Brief University College news with pictures
“ಅಂಬೇಡ್ಕರ್ರ ಸಮಾನತೆಯ ತತ್ವವನ್ನು ಉಳಿಸಿ-ಬೆಳೆಸಬೇಕು”
ವಿವಿ ಕಾಲೇಜಿನಲ್ಲಿ ಡಾ. ದಯಾನಂದ ನಾಯ್ಕ್ ಅಭಿಪ್ರಾಯ
ಮಂಗಳೂರು: ಸ್ವತಃ ಅಸ್ಪೃಶ್ಯತೆಯ ಬಲಿಪಶುವಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕೆಳವರ್ಗದವರ ಸಾಮಾಜಿಕ ಸಮಾನತೆ ಬಯಸಿದ್ದರು. ದಲಿತರು ಸ್ವಪ್ರಯತ್ನದಿಂದ ಮೇಲ್ಬರಬೇಕು ಎಂದು ಆಶಿಸಿದ್ದರು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಡಾ. ದಯಾನಂದ ನಾಯ್ಕ್ ಅಭಿಪ್ರಾಯಪಟ್ಟರು.
ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳವಾರ ‘ಅಂಬೇಡ್ಕರ್ ವಿಚಾರಧಾರೆಗಳು’ ಎಂಬ ವಿಷಯದ ಕುರಿತು ಶಿಖರೋಪಾನ್ಯಾಸ ನೀಡಿದ ಅವರು, ಅಂಬೇಡ್ಕರ್ ಅವರ ಶಿಕ್ಷಣ-ಆಂದೋಲನ ಮತ್ತು ಸಂಘಟನೆ ಎಂಬ ಮೂರು ಅಂಶಗಳು ಜಾರಿಯಾಗಿಲ್ಲ. ಅಂಬೇಡ್ಕರ್ ಅವರ ಸಮಾನತೆಯ ತತ್ವವನ್ನು ಉಳಿಸಿ-ಬೆಳೆಸಬೇಕು. ಅರ್ಥಪೂರ್ಣ, ಮುಕ್ತ ಸ್ವಾತಂತ್ರ್ಯ ನಮ್ಮದಾಗಬೇಕು, ಎಂದರು.
ಜಾತಿ ಪದ್ಧತಿ ಈಗಲೂ ಇದೆ, ಭಾಷೆ, ಅಹಾರ ಪದ್ಧತಿಯನ್ನೂ ಆವರಿಸಿಕೊಂಡಿದೆ, ಎಂದು ಪ್ರತಿಪಾದಿಸಿದ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಪ್ರೊ. ಪಟ್ಟಾಭಿರಾಮ ಸೋಮಯಾಜಿ, ಧರ್ಮವನ್ನು ಕಾಲಕಾಲಕ್ಕೆ ವ್ಯಾಖ್ಯಾನಿಸಿ ಸುಧಾರಣೆ ತರುವಂತವರಿರಬೇಕು. ನಮ್ಮ ದೇಶದ ಕುರಿತು ಚಿಂತನೆ ನಡೆಸಿದವರ ಬಗ್ಗೆ ಅರಿಯಬೇಕು. ಅಧಿಕಾರವನ್ನು ಪ್ರಶ್ನಿಸುವ ಛಾತಿಯಿರಬೇಕು, ಎಂದರು. ಪ್ರಾಂಶುಪಾಲ ಡಾ.ಉದಯ ಕುಮಾರ್ ಎಂ.ಎ, ಖಾಸಗೀಕರಣದಿಂದ ಸಂವಿಧಾನದತ್ತ ಸ್ವಾತಂತ್ರ್ಯವನ್ನು ಕಳೆದುಕೊಳ್ಳಬೇಕಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದರು.
ಕಾಲೇಜಿನ ಪರಿಶಿಷ್ಟ ಜಾತಿ/ಪಂಗಡಗಳ ಸೆಲ್ನ ಸಂಚಾಲಕ ಡಾ. ಸಂಜಯ್ ಅಣ್ಣಾರಾವ್ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕಿ ಶಬೀನಾ ಧನ್ಯವಾದ ಸಮರ್ಪಿಸಿದರೆ, ವಿದ್ಯಾರ್ಥಿನಿ ಶಿಲ್ಪಾ ನಿರೂಪಿಸಿದರು.
