Brief Mumbai, Mangalore News with pictures
Kemmannu News Network, 15-12-2019 13:22:35
ಮುಂಬಯಿನ ಸಮಾಜ ಸೇವಕಿ ಡಾ| ರಜನಿ ವಿ. ಪೈ ಸಮ್ಮೇಳನಾಧ್ಯಕ್ಷತೆಯಲ್ಲಿ
ಡಿ.13: ಉಡುಪಿಯಲ್ಲಿ ವಿಶ್ವ ಬಹುಭಾಷಾ ಕವಿ ಸಾಹಿತ್ಯ ಸಮ್ಮೇಳನ
ಮುಂಬಯಿ, ಡಿ.13: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಪಲಿಮಾರು ಶ್ರೀ ವಿದ್ಯಾಧೀಶ ಶ್ರೀಪಾದಂಗಳವರ ಆಶ್ರಯದಲ್ಲಿ ಪುತ್ತೂರು ಸಾಹಿತ್ಯ ವೇದಿಕೆ, ಟೈಮ್ಸ್ ಆಫ್ ಕುಡ್ಲ, ಹಾಗೂ ಕಥಾಬಿಂದು ಪ್ರಕಾಶನ ಮಂಗಳೂರು ಸಹೋಗದೊಂದಿಗೆ ಇದೇ ಡಿ.17ನೇ ಮಂಗಳವಾರ ಉಡುಪಿ ಇಲ್ಲಿನ ಮಧ್ವ ಮಂಟಪದಲ್ಲಿ ಮುಂಬಯಿ ಕನ್ನಡ ಸಂಘದ ಕಾರ್ಯಧ್ಯಕ್ಷೆ, ಸಮಾಜ ಸೇವಕಿ ಡಾ| ರಜನಿ ವಿ.ಪೈ ಅವರ ಸರ್ವಾಧ್ಯಕ್ಷತೆಯಲ್ಲಿ ವಿಶ್ವ ಬಹುಭಾಷಾ ಕವಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಶ್ರೀ ವಿದ್ಯಾಧೀಶ ಶ್ರೀಪಾದಂಗಳವರು ದೀಪೆÇೀಜ್ವಲನ ಗೊಳಿಸಲಿದ್ದು, ಗೋಪಾಲಕೃಷ್ಣ ಭಟ್ ಕಟ್ಟೆತ್ತಿಲ ಪ್ರಾಸ್ತಾವನೆಗೈಯಲಿದ್ದು, ಧಾರವಾಡದ ಹೈಕೋರ್ಟ್ ನ್ಯಾಯಾಧೀಶ ಡಾ| ರೇವಣ್ಣ ಬಳ್ಳಾರಿ ಡಾ. ಆಕಾಶ್ ರಾಜ್ ಅಳುಪ ರಾಜವಂಶಸ್ಥರು ತುಳು ಸಾಹಿತ್ಯ ಅಕಾಡೆಮಿ ಸದಸ್ಯರು. ವಿಜೆ. ಶೆಟ್ಟಿ ಅಧ್ಯಕ್ಷರು ತುಳು ಸಾಹಿತ್ಯಕೂಟ ಉಡುಪಿ, ತಾರಾ ಆಚಾರ್ಯ ಸದಸ್ಯರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ. ಹಫೀಜ್ ರೆಹಮಾನ್ ನಿರ್ದೇಶಕರು ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ, ರಾಮಕೃಷ್ಣ ನಾಯಕ್ ಗೀತಾಂಜಲಿ ಸಿಲ್ಕ್ಸ್ ಉಡುಪಿ, ದಿವಾಕರ್ ಸನಿಲ್ ಸ್ಮರಣಿಕ ಉಡುಪಿ, ಡಾ| ರಾಜೇಶ್ ಆಳ್ವ ಬದಿಯಡ್ಕ ಅಧ್ಯಕ್ಷರು ತುಳುವರ್ಲ್ಡ್ ಪ್ರಧಾನ ಅತಿಥಿüಗಳಾಗಿರುತ್ತಾರೆ.
