Brief Mumbai, Mangalore News with pictures
Kemmannu News Network, 27-10-2019 09:44:48
ಬಿಲ್ಲವರ ಭವನದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್ ಕಾರ್ಯಯೋಜನಾ ಸಮಾಲೋಚನಾ ಸಭೆ - ದೇಯಿ ಬೈದ್ಯೆತಿ ಆರಾಧನಾ ಕ್ಷೇತ್ರ್ರ ಶೀಘ್ರವಾಗಿ ಬೆಳಗಲಿ-ಜಯ ಸಿ.ಸುವರ್ಣ
ಮುಂಬಯಿ, ಅ.25: ಪರಶುರಾಮನ ಸೃಷ್ಠಿಯ ತುಳುನಾಡ ಗರಡಿ ಪ್ರಧಾನ ಬಿಲ್ಲವರಲ್ಲಿ ಸದ್ಯ 20% ಗರೋಡಿಗಳು ಬಿಲ್ಲವರ ಆಡಳಿತ್ವದಲ್ಲಿದ್ದು, ಇವುಗಳ ಉಳಿವು ನಮ್ಮ ಕರ್ತವ್ಯವಾಗಬೇಕು. ಜೊತೆಗೆ ಗೆಜ್ಜೆಗಿರಿ ಕ್ಷೇತ್ರವೂ ವಿಶ್ವ ಬಿಲ್ಲವರ ಆಸ್ತಿಯಾಗಿ ಬೆಳೆಗಿಸಬೇಕು. ಇವೆಲ್ಲವುಗಳ ಸೇವೆಯೊಂದಿಗೆ ದೇಯಿ ಬೈದ್ಯೆತಿ ಆರಾಧನೆಗೂ ಕಾಲ ಸನ್ನಿಹಿತವಾಗಿದೆ. ಆದುದರಿಂದ ಆದಷ್ಟು ಬೇಗ ಈ ಕ್ಷೇತ್ರವನ್ನು ಬೆಳಗಿಸಿ ಮಾತೆ ಬೈದ್ಯೆತಿಯ ಋಣ ಪೂರೈಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಬೇಕು ಎಂದು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಗೌರವಾಧ್ಯಕ್ಷರೂ, ಭಾರತ್ ಬ್ಯಾಂಕ್ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ನುಡಿದರು.
ಪುತ್ತೂರು ಪಡುಮಲೆ ಅಲ್ಲಿನ ಬಡಗನ್ನೂರು ಗ್ರಾಮದಲ್ಲಿ ನಿರ್ಮಾಣ ಗೊಳ್ಳುತ್ತಿರುವ `ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್’ ಯೋಜನಾ ಸಭೆ ಇಂದಿಲ್ಲಿ ಗುರುವಾರ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದಲ್ಲಿನ ಸಮಾಲೋಚನಾ ಸಭಾಗೃಹದಲ್ಲಿ ತನ್ನ ಮಾರ್ಗದರ್ಶನದಲ್ಲಿ ನಡೆಸಲ್ಪಟ್ಟ ಗೆಜ್ಜೆಗಿರಿಯ ಬಾಕಿಯಿರುವ ಜೀರ್ಣೋದ್ಧಾರ ಮತ್ತು ಕಾರ್ಯಯೋಜನೆಯ ಸಭೆಯನ್ನುದ್ದೇಶಿಸಿ ಜಯ ಸುವರ್ಣ ಮಾತನಾಡಿ ಮುಂಬಯಿಯಲ್ಲಿನ ದಾನಿಗಳಿಂದ ನಿಧಿ ಸಂಗ್ರಹಿಸಿ ಶೀಘ್ರವೇ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವರ್ತರಾಗಲು ವಿನಂತಿಸಿದರು.
ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ ಡಾ| ರಾಜಶೇಖರ್ ಆರ್.ಕೋಟ್ಯಾನ್ (ಶ್ರೀ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಉಪಾಧ್ಯಕ್ಷ), ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ, ಉಪಾಧ್ಯಕ್ಷ ಶಂಕರ ಡಿ.ಪೂಜಾರಿ, ಶ್ರೀ ಗೆಜ್ಜೆಗಿರಿ ಪ್ರವರ್ತಕ ಮಂಡಳಿ ಪ್ರವರ್ತಕ ಸದಸ್ಯರುಗಳಾದ ಹರೀಶ್ ಜಿ.ಅವಿೂನ್, ದಯಾನಂದ ಆರ್.ಪೂಜಾರಿ ಕಲ್ವಾ, ಭಾಸ್ಕರ್ ಎಂ.ಸಾಲ್ಯಾನ್ (ಭಾರತ್ ಬ್ಯಾಂಕ್ನ ನಿರ್ದೇಶಕ), ನಿಕಟಪೂರ್ವಾಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ (ಶ್ರೀ ಗೆಜ್ಜೆಗಿರಿ ಪ್ರವರ್ತಕ ಮಂಡಳಿ ವಿಸ್ವಸ್ಥರು), ಭಾರತ್ ಬ್ಯಾಂಕ್ನ ನಿರ್ದೇಶಕರುಗಳಾದ ಎಲ್.ವಿ ಅವಿೂನ್, ಭಾಸ್ಕರ್ ಎಂ.ಸಾಲ್ಯಾನ್, ಪುರುಷೋತ್ತಮ ಎಸ್.ಕೋಟ್ಯಾನ್, ಮೋಹನ್ದಾಸ್ ಎ.ಪೂಜಾರಿ, ಬಿಲ್ಲವರ ಅಸೋಸಿಯೇಶನ್ನ ಯುವಾಭ್ಯುದಯ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಎನ್.ಕೋಟ್ಯಾನ್, ಮಾಜಿ ಮುಖ್ಯಸ್ಥ ನಿಲೇಶ್ ಪೂಜಾರಿ ಪಲಿಮಾರು, ಅಶೋಕ್ ಕುಕ್ಯಾನ್ ಸಸಿಹಿತ್ಲು, ಬೋಳ ರವಿ ಪೂಜಾರಿ, ದಿನೇಶ್ ಬಿ.ಅವಿೂನ್, ರವೀಂದ್ರ ಎಸ್.ಕೋಟ್ಯಾನ್, ರತ್ನಾಕರ ಪೂಜಾರಿ ಭಿವಂಡಿ, ಪ್ರಭಾಕರ್ ಪೂಜಾರಿ ಬೆಳುವಾಯಿ ಸೇರಿಂದಂತೆ ಮತ್ತಿತರು ಉಪಸ್ಥಿತರಿದ್ದರು.
ಬೋರಿವಿಲಿ ಶಾಸಕ ಸುನೀಲ್ ರಾಣೆಗೆ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಶುಭಾರೈಕೆ
ಮುಂಬಯಿ, ಅ.25: ಮಹಾರಾಷ್ಟ್ರ ರಾಜ್ಯದ 2019ರ ವಿಧಾನಸಭಾ ಚುನಾವಣೆಯಲ್ಲಿ ಬೋರಿವಿಲಿ ವಿಧಾನ ಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾದ ಸುನೀಲ್ ರಾಣೆ ಅವರು ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ (ಬೋರಿವಿಲಿ) ಸಂಸದ ಗೋಪಾಲ್ ಸಿ.ಶೆಟ್ಟಿ ಅವರನ್ನು ಸಂಸದರ ಕಚೇರಿಯಲ್ಲಿ ಭೇಟಿ ನೀಡಿದರು. ಎಂಪಿ ಗೋಪಾಲ್ ಶೆಟ್ಟಿ ಅವರು ಮತ್ತೆ ಶಾಸಕರಾಗಿ ಆಯ್ಕೆಯಾದ ಸುನೀಲ್ ರಾಣೆ ಅವರನ್ನು ಪುಷ್ಫಗುಪ್ಛವನ್ನಿತ್ತು ಶುಭಾರೈಸಿದರು.
ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ, ಗೌ| ಪ್ರ| ಕಾರ್ಯದರ್ಶಿ ಸಿಎ| ಸಂಜೀವ ಶೆಟ್ಟಿ, ಮಹಾನಗರದಲ್ಲಿನ ಹೆಸರಾಂತ ಸಂಘಟಕ, ಸಂಯೋಜಕ ಎರ್ಮಾಳ್ ಹರೀಶ್ ಶೆಟ್ಟಿ, ಮುಂಡಪ್ಪ ಎಸ್.ಪಯ್ಯಡೆ ಮತ್ತಿತರರು ಉಪಸ್ಥಿತರಿದ್ದು ಸುನೀಲ್ ರಾಣೆ ಅವರನ್ನು ಅಭಿನಂದಿಸಿದರು.
ಅಣುಶಕ್ತಿ ನಗರ್ ಕ್ಷೇತ್ರದ ಶಾಸಕ ನವಾಬ್ ಮಲಿಕ್ಗೆ ಅಭಿನಂದಿಸಿದ ಲಕ್ಷ ್ಮಣ್ ಪೂಜಾರಿ
(ಚಿತ್ರ / ವರದಿ : ರೊನಿಡಾ ಮುಂಬಯಿ)
ಮುಂಬಯಿ, ಅ.25: ಮಹಾರಾಷ್ಟ್ರ ರಾಜ್ಯದ 2019ರ ವಿಧಾನಸಭಾ ಚುನಾವಣೆಯಲ್ಲಿ ಅಣುಶಕ್ತಿ ನಗರ್ ಅಸೆಂಬ್ಲಿ ಕ್ಷೇತ್ರದಿಂದ ರಾಷ್ಟ್ರವಾದಿ ಕಾಂಗ್ರೇಸ್ ಪಕ್ಷ (ಎನ್ಸಿಪಿ) ಸ್ಪರ್ಧಿಸಿ ಶಾಸಕರಾಗಿ ವಿಜೇತರಾದ ರಾಜ್ಯದ ಮಾಜಿ ಹೌಸಿಂಗ್, ಕಾರ್ಮಿಕ ಸಚಿವ ನವಾಬ್ ಮಲಿಕ್ ಇವರನ್ನು ಇಂದಿಲ್ಲಿ ಕೊಲಬಾ ಇಲ್ಲಿನ ಎನ್ಸಿಪಿ ಕಾರ್ಯಾಲಯದಲ್ಲಿ ರಾಷ್ಟ್ರವಾದಿ ಕಾಂಗ್ರೇಸ್ ಪಕ್ಷ ಮುಂಬಯಿ ಪ್ರದೇಶ ಉಪಾಧ್ಯಕ್ಷ ಲಕ್ಷ ್ಮಣ್ ಪೂಜಾರಿ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಎನ್ಸಿಪಿ ಜೋಗೇಶ್ವರಿ ತಾಲೂಕು ಅಧ್ಯಕ್ಷ ಆರ್.ವಿ ಮಯೇಕರ್, ಹಿರಿಯ ಕಾರ್ಯಕರ್ತ ದಿನಕರ್ ತಾವ್ಡೆ ಉಪಸ್ಥಿತರು.
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ
ಉಜಿರೆ: ನ್ಯಾಯವೇ ನನ್ನ ತಂದೆ, ಸತ್ಯವೇ ನನ್ನ ತಾಯಿ ಎಂಬ ಭಾವನೆಯೊಂದಿಗೆ ತಾನು ನ್ಯಾಯ ಮತ್ತು ಸತ್ಯದ ನೆಲೆಯಲ್ಲಿ ಕೆಲಸ ಮಾಡುತ್ತೇನೆ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಗುರುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು.