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಭಾಗ್ಯವಂತರು – ಡಾ. ದಯಾನಂದ ನಾಯ್ಕ್
ಮಂಗಳೂರು, ಏ.15: ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಭಾಗ್ಯವಂತರು. ಇವರಿಗೆ ಕೆಲಸದ ಜೊತೆಜೊತೆಗೆ ತಮ್ಮ ಪದವಿಯನ್ನು ಪಡೆಯಲು ಅವಕಾಶವನ್ನು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ನೀಡಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಡಾ.ದಯಾನಂದ ನಾಯ್ಕ್ ಹೇಳಿದರು.
ಅವರು ದಿನಾಂಕ 15.04.2019 ರಂದು ನಡೆದ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪ್ರಥಮ ಬ್ಯಾಚಿನ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಗೊಡುಗೆ ಸಮಾರಂಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ದುಡಿಯುವ ಮಕ್ಕಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸುವ ಉದ್ದೇಶದೊಂದಿಗೆ, ಮಂಗಳೂರು ವಿಶ್ವವಿದ್ಯಾನಿಲಯವು ಕಳೆದ ಮೂರು ವರ್ಷಗಳ ಹಿಂದೆ ಸಂಧ್ಯಾ ಕಾಲೇಜನ್ನು ಪ್ರಾರಂಭಿಸಿತ್ತು. ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ ಅದನ್ನು ಸದುಪಯೋಗ ಪಡಿಸಬೇಕು. ಪದವಿಯ ಬಳಿಕ ಹಲವಾರು ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಈಗಿನಿಂದಲೇ ಸಿದ್ಧವಾಗಿರಬೇಕು ಎಂದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಎ.ಸಿದ್ಧಿಕ್ ಮಾತನಾಡಿ, ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಿಗು ಭಾವನೆಗಳಿವೆ. ಇತರ ವಿದ್ಯಾರ್ಥಿಗಳಿಗೆ ಹೋಲಿಕೆ ಮಾಡಿದಾಗ ಇವರಿಗೆ ಜವಾಬ್ದಾರಿ ಹೆಚ್ಚು. ಸಂಧ್ಯಾ ಕಾಲೇಜಿನ ಅಳಿವು ಉಳಿವಿನ ಜವಾಬ್ಧಾರಿ ಇವರ ಮೇಲಿದೆ ಆದ್ದರಿಂದ ಈ ವಿದ್ಯಾರ್ಥಿಗಳು ಕಾಲೇಜಿನ ರಾಯಭಾರಿಗಳು ಎಂದರು.
ಬೀಳ್ಕೊಡುಗೆ ಸಮಾರಂಭದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳು ಸಂಧ್ಯಾ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಕಳೆದ ಸಿಹಿ ಕಹಿ ನೆನಪುಗಳನ್ನು ಮೆಲುಕು ಹಾಕಿದರು ಹಾಗೂ ದ್ವಿತೀಯ ಪದವಿ ವಿದ್ಯಾರ್ಥಿಗಳು ತಮ್ಮ ಹಿರಿಯ ವಿದ್ಯಾರ್ಥಿಗಳೊಡನೆ ಕಳೆದ ಸಿಹಿ ನೆನಪುಗಳನ್ನು ಈ ಸಮಾರಂಭದಲ್ಲಿ ಹಂಚಿಕೊಂಡು ಅವರ ಭವಿಷ್ಯಕ್ಕೆ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಮಕೃಷ್ಣ ಬಿ.ಎಂ. ಮಾತನಾಡಿ ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಮುಂದುವರಿಸುವ ಆಸೆಯನ್ನು ಈಡೇರಿಸುವ ಉದ್ದೇಶದಿಂದ ಸಂಧ್ಯಾ ಕಾಲೇಜನ್ನು ಪ್ರಾರಂಭಿಸಲಾಗಿದೆ. ಪದವಿ ಮುಗಿಸಿದ ಬಳಿಕ ಸ್ನಾತಕೋತ್ತರ ಪದವಿಯನ್ನು ಈ ಸಂಧ್ಯಾ ಕಾಲೇಜಿನಲ್ಲೆ ಮುಂದುವರಿಸಲು ಅವಕಾಶವಿದೆ ಎಂದರು.
