Brief Udupi News with pictures
Kemmannu News Network, 29-03-2019 11:53:24
ಯಕ್ಷಗಾನ, ಬೀದಿನಾಟಕ ಮೂಲಕ ಮತದಾನ ಅರಿವು
ಹೇ ಇವತ್ತು ನಿನಗೆ ಕೂಲಿ ಕೆಲಸಕ್ಕೆ ರಜೆ ಎಂದ ಜಮೀನ್ದಾರರ ಮಾತಿನಿಂದ ಕಳವಳಗೊಂಡ ಸಿದ್ದ, ಬುದ್ದೀ ಇವತ್ತು ಕೂಲಿ ಇಲ್ಲ ಎಂದರೆ ನಾನು ನನ್ನ ಕುಟುಂಬದ ಹೊಟ್ಟೆಗೆ ತಣ್ಣಿರು ಬಟ್ಟೆಯೇ ಗತಿ ಎಂದ, ಇದಕ್ಕೆ ಉತ್ತರಿಸಿದ ಜಮೀನ್ದಾರ ಹೇ ಸಿದ್ದ, ಇಂದು ಮತದಾನದ ದಿನ ಕೂಲಿ ಕೆಲಸಕ್ಕೆ ಮಾತ್ರ ರಜೆ, ನೀನು ಓಟು ಹಾಕಿ ಬಾ, ಎಷ್ಟು ಹೊತ್ತಾದರೂ ಸರಿ ಬಾ ಇಂದಿನ ಕೂಲಿ ಕೊಡುತ್ತೇನೆ ಆದರೆ ಮತದಾನ ಮಾತ್ರ ತಪ್ಪಿಸಬೇಡ ಎನ್ನುತ್ತಾನೆ,
ಇದು ಉಡುಪಿ ಜಿಲ್ಲೆಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ಹಮ್ಮಿಕೊಂಡಿರುವ ಬೀದಿನಾಟಕದ ಒಂದು ಪ್ರಸಂಗ.
ಕಳೆದ ಬಾರಿ ಜಿಲ್ಲೆಯಲ್ಲಿ ನಡೆದ ಚುನಾವಣೆಗಳಲ್ಲಿ ಅತೀ ಕಡಿಮೆ ಮತದಾನ ನಡೆದ ಮತಗಟ್ಟೆಗಳನ್ನು ಗುರುತಿಸಿರುವ ಜಿಲ್ಲಾ ಸ್ವೀಪ್ ಸಮಿತಿ, ಈ ಪ್ರದೇಶಗಳಲ್ಲಿ ಯಕ್ಷಗಾನ ಮತ್ತು ಬೀದಿನಾಟಕಗಳನ್ನು ನಡೆಸುವ ಮೂಲಕ ಮತದಾನ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಂಡಿದೆ.
ಕೂಲಿ ಕಾರ್ಮಿಕ ಮಾತ್ರವಲ್ಲದೇ, ಮತದಾನ ದಿನದಂದು ರಜೆ ಮಾಡಿ ಪ್ರವಾಸಕ್ಕೆ ಹೋಗುವ ನೌಕರರು, ರಜೆ ಎಂದು ದಿನವಿಡೀ ಕ್ರಿಕೆಟ್ ಆಟವಾಡುವ ಯುವಕರಿಗೆ, ಚುನಾವಣೆಯಲ್ಲಿ ರಾಜಕೀಯ ಅಭ್ಯರ್ಥಿಗಳು ನೀಡುವ ಹಣ, ಮದ್ಯದ ಆಮಿಷಕ್ಕೆ ಒಳಗಾಗಿ, ಮತದಾನ ಮಾಡುವ ಇಚ್ಛೆ ಇದ್ದರೂ ಕುಡಿತದ ಅಮಲಿನಲ್ಲಿ ಮತದಾನ ಮಾಡದೇ ಮತ ವಂಚಿತನಾಗುವ ಕುಡುಕನಿಗೆ ಅರಿವು ಮೂಡಿಸುವ ಪ್ರಸಂಗಗಳ ಮೂಲಕ ಎಲ್ಲಾ ವರ್ಗದ ಜನರಿಗೆ ಈ ಬೀದಿ ನಾಟಕ ಅರಿವು ಮೂಡಿಸಲಿದೆ.