ವಿವಿಧ ಸಾಂಸ್ಕøತಿಕ ವೈವಿಧ್ಯ ಕಾರ್ಯಕ್ರಮಗಳು, ಬಹುಭಾಷಾ ಕವಿಗೋಷ್ಠಿ, ತುಳು ವಿಚಾರ ಗೋಷ್ಠಿ, ಕಾದಂಬರಿ ಸಂವಾದ, ಕಥಾ ರೂಪಕ, ಯಕ್ಷರೂಪಕ, ಸನ್ಮಾನ ಪ್ರಶಸ್ತಿ ಪ್ರದಾನ, ಕಾರ್ಯಕ್ರಮಗಳು ನಡೆಯಲಿವೆ. ಡಾ| ವಂಸತ್ ಕುಮಾರ್ ಪೆರ್ಲ ಕನ್ನಡ ಕವಿಗೋಷ್ಠಿಯ ಅಧ್ಯಕ್ಷರಾಗಿಯೂ ಶ್ರೀ ಗಂಗಾಧರ ಕಿದಿಯೂರು ತುಳು ಕವಿಗೋಷ್ಠಿಯ ಅಧ್ಯಕ್ಷರಾಗಿ ಮತ್ತು ವೀಣಾ ಯಸ್ ಶೆಟ್ಟಿ ಮುಖ್ಯ ಅತಿಥಿüಗಳಾಗಿರುತ್ತಾರೆ. ಶಾಂತ ಕುಂಟಿನಿ ಬಹುಭಾಷಾ ಕವಿಗೋಷ್ಠಿಯ ವಹಿಸಲಿದ್ದಾರೆ.
ತುಳು ವಿಚಾರಗೋಷ್ಠಿಯಲ್ಲಿ ಕುದಿ ವಸಂತ ಶೆಟ್ಟಿಯವರು ಅಧ್ಯಕ್ಷರಾಗಿದ್ದು ಬಿ.ಜಯಕರ ಶೆಟ್ಟಿ ಇಂದ್ರಾಳಿ, ಗೋಪಾಲಕೃಷ್ಣ ಭಟ್ ಕಟ್ಟೆತ್ತಿಲ, ಅರ್ಪಿತಾ ಶೆಟ್ಟಿ, ಯಾದವ್ ವಿ., ಸಂಜಯ್ ಸಾಂತೂರು ಹಾಗೂ ಡಾ| ನಿಕೇತನಾ ಪಾಲ್ಗೊಳ್ಳಲಿದ್ದಾರೆ. ಕಾದಂಬರಿ ಸಂವಾದದಲ್ಲಿ ಖ್ಯಾತ ಕಾದಂಬರಿಕಾರರಾದ ಕೌಂಡಿನ್ಯ ಅವರಿಂದ ವಿಜ್ಞಾನ ಮತ್ತು ವಾಮಾಚಾರ, ಖ್ಯಾತ ಕಾದಂಬರಿಕಾರ ವಿವೇಕನಂದ ಕಾಮತ್ ರವರಿಂದ ಸಾಮಾಜಿಕ ಚಿಂತನೆ, ಹಾಗೂ ಖ್ಯಾತ ಕಾದಂಬರಿಕಾರರಾದ ಪಿ.ವಿ ಪ್ರದೀಪ್ ಕುಮಾರ್ ಅವರಿಂದ ರೋಚಕತೆಯಲ್ಲಿ ವಾಸ್ತಕವಿಕ ತಳಹದಿ ಎನ್ನುವ ವಿಚಾರದಲ್ಲಿ ಕಾದಂಬರಿ ಸಂವಾದ ನಡೆಯಲಿದೆ.
ಅಪರಾಹ್ನ 3.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 9 ಮಂದಿಗೆ ಪರ್ಯಾಯ ಶ್ರೀ ಪಲಿಮಾರು ಶ್ರೀ ವಿದ್ಯಾಧೀಶ ಶ್ರೀ ಪಾದಂಗಳವರು ಪ್ರಶಸ್ತಿ ಪ್ರದಾನ ಮಾಡಲಿದ್ದು ಧರ್ಮದರ್ಶಿ ಹರಿಕೃಷ್ಣ ಪುನರೂರು ಉಡುಪಿ ಶಾಸಕ ಕೆ.ರಘುಪತಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ಯಸ್. ಪ್ರದೀಪ್ ಕುಮಾರ್ ಕಲ್ಕೂರ, ಡಾ| ರೇವಣ್ಣ ಬಳ್ಳಾರಿ ಹೈಕೋರ್ಟ್ ನ್ಯಾಯವಾದಿಗಳು ದಾರವಾಡ, ಶ್ರೀಮತಿ ರಜನಿ ಅಶೋಕ ಜೀರಿಗಿಹಾಳ, ಸಿರಿಗನ್ನಡ ವೇದಿಕೆ ರಾಜ್ಯ ಉಪಾಧ್ಯಕ್ಷ-ಸಾಹಿತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ರೈ ಕತ್ತಲ್ಸಾರ್, ಪುತ್ತೂರು ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ ಕಿಶೋರ್ ಕುಮಾರ್ ಪುತ್ತೂರು ಅಪರಾದ ಪತ್ತೆದಳ ಮಂಗಳೂರು ಪ್ರಶಾಂತ್ ರೈ ಮರವಂಜ ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ಪ್ರಧಾನ ಸಂಪಾದಕ ಯಸ್.ಆರ್ ಬಂಡಿಮಾರ್, ಕಹಳೆ ನ್ಯೂಸ್ನ ನಿರ್ದೇಶಕ ಶ್ಯಾಮ್ ಸುದರ್ಶನ ಹೊಸಮೂಲೆ ಪ್ರದಾನ ಅತಿಥಿüಗಳಾಗಿರುವರು.
