Brief Mumbai, Mangalore News with pictures
Kemmannu News Network, 16-12-2019 16:11:05
ಶಾಲೆಗಳಲ್ಲಿ ಭಾರತೀಯ ಸಂಸ್ಕೃತಿಯ ಅನಾವರಣ ಹೆಮ್ಮೆದಾಯಕ
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿನ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಡಾ| ಕಿರಣ್ ಬೇಡಿ
ಮುಂಬಯಿ (ಬಂಟ್ವಾಳ), ಡಿ.15: ಶ್ರೀರಾಮವಿದ್ಯಾಕೇಂದ್ರದ ವಿದ್ಯಾಥಿರ್üಗಳ ಸಾಮೂಹಿಕ ಪ್ರದರ್ಶನ ದೆಹಲಿಯ ಗಣರಾಜ್ಯೋತ್ಸವದಲ್ಲಿ ಪ್ರದರ್ಶನಗೊಳ್ಳುವುದರ ಮೂಲಕ ಭಾರತೀಯ ಸಂಸ್ಕೃತಿ ರಾಷ್ಟ್ರಮಟ್ಟದಲ್ಲಿ ಅನಾವರಣಗೊಳ್ಳಬೇಕು ಎಂದು ಪುದುಚೇರಿಯ ಲಿಪ್ಟಿನೆಂಟ್ ಗವರ್ನರ್ ಡಾ| ಕಿರಣ್ ಬೇಡಿ ಆಶಯ ವ್ಯಕ್ತಪಡಿಸಿದರು.
ಬಂಟ್ವಾಳ ತಾಲೂಕುನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಭಾನುವಾರ ಸಂಜೆ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಪ್ರಧಾನ ಅತಿಥಿüಯಾಗಿ ಭಾಗವಹಿಸಿ ಮಾತನಾಡಿದ ಡಾ| ಕಿರಣ್ ಬೇಡಿ ಇದೊಂದು ಅದ್ಬುತ ಹೆಣ್ಣು ಮತ್ತು ಗಂಡು ಜೊತೆಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಮಾದರಿಯಾಗಿದೆ ಎಂದ ಅವರು ಈ ಶಾಲೆಗೆ ಮಕ್ಕಳನ್ನು ಕಳುಹಿಸುತ್ತಿರುವ ಹೆತ್ತವರಿಗೂ ವಿಶೇಷ ಅಭಿನಂದನೆ ಸಲ್ಲಿಸುವೆ. ಈ ಶಾಲೆಯ ಸಂಸ್ಥಾಪಕರು, ಶಿಕ್ಷಕರು ಅಭಿನಂದನಾರ್ಹರು ಭಾರತೀಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಎನಿಸುತ್ತದೆ. ಇಂತಹ ಕಾರ್ಯಕ್ರಮ ದೇಶದ ಎಲ್ಲಾ ಶಾಲೆಗಳಲ್ಲಿಯು ಅನುಷ್ಠಾನಗೊಳ್ಳಬೇಕೆ ಎಂದೂ ತಿಳಿಸಿದರು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿ ಓಂಪ್ರಕಾಶ್ ಜಾರ್ಖಂಡ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೇತ್ರತಜ್ಞ ಡಾ| ಕೃಷ್ಣ ಪ್ರಸಾದ್, ಗುಜರಾತ್ನ ಉದ್ಯಮಿ ಶಶಿಧರ ಬಿ.