Brief Mumbai Managalore news with pictures.
Kemmannu News Newtwork, 20-03-2020 08:48:53
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ - ನೂತನ ಅಧ್ಯಕ್ಷರಾಗಿ ಡಾ| ಆರ್.ಕೆ ಶೆಟ್ಟಿ ಆಯ್ಕೆ
ಮುಂಬಯಿ, ಮಾ.14: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಮಹಾರಾಷ್ಟ್ರ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಡಾ| ಆರ್.ಕೆ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಾನಪದ ಪರಿಷತ್ತ್ನ ಕೇಂದ್ರ ಸಮಿತಿ ಅಧ್ಯಕ್ಷ ಟಿ.ತಿಮ್ಮೇಗೌಡ (ಐಎಎಸ್) ಬೆಂಗಳೂರು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಇದರ ಸಲಹಾ ಸಮಿತಿ ಸದಸ್ಯರಾಗಿ, ಬಂಟ್ಸ್ ಸಂಘ ಮುಂಬಯಿ ಇದರ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿಯೂ ಸಮಾಜ ಸೇವೆಯಲ್ಲಿ ತೊಡಗಿಸಿರುವ ಡಾ| ಆರ್.ಕೆ ಶೆಟ್ಟಿ ಅವರು ಬೃಹನ್ಮುಂಬಯಿನಲ್ಲಿ ಎಲ್ಲೈಸಿ ಸಂಸ್ಥೆಯ ಮೂಲಕ ಜನಾನುರಾಗಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಣಕಾಸು ತಜ್ಞರಾಗಿದ್ದಾರೆ.
ಜಾನಪದ, ಸಾಹಿತ್ಯ, ಕಲೆ, ಸಂಸ್ಕ್ರತಿಯ ಸಂವರ್ಧನೆಗಾಗಿ 1979ರಲ್ಲಿ ಸ್ಥಾಪಿತ ಕರ್ನಾಟಕ ಜಾನಪದ ಪರಿಷತ್ತು ಈಗಾಗಲೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಘಟಕಗಳನ್ನು ಹೊಂದಿದ್ದು ಒಳನಾಡು ಕರ್ನಾಟಕ ಅಲ್ಲದೆ ಹೊರನಾಡುಗಳಾದ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಹಾಗೂ ಅನಿವಾಸಿ ಭಾರತೀಯ ಬಾಹುಳ್ಯವುಳ್ಳ ದುಬಾಯಿ (ಯುಎಇ) ಇಲ್ಲೂ ಘಟಕಗಳನ್ನು ಹೊಂದಿದೆ.
ನಶಿಸುತ್ತಿರುವ ಪುರಾತನ ಜಾನಪದ ಕಲೆ-ಸಂಸ್ಕೃತಿಯನ್ನು ಮುಂದಿನ ದಿನಗಳಲ್ಲಿ ಉಳಿಸಿ ಬೆಳೆಸುವಲ್ಲಿ ಈ ಜಾನಪದ ಪರಿಷತ್ತು ಪ್ರಯತ್ನಿಸುದಲ್ಲದೆ ಎಲ್ಲಾ ಕನ್ನಡ ಶಾಲೆಗಳಲ್ಲಿ ಎಳವೆಯರಿಗೆ ಜಾನಪದ ಅರಿವು ಮೂಡಿಸಲು ಮಹಾರಾಷ್ಟ್ರ ಘಟಕದ ಮೂಲಕ ಶ್ರಮಿಸುವುದಾಗಿ ನೂತನ ಅಧ್ಯಕ್ಷ ಡಾ| ಆರ್.ಕೆ ಶೆಟ್ಟಿ ತಿಳಿಸಿದ್ದಾರೆ.
ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಇವರಿಗೆ ಸನ್ಮಾನ
ಮುಂಬಯಿ, ಮಾ.16: ಶ್ರೀ ವಿಷ್ಣುಮೂರ್ತಿ ಜನಾರ್ಧನ ಉಮಾ ಮಹೇಶ್ವರ ದೇವಸ್ಥಾನ, ಮಂಜನಾಡಿ ಕ್ಷೇತ್ರದ 38ನೇ ವರ್ಧಂತಿ ಇತ್ತೀಚೆಗೆ (ಮಾ.11) ದೇವಸ್ಥಾನದಲ್ಲಿ ಜರುಗಿತು. ಆ ನಿಮಿತ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಅಖಂಡ ಭಜನಾ ಸಪ್ತಾಹ ಮತ್ತು ಬೊಟ್ಟಿಕೆರೆ ಪುರೋಷೋತ್ತಮ ಪೂಂಜ, ಪತ್ನಿ ಮತ್ತು ಮಕ್ಕಳ ಸೇವಾ ರೂಪದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆ ನೆರವೇರಿತು.
ದೇವಸ್ಥಾನದ ಸಭಾಂಗಣದಲ್ಲಿ ನಡೆಸಲ್ಪಟ್ಟ ಭಜನಾ ಸಪ್ತಾಹ ಸಮಾರೋಪದಲ್ಲಿ ಯಕ್ಷಗಾನದ ರೂವಾರಿ, ಕಲಾವಿದರಾದ ರಾಮ ಮೋಹನ್ ಆಳ್ವ, ಶ್ರೀನಿವಾಸ ಬಲ್ಲಾಳ್, ಸುಬ್ರಹ್ಮಣ್ಯ ಭಟ್, ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ ಅತಿಥಿü ಅಭ್ಯಾಗತರುಗಳಾಗಿದ್ದು ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ಸಂಸ್ಥಾಪಕ ಅಧ್ಯಕ್ಷ, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಇವರಿಗೆ ಬೊಟ್ಟಿಕೆರೆ ಪುರೋಷತ್ತಮ ಪೂಂಜಾ ಅವರು ಸನ್ಮಾನಿಸಿ ಅಭಿನಂದಿಸಿದರು.
ನ್ಯೂ ಮಾರ್ಕ್ ಸ್ಪೋಟ್ರ್ಸ್ ಆಂಡ್ ಕಲ್ಚರಲ್ ಕ್ಲಬ್,ಕೊಂಕಣ್ಸ್ ಬೆಲ್ಸ್ ಮತ್ತು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಆಶ್ರಯದಲ್ಲಿ ದುಬೈಯಲ್ಲಿ ರಕ್ತದಾನ ಶಿಬಿರ.
ದುಬೈ: ಮಾರ್ಚ್ 6 : ನ್ಯೂ ಮಾರ್ಕ್ ಸ್ಪೋಟ್ರ್ಸ್ ಆಂಡ್ ಕಲ್ಚರಲ್ ಕ್ಲಬ್ ಮಂಗಳೂರು ಮತ್ತು ಕೊಂಕಣ್ಸ್ ಬೆಲ್ಸ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 06/03/2020 ನೇ ಶುಕ್ರವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈಯ ಲತೀಫಾ ಬ್ಲಡ್ ಡೊನೇಷನ್ ಸೆಂಟರ್ ನಲ್ಲಿ ಯಶಸ್ವಿಯಾಗಿ ನಡೆಯಿತು. ರಕ್ತ ದಾನ ಶಿಬಿರದಲ್ಲಿ ಒಟ್ಟು 70 ಮಂದಿ ಭಾಗವಹಿಸಿ ಹೆಸರು ನೋಂದಾಯಿಸಿದ್ದರು. ಕಾರಣಾಂತರಗಳಿಂದ 50 ಮಂದಿಗೆ ಮಾತ್ರ ರಕ್ತದಾನ ಮಾಡಲು ಸಾಧ್ಯವಾಯಿತು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ದುಬೈಯ ಲತೀಫಾ ಬ್ಲಡ್ ಡೊನೇಷನ್ ಸೆಂಟರ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.