ಕಾದಂಬರಿಕಾರ ಶ್ರೀ ಕೌಡಿನ್ಯ ರವರಿಗೆ ಸಾಹಿತ್ಯ ರತ್ನ, ಕು| ಆರಾಧನಾ ಭಟ್ ನಿಡ್ಡೋಡಿ ಅವರಿಗೆ ಸೇವಾರತ್ನ, ಕು| ಅಧ್ವಿತಾ ಶೆಟ್ಟಿ ಸುರತ್ಕಲ್ ಅವರಿಗೆ ಕಲಾರತ್ನ ಕು| ಅಯನಾ ಪೆರ್ಲ ಅವರಿಗೆ ನೃತ್ಯ ಕೌಸ್ತುಭ, ಕು| ಸಮೃದ್ಧಿ ಯಸ್ ಭಟ್ ಶಿವಮೊಗ್ಗ ಅವರಿಗೆ ಕಲಾಶ್ರೀ, ಖ್ಯಾತ ಕಾದಂಬರಿಕಾರಾದ ಶ್ರೀ ವಿವೇಕನಂದ ಕಾಮತ್ ಅವರಿಗೆ ಸಾಹಿತ್ಯ ಶ್ರೀ, ನಿರ್ಮಲಾ ಹೆಗಡೆ ಗೋಳಿಕೊಪ್ಪ ಅವರಿಗೆ ನಾಟ್ಯ ಶಾರದೆ, ವೀಣಾ ಜೋಷಿ ಅವರಿಗೆ ಕಲಾ ಸರಸ್ವತಿ, ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಯಶೋದ ಕೇಶವ್ ಮತ್ತು ಪ್ರಯಾ ಹರೀಶ್ ನಿರೂಪಿಸಿ ಡಾ| ಶ್ರೀ ಕೃಷ್ಣ ಶಾಸ್ತ್ರೀ ಪುತ್ತೂರು ಉಪಸ್ಥಿತರಿರುವರು ಎಂದು ಪಿ. ವಿ. ಪ್ರದೀಪ್ ಕುಮಾರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತಿರುಪತಿ ತಿರುಮಲ ದೇವಸ್ಥಾನದಲ್ಲಿ ಸತತ ಆರನೇ ಬಾರಿ ಭಜನೆಗೈದ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಜರಿಮರಿ
ಮುಂಬಯಿ, ಡಿ.13: ಮಹಾನಗರದಲ್ಲಿನ ಪ್ರಸಿದ್ಧ ಭಜನಾ ಮಂಡಳಿ ಎಂದೆಣಿಸಿದ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಜರಿಮರಿ ಇವರು ಸತತ 6ನೇ ಬಾರಿ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಬುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ 2 ದಿನಗಳ ಭಜನಾ ಕಾರ್ಯಕ್ರಮ ನಡೆಸಿದರು.
ತಿರುಪತಿ ತಿರುಮಲ ದೇವಸ್ಥಾನದ ದಾಸ ಸಾಹಿತ್ಯ ಯೋಜನೆಯಲ್ಲಿ ಒಟ್ಟು 25 ಭಜಕರ ತಂಡ 2ದಿನಗಳ ನಿತ್ಯೋತ್ಸವ ಮತ್ತು ಗರುಡೋತ್ಸವ ಕಾರ್ಯಕ್ರಮದಲ್ಲೊ ಪಾಲ್ಗೊಂಡು ಹರಿನಾಮ ಸಂಕಿರ್ತನೆ ಮಾಡಿ ನೆರೆದ ಭಕ್ತರನ್ನು ಭಕ್ತಿ ಲಹರಿಯಲ್ಲಿ ತೇಲಿಸಿದರು.