ಸುರತ್ಕಲ್ನ ಕರಾವಳಿ ಜಾನಪದ ಕಲಾ ವೇದಿಕೆಯ ಮೂಲಕ ಬೀದಿ ನಾಟಕ ಏರ್ಪಡಿಸಲಾಗುತ್ತಿದ್ದು, ಈ ತಂಡವು ಸಾರ್ವಜನಿಕವಾಗಿ ಅತೀ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಹಾಗೂ ಕಳೆದ ಬಾರಿ ಕಡಿಮೆ ಮತ ಪ್ರಮಾಣ ದಾಖಲಾದ ಪ್ರದೇಶದಲ್ಲಿ ಬೀದಿ ನಾಟಕ ನಡೆಯಲಿದೆ. ಬೀದಿ ನಾಟಕದಲ್ಲಿ ಮತದಾನ ಕುರಿತು ಜಾಗೃತಿ ಮಾತ್ರವಲ್ಲದೇ ಮತದಾರರ ಸಹಾಯವಾಣಿಯ ಬಗ್ಗೆ, ಜಿಲ್ಲಾಡಳಿತದಿಂದ ಮತದಾರರಿಗೆ ಕಲ್ಪಿಸಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದೆ. ಕರಾವಳಿ ಜಾನಪದ ಕಲಾವೇದಿಕೆಯ ಗಿರೀಶ್ ನಾವಡ ಬೀದಿ ನಾಟಕ ರಚಿಸಿದ್ದು, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧೂ ಬಿ ರೂಪೇಶ್ ಪ್ರಾಯೋಗಿಕವಾಗಿ ಬೀದಿ ನಾಟಕ ವೀಕ್ಷಿಸಿದ್ದು, ಪ್ರದರ್ಶನಕ್ಕೆ ಅನುಮತಿ ನೀಡಿದ್ದಾರೆ.
ಮತದಾನಕ್ಕೆ ಮನ್ನಣೆ ನೀಡಿದ ರಾಜ : ಸಮೃದ್ದಿಪುರದ ಮಹಾರಾಜ ರತ್ನವರ್ಮ ಮಕ್ಕಳಿಲ್ಲದ ಕಾರಣ ತನ್ನ ಸಾಮ್ರಾಜ್ಯಕ್ಕೆ ಸೂಕ್ತ ನಾಯಕನ ಆಯ್ಕೆಗಾಗಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಪ್ರಜೆಗಳಿಂದಲೇ ಅರ್ಹರನ್ನು ಆಯ್ಕೆ ಮಾಡುವ ಉದ್ದೇಶದಿಂದ ಮತದಾನ ನಡೆಸುತ್ತಾನೆ, ಈ ಮೂಲಕ ಸಮರ್ಥ ನಾಯಕನ ಆಯ್ಕೆಯನ್ನು ಪ್ರಜೆಗಳಿಗೇ ನೀಡುತ್ತಾನೆ.
ಇದು ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸಿದ್ದ ಪಡಿಸಿರುವ ಯಕ್ಷಗಾನ ಕಥಾ ಪ್ರಸಂಗ, ಈ ಯಕ್ಷಗಾನದಲ್ಲಿ ಮತದಾನ ಮಾಡುವ ಬಗ್ಗೆ ಮಾತ್ರವಲ್ಲದೇ, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಅರ್ಹರನ್ನು ಆಯ್ಕೆ ಮಾಡುವ ಬಗ್ಗೆ ಮಹಾರಾಜನ ಮೂಲಕ ಜನತೆಗೆ ಸಂದೇಶ ನೀಡಲಾಗಿದೆ, ಕರಾವಳಿಯಲ್ಲಿ ಯಕ್ಷಗಾನಕ್ಕೆ ತನ್ನದೇ ಆದ ವೈಶಿಷ್ಟತೆಯ ಜೊತೆಗೆ ಅತ್ಯಂತ ಹೆಚ್ಚು ಜನಪ್ರಿಯವಾಗಿದ್ದು, ಇದರ ಮೂಲಕ ನೀಡುವ ಸಂದೇಶಗಳು ಶೀಘ್ರವಾಗಿ ಸಾರ್ವಜನಿಕರಿಗೆ ತಲುಪುವುದರಿಂದ, ಜಿಲ್ಲಾ ಸ್ವೀಪ್ ಸಮಿತಿ ಇದನ್ನು ಆಯ್ಕೆ ಮಾಡಿದೆ.
ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ವಿಭಾಗದ ನಿವೃತ್ತ ಅಧಿಕಾರಿ ನಾಗೇಶ್ ಶಾನುಭಾಗ್ ಈ ಪ್ರಸಂಗ ರಚಿಸಿದ್ದು, ಕೋಟದ ಕಲಾಪೀಠ ತಂಡದ ಕಲಾವಿದರು ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.