ಶೆಟ್ಟಿ ಬರೋಡಾ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ರಹೀಂ ಉಚ್ಚಿಲ್, ಸಿನಿಮಾ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಬಳ್ಳಾರಿ, ರಾಜಶೇಖರ ಮುಲಾನಿ, ವಿಹಿಪಂ ನ ಶ್ರೀಧರ್ ನಾಡಿಗರ್, ರಾಘವೇಂದ್ರ ಸರ್ವಂ, ಶಾಸಕ ಹರೀಶ್ ಪೂಂಜಾ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಶ್ಲಾಘಿಸಿದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ಜರುಗಿದ ಭವ್ಯ ಕಾರ್ಯಕ್ರಮದಲ್ಲಿ ಕೇಂದ್ರದ ಸಚಿವ ಡಿ.ವಿ ಸದಾನಂದ ಗೌಡ, ರಾಜ್ಯ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ಉಮೇಶ್ ಜಾದವ್, ಕೆ.ಸಿ.ರಾಮಮೂರ್ತಿ, ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಉಮಾನಾಥ ಕೋಟ್ಯಾನ್, ಅರವಿಂದ ಬೆಲ್ಲದ, ಪಿ.ರಾಜೀವ್, ಪೂರ್ಣಿಮಾ ಅಮೃತ ದೇಸಾಯಿ, ಅವಿನಾಶ್ ಜಾದವ್, ಎಸ್.ಎಲ್ ಬೋಜೇಗೌಡ, ಅರುಣ್ ಜೋಶಿ, ಡಿಜಿಪಿ ಮೋಹನ್ ಪ್ರಸಾದ್, ಭ್ರಷ್ಟಾಚಾರ ನಿಗ್ರಹದಳದ ಐಜಿ ಚಂದ್ರಶೇಖರ್, ಜಿಲ್ಲಾ ಎಸ್ಪಿ ಲಕ್ಷಿ ್ಮೀಪ್ರಸಾದ್ , ಸಿನೆಮಾ ನಟಿ ಪ್ರಣೀತಾ ಸುಭಾಷ್, ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ, ಕೃಷ್ಣ ಜೆ.ಪಾಲೇಮಾರ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಕ್ಯಾ.ಗಣೇಶ್ ಕಾರ್ಣಿಕ್ , ರಾಷ್ಟ್ರ ಸೇವಿಕಾ ಸಂಸ್ಥೆಯ ಕೆ.ಸೀತಕ್ಕ. ಆರ್ಎಸ್ಎಸ್ ಮುಖಂಡ ಶ್ರೀಧರ್ ನಾಡಿಗರ್, ನಿವೃತ್ತ ಪೆÇಲೀಸ್ ಅಧಿಕಾರಿ ಜಯಂತ ಶೆಟ್ಟಿ, ಕಮಲಾ ಪ್ರಭಾಕರ ಭಟ್, ಟಿ.ಜಿ ರಾಜಾರಾಮ ಭಟ್, ಸುರೇಶ್ ಶೆಟ್ಟಿ ಗುರ್ಮೆ, ಎ.ಎಂ ಖಾನ್, ಎ.ವಿ ರವಿ, ಪ್ರಕಾಶ್ ದಾಸನೂರು, ಭರತ್ ಜೈನ್, ಮಂಜುನಾಥ್ ಜಾರ್ಖಂಡ್, ಪ್ರದೀಪ್ ಕುಮಾರ್ ಕಲ್ಕೂರ, ಜಗದೀಶ್ ಶೇಣವ, ಪ್ರಭಾಕರ ಪ್ರಭು, ಪ್ರಸಾದ್ ಕುಮಾರ್ ಸೇರಿದಂತೆ ಹಲವಾರು ಗಣ್ಯರು ಈ ಕ್ರೀಡೋತ್ಸವದಲ್ಲಿ ಭಾಗವಹಿಸಿದ್ದರು.
ಶಾಲಾ ಸಂಚಾಲಕ ವಸಂತ ಮಾಧವ ಸ್ವಾಗತಿಸಿ ಪ್ರಸ್ತಾವನೆಗೈದರು. ವಿದ್ಯಾಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಸಹ ಸಂಚಾಲಕ ರಮೇಶ್, ಪದವಿ ಕಾಲೇಜು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ಕಟ್ಟೆ ಮತ್ತಿತರರು ಉಪಸ್ಥಿತರಿದ್ದು, ವಿದ್ಯಾಥಿರ್üಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.