ನಮ್ಮ ದೇಶದಲ್ಲಿ ಅನೇಕ ಮಂದಿ ಆಚಾರ್ಯರಿದ್ದಾರೆ ಆದರೆ ಆಚಾರವಿಲ್ಲ. ದೇಶಕ್ಕೆ ದೊಡ್ಡ ಚರಿತ್ರೆ ಇದೆ, ಆದರೆ ಚಾರತ್ರ್ಯವಿಲ್ಲ. ಅಲ್ಲಲ್ಲಿ ಸಂಘರ್ಷವಿದೆ ಆದರೆ ಸಮನ್ವಯ ಇಲ್ಲ ಎಂದು ಅವರು ತೀವ್ರ ಕಳವಳ ವ್ಯಕ್ತಪಡಿಸಿದರು.
ಯಾವುದೇ ಸೈನ್ಯ ಬಲದಿಂದ ಅಥವಾ ಇತರ ಶಕ್ತಿಗಳಿಂದ ಜಗತ್ತು ನಡೆಯುವುದಿಲ್ಲ. ಬಸವಣ್ಣ, ಗೌತಮ ಬುದ್ಧ, ಯೇಸುಕ್ರಿಸ್ತ, ಮಹ್ಮದ್ ಪೈಗಂಬರ, ಭಗವಾನ್ ಮಹಾವೀರನಂತಹ ವ್ಯಕ್ತಿಗಳಿಂದ ಸಾಮಾಜಿಕ ಪರಿವರ್ತನೆಯೊಂದಿಗೆ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ.
ಏಕಾಗ್ರತೆಯಿಂದ ಸಾಧನೆ ಮಾಡುವ ವ್ಯಕ್ತಿಯ ಶಕ್ತಿಯಿಂದ ಮಾತ್ರ ಕ್ರಾಂತಿಕಾರಿ ಪರಿವರ್ತನೆಯಾಗುತ್ತದೆ. ಹೆಗ್ಗಡೆಯವರು ಅಂತಹ “ಸಾಧಕ ಸಂತ” ಯುಗಪುರುಷ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರನ್ನೂ ತನ್ನ ಕುಟುಂಬದ ಸದಸ್ಯರಂತೆ ಪ್ರೀತಿ ವಿಶ್ವಾಸದಿಂದ ಅವರು ಕಾಣುತ್ತಾರೆ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಸೇವೆಯ ಮೂಲಕ ಹೆಗ್ಗಡೆಯವರು ಸಾಮಾಜಿಕ ಪರಿವರ್ತನೆ ಮಾಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನವರೆಲ್ಲ ಭಾಗ್ಯವಂತರು. ಪ್ರಾಯೋಗಿಕವಾಗಿ ತಾಲ್ಲೂಕಿನಲ್ಲಿ ಆರಂಭಿಸಿದ ಎಲ್ಲಾ ಯೋಜನೆಗಳು ಯಶಸ್ವಿಯಾದ ಬಗ್ಯೆ ಅವರು ವಿಶೇಷ ಅಭಿನಂದನೆ ಸಲ್ಲಿಸಿದರು.
ಸುವರ್ಣ ಸಂಚಯದ ಒಂಭತ್ತು ಅಭಿನಂದನ ಗ್ರಂಥಗಳನ್ನು ಬಿಡುಗಡೆ ಮಾಡಿದ ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಳ ದಾಖಲೆಯೇ ಅಭಿನಂದನ ಗ್ರಂಥಗಳಾಗಿದ್ದು, ಎಲ್ಲಾ ಯೋಜನೆಗಳು ಕಾಲದ ಪರೀಕ್ಷೆಯಲ್ಲಿ ಗೆದ್ದು ಬಂದ ಸಾಧನೆಗಳಾಗಿದ್ದು ಆದರ್ಶ ಹಾಗೂ ಅನುಕರಣೀಯವಾಗಿವೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ಧರ್ಮಸ್ಥಳದ ಅನೇಕ ಯೋಜನೆಗಳನ್ನು ಅನುಕರಿಸಿರುವುದು ಯೋಜನೆಯ ಸಾರ್ಥಕತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಹೆಗ್ಗಡೆಯವರ ಸೇವೆ-ಸಾಧನೆಯಿಂದ ಆತ್ಮ ಸಂತೋಷದೊಂದಿಗೆ ಲೋಕಕಲ್ಯಾಣವೂ ಆಗಿದೆ.