ಎಂಸಿಎಂಸಿಗೆ ಚುನಾವಣಾ ವೀಕ್ಷಕರ ಭೇಟಿ
ಉಡುಪಿ, ಮಾರ್ಚ್ 28 (ಕರ್ನಾಟಕ ವಾರ್ತೆ): ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ(ಎಂಸಿಎಂಸಿ) ಕಚೇರಿಗೆ, ಕೇಂದ್ರ ಚುನಾವಣಾ ಆಯೋಗದ ಸಾಮಾನ್ಯ ವೀಕ್ಷಕರಾದ ಕೃಷ್ಣ ಕುನಾಲ್ ಐ.ಎ.ಎಸ್ ಹಾಗೂ ಪೊಲೀಸ್ ವೀಕ್ಷಕರಾದ ಸಂದೀಪ್ ಪ್ರಕಾಶ ಕಾರ್ಣಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮಿತಿಯ ಕಾರ್ಯ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಎಂಸಿಎಂಸಿಯ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ನಿಗಾ ವಹಿಸಲು ಕೇಂದ್ರ ವೀಕ್ಷಕರ ಸೂಚನೆ
ಉಡುಪಿ, ಮಾರ್ಚ್ 28 (ಕರ್ನಾಟಕ ವಾರ್ತೆ): ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದರ ವಿರುದ್ಧ ತೀವ್ರ ನಿಗಾ ಇಡಬೇಕು. ಸಾಮಾಜಿಕ ಜಾಲತಾಣಗಳು ಇಲೆಕ್ಟ್ರಾನಿಕ್ ಮಾಧ್ಯಮವಾಗಿರುವುದರಿಂದ ಅವುಗಳಲ್ಲಿ ನಡೆಸುವ ಯಾವುದೇ ಪ್ರಚಾರವು ಪೂರ್ವಾನುಮತಿ ಪಡೆದಿರಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕೇಂದ್ರ ವೀಕ್ಷಕ ಕೃಷ್ಣ ಕುನಾಲ್ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಧಿಕಾರಿಗಳ ಜಂಟೀ ಸಭೆ ನಡೆಸಿ ಮಾತನಾಡುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗಲು ಇನ್ನಷ್ಟು ಪರಿಣಾಮಕಾರಿಯಾದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಮತದಾರರಿಗೆ ಮತದಾನಕ್ಕೆ ಅಡ್ಡಿಯಾಗುವಂತಹ ಯಾವುದೇ ವ್ಯಕ್ತಿ ಅಥವಾ ಸಮಸ್ಯೆಗಳನ್ನು ಮೊದಲೇ ಗುರುತಿಸಿ, ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಚುನಾವಣಾ ವೀಕ್ಷಕರು ಉಭಯ ಜಿಲ್ಲೆಗಳ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪ್ರತೀ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪಿಯ ಪ್ರತಿಯೊಂದು ಮತಗಟ್ಟೆಯ ಮತದಾರರ ಅಂಕಿಅಂಶ ಹಾಗೂ ವಿವರ ಸಂಗ್ರಹಿಸಿಟ್ಟಿರಬೇಕು. ಇದರಿಂದ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಕೈಬಿಟ್ಟಿರುವುದರ ಬಗ್ಗೆ ಯಾವುದೇ ದೂರು ಬಂದರೆ ಕೂಡಲೇ ಸ್ಪಂದಿಸಬಹುದಾಗಿದೆ. ಚುನಾವಣೆಯಲ್ಲಿ ಮತದಾನ ಮಾಡಲು ಎಪಿಕ್ ಕಾರ್ಡ್ ಅಥವಾ ವೋಟರ್ ಸ್ಲಿಪ್ ಇಲ್ಲದಿದ್ದರೆ ಇತರೆ 11 ಯಾವುದಾದರೂ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು. ಈ ಬಗ್ಗೆ ಮತದಾರರಿಗೆ ವ್ಯಾಪಕ ಪ್ರಚಾರ ನೀಡುವಂತೆ ಕೇಂದ್ರ ವೀಕ್ಷಕರು ತಿಳಿಸಿದರು.
ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರು ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಮತಗಟ್ಟೆಗಳಲ್ಲಿ ಎಲ್ಲಾ ಸೌಲಭ್ಯಗಳು ಇರುವಂತೆ ಆಯಾ ಎಆರ್ಓಗಳು ಖುದ್ದು ಭೇಟಿ ನೀಡಿ ಗಮನಹರಿಸಬೇಕು. ಚುನಾವಣೆ ದಿನ ಆಯಾ ಮತಗಟ್ಟೆಯ ಹೊರಗಡೆ, ಮತಗಟ್ಟೆಯ ಮಾಹಿತಿ ನೀಡುವ ಬ್ಯಾನರ್ ಅಳವಡಿಸಬೇಕು ಎಂದು ಕೃಷ್ಣ ಕುನಾಲ್ ತಿಳಿಸಿದರು.
ಚುನಾವಣಾ ಸಿಬ್ಬಂದಿಗಳಿಗೆ ತರಬೇತಿಯನ್ನು ಪರಿಣಾಮಕಾರಿಯಾಗಿ ನೀಡಬೇಕು. ಇದರಿಂದ ಮತದಾನ ದಿನದಂದು ಮತಗಟ್ಟೆಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಎದುರಾದರೂ ತ್ವರಿತವಾಗಿ ಪರಿಹರಿಸಬಹುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಕೇಂದ್ರ ಚುನಾವಣಾ ಆಯೋಗದ ಪೊಲೀಸ್ ವೀಕ್ಷಕ ಸಂದೀಪ್ ಪ್ರಕಾಶ್ ಕಾರ್ಣಿಕ್ ಮಾತನಾಡಿ, ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಯಾವುದೇ ಪ್ರಚೋಧನಕಾರಿ ಭಾಷಣ ಮಾಡಿದರೆ ತಕ್ಷಣವೇ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಚುನಾವಣಾ ಪ್ರಚಾರದಲ್ಲಿ ಅಭ್ಯರ್ಥಿಗಳು ತಮ್ಮ ಪಕ್ಷಗಳ ನೀತಿ ಹಾಗೂ ಸಾಧನೆಗಳ ಬಗ್ಗೆ ಮಾತನಾಡಬಹುದು. ಆದರೆ ಯಾವುದೇ ರೀತಿಯಲ್ಲಿ ಪರಸ್ಪರ ಸಾಮರಸ್ಯಕ್ಕೆ ಭಂಗ ತರುವಂತೆ ಪ್ರಚಾರ ಕೈಗೊಂಡರೆ ತಕ್ಷಣವೇ ಈ ಬಗ್ಗೆ ಕ್ರಮ ಜರುಗಿಸಬೇಕು ಚೆಕ್ಪೋಸ್ಟ್ ತಪಾಸಣೆಗಳನ್ನು ಇನ್ನಷ್ಟು ಬಿಗಿಗೊಳಿಸಬೇಕು ಎಂದು ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ತಮ್ಮ ಜಿಲ್ಲೆಯಲ್ಲಿ ನಡೆದಿರುವ ಚುನಾವಣಾ ಸಿದ್ಧತೆಗಳ ಬಗ್ಗೆ ಕೇಂದ್ರ ವೀಕ್ಷಕರಿಗೆ ವಿವರ ನೀಡಿದರು.
ಸಭೆಯಲ್ಲಿ ಉಡುಪಿ ಜಿ.ಪಂ. ಸಿಇಓ ಸಿಂಧೂ ಬಿ ರೂಪೇಶ್, ಚಿಕ್ಕಮಗಳೂರು ಸಿಇಓ ಅಶ್ವಥಿ, ಉಭಯ ಜಿಲ್ಲೆಗಳ ಎಸ್ಪಿಗಳಾದ ನಿಶಾ ಜೇಮ್ಸ್, ಹರೀಶ್ ಪಾಂಡೆ ಅಪರ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿ, ಕುಮಾರ್ ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆಯಲ್ಲಿ ಮತದಾನ ಪ್ರತಿಜ್ಞಾ ವಿಧಿ ಸ್ವೀಕಾರ
ಉಡುಪಿ, ಮಾರ್ಚ್ 28 (ಕರ್ನಾಟಕ ವಾರ್ತೆ): ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕು.ಕ ಸಭಾಂಗಣದಲ್ಲಿ ಗುರುವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಓಂ ಪ್ರಕಾಶ್ ಕಟ್ಟಿಮನಿ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕುಷ್ಠರೋಗ ಕಾರ್ಯಕ್ರಮದ ಬಗ್ಗೆ ಜಿಲ್ಲೆಯ ಕಿರಿಯ ಪುರುಷ ಮತ್ತು ಮಹಿಳಾ ಆರೋಗ್ಯ ಸಿಬ್ಬಂದಿಯವರಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಮತದಾನ ಪ್ರತಿಜ್ಞಾ ವಿಧಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.