ಇದೇ ಸಂಧರ್ಭದಲ್ಲಿ ಕಾಲೇಜಿಗೆ ವಿದಾಯ ಕೋರುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾಲೇಜಿಗೆ ತಾವು ಪ್ರವೇಶ ಪಡೆದುಕೊಂಡ ವರ್ಷವೇ ಕಾಲೇಜು ಕೂಡ ಆಗ ತಾನೆ ಆರಂಭಗೊಂಡ ಕಾರಣ ಕಾಲೇಜಿನ ಗ್ರಂಥಾಲಯದಲ್ಲಿ ಸಾಕಷ್ಟು ಪ್ರಮಾಣದ ಪುಸ್ತಕಗಳ ಕೊರತೆ ಎದುರಿಸಿದ್ದು, ತಮ್ಮ ಕಿರಿಯ ಸ್ನೇಹಿತರು ಈ ರೀತಿಯ ಸಮಸ್ಯೆಗಳನ್ನು ಎದುರಿಸಬಾರದು ಎಂದು ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕ ಖರೀದಿಗಾಗಿ ಧನಸಹಾಯವನ್ನು ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಂತಿಮ ವಿದ್ಯಾರ್ಥಿಗಳಿಗೆ ಕಿರಿಯ ವಿದ್ಯಾರ್ಥಿಗಳು ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು ಹಾಗೂ ಹಲವಾರು ಸ್ಪರ್ಧೆಗಳನ್ನು ಅಂತಿಮ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಹಾಜರಿದ್ದರು.
‘ಬಹುಭಾಷೆ ಕರಾವಳಿಯಲ್ಲಿ ಅಸಹಿಷ್ಣುತೆಗೆ ಕಾರಣವಾಗಿಲ್ಲ’
ವಿವಿ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪ್ರೊ. ಎ.ವಿ. ನಾವಡ ಅಭಿಮತ
ಮಂಗಳೂರು: ಕರಾವಳಿಗರು ಬಹುಭಾಷಿಗರಾದರೂ, ಭಾಷೆ ಯಾವತ್ತೂ ಇಲ್ಲಿ ಅಸಹಿಷ್ಣುತೆಗೆ ಕಾರಣವಾಗಿಲ್ಲ ಎಂದು ಹಂಪಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫಸರ್ ಪ್ರೊ. ಎ.ವಿ. ನಾವಡ ಅಬಿಪ್ರಾಯಪಟ್ಟರು.
ವಿಶ್ವವಿದ್ಯಾನಿಲಯ ಕಾಲೆಜಿನಲ್ಲಿ ಸೋಮವಾರ ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠ, ಕಾಲೇಜಿನ ಹಿಂದಿ ಸ್ನಾತಕೋತ್ತರ ವಿಭಾಗ ಮತ್ತು ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ಅಧ್ಯಯನ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಬೀಮಿಂಗ್ ರೈನ್ಬೋ’ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಾಶ್ಚಾತ್ಯರು ಆಂಗ್ಲಭಾಷೆಯನ್ನು ತಂದರೂ, ಅದೆಷ್ಟೋ ಬುಡಕಟ್ಟು ಭಾಷೆಗಳು ಅವನತಿಯಾಗಿವೆ. ಕೊಂಕಣಿ ಚೇತರಿಸಿಕೊಳ್ಳುತ್ತಿದ್ದರೆ ಅದರಲ್ಲಿ ಕೇಂದ್ರ ಮತ್ತು ರಾಜ್ಯ ಬಾಷಾ ಅಕಾಡೆಮಿಗಳ ಪಾತ್ರ ದೊಡ್ಡದು. “ನಮ್ಮ ಮನೆ ಭಾಷೆಯನ್ನು ಬಳಸುವ ವಲಯ ವಿಸ್ತರಿಸಬೇಕು. ನಿಘಂಟುಗಳ ರಚನೆಯಾಗಬೇಕು. ಸರ್ಕಾರದ ‘ಉಪಭಾಷೆ’ ಎಂಬ ನೀತಿ ಬೇಡ,”ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ. ಕಿಶೋರಿ ನಾಯಕ್ ಕೆ, ಕಳೆದುಹೋಗುವ ಅಪಾಯ ಆಂಗ್ಲಭಾಷೆಯನ್ನೂ ಬಿಟ್ಟಿಲ್ಲ. ನಾವು ಮೂಲಭಾಷೆಯನ್ನು ಕಲಿಯದೆ ಅದನ್ನು ಅನುಸರಿಸುತ್ತೇವೆ. ಕೆಲವೊಮ್ಮೆ ಭಾಷೆಯ ವಿಷಯದಲ್ಲಿ ಅವಕಾಶವಾದಿಗಳಾಗುತ್ತೇವೆ. ಆದರೆ ಮಾನವ ಸಂಬಂಧಗಳನ್ನು ಬೆಸೆಯುವ ಭಾಷೆ ರೂಡಿಯಿಂದಷ್ಟೇ ಬರುವಂತದ್ದು. ಕೊಂಕಣಿಗೆ ಬಹುಧರ್ಮಗಳ ಹಿನ್ನೆಲೆಯೂ ಇದೆ, ಎಂದರು.