ವಿಶೇಷ ಆಕರ್ಷಣೆಗಳು:
ಚಂದ್ರಯಾನ 2 ಉಡಾವಣೆ, ಮಾಜಿ ಉಪಪ್ರದಾನಿ ಎಲ್.ಕೆ.ಆಡ್ವಾಣಿ ಅವರ ಆಯೋಧ್ಯಾ ರಥಯಾತ್ರೆ, ಆಯೋಧ್ಯೆಯಲ್ಲಿ ಕರಸೇವಕರು ನಡೆಸಿರುವ ಹೋರಾಟ ಮತ್ತು ರಾಮಮಂದಿರದ ಚಿತ್ರಣಗಳು ಭಾನುವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ವಿದ್ಯಾಥಿರ್üಗಳು ಸಾಮೂಹಿಕ ಪ್ರದರ್ಶನದಲ್ಲಿ ಸಾದರ ಪಡಿಸುವ ಮೂಲಕ ನೆರದ ಜನಸ್ತೋಮ ಹಾಗೂ ಗಣ್ಯಾತಿಗಣ್ಯರನ್ನು ಬೆರಗುಗೊಳಿಸಿದರು. ಆರಂಭದಲ್ಲಿ ಸಮವಸ್ತ್ರಧಾರಿ ವಿದ್ಯಾಥಿರ್üಗಳಿಂದ ಘೋಷ ತಾಳಕ್ಕೆ ಸರಿಯಾಗಿ ಆಕರ್ಷಕ ಪಥ ಸಂಚಲನದ ಬಳಿಕ ಕೋವಿ ಸಮತಾ ಪ್ರದರ್ಶನ, ಶಿಶುನೃತ್ಯ, ಘೋಷ್ ಪ್ರದರ್ಶನ, ಜಡೆಕೋಲಾಟ, ನಿಯುದ್ಧ, ಯೋಗಾಸನ,ತುಳು ಹಾಡಿಗೆ ಪ್ರಾಥಮಿಕ ಶಾಲಾವಿದ್ಯಾಥಿರ್üಗಳಿಂದ ಆಕರ್ಷಕ ಚಿತ್ತಾರ ಮೂಡಿಸುವ ವಿವಿಧರಚನೆಯ ಸಾಮೂಹಿಕ ನೃತ್ಯ ಪ್ರದರ್ಶನ ಕಣ್ಮನ ಸೆಳೆಯಿತು. ತದನಂತರ ಕಾಲೇಜ್ ವಿದ್ಯಾಥಿರ್üಗಳಿಂದ ಕೊಲ್ಮಿಂಚು ಪ್ರದರ್ಶನ, ತುಳು, ಕನ್ನಡ, ಹಿಂದಿ ಭಾಷೆಯ ಭಜನೆಗೆ ನೃತ್ಯ ಭಜನೆ, ಪ್ರೌಢಶಾಲಾ ವಿದ್ಯಾಥಿರ್üಗಳಿಂದ ದೀಪಧಾರಿಗಳಾಗಿ ವಿವಿಧ ರಚನೆ ಮಲ್ಲಕಂಬ, ತಿರುಗುವ ಮಲ್ಲಕಂಬದಲ್ಲಿ ವಿಶೇಷ ಯೋಗಾಸನ ಪ್ರದರ್ಶನ, ಘೋಷ್ ಟಿಕ್ಟಿಕ್ ಪ್ರದರ್ಶನ, ಚಕ್ರ ಸಮತೋಲನ, ಬೆಂಕಿಯಲ್ಲಿ ಸಾಹಸ, ನೃತ್ಯವೈವಿಧ್ಯ, ಕೇರಳದ ಚೆಂಡೆ ವಾದನ, ಕಾಲ್ಷಕ್ರ, ಕೂಪಿಕ ಸಮತೋಲನ, ಸ್ಥರಘೋಷ್ ಪ್ರದರ್ಶನ ಗಣ್ಯಾತಿಗಣ್ಯರನ್ನು ಮತ್ತು ನೆರೆದ ಜನಸ್ತೋಮವನ್ನು ಮಂತ್ರಮುಗ್ದರನ್ನಾಗಿಸಿತು.
ಸಂಸ್ಥೆಯ ಶಿಶುಮಂದಿರದಿಂದ ಹಿಡಿದು ಪದವಿ ವಿದ್ಯಾಥಿರ್üಗಳವರೆಗೆ 3399 ಪ್ರತಿಭೆಗಳು ಹೊನಲು ಬೆಳಕಿನ ಈ ಬೃಹತ್ ಸಂಗಮದಲ್ಲಿ ಭಾಗವಹಿಸಿದ್ದರು, ಇವರಲ್ಲಿ ಸುಮಾರು 40ರಷ್ಟು ಮಂದಿ ವಿಶೇಷಚೇತನ ಮಕ್ಕಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಸುಮಾರು 3 ತಾಸುಗಳ ಕಾಲ ನಿರಂತರವಾಗಿ ನಡೆದ ಈ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳಿಂದ ಒಟ್ಟು 20 ವಿವಿಧ ಪ್ರದರ್ಶನಗಳು ಅನಾವರಣಗೊಂಡಿತು.