ಎಸಿಬಿ ಯಿಂದ ಅಹವಾಲು ಸ್ವೀಕಾರ: ಮುಂದೂಡಿಕೆ
ಉಡುಪಿ, ಮಾರ್ಚ್ 28 (ಕರ್ನಾಟಕ ವಾರ್ತೆ): ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಮಾರ್ಚ್ 29 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕಾಪು ಶ್ರೀ ವೀರಭದ್ರ ದೇವಸ್ಥಾನದ ಹಾಲ್ನಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಬ್ರಹ್ಮಾವರ ಪ್ರವಾಸಿ ಮಂದಿರದಲ್ಲಿ ಮತ್ತು ಮಾರ್ಚ್ 30 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಮೊಕ್ಕಾಂ ಇದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷ ತೋರಿದ್ದಲ್ಲಿ ಮತ್ತು ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಆರಕ್ಷಕ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿದಿದ್ದಾರೆ.
ವಿಕಲಚೇತನರಿಗೆ ಸ್ವೀಪ್ ಕಾರ್ಯಕ್ರಮ
ಉಡುಪಿ, ಮಾರ್ಚ್ 28 (ಕರ್ನಾಟಕ ವಾರ್ತೆ): ವಿಕಲಚೇತನ ಮತದಾರರಿಗೆ, ಮತದಾನದ ಅರಿವು ಮೂಡಿಸುವ (ಸ್ವೀಪ್) ಕಾರ್ಯಕ್ರಮವನ್ನು ಮಾರ್ಚ್ 30 ರಂದು ಬೆಳಗ್ಗೆ 11 ಕ್ಕೆ ಬ್ರಹ್ಮಗಿರಿಯ ಬಾಲಭವನದಲ್ಲಿ ಆಯೋಜಿಸಲಾಗಿದ್ದು, ಆ ಪ್ರಯುಕ್ತ ಶ್ರವಣ ದೋಷವುಳ್ಳ ಮತ್ತು ಅಂಧ ಮತದಾರರಿಗೆ ಅರಿವು ಮೂಡಿಸುವ ಮತ್ತು ಪ್ರತಿಜ್ಞಾ ವಿಧಿ ಬೋಧಿಸುವ ಕಾರ್ಯಕ್ರಮ ಮತ್ತು ಸಂಜೆ 4 ಕ್ಕೆ ಮಲ್ಪೆ ಸಮುದ್ರ ತಟದಲ್ಲಿ ವಿಕಲ ಚೇತನರಿಂದ ಬೈಕ್ ರ್ಯಾಲಿ ಮತ್ತು ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ವಿಕಲ ಚೇತನರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಿಂಗತ್ವ ಅಲ್ಪ ಸಂಖ್ಯಾತರಿಗೆ, ವಿಶೇಷ ವರ್ಗದ ಮಹಿಳೆಯರಿಗೆ ಮತದಾರರ ಜಾಗೃತಿ ಅಭಿಯಾನ
ಉಡುಪಿ, ಮಾರ್ಚ್ 28 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಇತ್ತೀಚೆಗೆ ಉಡುಪಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲೆಯ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಹಾಗೂ ವಿಶೇಷ ವರ್ಗದ ಮಹಿಳೆಯರಿಗೆ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ವಿಶೇಷ ವರ್ಗದ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಯಾರೂ ಸಹಾ ಮತದಾನದಿಂದ ಹೊರಗುಳಿಯಬಾರದು. ಪ್ರತಿಯೊಬ್ಬರೂ ಮತದಾನ ಮಾಡಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ ರೂಪೇಶ್ ಕಾರ್ಯಕ್ರಮದಲ್ಲಿ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋದಿಸಿ, ಮಾತನಾಡಿ ಜಿಲ್ಲೆಯಲ್ಲಿ ಏರ್ಪಡಿಸಿದ ಈ ಕಾರ್ಯಕ್ರಮ ಅಂತ್ಯಂತ ಮಹತ್ವದ ಕಾರ್ಯಕ್ರಮ. ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ವಿಶೇಷ ವರ್ಗದ ಮಹಿಳೆಯರೆಲ್ಲರೂ ಮತದಾನ ಮಾಡುವುದರ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸಬೇಕೆಂದು ತಿಳಿಸಿದರು.