ಮುಂಜಾನೆ ಸೂರ್ಯೋದಯಕ್ಕೆ ನಗರ ಭಜನೆ. ನಂತರ ಹಿಂದೂ ಧರ್ಮ ಪ್ರಚಾರ ಪರಿಸತ್ ಸಭಗೃಹದಲ್ಲಿ ಹರಿನಾಮ ಸಂಕೀರ್ತನೆ, ಸಂಜೆ ದೀಪಾಲಂಕಾರ ಪೂಜೆ, ಮೆರವಣಿಗೆಯಲ್ಲಿ ಗೋವಿಂದ ನಾಮ ಸ್ಮರಣೆಯೊಂದಿಗೆ ಭಜನ ಕಾರ್ಯಕ್ರಮ ನೀಡಿತು. ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿಯು ಮುಂಬಯಿ ನಗರ ಮಾತ್ರವಲ್ಲದೆ ದೇಶದ ವಿವಿಧ ಕಡೆಗಳಲ್ಲಿ ಭಜನಾ ಕಾರ್ಯಕ್ರಮ ನೀಡಿ, ಸರ್ವ ಸದಸ್ಯ ಸದಸ್ಯೆಯರ ಸಹಕಾರ ದೊಂದಿಗೆ ಸತತ 6 ವರ್ಷ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಭಜನ ಕಾರ್ಯಕ್ರಮ ನೀಡಿದ ಕೀರ್ತಿಗೆ ಪಾತ್ರವಾಯಿತು.
ಕುತ್ಲೂರು ಸರಕಾರಿ ಶಾಲೆಗೆ ಪೀಠೋಪಕರಣ ಹಾಗೂ ಅತಿಥಿü ಉಪನ್ಯಾಸಕರಿಗೆ ಗೌರವಧನ ವಿತರಣೆ
ಉತ್ತಮ ಶಿಕ್ಷಣದಿಂದ ಮಾತ್ರ ಸುದೃಢ ಸಮಾಜ ನಿರ್ಮಾಣ-ಐಕಳ ಹರೀಶ್ ಶೆಟ್ಟಿ
ಮುಂಬಯಿ (ಮಂಗಳೂರು), ಡಿ14: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಥಿರ್üಕವಾಗಿ ಸಂಕಷ್ಟದಲ್ಲಿರುವ ಶಿಕ್ಷಣ ಸಂಸ್ಥೆಗಳು, ದೇವಸ್ಥಾನಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಈಗಾಗಲೇ ನೆರವು ನೀಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲೂ ಅದನ್ನು ಮುಂದುವರಿಸಲಾಗುವುದು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಕರ್ತರ ಸಂಘದ ಪ್ರಥಮ ಗ್ರಾಮ ವಾಸ್ತವ್ಯ ನಡೆದ ಕುತ್ಲೂರು ಸರಕಾರಿ ಶಾಲೆಗೆ ಪೀಠೋಪಕರಣ ಮತ್ತು ಅತಿಥಿü ಉಪನ್ಯಾಸಕರಿಗೆ ಗೌರವಧನ ವಿತರಿಸಿ ಅವರು ಮಾತನಾಡಿ ಉತ್ತಮ ಶಿಕ್ಷಣದಿಂದ ಮಾತ್ರ ಸುದೃಢ ಸಮಾಜ ನಿರ್ಮಾಣ ಸಾಧ್ಯವಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಮುಂಬಯಿಯ ಉದ್ಯಮಿಗಳು, ದಾನಿಗಳ ಸಹಾಯದಿಂದ ಸಾಮಾಜಿಕ ಸೇವೆಯನ್ನು ಮಾಡುತ್ತಿವೆ. ಕಳೆದ ಎರಡು ವರ್ಷಗಳಿಂದ ಸಂಘದಿಂದ ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ವಿಶೇಷ ನೆರವನ್ನು ನೀಡುತ್ತಾ ಬರಲಾಗಿದೆ. ಸಹಕಾರ ಕೇಳಿ ಬಂದ ಯಾವುದೇ ಮನವಿಯನ್ನು ಈವರೆಗೆ ತಿರಸ್ಕಾರ ಮಾಡಿಲ್ಲ. ಜಾಗತಿಕ ಬಂಟರ ಸಂಘದಿಂದ ಕುತ್ಲೂರು ಶಾಲೆಯ ಪೀಠೋಪಕರಣಕ್ಕೆ ಮತ್ತು ಆ ಶಾಲೆಯ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಚೆಕ್ ಹಸ್ತಾಂತರ ಮಾಡಲಾಗಿದೆ. ಕುತ್ಲೂರು ಶಾಲೆಯನ್ನು ಸಂಘ ದತ್ತು ತೆಗೆದುಕೊಳ್ಳುವ ಬೇಡಿಕೆ ಬಂದಿದ್ದು ಸಂಘದ ಸಭೆಯಲ್ಲಿ ಪ್ರಸ್ತಾಪ ಮಾಡಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದು ಕೊಳ್ಳಲಾಗುವುದೂ ಎಂದರು.