ಬೆಳ್ತಂಗಡಿ ಜೈನ್ ಮಿಲನ್ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ
ಭಜನೆಯಿಂದ ಮಾನಸಿಕ ಪರಿವರ್ತನೆ. ಶ್ರದ್ಧೆ ಮತ್ತು ಸ್ಪರ್ಧೆಯಿಂದ ಸಾಮಾಜಿಕ ಸುಧಾರಣೆ
ಉಜಿರೆ: ದ್ರವ್ಯ ಲೇಷ್ಯೆ ಮತ್ತು ಭಾವ ಲೇಷ್ಯೆಯಿಂದ ದೇಹ ಮತ್ತು ಮನಸ್ಸು ಪರಿಶುದ್ಧವಾಗುತ್ತದೆ. ದೇಹವನ್ನು ಸುಗಂಧ ದ್ರವ್ಯಗಳಿಂದ ಪರಿಶುದ್ಧಗೊಳಿಸಬಹುದು. ದೇಹವನ್ನು ಸುಗಂಧ ದ್ರವ್ಯಗಳಿಂದ ಪರಿಶುದ್ಧಗೊಳಿಸಿದರೆ ಜಪ, ತಪ, ಧ್ಯಾನ, ಸತ್ಸಂಗ, ಭಜನೆ, ಪೂಜೆ ಮೊದಲಾದ ಕ್ರಿಯೆಗಳಿಂದ ನಮ್ಮ ಭಾವನೆಗಳು ಪರಿಶುದ್ಧವಾಗಿ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ಭಜನೆಯಿಂದ ಮಾನಸಿಕ ಪರಿವರ್ತನೆ ಆಗುತ್ತದೆ. ಹಾಗೂ ಶ್ರದ್ಧೆ ಮತ್ತು ಸ್ಪರ್ಧೆಯಿಂದ ಸಾಮಾಜಿಕ ಸುಧಾರಣೆಯಾಗುತ್ತದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.
ಬೆಳ್ತಂಗಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಪ್ರಾಯೋಜಕತ್ವದಲ್ಲಿ ಆಯೋಜಿಸಿದ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆಯನ್ನು ಅವರು ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಬಸದಿಗೆ ಹೋದಾಗ ಎಲ್ಲರೂ ದರ್ಶನ ಸ್ತುತಿಯನ್ನು ಹಾಡಬೇಕು. ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ, ಶ್ಲೋಕಗಳನ್ನು, ಅಷ್ಟಕಗಳನ್ನು ಹೇಳಬೇಕು. ಜಾತಿ ಜೈನರು ನೀತಿ ಜೈನರೂ ಆಗಬೇಕು ಎಂದು ಅವರು ಸಲಹೆ ನೀಡಿದರು.