ಮತದಾನದ ಮಹತ್ವದ ಬಗ್ಗೆ ಬಿಆರ್ಸಿ ಉಮಾ .ಪಿ ಮಾಹಿತಿ ನೀಡಿದರು. ವಿವಿ ಪ್ಯಾಟ್ ಯಂತ್ರದ ಕುರಿತು ಉಡುಪಿ ತಾಲೂಕು ಪಂಚಾಯತ್ನ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ಪ್ರಾತ್ಯಕ್ಷಿತೆ ತೋರಿಸಿದರು.
ಲಿಂಗತ್ವ ಅಲ್ಪ ಸಂಖ್ಯಾತರ ಪ್ರತಿನಿಧಿಗಳು ಮತದಾನದ ಜಾಗೃತಿ ಕುರಿತು ನಾಟಕವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಿದರು. ಮತದಾನದ ಕುರಿತು ರಂಗೋಲಿ ಕಾರ್ಯಕ್ರಮ ಹಾಗೂ ಸಹಿ ಅಭಿಯಾನ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜು, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ, ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಎಸ್ ನಾಯಕ್, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಗಳಾದ ಸಂಜೀವ ವಂಡ್ಸೆ, ಲಾವಣ್ಯ, ಕಾಜಲ್ ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಎಲ್. ಗೊನ್ಸಾಲ್ವೀಸ್ ಸ್ವಾಗತಿಸಿದರು. ಸಂತೋಷ್ ವಂದಿಸಿದರು. ಮಹಿಳಾ ಅಭಿವೃದ್ಧಿ ನಿಗಮದ ಸಂಯೋಜಕ ಅವಿನಾಶ್ ಕಾರ್ಯಕ್ರಮ ನಿರೂಪಿಸಿದರು.
ತೆಂಕನಿಡಿಯೂರು ಕಾಲೇಜು : ಉದ್ಯೋಗ ಮಾಹಿತಿ
ಉಡುಪಿ, ಮಾರ್ಚ್ 28 (ಕರ್ನಾಟಕ ವಾರ್ತೆ): ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಉದ್ಯೋಗ ಮಾಹಿತಿ ಘಟಕ, ಐಕ್ಯೂಎಸಿ ಹಾಗೂ ವಿಜಯ ಕರ್ನಾಟಕ ಜಿಲೆಟ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾರ್ಚ್ 27 ರಂದು ವ್ಯಕ್ತಿತ್ವ ವಿಕಸನ ಮತ್ತು ಸಂದರ್ಶನ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಹರ್ಷಿತ್ ಗೌಡ ಇವರು ಸಂದರ್ಶನ ಎದುರಿಸುವ ಬಗ್ಗೆ ಪಿಪಿಟಿ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪರಸ್ಪರ ಚರ್ಚೆ, ಪ್ರಾತ್ಯಕ್ಷಿಕೆ ಮೂಲಕ ಸಂದರ್ಶನ ಎದುರಿಸಲು ಅಭ್ಯರ್ಥಿ ಹೇಗೆ ತಯಾರಾಗಬೇಕೆಂದು ಮಾರ್ಗದರ್ಶನ ಮಾಡಿದರು.
ಪದವಿ ವಿಭಾಗ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.
ಪ್ರಾಂಶುಪಾಲ ಪೆÇ್ರ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿ ಎಲ್ಲ ವಿದ್ಯಾರ್ಥಿಗಳು ಶ್ರಮ ವಹಿಸಿ ಓದುವುದರ ಜೊತೆಗೆ ಚುರುಕಿನಿಂದ ಸಂದರ್ಶನಗಳಲ್ಲಿ ಭಾಗವಹಿಸಿ ಕೆಲಸ ಪಡೆಯಬೇಕೆಂದರು.
ಐಕ್ಯೂಎಸಿ ಸಂಚಾಲಕ ಡಾ. ಸುರೇಶ ರೈ ಕೆ. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ತಿಮ್ಮಣ್ಣ ಜಿ. ಭಟ್, ವಿಜಯ ಕರ್ನಾಟಕದ ಶಿವಾನಿ ಉಪಸ್ಥಿತರಿದ್ದರು.
ಉದ್ಯೋಗ ಮಾಹಿತಿ ಘಟಕದ ಪದವಿ ವಿಭಾಗದ ಸಂಚಾಲಕ ಪ್ರೊ. ಉಮೇಶ ಪೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉದ್ಯೋಗ ಮಾಹಿತಿ ಘಟಕದ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ಎಚ್.ಕೆ. ವೆಂಕಟೇಶ್ ವಂದಿಸಿದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, Kemmannu
Annual Church Feast 2024 | St. Theresa’s Church, Kemmannu
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link