Brief Mumbai, Mangalore News with pictures
Kemmannu News Network, 15-01-2020 15:55:21
ಕಾವಳಕಟ್ಟೆ ಗುರಿಮಜಲುಟಿಚಿ ಹಿದಾಯ ವಿಶೇಷ ಮಕ್ಕಳ ವಾರ್ಷಿಕ ಪ್ರತಿಭಾ ಪ್ರದರ್ಶನ - ಮಕ್ಕಳ ಪೆÇೀಷಣೆ ಉತ್ತಮ ಕಾರ್ಯವಾಗಿದೆ : ಪಿ.ಎಸ್ ಮೊಹಿದ್ದೀನ್ ಕುಂಞ
ಮುಂಬಯಿ, ಜ.13: ಮಂಗಳೂರು ಹಿದಾಯ ಫೌಂಡೇಶನ್ ಅಧೀನದಲ್ಲಿರುವ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಗುರಿಮಜಲು ಹಿದಾಯ ಶೇರ್ ಮತ್ತು ಕೇರ್ ಕಾಲೋನಿಯಲ್ಲಿರುವ ಹಿದಾಯ ವಿಶೇಷ ಮಕ್ಕಳ ಪಾಲನಾ ಕೇಂದ್ರದ ಶಾಲೆಯಲ್ಲಿ ವಿಶೇಷ ಮಕ್ಕಳ ವಾರ್ಷಿಕ ಪ್ರತಿಭಾ ಪ್ರದರ್ಶನ ನಡೆಯಿತು.
ಕಾರ್ಯಕ್ರಮವನ್ನು ನಾಟೆಕಲ್ ಕುನಿಲ್ ಶಾಲೆಯ ಉಪ ಕಾರ್ಯಾಧಕ್ಷ ಪಿ.ಎಸ್ ಮೊಹಿದ್ದೀನ್ ಕುಂಞ ಅವರು ಉದ್ಘಾಟಿಸಿ, ಮಾತನಾಡಿ ದೇವರು ಪ್ರತಿಯೊಬ್ಬರಿಗೂ ವಿವಿಧ ರೀತಿಯ ಪರೀಕ್ಷೆಗಳನ್ನು ನೀಡುತ್ತಾನೆ. ಪರೀಕ್ಷೆಯನ್ನು ಎದುರಿಸಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಹಿದಾಯ ಪೌಂಡೇಶನ್ ಅವರ ಸೇವೆ ಇಡೀ ದೇಶಕ್ಕೆ ಮಾದರಿಯಾಗಿದೆ. ಮಕ್ಕಳ ಪೆÇೀಷಣೆ ಉತ್ತಮ ಕಾರ್ಯವಾಗಿದೆ. ಇಲ್ಲಿಯ ಮಕ್ಕಳಿಗಾಗಿ ಕುನಿಲ್ ವಿದ್ಯಾ ಸಂಸ್ಥೆ ವತಿಯಿಂದ ಹೊಸ ವಾಹನವನ್ನು ಕೊಡುಗೆಯಾಗಿ ನೀಡುವುದಾಗಿ ಘೋಷಿಸಿದರು.
ಅಧ್ಯಕ್ಷತೆ ವಹಿಸಿ, ಮಾತನಾಡಿದ ಮಂಗಳೂರು ಹಿದಾಯ ಪೌಂಡೇಶನ್ ಅಧ್ಯಕ್ಷ ಜಿ ಮೊಹಮ್ಮದ್ ಹನೀಫ್ ಹಾಜಿ ಮಾತನಾಡಿ ಬಂಟ್ವಾಳ ತಾಲ್ಲೂಕಿನಲ್ಲಿ ಹೆಚ್ಚು ವಿಶೇಷ ಮಕ್ಕಳ ಸಂಖ್ಯೆ ಇದೆ. ಮುಂದಿನ ದಿನಗಳಲ್ಲಿ ಇಂತಹ ಮಕ್ಕಳ ಹುಟ್ಟಿನ ಬಗ್ಗೆ ಹೆತ್ತವರು ಜಾಗೃತರಾಗಬೇಕು. ವೈದ್ಯರು ಕೊಡುವ ಸಲಹೆ-ಸೂಚನೆಗಳನ್ನು ಪಾಲಿಸಿದಾಗ ಯಾವುದೇ ಸಮಸ್ಯೆ ಬರುವುದಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಳು ನಡೆಯಬೇಕು ಎಂದರು.
ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮೊದಲು ವಿಶೇಷ ಮಕ್ಕಳಿಂದ ಸ್ವಾಗತ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳ ಹೆತ್ತವರಿಗೆ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಹೆತ್ತವರಿಗೂ ಬಹುಮಾನ ವಿತರಿಸಲಾಯಿತು.
ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಶೇಕ್ ಆದಂ ಸಾಹೇಬು, ಅಬೂಬಕರ್ ಮುಸ್ಲಿಯಾರ್ ಕುಕ್ಕಾಜೆ, ಟ್ರಸ್ಟ್ನ ಸದಸ್ಯ ಕೆ.ಎಸ್ ಅಬೂಬಕ್ಕರ್, ಮೊಹಮ್ಮದ್ ಬೆಳ್ಳಚ್ಚಾರು, ಉರ್ದು ಶಾಲೆಯ ಶಿಕ್ಷಕ ರಿಯಾಜ್, ಉರ್ದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಖಲೀಲ್ ಅಹಮ್ಮದ್, ಕೇಂದ್ರಿಯಾ ಸಮಿತಿ ಸದಸ್ಯ ತಾಹೀರ್ ಇಸ್ಮಾಯಿಲ್, ಇದ್ದಿನ್ ಕುಂಞ, ರಝಾಕ್ ಮಾಸ್ಟರ್ ಅನಂತಾಡಿ, ಬಿ.ಎಂ ತುಂಬೆ, ಸಾದಿಕ್ ಹಸನ್, ಅಬೂಬಕ್ಕರ್ ಮುಸ್ಲಿಯಾರ್, ಮುಖ್ಯ ಶಿಕ್ಷಕಿ ಆಶಾಲತಾ, ರಶೀದ್ ಕಕ್ಕಿಂಜೆ, ಉದ್ಯಮಿ ಆದಿಲ್ ಮೊದಲಾದವರು ಉಪಸ್ಥಿತರಿದ್ದರು.
ಬಿಸಿಸಿಐ ಮಂಗಳೂರು ಘಟಕದ ಅಧ್ಯಕ್ಷರಾಗಿ ಗಣೇಶ ಬಂಗೇರ ಆಯ್ಕೆ
ಮುಂಬಯಿ, ಜ.14: ಮಂಗಳೂರುನ ಪ್ರತಿಷ್ಠಿತ ಉದ್ಯಮಿ, ಹೆಸರಾಂತ ಕೊಡುಗೈದಾನಿ ಗಣೇಶ ಬಂಗೇರ ಅವರು ಬಿಲ್ಲವ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀ (ಬಿಸಿಸಿಐ) ಇದರ ಮಂಗಳೂರು ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಳೆದ ಸೋಮವಾರ ಮಂಗಳೂರು ಇಲ್ಲಿನ ದೀಪಾ ಕಂಫರ್ಟ್ಸ್ ಹೊಟೇಲು ಸಭಾಗೃಹದಲ್ಲಿ ಬಿಸಿಸಿಐ ಕಾರ್ಯಾಧ್ಯಕ್ಷ ಎನ್.ಟಿ ಪೂಜಾರಿ ಅಧ್ಯಕ್ಷತೆಯಲ್ಲಿ ಜರುಗಿದ ಘಟಕದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಗಿದ್ದು, ಪ್ರಧಾನ ಕಾರ್ಯದರ್ಶಿ ಆಗಿ ರವಿ ಪೂಜಾರಿ ಚಿಲಿಂಬಿ, ಗೌರವ ಸಲಹೆಗಾರರಾಗಿ ನವೀನ್ಚಂದ್ರ ಡಿ.ಸುವರ್ಣ ಮಂಗಳೂರು ಹಾಗೂ ಪಿತಾಂಬರ ಹೇರಾಜೆ ಬೆಳ್ತಂಗಡಿಯ ಇವರನ್ನು ಸಭೆಯು ಸರ್ವಾನುಮತದಿಂದ ಆಯ್ಕೆಗೊಳಿಸಿತು.