ಹೆಗ್ಗಡೆಯವರಿಗೆ “ಚಾವಡಿ”ಯಲ್ಲಿ ಶ್ರೀ ಸ್ವಾಮಿಯ ಪ್ರೇರಣೆಯಿಂದ ಅನೇಕ ಹೊಸ ಯೋಚನೆಗಳು, ಯೋಜನೆಗಳು ಮೂಡಿ ಬರುತ್ತವೆ ಎಂದು ಹೇಮಾವತಿ ವೀ. ಹೆಗ್ಗಡೆಯವರು ಅಭಿಪ್ರಾಯಪಟ್ಟರು.
ಹಂಪಿ ಕನ್ನಡ ವಿ.ವಿ.ಯ ನಿವೃತ್ತ ಕುಲಪತಿ ಡಾ. ಬಿ.ಎ. ವಿವೇಕ ರೈ ಮಾತನಾಡಿ ಅಭಿನಂದನಾ ಗ್ರಂಥದ ಬಗ್ಯೆ ಸವಿವರ ಮಾಹಿತಿ ನೀಡಿ ಎಲ್ಲರೂ ಈ ಪುಸ್ತಕವನ್ನು ಕೊಂಡು ಓದಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಅತಿವೃಷ್ಠಿಯಿಂದ ಹಾನಿಗೊಳಗಾದ ನೆರೆಸಂತ್ರಸ್ತರಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಿ ಆತ್ಮವಿಶ್ವಾಸ ತುಂಬಬೇಕು. ಪ್ರಕೃತಿ ಸಂರಕ್ಷಣೆ ಮತ್ತು ಜಲ ಮರುಪೂರಣ ಬಗ್ಯೆ ದೇವರು ಅತಿವೃಷ್ಠಿ ಮೂಲಕ ನಮಗೆ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಿದರು.
ಧರ್ಮಸ್ಥಳದ ವತಿಯಿಂದ ರೈತರಿಗೆ ಭತ್ತ ಹಾಗೂ ಧಾನ್ಯ ಕೊಯ್ಲು ಮಾಡಲು 50 ಕಟಾವು ಯಂತ್ರಗಳನ್ನು ಖರೀದಿಸಲಾಗುವುದು. ಈಗಾಗಲೆ ಚಿತ್ರದುರ್ಗಕ್ಕೆ 20 ಕೊಯ್ಲು ಯಂತ್ರಗಳನ್ನು ಖರೀದಿಸಲಾಗಿದೆ. ಎಂದರು.
ಹೊಸ ಯೋಜನೆಗಳು: ಮೈಸೂರಿನಲ್ಲಿ ಧರ್ಮಸ್ಥಳದ ವತಿಯಿಂದ ಹೊಸ ವಸ್ತು ಸಂಗ್ರಹಾಲಯ ಪ್ರಾರಂಭ, ಉಡುಪಿ ಮತ್ತು ಹಾಸನ ಆಯುರ್ವೇದ ಕಾಲೇಜುಗಳಿಗೆ 60 ಹಾಸಿಗೆಗಳ ನೂತನ ಆಸ್ಪತ್ರೆ ಕಟ್ಟಡಗಳ ನಿರ್ಮಾಣ, ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ನೂತನ ಕಟ್ಟಡ ನಿರ್ಮಾಣ, ಇದೇ 30 ರಿಂದ ಗ್ರಾಮಾಭಿವೃದ್ಧಿ ಯೋಜನೆ ಬಗ್ಯೆ ಜಾಗತಿಕ ಸಮ್ಮೇಳನ ನಡೆಯಲಿದ್ದು 30 ವಿದೇಶಗಳಿಂದ ನೂರು ಪ್ರತಿನಿಧಿಗಳು ಭಾಗವಹಿಸುವರು ಎಂದು ಹೆಗ್ಗಡೆಯವರು ತಿಳಿಸಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ, ಪ್ರೊ. ಎಸ್. ಪ್ರಭಾಕರ್, ಡಾ. ಬಿ. ಯಶೋವರ್ಮ, ಮೂಡಬಿದ್ರೆಯ ಡಾ.ಎಂ. ಮೋಹನ ಆಳ್ವ,, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದರು.