ಜೈನರು ಕಡ್ಡಾಯವಾಗಿ ಮದ್ಯ, ಮಧು ಮತ್ತು ಮಾಂಸ ತ್ಯಜಿಸಬೇಕು. ಲೌಕಿಕ ವ್ಯವಹಾರದ ಜೊತೆಗೆ ನಾವು ಪಾರಮಾರ್ಥಿಕದ ಬಗ್ಯೆಯೂ ಚಿಂತನ-ಮಂಥನ ಮಾಡಿ ಸಮನ್ವಯದೊಂದಿಗೆ ಆಧ್ಯಾತ್ಮಿಕ ಜಾಗೃತಿ ಮೂಡಿಸಿಕೊಳ್ಳಬೇಕು. ದಿನನಿತ್ಯವೂ ದೇವರ ದರ್ಶನ, ಅಷ್ಟವಿಧಾರ್ಚನೆ ಪೂಜೆ, ಜಪ,ತಪ, ಧ್ಯಾನದೊಂದಿಗೆ ಕರ್ಮಗಳ ಕ್ಷಯ ಮಾಡಿ ಪುಣ್ಯ ಸಂಚಯಮಾಡಿಕೊಳ್ಳಬೇಕು. ಪುರಾಣಗಳು, ಗ್ರಂಥಗಳನ್ನು ಓದದಿದ್ದರೂ ಕನಿಷ್ಠ ಪಂಚನಮಸ್ಕಾರ ಮಂತ್ರ ಪಠಣ ಹಾಗೂ ಜಿನ ಭಜನೆ ಮಾಡಿ ಶ್ರಾವಕರ ಪಟ್ಕರ್ಮಗಳನ್ನು ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಪ್ರತಿ ಮನೆಯಲ್ಲಿಯೂ ಭಜನೆಯಿಂದ ಸಾಮಾಜಿಕ ಪರಿವರ್ತನೆಯಾಗುತ್ತದೆ. ಭಜನಾ ಸಂಸ್ಕøತಿಯನ್ನು ಮುಂದಿನ ಜನಾಂಗಕ್ಕೂ ನಾವು ಹಸ್ತಾಂತರಿಸಿ ಆರೋಗ್ಯಪೂರ್ಣ , ಸುಸಂಸ್ಕøತ ಸಮಾಜ ರೂಪಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಅಲ್ಪಸಂಖ್ಯಾತರಾದ ಜೈನರು ತಮ್ಮ ಪರಿಶುದ್ಧ ಆಚಾರ-ವಿಚಾರ, ನಡೆ-ನುಡಿ ಹಾಗೂ ವ್ರತ-ನಿಯಮಗಳ ಪಾಲನೆಯೊಂದಿಗೆ ಸಮಾಜಕ್ಕೆ ಮಾರ್ಗದರ್ಶಕರಾಗಬೇಕು ಎಂದು ಅವರು ಸಲಹೆ ನೀಡಿದರು.
25 ದೀಪಗಳನ್ನು ಏಕಕಾಲದಲ್ಲಿ ಬೆಳಗಿಸುವುದರೊಂದಿಗೆ ಹೇಮಾವತಿ ವೀ. ಹೆಗ್ಗಡೆಯವರು ಬೆಳ್ತಂಗಡಿ ಜೈನ್ ಮಿಲನ್ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು.
ನೆರೆ ಸಂತ್ರಸ್ತರಾದ ನೇಮಿರಾಜ್ ಜೈನ್ ಮತ್ತು ಕಡಿರುದ್ಯಾವರದ ಉದಯ ಕುಮಾರ್ ಜೈನ್ರಿಗೆ ತಲಾ 25,000 ರೂ. ನೆರವು ನೀಡಲಾಯಿತು.
ಭಾರತೀಯ ಜೈನ್ ಮಿಲನ್ನ ಮಂಗಳೂರು ವಲಯದ ಅಧ್ಯಕ್ಷ ಪುಷ್ಪರಾಜ ಜೈನ್ ಶುಭಾಶಂಸನೆ ಮಾಡಿ, ರಾಜ್ಯದಲ್ಲಿ 350 ತಂಡಗಳ ಹತ್ತುಸಾವಿರ ಮಂದಿ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಯುವ ಜನತೆ ಭಜನೆಯಲ್ಲಿ ಆಸಕ್ತಿ ಮತ್ತು ಉತ್ಸಾಹದಿಂದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.
2020ರ ಜನವರಿ 4 ಮತ್ತು 5 ರಂದು ಧಾರವಾಡದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆ ನಡೆಯಲಿದೆ ಎಂದು ಅವರು ಪ್ರಕಟಿಸಿದರು. ಬೆಳ್ತಂಗಡಿ ಜೈನ್ ಮಿಲನ್ ಸ್ಥಾಪಕಾಧ್ಯಕ್ಷ ಪಡಂಗಡಿ ಭೋಜರಾಜ ಹೆಗ್ಡೆ ಮತ್ತು ನಿರ್ದೇಶಕರುಗಳು ಉಪಸ್ಥಿತರಿದ್ದರು.
ಉಜಿರೆಯ ಡಾ. ಬಿ. ಯಶೋವರ್ಮ ಸ್ವಾಗತಿಸಿದರು. ಬಂಟ್ವಾಳದ ಸುದರ್ಶನ ಜೈನ್ ಧನ್ಯವಾದವಿತ್ತರು.