ಉಪಾಧ್ಯಕ್ಷರುಗಳಾಗಿ ಜಯಂತ ನಡುಬೈಲ್ ಮತ್ತು ಚಂದ್ರಶೇಖರ ನಾನಿಲ್ ಹಾಗೂ ಜತೆ ಕಾರ್ಯದರ್ಶಿ ಆಗಿ ಸತೀಶ ಬೋಳಾರ್, ಕೋಶಾಧಿಕಾರಿ ಆಗಿ ಕು| ಯಶಸ್ವಿನಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಎಂ.ಡಿ ಪೂಜಾರಿ, ಸಂಪತ್ ಸುವರ್ಣ, ಕಿರಣ್ರಾಜ್, ಪದ್ಮರಾಜ್, ನವೀನ್ ಸುವರ್ಣ, ಸಂತೋಷ್ ಕುಮಾರ್, ಅಶೋಕ್ ಕುಮಾರ್, ಭಾಸ್ಕರ್ ಸಾಲಿಯಾನ್, ಪ್ರಶಾಂತ್ ಸನಿಲ್ ಆಯ್ಕೆಯಾದರು.
ಬಿಸಿಸಿಐ ಕಾರ್ಯಾಧ್ಯಕ್ಷ ಎನ್.ಟಿ ಪೂಜಾರಿ ಅಧ್ಯಕ್ಷೀಯ ಭಾಷಣವನ್ನುದ್ದೇಶಿಸಿ ಮಾತನಾಡಿ ಬಿಸಿಸಿಐ ಸಂಸ್ಥೆಯ ಧ್ಯೇಯೋದ್ದೇಶವನ್ನು ಸ್ಥೂಲವಾಗಿ ತಿಳಿಸಿದರು.
ಸಭೆಯಲ್ಲಿ ಬಿಸಿಸಿಐ ಉಪಾಧ್ಯಕ್ಷ ಹರೀಶ್ ಜಿ.ಅಮೀನ್, ಡಾ| ಶ್ರೇಯಸ್, ಡಾ| ವಿಶಾಲ ಅಮೀನ್, ಡಾ| ವಿವೇಕ್ ಅಮೀನ್, ಸಖಾರಾಮ್ ಕಿರೋಡಿಯನ್ ಮುಂತಾದ ಗಣ್ಯರು ಹಾಜರಿದ್ದರು. ಅರುಣ್ ಕಿರೋಡಿಯನ್ ಸ್ವಾಗತಿಸಿ ಜಿಲ್ಲೆಯಲ್ಲಿನ ಉದ್ಯಮಿಗಳು ಸದಸ್ಯತ್ವ ಪಡೆದು ಈ ಸಂಸ್ಥೆಯ ಸದುಪಯೋಗ ಪಡೆಯಲು ತಿಳಿಸಿದರು.
ನಿರ್ಗಮನ ಅಧ್ಯಕ್ಷ ಅರುಣ್ ಕಿರೋಡಿಯನ್ ಅವರು ನೂತನ ಅಧ್ಯಕ್ಷ ಗಣೇಶ ಬಂಗೇರ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿ ಶುಭಾರೈಸಿದರು. ಮೋಹನ್ ಅಮೀನ್ ಸಭಾ ಕಲಾಪ ನಡೆಸಿದರು. ರವಿ ಪೂಜಾರಿ ಚಿಲಿಂಬಿ ವಂದಿಸಿದರು.
ಭಾಂಡೂಪ್ನಲ್ಲಿ ಸ್ವರ್ಗೀಯ ಚಂದ್ರಶೇಖರ ರಾವ್ ಸಂಸ್ಮರಣಾ ಕಾರ್ಯಕ್ರಮ
ಪ್ರತಿಭಾವಂತರಿಗೆ ಪೆÇ್ರೀತ್ಸಾಹ ನೀಡುವುದೆ ಟ್ರಸ್ಟ್ ಉದ್ದೇಶ : ಜಯಂತಿ ಸಿ.ರಾವ್
ಮುಂಬಯಿ, ಜ.13: ದಿ. ಚಂದ್ರಶೇಖರ ರಾವ್ ಮೆಮೋರಿಯಲ್ ಟ್ರಸ್ಟ್ ಮತ್ತು ಮುಂಬಯಿ ಚುಕ್ಕಿ ಸಂಕುಲ ಸಹಕಾರದೊಂದಿಗೆ ಸ್ವರ್ಗೀಯ ಚಂದ್ರಶೇಖರ ರಾವ್ ಸಂಸ್ಮರಣಾ ಕಾರ್ಯಕ್ರಮ ಕಳೆದ ಗುರುವಾರ (ಜ.9) ಭಾಂಡೂಪ್ನಲ್ಲಿ ಹಮ್ಮಿಕೊಳ್ಳಲಾಯಿತು.