ಕುತ್ಲೂರು ಸರಕಾರಿ ಶಾಲಾಭಿವೃದ್ಧಿ ಸಮಿತಿ ಸದಸ್ಯ ರಾಮಚಂದ್ರ ಭಟ್ ಮಾತನಾಡಿ, ಜಾಗತಿಕ ಬಂಟರ ಸಂಘದಿಂದ ಶಾಲೆಗೆ ನೀಡಿದ ಸಹಕಾರ ನಿಜಕ್ಕೂ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಿದೆ. ದ.ಕ. ಜಿಲ್ಲಾ ಪತ್ರಕರ್ತರ ಸಂಘ ಶಾಲೆಯಲ್ಲಿ ಗ್ರಾಮವಾಸ್ತವ್ಯ ಮಾಡಿದ ಬಳಿಕ ಶಾಲೆಯ ಚಿತ್ರಣವೇ ಬದಲಾಗಿದ್ದು, ಶಾಲೆಗೆ ತುಂಬಾ ಅನುಕೂಲವಾಗಿದೆ ಎಂದರು.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮ ವಾಸ್ತವ್ಯ, ಬ್ರ್ಯಾಂಡ್ ಮಂಗಳೂರು, ಪತ್ರಕರ್ತರಿಗೆ ಕಾರ್ಯಾಗಾರ, ಪತ್ರಕರ್ತರ ಆರೋಗ್ಯ ಶಿಬಿರದಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಗ್ರಾಮವಾಸ್ತವ್ಯದಲ್ಲಿ ಪತ್ರಕರ್ತರ ಸಂಘ ನೀಡಿದ ಬಹುತೇಕ ಬೇಡಿಕೆಗಳನ್ನು ದಾನಿಗಳು, ಅಧಿಕಾರಿಗಳ ಸಹಕಾರಿಂದ ಈಡೇರಿಸಲಾಗಿದೆ ಎಂದರು.
ದಾನಿಗಳಾದ ಜಾಗತಿಕ ಬಂಟರ ಸಂಘದಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಿಕಾ ಭವನ ಟ್ರಸ್ಟ್ನ ಅಧ್ಯಕ್ಷ ಆನಂದ್ ಶೆಟ್ಟಿ, ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಕಾರಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ವಿಜಯ್ ಕೋಟ್ಯಾನ್ ಪಡು ವಂದಿಸಿದರು.
ಜೂನ್ ಒಳಗಾಗಿ ಕಲಬುರಗಿಯಲ್ಲಿ `ಬೃಹತ್ ಕೃಷಿ ಮೇಳ’ ನಡೆಸಲು ಚಿಂತನೆ
ಆಕಾಶವಾಣಿ ವಿಶೇಷ ಸಂದರ್ಶನದಲ್ಲಿ ಡಾ| ಎಲ್.ಎಚ್ ಮಂಜುನಾಥ್
ಮುಂಬಯಿ, ಡಿ.13: ಕಲಬುರಗಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಜೂನ್ ಒಳಗಾಗಿ `ಬೃಹತ್ ಕೃಷಿ ಮೇಳ’ ನಡೆಸಲು ಚಿಂತನೆ ಮಾಡಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕರಾದ ಡಾ| ಎಲ್.ಎಚ್ ಮಂಜುನಾಥ್ ತಿಳಿಸಿದ್ದರು.
ಕಲಬುರಗಿ ಆಕಾಶವಾಣಿಗೆ ಇತ್ತೀಚೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಯೋಜನೆಯ ಬಲು ದೊಡ್ಡ ಕಾರ್ಯಕ್ರಮ ಕೃಷಿಮೇಳ ಆಯೋಜನೆಯಾಗಿದ್ದು ಈ ಭಾಗದಲ್ಲಿ ಕೃಷಿ, ಕೃಷಿ ಮಾಧ್ಯಮ, ಕೃಷಿ ಯಂತ್ರೋಪಕರಣ, ಕೃಷಿ ಆಧುನಿಕ ಬೆಳವಣಿಗೆ ಅನುದಾನ, ಜಾನುವಾರು ಪ್ರದರ್ಶನ ಹೀಗೆ, ವಿಭಿನ್ನವಾಗಿರುವ ಮಾಹಿತಿ ಒದಗಣೆಗಾಗಿ ಕಲಬುರಗಿಯಲ್ಲಿ ಕೃಷಿಮೇಳ ನಡೆಸಲಾಗುವುದೆಂದರು.