ಡಾ. ಬಿ.ಪಿ. ಸಂಪತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಜೈನ್ ಮಿಲನ್ನ ಎಲ್ಲಾ ನಿರ್ದೇಶಕರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ 107 ತಂಡಗಳ 600 ಮಂದಿ ಸದಸ್ಯರು ಭಾಗವಹಿಸಿದರು.
ಮುಖ್ಯಾಂಶಗಳು:
• ನೃತ್ಯ ಭಜನೆಯೊಂದಿಗೆ ಸಭಾ ಕಾರ್ಯಕ್ರಮದ ಪ್ರಾರಂಭ
• ವೇದಿಕೆ, ಸಭಾಂಗಣ ಹಾಗೂ ಭೋಜನಾಲಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ.
• ಸ್ವಚ್ಛತೆ ಕಾಪಾಡಲು ಆದ್ಯತೆ
• ವಿಭಾಗ ಮಟ್ಟದಲ್ಲಿ ಆಯ್ಕೆಯಾದ ಹಿರಿಯ 7 ತಂಡಗಳು ಹಾಗೂ ಕಿರಿಯರ 5 ತಂಡಗಳಿಗೆ ಧಾರವಾಡದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ.
• ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ದಿನ ಅಷ್ಟವಿಧಾರ್ಚನೆ ಪೂಜೆ ಮಾಡಿ ಬೆಳಿಗ್ಯೆ, ಮಧ್ಯಾಹ್ನ ಮತ್ತು ರಾತ್ರಿ- ಮೂರು ಬಾರಿ ಸ್ನಾನ ಮಾಡಿ ಮಡಿಯಲ್ಲಿ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಹೇಮಾವತಿ ಹೆಗ್ಗಡೆಯವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದರು. ಆದುದರಿಂದ ಜಪ-ತಪ, ಧ್ಯಾನಕ್ಕೆ “ಪುರುಸೊತ್ತಿಲ”್ಲ ಎಂಬ ಕಾರಣ ಸಲ್ಲದು ಎಂದು ಅವರು ಹೇಳಿದರು.
• ಪ್ರತಿಯೊಬ್ಬರೂ ಒಂದು ದಿನ “ನೆಟ್ ಫಾಸ್ಟಿಂಗ್” ಮಾಡಬೇಕು ಎಂದು ಹೇಮಾವತಿ ವೀ. ಹೆಗ್ಗಡೆಯವರು ಸಲಹೆ ನೀಡಿದರು.
ಎಸ್.ಡಿ.ಎಂ. ಕಾಲೇಜಿಗೆ ಸ್ಟಾರ್ ಕಾಲೇಜು ಮಾನ್ಯತೆ (ಬಾಕ್ಸ್ ಐಟಂ)
ಉಜಿರೆ: ವಿಜ್ಞಾನ ವಿಭಾಗಗಳನ್ನು ಬಲಪಡಿಸುವುದಕ್ಕಾಗಿ ಕೇಂದ್ರ ಸರ್ಕಾರ ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿಗೆ ಸ್ಟಾರ್ ಕಾಲೇಜು ಮಾನ್ಯತೆ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಎಸ್. ಸತೀಶ್ಚಂದ್ರ ತಿಳಿಸಿದ್ದಾರೆ.
ಕಾಲೇಜಿನ ಬೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಹಾಗೂ ಜೈವಿಕ ತಂತ್ರಜ್ಞಾನ ವಿಭಾಗಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ 82 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ.
ಜೈಸನ್ ಪಿರೇರಾ ಶಿರ್ತಾಡಿ ಆಯ್ಕೆ
ಮುಂಬಯಿ (ಮೂಲ್ಕಿ), ಡಿ.16: ಭಾರತೀಯ ಕಥೊಲಿಕ ಯುವ ಸಂಚಾಲನ ಕರ್ನಾಟಕ ಪ್ರಾಂತ್ಯದ 2020-22ನೇ ಸಾಲಿನ ಅಧ್ಯಕ್ಷರಾಗಿ ಜೈಸನ್ ಪಿರೇರಾ ಶಿರ್ತಾಡಿ ಆಯ್ಕೆ ಆಗಿದ್ದಾರೆ. ಇವರು 2018-19 ಸಾಲಿನ ಐ.ಸಿ.ವೈ.ಎಂ ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷ ಆಗಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link