ಶಿಬಿರದಲ್ಲಿ ನೊಯೆಲ್ ಡಿ ಅಲ್ಮೈಡಾ,ಬಾಲ ಸಾಲಿಯಾನ್,ಕೊಂಕಣ್ಸ್ ಬೆಲ್ಸ್ ಅಧ್ಯಕ್ಷರಾದ ನೆಲ್ಸನ್ ಪಿಂಟೋ,ಪ್ರಧಾನ ಕಾರ್ಯದರ್ಶಿ ರೀನಾ ಮರೀನಾ ಗಲ್ಬಾವೊ ಮತ್ತು ಸದಸ್ಯರು ಹಾಗೂ ನ್ಯೂ ಮಾರ್ಕ್ ಸ್ಪೋಟ್ರ್ಸ್ ಆಂಡ್ ಕಲ್ಚರಲ್ ಕ್ಲಬ್ ಸದಸ್ಯರಾದ ರೋಶನ್,ಅನಿಲ್,ರಾಕೇಶ್ ಶೆಟ್ಟಿ, ಪ್ರವೀಣ್,ಭರತ್,ಯಶ್ ಕರ್ಕೇರಾ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ನಿರ್ವಾಹಕರಾದ ಸಿರಾಜುದ್ದೀನ್ ಪರ್ಲಡ್ಕ,ಮೆಹತಾಬ್ ಕೈಕಂಬ,ಇಝ್ಝು ದ್ದೀನ್ ದೇರಳಕಟ್ಟೆ,ಫಾರೂಕ್ ದೇರಳಕಟ್ಟೆ ಉಪಸ್ಥಿತರಿದ್ದರು. ರಕ್ತದಾನ ಶಿಬಿರಕ್ಕೆ ಮೆಗಾ ಸ್ಪೀಡ್ ಕಾರ್ಗೋ ಸರ್ವಿಸ್ ಮಾಲಕರಾದ ವಾಲ್ಟರ್ ಪಿರೇರಾ,ಶ್ರೀಮತಿ ಲೆತೀಸಿಯಾ ಪಿರೇರಾ ಮತ್ತು ಸೋಲಿಡ್ ರೋಕ್ ಅಡ್ವರ್ಟೈಸಿಂಗ್ ಮಾಲಕರಾದ ಕ್ರಿಸ್ಟೋಫರ್ ಹಾಗೂ ಅನ್ಸಾರ್ ಬಾರ್ಕೂರು ಸಂಪೂರ್ಣ ಸಹಕಾರವನ್ನು ನೀಡಿದರು.
ಮುಂಬಯಿ (ಮಂಗಳೂರು), ಮಾ.16: ದ.ಕ. ಜಿಲ್ಲೆಯ ವಿವಿಧೆಡೆ ನಡೆದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಸ್ಪರ್ದಿಸಿ ವಿಜೇತರಾದ ರಿತೇಶ್ ಡಿ.ಸೋಜ, ಶಬ್ಬೀರ್ ಉಳ್ಳಾಲ, ನವಾಜ್ ನಾಟೆಕಲ್, ನೂತನ್ ಶೆಟ್ಟಿ ಕದ್ರಿ ರವರಿಗೆ ಅಬಿನಂದನಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ ಖಾದರ್, ದ.ಕ ಜಿಲ್ಲಾಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ವಿಜೇತರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ತ್ವಾಹಾ ಹಾಜಿ ಉಳ್ಳಾಲ, ನಗರಸಭೆ ಸದಸ್ಯ ಇಸ್ಮಾಹಿಲ್, ಅಲ್ತಾಫ್ ಉಳ್ಳಾಲ , ಜಕರೀಯಾ ಮಲಾರ್, ರಫೀಕ್ ಉಳ್ಳಾಲ ಇಲ್ಲಿಯಾಸ್ ಉಳ್ಳಾಲ ಮೊದಲಾದವರು ಭಾಗವಹಿಸಿದ್ದರು.