ಯೋಜನೆಯ ಪ್ರಸ್ತುತ ರಾಜ್ಯ ವ್ಯಾಪಿ ಇದ್ದು 2015ರಲ್ಲಿ ಬೀದರ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರಂಭಿಸುವುದರೊಂದಿಗೆ ಕಲ್ಯಾಣ ಕರ್ನಾಟಕದ ಪ್ರಗತಿಗೆ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು. ಪ್ರಸ್ತುತ 52,000 ಸಂಘಗಳ ರಚನೆಯಾಗಿದ್ದು ಇದರಲ್ಲಿ 10 ಸಾವಿರ ಕೃಷಿಕರು ಹಾಗೂ 40 ಸಾವಿರ ದುರ್ಬಲ ವರ್ಗದವರನ್ನು ಒಳಗೊಂಡಿದೆ ಎಂದರು. ನಾಲ್ಕು ವರ್ಷಗಳಲ್ಲಿ 1500 ಕೋಟಿ ರೂ. ಬ್ಯಾಂಕ್ ವ್ಯವಹಾರ ನಡೆಸುತ್ತಿದೆ. ಜ್ಞಾನ ದೀಪ ಕಾರ್ಯಕ್ರಮ ಸ್ವಚ್ಛ ಶ್ರದ್ಧಾಕೇಂದ್ರ ಸುಜ್ಞಾನ ನಿಧಿ ಶಿಷ್ಯವೇತನ ನಮ್ಮೂರು ನಮ್ಮ ಕೆರೆ, ಮಾಸಾಶನ, ಕೃಷಿ ಯಶಸ್ವಿಗಾಗಿ ನಡೆದಿದೆ. ಈಗಾಗಲೇ 60 ಕೆರೆಗಳ ಅಭಿವೃದ್ಧಿಯಾಗಿದ್ದು ಇನ್ನು 30 ಕೆರೆಗಳ ಪ್ರವಶ್ಚೇತನಕ್ಕೆ ಮುಂದಾಗಿದೆ. ದಾವಣಗೆರೆಯಲ್ಲಿ `ಕಟಾವು ಯಂತ್ರ ಬ್ಯಾಂಕ್’ ಆರಂಭಿಸಿದ್ದು ಕಲ್ಯಾಣ ಕರ್ನಾಟಕಕ್ಕೆ ವಿತ್ತರಿಸಲು ಯೋಜಿಸಲಾಗಿದೆ. ಈ ಭಾಗದಲ್ಲೂ ಸರ್ವರ ಸಹಕಾರದಿಂದ ಯೋಜನಯ ಎಲ್ಲ ಕಾರ್ಯಕ್ರಮ ಯಶಸ್ವಿ ಸಾಧಿಸಿದೆ ಎಂದು ಮಂಜುನಾಥ್ ಹೇಳಿದರು.
ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಡಾ| ಸದಾನಂದ ಪೆರ್ಲ ಇವರನ್ನು ಸಂದರ್ಶಿಸಿದ್ದು, ಯೋಜನೆಯ ಕಲಬುರಗಿ ಪ್ರಾದೇಶಿಕ ನಿರ್ದೇಶಕ ಶಿವರಾಯ ಪ್ರಭು ಹಾಗೂ ನಿರ್ದೇಶಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು. ಡಾ| ಎಲ್.ಎಚ್.ಮಂಜುನಾಥ್ ಅವರಿಗೆ ಕಾರ್ಯಕ್ರಮ ಮುಖ್ಯಸ್ಥ ರಾಜೇಂದ್ರ ಆರ್.ಕುಲಕರ್ಣಿ ಸ್ಮರಣಿಕೆ, ಕೃತಿ ನೀಡಿ ಗೌರವಿಸಿದರು. ಕಾರ್ಯಕ್ರಮ ನಿರ್ವಾಹಕ ಅನಿಲಕುಮಾರ ಎಚ್.ಎನ್ ಉಪಸ್ಥಿತರಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link