ವಿಶ್ವಕೊಂಕಣಿ ಭಾಷೆ ಮತ್ತು ಸಂಸ್ಕøತಿ ಪ್ರತಿಷ್ಠಾನದ ಅಧ್ಯಕ್ಷ ಬಸ್ತಿ ವಾಮನ ಶೆಣೈ, ತುಳುನಾಡಿನಲ್ಲಿ ಕೊಂಕಣಿಗರ ಸಾಹಿತ್ಯ ಬೆಳೆದಿದೆ. ಕೊಂಕಣಿಯ ಜೊತೆಗೆ ತುಳು ಭಾಷೆಯ ಅಧ್ಯಯನವೂ ಆಗಬೇಕಿದೆ ಎಂದರು. ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ. ಉದಯಕುಮಾರ್ ಎಂ.ಎ, ಮನೆ-ಮನದಲ್ಲಿ ನೆಲೆಯೂರಬೇಕಾದ ಭಾಷೆ ಸಮಾಜವನ್ನೂ ಅರ್ಥಮಾಡಿಕೊಳ್ಳಬೇಕು. ಸಂಸ್ಕøತಿಯೂ ಭಾಷೆಯ ಬೆಳವಣಿಗೆಗೆ ಕಾರಣ ಎಂದರು. ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಫಾ. ಮೈಕೆಲ್ ಸಾಂತು ಮೇಯರ್, ಭಾಷೆ ಸಂಸ್ಕಾರಯುತ ಸಮಾಜ ಕಟ್ಟುತ್ತದೆಎಂದರು.
ಇದೇ ಸಂಧರ್ಭದಲ್ಲಿ, ಡಾ. ಗೀತಾ ಶೆಣೈ ಅವರಿಂದ ಕನ್ನಡಕ್ಕೆ ಭಾಷಾಂತರಗೊಂಡ ಮೀನಾ ಕಾಕೋಡ್ಕರ್ಅವರ ಪ್ರಶಸ್ತಿ ವಿಜೇತ ಕಾದಂಬರಿ “ವಾಸ್ತು”ವನ್ನು ಬಿಡುಗಡೆಗೊಳಿಸಲಾಯಿತು. ಉಳಿದೆರಡು ಅವಧಿಗಳಲ್ಲಿ ಗಣ್ಯರು ಭಾಷೆ ಮತ್ತು ಜಾನಪದ ಸಾಹಿತ್ಯ, ಹಾಗೂ ಭಾಷೆ-ಸಾಹಿತ್ಯ-ಸಮಾಜ ಎಂಬ ವಿಷಯಗಳ ಕುರಿತು ತಮ್ಮ ವಿಚಾರ ಮಂಡಿಸಿದರು.
ಪ್ರಧಾನ ಭಾಷಣ ಮಾಡಿದ ಪ್ರಸಿದ್ಧ ಬರಹಗಾರ ಡಾ. ಭೂಷಣ್ ಭಾವೆ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ರಾಮಕೃಷ್ಣ ಬಿ.ಎಮ್, ಕೊಂಕಣಿ ಅಧ್ಯಯನ ಪೀಠದ ಸಂಯೋಜಕ ಡಾ. ಜಯವಂತ್ ನಾಯಕ್, ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕಿಡಾ. ನಾಗರತ್ನರಾವ್, ಕೊಂಕಣಿ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ದೇವದಾಸ್ ಪೈ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಕಾನ್ಸೆಪ್ಟಾ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು.
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು - ಪ್ರವೇಶಾತಿ ಆರಂಭ
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು 2019-20 ನೇ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭವಾಗಿರುತ್ತದೆ. ನಗರದ ಹೃದಯ ಭಾಗದಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾಗಿದ್ದು ವಿಶ್ವವಿದ್ಯಾನಿಲಯದ ನೇರ ಆಡಳಿತಕ್ಕೆ ಒಳಪಟ್ಟಿರುತ್ತದೆ. 2015 ರಲ್ಲಿ ಆರಂಭಗೊಂಡು 2016-17 ರಲ್ಲಿ ಪ್ರಥಮ ವರ್ಷದ ಪದವಿ ತರಗತಿಗಳು ಆರಂಭಗೊಂಡು ಈ ಶೈಕ್ಷಣಿಕ ವರ್ಷದಲ್ಲಿ ಮೂರನೇ ಶೈಕ್ಷಣಿಕ ವರ್ಷಗಳನ್ನು ಯಶಸ್ವೀಯಾಗಿ ಪೂರೈಸಿದ್ದು, ಕಳೆದ ಎರಡು ವರ್ಷಗಳಿಂದ ಉತ್ತಮ ಫಲಿತಾಂಶಗಳನ್ನು ಗಳಿಸಿಕೊಂದು ಬಂದಿರುತ್ತದೆ.