ಜಮಾ ಉಗ್ರಾಣದ ಮುತ್ಸದ್ಧಿ ಬಿ. ಭುಜಬಲಿ ಸ್ವಾಗತಿಸಿದರು, ಶ್ರೀನಿವಾಸ ರಾವ್ ಧನ್ಯವಾದವಿತ್ತರು ಧನ್ಯವಾದವಿತ್ತರು. ದೀಕ್ಷಿತ್ ರೈ ಕಾರ್ಯಕ್ರಮ ನಿರ್ವಹಿಸಿದರು.
ಮುಖ್ಯಾಂಶಗಳು:
• ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಗ್ಗಡೆಯವರಿಗೆ ದೂರವಾಣಿ ಮೂಲಕ ಗೌರವಪೂರ್ವಕ ಶುಭ ಕೋರಿದರು.
• ಧರ್ಮಸ್ಥಳ ದೇವಳದ ನೌಕರ ವೃಂದದವರು ರೂ. 2,51,001/- ಚೆಕ್ಕನ್ನು ನೆರೆ ಸಂತ್ರಸ್ತರ ನೆರವಿಗಾಗಿ ಶಾಸಕ ಹರೀಶ್ ಪೂಂಜರಿಗೆ ನೀಡಿದರು.
• ಬದುಕನ್ನು ಪ್ರೀತಿಸುವವರಿಗೆ ಹೊಸ ಎಲ್ಲವೂ ನಿತ್ಯ ನೂತನವಾಗಿರುತ್ತದೆ.
• ಬೀಡಿನ ಚಾವಡಿಯಲ್ಲಿ ಹೆಗ್ಗಡೆಯವರಿಗೆ ಹೊಸ ಯೋಚನೆ, ಯೋಜನೆಗಳು ಮೂಡಿ ಬರುತ್ತವೆ.
ಸುಂದರ್ ಎ.ಕರ್ಕೇರಾ ಬಾಂದ್ರಾ ನಿಧನ
ಮುಂಬಯಿ, ಅ.25: ಬಾಂದ್ರಾ ಪೂರ್ವದ ಸುಂದರ್ ಎ.ಕರ್ಕೇರಾ (77.) ಅನಾರೋಗ್ಯದಿಂದ ಕಳೆದ ಶುಕ್ರವಾರ (ಅ.24) ರಾತ್ರಿ ಸಾಂತಕ್ರೂಜ್ ಪೂರ್ವದ ಬಿ.ಎನ್ ದೇಸಾಯಿ ಆಸ್ಪತ್ರೆಯಲ್ಲಿ ನಿಧನರಾದರು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಮುಂಡ್ಕೂರು ಮೂಲತಃ ಮೃತರು ಮುಂಬಯಿ ಉಪನಗರದ ಬಾಂದ್ರಾ ಪೂರ್ವದ ಸಿದ್ಧಿವಿನಾಯಕ ಹೌಸಿಂಗ್ ಸೊಸೈಟಿಯಲ್ಲಿ ವಾಸವಾಗಿದ್ದು ಹೊಟೇಲು ಉದ್ಯಮದಲ್ಲಿ ಕೆಲಸ ನಿರ್ವಾಹಿಸುತ್ತಿದ್ದರು. ಸಾಮಾಜಿಕ ಕಾಳಜಿ ಹೊಂದಿದ್ದು ಜನಪರ ಸೇವೆಯಲ್ಲಿ ನಿರತರಾಗಿದ್ದ ಸುಂದರ್ ಪತ್ನಿ, ಎರಡು ಗಂಡು, ಒಂದು ಹೆಣ್ಣು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link