ಜಯಂತಿ ಸಿ.ರಾವ್ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಚಂದ್ರಶೇಖರ ರಾವ್ ಅವರ ಆಶಯದಂತೆ ಈ ಟ್ರಸ್ಟ್ ರಚಿಸಲಾಗಿದ್ದು, ಮಕ್ಕಳ ಪ್ರತಿಭೆ ಪುರಸ್ಕಾರ, ಅಸಹಾಯಕರಿಗೆ ನೆರವು ಮತ್ತು ಅವರ ಆಸಕ್ತಿಯ ಕ್ಷೇತ್ರವಾದ ಸಾಹಿತ್ಯದಲ್ಲಿ ತೆರೆಮರೆಯಲ್ಲಿರುವ ಪ್ರತಿಭಾವಂತರಿಗೆ ಪೆÇ್ರೀತ್ಸಾಹ ನೀಡುವುದೆ ಉದ್ದೇಶವಾಗಿದೆ. ತಮ್ಮೆಲ್ಲರ ಸಹಕಾರದಿಂದ ಈ ಹಿನ್ನೆಲೆಯಲ್ಲಿ ಮುಂದುವರಿಯುವ ಇಚ್ಛೆ ಇದೆ. ಇದೆಲ್ಲವನ್ನು ಸಾಧ್ಯವಾಗಿಸಲು ಸದಾ ಬೆನ್ನೆಲುಬಾಗಿರುವ ಚುಕ್ಕಿ ಸಂಕುಲದ ಕವಿ, ಸಾಹಿತಿ, ಕಲಾವಿದರಾದ, ರಾವ್ ಅವರ ನಿಕಟವರ್ತಿಗಳೂ ಆಗಿರುವ ಸಾ.ದಯ ಮತ್ತು ಗೋಪಾಲ ತ್ರಾಸಿ ಇವರ ಸಹಕಾರ ಅನುಪಮವಾದುದು ಎಂದರು.
ಈ ಸಂದರ್ಭದಲ್ಲಿ ನೆರೆದ ಕವಿಗಳಾದ ಶಾರದಾ ಅಂಬೆಸಂಗೆ, ಡಾ| ರಜನಿ ವಿ.ಪೈ. ಡಾ| ದಾಕ್ಷಾಯಣಿ ಯಡಹಳ್ಳಿ, ಸರೋಜ ಅಮಾತಿ, ಕುಮುದಾ ಶೆಟ್ಟಿ ಕಾವ್ಯ ವಾಚನ ಮಾಡಿದರು. ಅರುಣ್ ಶೇಠ್ ಮತ್ತು ಎಸ್.ಶೆಣೈ ಸಂದರ್ಭೋಚಿತವಾಗಿ ಮಾತಾಡಿದರು.
ಕಾರ್ಯಕ್ರಮದಲ್ಲಿ ಬಡ ವಿದ್ಯಾಥಿರ್üಗಳಿಗೆ ನೆರವು ನೀಡಲಾಯಿತು. ರಾವ್ ಅವರ ಹಿತೈಷಿಗಳು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ, ಮಕ್ಕಳ ಹಾಡು, ನೃತ್ಯ ಮತ್ತು ಕಾವ್ಯ ವಾಚನ ಗೈದರು. ಹೋಪ್ ಫೌಂಡೇಶನ್ ಧಾರಾವಿ ಇದರ ಅನಿಲ ಬೊಡಲ್, ಭೀಮರಾಯ ಚಿಲ್ಕಾ ಮತ್ತಿತರರು ಉಪಸ್ಥಿತರಿದ್ದು ಕವಿ, ಕಥೆಗಾರ ಗೋಪಾಲ ತ್ರಾಸಿ ಸ್ವಾಗತಿಸಿ ಪ್ರಸ್ತಾವಿಕ ಮಾತಾಡಿ, ಚಂದ್ರಶೇಖರ ರಾವ್ ಅವರ ಕವನ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು.
ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾಪ್ತಿ ಕಂಡಿತು.
ಜಾದೂಗಾರ ಕುದ್ರೋಳಿ ಗಣೇಶ್ ಮುಡಿಗೆ ರತ್ನೋತ್ಸವ ಪ್ರಶಸ್ತಿ
ಮುಂಬಯಿ, ಜ.13: ದೇರಳಕಟ್ಟೆಯ ರತ್ನ ಎಜುಕೇಶನ್ ಟ್ರಸ್ಟ್ ನವರು ನೀಡುವ 9ನೇ ಸಾಲಿನ ಪ್ರತಿಷ್ಟಿತ ರತ್ನೋತ್ಸವ ಪ್ರಶಸ್ತಿಯನ್ನು ಕರ್ನಾಟಕ ಕರಾವಳಿಯ ವಿಶ್ವ ಪ್ರಸಿದ್ಧ ಜಾದೂಗಾರ ಕುದ್ರೋಳಿ ಗಣೇಶ್ ಇವರಿಗೆ ಪ್ರದಾನಿಸಿ ಗೌರವಿಸಲಾಯಿತು.
ಇತ್ತೀಚೆಗೆ ಮಂಗಳೂರುನಲ್ಲಿ ಜರುಗಿದ ಸಮಾರಂಭದಲ್ಲಿ ಮುಖ್ಯ ಅತಿಥಿüಯಾಗಿದ್ದ ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪೆÇ್ರ| ಪಿ.ಎಸ್ ಎಡಪಡಿತ್ತಾಯ ಇವರು ಕುದ್ರೋಳಿ ಗಣೇಶ್ ಇವರಿಗೆ 2019-2020ನೇ ಸಾಲಿನ ಪ್ರತಿಷ್ಠಿತ ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಿದರು.
ಖ್ಯಾತ ಹಾಸ್ಯ ಲೇಖಕಿ ಪೆÇ್ರ| ಭುವನೇಶ್ವರಿ ಹೆಗ್ಡೆ, ರತ್ನ ಟ್ರಸ್ಟ್ನ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಇಂದಿನ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣಕ್ಕಿಂತ ಹಿಂದಿನ ಗುರು ಕೇಂದ್ರಿತ ಶಿಕ್ಷಣ ಪದ್ಧತಿ ಹೆಚ್ಚು ಪರಿಣಾಮಕಾರಿಯಾಗಿದೆ.
ಉಜಿರೆ: ಪಾಶ್ಚಾತ್ಯ ಸಂಸ್ಕøತಿಯ ಅಂಧಾನುಕರಣೆ ಹಾಗೂ ಇಂಗ್ಲೀಷ್ ಮಾಧ್ಯಮದ ವ್ಯಾಮೋಹದಿಂದ ಇಂದು ಶಿಕ್ಷಣ ಕ್ಷೇತ್ರ ಗೊಂದಲದ ಗೂಡಾಗಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸೂಕ್ಮವಾದ ಬದುಕಿಗೆ ಜೀವನ ಮುಖಿಯಾದ ಹಾಗೂ ಸಮಾಜ ಮುಖಿಯಾದ ಶಿಕ್ಷಣ ನೀಡಬೇಕು. ಇಂದಿನ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣಕ್ಕಿಂತ ಹಿಂದಿನ ಗುರುಕೇಂದ್ರಿತ ಶಿಕ್ಷಣ ಪದ್ಧತಿ ಹೆಚ್ಚು ಪರಿಣಾಮಕಾರಿಯಾಗಿದೆ. ಹಿಂದೆ ವಿದ್ಯಾರ್ಥಿಗಳು ಗುರುಗಳನ್ನು ಹುಡುಕಿಕೊಂಡು ಹೋಗುತ್ತಿದ್ದರೆ ಇಂದು ಗುರುಗಳೆ ವಿದ್ಯಾರ್ಥಿಗಳನ್ನು ಹುಡುಕಿಕೊಂಡು ಹೋಗುವ ಸ್ಥಿತಿ ಬಂದಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಹೇಳಿದರು.
ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ ನೈತಿಕ ಮೌಲ್ಯಾಧರಿಸಿದ ರಾಜ್ಯಮಟ್ಟದ ಸ್ಪರ್ಧೆಗಳ ವಿಜೇತರಿಗೆ ಶನಿವಾರ ಅವರು ಬಹುಮಾನ ವಿತರಿಸಿ ಮಾತನಾಡಿದರು.
ಪ್ರಾಥಮಿಕ ಶಾಲಾ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಭಾಷೆಯ ಬೆಳವಣಿಗೆ ಆಗಬೇಕು. ಇಂದಿನ ಶೈಕ್ಷಣಿಕ ವ್ಯವಸ್ಥೆ ರೂಪಾಂತರಗೊಂಡು ನಾವು ಸತ್ಯವನ್ನೆಲ್ಲ ಮರೆಮಾಚುತ್ತಿದ್ದೇವೆ. ಭಾರತೀಯ ಸಂಸ್ಕøತಿ, ಪರಂಪರೆಯನ್ನು ಪ್ರತಿಬಿಂಬಿಸುವ ಕಲೆ, ಸಾಹಿತ್ಯ ಮತ್ತು ಸಂಗೀತದ ಹಿನ್ನೆಲೆಯಲ್ಲಿ ಶಿಕ್ಷಣ ನೀಡಬೇಕು. ಸಭ್ಯ, ಸುಸಂಸ್ಕøತ ನಾಗರಿಕರನ್ನು ರೂಪಿಸಬೇಕು. ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಇದನ್ನು ವಿಸ್ತರಿಸಬೇಕೆಂದು ಅವರು ಹೆಗ್ಗಡೆಯವರನ್ನು ಕೋರಿದರು.
ರಾಜ್ಯ ಶಿಕ್ಷಣ, ಸಂಶೋಶನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕ ಎಂ.ಆರ್. ಮಾರುತಿ ಶುಭಾಶಂಸನೆ ಮಾಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೆ ಉನ್ನತ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮೊದಲು ತಮ್ಮ ಅಂತರಂಗದರ್ಶನ ಮಾಡಿ ತಮ್ಮನ್ನು ತಾವು ತಿಳಿದುಕೊಂಡು ಇತರರಿಗೂ ಸಹಾಯ ಮಾಡಬೇಕು.
ಶಾಂತಿವನ ಟ್ರಸ್ಟ್ ವತಿಯಿಂದ ಕೇವಲ ಸ್ಪರ್ಧೆಗಾಗಿ ಪ್ರತಿ ವರ್ಷ ಪುಸ್ತಕಗಳನ್ನು ಪ್ರಕಟಿಸುತ್ತಿಲ್ಲ. ಇದನ್ನು ಓದಿ ವಿದ್ಯಾರ್ಥಿಗಳು ದೇಶ ಪ್ರೇಮ, ಗುರು-ಹಿರಿಯರು ಹಾಗೂ ಸೈನಿಕರ ಬಗ್ಯೆ ಗೌರವ ಭಾವನೆ ಹೊಂದಿರಬೇಕು. ಪುಸ್ತಕಗಳನ್ನು ಓದಿ ಜ್ಞಾನವಂತರಾಗಿ ಆದರ್ಶ ಬದುಕನ್ನು ಕಟ್ಟಿಕೊಳ್ಳಬೇಕು. ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಶಶಿಕಾಂತ ಜೈನ್ ಸ್ವಾಗತಿಸಿದರು. ಉಡುಪಿಯ ಅಶೋಕ ಸಿ. ಪೂಜಾರಿ ಧನ್ಯವಾದವಿತ್ತರು. ಸದಾಶಿವ ನಾಯಕ್ ಬಂಟ್ವಾಳ ಕಾರ್ಯಕ್ರಮ ನಿರ್ವಹಿಸಿದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Obituary : Miss Judith Lewis (91), Milagres A Ward, Kallianpur
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link