬ್ರವರಿ 23 ಮತ್ತು 24 ಹಾಗೂ ಮಾರ್ಚ್ 2 ಮತ್ತು 3 ರಂದು ಜಿಲ್ಲೆಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ವಿಶೇಷ ಆಂದೋಲನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲೆಯಲ್ಲಿ ಇನ್ನೂ ಕೂಡಾ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಲು ಬಾಕಿ ಇರುವ ಮತದಾರರು ಈ ವಿಶೇಷ ಆಂದೋಲನದ ಸದುಪಯೋಗ ಪಡೆಯಬಹುದಾಗಿದೆ. ಹಾಗೂ ನಿಗಧಿ ಪಡಿಸಿದ ದಿನಗಳಂದು ಸಂಬಂಧ ಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳು ( ಬಿ.ಎಲ್.ಓ) ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಅವರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಮತದಾರ ಪಟ್ಟಿಗೆ ಹೆಸರು ನೊಂದಣಿ ಮಾಡಲು ನಮೂನೆ- 6 ನ್ನು, ತಿದ್ದುಪಡಿಗಾಗಿ ನಮೂನೆ-8 ನ್ನು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ನಮೂನೆ-7 ನ್ನು ನಿಗದಿತ ನಮೂನೆಯಲ್ಲಿ ತಮ್ಮ ವಿಳಾಸ ವಿರುವ ಕ್ಷೇತ್ರದ ಮತಗಟ್ಟೆ ಹಂತದ ಅಧಿಕಾರಿ (ಬಿಎಲ್ಓ)ಗಳಿಗೆ ದಾಖಲೆಯೊಂದಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈಆರ್ಸಿಎಸ್ ಬೇಸಿಕ್ ಓರಿಯೆಂಟೇಶನ್, ತರಬೇತಿ ಶಿಬಿರ
ಉಡುಪಿ, ಫೆಬ್ರವರಿ 22 (ಕರ್ನಾಟಕ ವಾರ್ತೆ): ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಉಡುಪಿ ಮತ್ತು ಮಂಗಳೂರು ವಿಶ್ವ ವಿದ್ಯಾಲಯ ಆಯೋಜಿಸಿರುವ ರಾಜ್ಯ ಮಟ್ಟದ ವೈಆರ್ಸಿಎಸ್ ಬೇಸಿಕ್ ಓರೀಯೆಂಟೇಶನ್ ಮತ್ತು ತರಬೇತಿ ಶಿಬಿರವು ಫೆಬ್ರವರಿ 23 ರಿಂದ 27ರ ವರೆಗೆ ಅಂಬಲಪಾಡಿಯ ಪ್ರಗತಿ ಸೌಧದಲ್ಲಿ ನಡೆಯಲಿದೆ.
ಶಿಬಿರವನ್ನು ಫೆಬ್ರವರಿ 23 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉದ್ಘಾಟಿಸಲಿದ್ದು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆಯ ಸಭಾಪತಿ ಡಾ. ಉಮೇಶ್ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ.
ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ
ಉಡುಪಿ, ಫೆಬ್ರವರಿ 22 (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಫೆಬ್ರವರಿ 26 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬೈಂದೂರು ಪ್ರವಾಸಿ ಮಂದಿರ, ಫೆಬ್ರವರಿ 27 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಫೆಬ್ರವರಿ 28 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ದೂರು ಸ್ವೀಕರಿಸಲಾಗುವುದು.
ಉಡುಪಿ ತಾಲೂಕಿಗೆ ಸಂಬಂದಪಟ್ಟಂತೆ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂರವಾಣಿ ಸಂಖ್ಯೆ 0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ದೂರವಾಣಿ ಸಂಖ್ಯೆ: 0820-2536661 ಸಂಪರ್ಕಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವಿಭಾಗ, ಕರ್ನಾಟಕ ಲೋಕಾಯುಕ್ತ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ, ಫೆಬ್ರವರಿ 22 (ಕರ್ನಾಟಕ ವಾರ್ತೆ): ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಫೆಬ್ರವರಿ 25 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ರ ವರೆಗೆ ಎನ್.ಪಿ.ಸಿ.ಡಿ.ಸಿ.ಎಸ್ ಹಾಗೂ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ.ಎ., ಬಿ.ಕಾಂ. ವಿದ್ಯಾರ್ಥಿಗಳಿಗೆ ವಾರಾಂತ್ಯದ ತರಗತಿ
ಉಡುಪಿ, ಫೆಬ್ರವರಿ 22 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಉಡುಪಿ ಇಲ್ಲಿ 2018-19 ನೇ ಸಾಲಿನಲ್ಲಿ ಪ್ರವೇಶಾತಿ ಹೊಂದಿರುವ ಪ್ರಥಮ ಬಿ.ಎ ಮತ್ತು ಬಿ.ಕಾಂ., ವಿದ್ಯಾರ್ಥಿಗಳಿಗೆ ಫೆಬ್ರವರಿ 24 ರಿಂದ ವಾರಾಂತ್ಯದ ತರಗತಿಗಳನ್ನು ನಗರದ ಎಂ.ಜಿ.ಎಂ ಕಾಲೇಜ್ ನಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯಡಕ : ಅಂತರ ಕಾಲೇಜು ಸಾಂಪ್ರದಾಯಿಕ, ಜನಪದ ಆಟ
ಉಡುಪಿ, ಫೆಬ್ರವರಿ 22 (ಕರ್ನಾಟಕ ವಾರ್ತೆ): ಶ್ರೀ ವೆಂಕಟರಮಣ ಮಹಿಳಾ ಕಾಲೇಜು, ಕಾರ್ಕಳ ಇಲ್ಲಿ ಫೆಬ್ರವರಿ 20 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಾಂಪ್ರದಾಯಿಕ ಮತ್ತು ಜನಪದ ಆಟಗಳಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕದ ವಿದ್ಯಾರ್ಥಿಗಳು ಸ್ಪರ್ಧಿಸಿ, ಬಹುಮಾನಗಳನ್ನು ಗಳಿಸಿರುತ್ತಾರೆ.
ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನ ಪರವಾಗಿ ಅಭಿನಂದಿಸಲಾಯಿತು. ಕುಂಟೆಬಿಲ್ಲೆ ಸ್ಪರ್ಧೆಯಲ್ಲಿ ಕು. ಕ್ಷಮಾ ತೃತೀಯ ಸ್ಥಾನ, ಅಡಿಕೆ ಹಾಳೆ ಓಟ ಮಹಿಳೆಯರ ವಿಭಾಗದಲ್ಲಿ ಕು. ಕವಿತಾ ಮತ್ತು ಕು. ಪೂಜಾ ತೃತೀಯ ಸ್ಥಾನ, ಅಡಿಕೆ ಹಾಳೆ ಓಟ ಪುರುಷರ ವಿಭಾಗದಲ್ಲಿ ಅಂಬರೀಶ್ ಮತ್ತು ಅಖಿಲ್ ತೃತೀಯ ಸ್ಥಾನ, ಲಗೋರಿ ಸ್ಪರ್ಧೆಯಲ್ಲಿ ಸಚಿನ್ ನಾಯ್ಕ್ ಮತ್ತು ತಂಡ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಪ್ರಾಂಶುಪಾಲರಾದ ಡಾ.ನಿಕೇತನ, ಕ್ರೀಡಾ ಕಾರ್ಯದರ್ಶಿ ಪ್ರತಿಮಾ, ಸಚಿನ್ ನಾಯ್ಕ್, ಅಧ್ಯಾಪಕರು, ಕಛೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿರಿಯಡಕ: ಮತದಾನ ಪ್ರಾತ್ಯಕ್ಷಿಕೆ
ಉಡುಪಿ, ಫೆಬ್ರವರಿ 22 (ಕರ್ನಾಟಕ ವಾರ್ತೆ): ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇಲ್ಲಿ ಫೆಬ್ರವರಿ 20 ರಂದು ಜಿಲ್ಲಾ ಚುನಾವಣಾ ವಿಭಾಗದ ವತಿಯಿಂದ ಮತದಾನದ ಕುರಿತು ಪ್ರಾತ್ಯಕ್ಷಿಕೆ ನಡೆಯಿತು.
ಚುನಾವಣಾ ಸೆಕ್ಟರ್ ಅಧಿಕಾರಿ ಪ್ರತಾಪ್ ಚಂದ್ರ ಶೆಟ್ಟಿ ಇವರು ಮತದಾನದ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಮೊದಲ ಬಾರಿಗೆ ಮತವನ್ನು ಚಲಾಯಿಸುವ ವಿದ್ಯಾರ್ಥಿಗಳು ಪ್ರಾತ್ಯಕ್ಷಿಕೆಯ ಪ್ರಯೋಜನವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಸಾಲ್ಯಾನ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ಶೀತಲ್, ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, ಮತದಾರ ಸಾಕ್ಷರತಾ ಕ್ಲಬ್ನ ಸಂಚಾಲಕಿ ಪ್ರೊ. ಸುಜಯಾ ಕೆ.ಎಸ್., ಎನ್.ಎಸ್.ಎಸ್. ಯೋಜನಾಧಿಕಾರಿ ಪ್ರವೀಣ ಶೆಟ್ಟಿ, ಸುಭಾಷ್ ಹೆಚ್.ಕೆ., ವಿದ್ಯಾರ್ಥಿ ರಾಯಭಾರಿ ದೀಪಕ್ ಶೆಟ್ಟಿ, ಬೋಧಕರು, ಕಛೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಪರಿಚಿತ, ಮೃತ ವ್ಯಕ್ತಿಗಳ ಮಾಹಿತಿ ಪತ್ತೆ ಬಗ್ಗೆ
ಉಡುಪಿ, ಫೆಬ್ರವರಿ 22 (ಕರ್ನಾಟಕ ವಾರ್ತೆ): ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾದ ದಾಖಲಾದ ಮಂಜುನಾಥ (42 ವ) ಮತ್ತು ಹರೀಶ್ ನಾಯ್ಕ್ (47 ವ) ಎಂಬುವವರು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520555 / 9449827833 ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Maundy Thursday 2024 | LIVE From St. Theresa’s Church, Kemmannu | Udupi |
2 BHK Flat for sale on the 6th floor of Eden Heritage, Santhekatte, Kallianpur, Udupi
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, Kemmannu
Annual Church Feast 2024 | St. Theresa’s Church, Kemmannu
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link