ಅನಿವಾರ್ಯ ಕಾರಣಗಳಿಂದ ವಿದ್ಯಾಭ್ಯಾಸವನ್ನು ಪದವಿ ಪೂರ್ವ ಹಂತದಲ್ಲೇ ಮೊಟಕುಗೊಳಿಸಿದ ಹಾಗೂ ಇತರೆ ಕಾರಣಗಳಿಂದ ಹಗಲು ತರಗತಿಗಳಿಗೆ ಪ್ರವೇಶ ಪಡೆದುಕೊಳ್ಳಲು ಸಾಧ್ಯವಾಗದ ವಿದ್ಯಾಕಾಂಕ್ಷಿಗಳಿಗೆ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಉತ್ತಮ ಆಯ್ಕೆಯಾಗಿರುತ್ತದೆ.
ಪ್ರಸ್ತುತ ಕಾಲೇಜಿನಲ್ಲಿ ಬಿ.ಎ, ಬಿ.ಕಾಂ ಹಾಗೂ ಬಿ.ಸಿ.ಎ ಪದವಿ ತರಗತಿಗಳು ಲಭ್ಯವಿದ್ದು ಬಿ.ಎ ವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ ಹಾಗೂ ಪತ್ರಿಕೋದ್ಯಮ ವಿಷಯಗಳಿದ್ದು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಹಾಗೂ ಇಂದಿನ ಬೆಳೆಯುತ್ತಿರುವ ಮಾಧ್ಯಮ ಪ್ರಪಂಚದಲ್ಲಿನ ಅವಕಾಶಗಳನ್ನು ಬಳಸಿಕೊಳ್ಳಲು ಪತ್ರಿಕೋದ್ಯಮ ಹಾಗೂ ಇತರೆ ವಿಷಯಗಳು ಸಹಕಾರಿಯಾಗಲಿದೆ. ಪದವಿ ಪೂರ್ವ ಹಂತದ ಬಳಿಕ ಸಿ.ಎ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಜೆ ಹೊತ್ತಿನಲ್ಲಿ ಬಿಕಾಂ ಪದವಿಯನ್ನು ಕೂಡ ಪೂರ್ಣಗೊಳಿಸಿಕೊಳ್ಳಬಹುದಾಗಿದೆ. ಸಂಧ್ಯಾ ಕಾಲೇಜಿನ ಪದವಿಗೂ ಹಗಲು ಕಾಲೇಜುಗಳ ಪದವಿಯ ಮೌಲ್ಯಕ್ಕೂ ಯಾವುದೇ ರೀತಿಯ ವ್ಯತ್ಯಾಸವಿರುವುದಿಲ್ಲ. ಸಂಧ್ಯಾ ಕಾಲೇಜಿನಲ್ಲಿ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಅವಕಾಶಗಳಿದ್ದು, ಕಾಲೇಜಿನ ವಿದ್ಯಾರ್ಥಿಗಳು ಹಲವಾರು ಅಂತರ್ ಕಾಲೇಜು ಸ್ಪರ್ಧೆ, ಕ್ರೀಡಾಕೂಟಗಳಲ್ಲಿ ಬಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸಕ್ಕೆ ಅನುಕೂಲಕರವಾಗುವಂತಹ ಸುಸಜ್ಜಿತ ಕೊಠಡಿಗಳು, ಕಂಪ್ಯೂಟರ್ ಮತ್ತು ಮಾಧ್ಯಮ ಪ್ರಯೋಗಾಲಯಗಳು ಲಭ್ಯವಿದ್ದು ಅತೀ ಕಡಿಮೆ ಶುಲ್ಕದಲ್ಲಿ ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಪಡೆಯಬಹುದಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅವಶ್ಯಕ ದಾಖಲೆಗಳೊಂದಿಗೆ ಕಚೇರಿ ಸಮಯದಲ್ಲಿ ಕಾಲೇಜು ಕಚೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು ತಾವು ಇಚ್ಚಿಸಿದ ಪದವಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಬಿ.ಎಂ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link