ಈ ವರ್ಷವೇ ತುಳು ಭಾಷೆ ಎಂಟನೇ ಪರಿಚ್ಛಯದಲ್ಲಿ ಶೋಭಿಸಲಿದೆ - ಪತ್ರಕರ್ತರ ಸಂಘದ ಅಭಿನಂದನಾ ಗೌರವ ಸ್ವೀಕರಿಸಿ ಕಡಂದಲೆ ಸುರೇಶ್ ಭಂಡಾರಿ
ಮುಂಬಯಿ, ಮಾ.15: ತುಳು ಸಾಹಿತ್ಯ ಅಕಾಡೆಮಿಗೆ ನಾಮ ನಿರ್ದೇಶನ ಸದಸ್ಯರಾಗಿ ಆಯ್ಕೆಯಾದ ಕನ್ನಡಿಗ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಇದರ ಸಲಹಾ ಸಮಿತಿ ಸದಸ್ಯ, ಕಡಂದಲೆ ಸುರೇಶ್ ಎಸ್.ಭಂಡಾರಿ ಇವರಿಗೆ ಪತ್ರಕರ್ತರ ಸಂಘದ ವತಿಯಿಂದ ಸತ್ಕರಿಸಿ ಅಭಿನಂದಿಸಲಾಯಿತು.
ಇಂದಿಲ್ಲಿ ಭಾನುವಾರ ಪೂರ್ವಾಹ್ನ ಘಾಟ್ಕೋಪರ್ ಪಶ್ಚಿಮದ ಮನಿಫೆÇೀಲ್ಡ್ ಕಚೇರಿಯಲ್ಲಿ ನಡೆಸಲಾದ ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಸರಳ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಸುರೇಶ್ ಭಂಡಾರಿ ಅವರಿಗೆ ಶಾಲು ಹೊದಿಸಿ, ಪುಷ್ಫಗುಪ್ಚ, ಸ್ಮರಣಿಕೆಯನ್ನಿತ್ತು ಅಭಿನಂದಿಸಿ ಶುಭಾರೈಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಕನ್ನಡಿಗ ಪತ್ರಕರ್ತರ ಸಂಘದ ಮತ್ತೋರ್ವ ಸಲಹಾ ಸಮಿತಿ ಸದಸ್ಯ ಡಾ| ಆರ್.ಕೆ ಶೆಟ್ಟಿ ಅವರನ್ನೂ ಅಭಿನಂದಿಸಲಾಯಿತು.
ತುಳುಭಾಷೆ ನನ್ನ ಭಾಷೆ-ನನ್ನ ಮಾತೆ ಅನ್ನುವ ಧ್ಯೇಯದಿಂದ ಅನಾದಿ ಕಾಲದಿಂದಲೂ ಬೆಳೆದು ಬಂದ ತುಳುಭಾಷೆ ಒಂದು ಸಂಸ್ಕೃತಿಯೂ, ಸಮಾಜಯೂ ಹೌದು. ಇದರ ಸರ್ವೋನ್ನತಿಯೇ ನನ್ನ ಉದ್ದೇಶವಾಗಿದೆ. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಮತ್ತು ಸರ್ವ ಸದಸ್ಯರ ಒಪ್ಪಿಗೆಯಂತೆ ಕರ್ನಾಟಕ ಸರಕಾರವು ನನಗೆ ಈ ನೇಮಕಾತಿ ಮಾಡಿದ್ದು ಇದಕ್ಕೆ ಕಾರಣಕರ್ತರಾದ ಸರ್ವ ತುಳುವರಿಗೂ ವಂದಿಸುವೆ. ನಮ್ಮ ಕಾಲಾವಧಿಯಲ್ಲಿ ಖಂಡಿತವಾಗಿಯೂ ತುಳು ಭಾಷೆಯನ್ನು ರಾಷ್ಟ್ರದ ಸವಿಂಧಾನದ ಎಂಟನೇ ಪರಿಚ್ಛಯದಲ್ಲಿ ರಾರಾಜಿಸುವಲ್ಲಿ ಯಶಕಾಣುವ ಆಶಯ ನಮ್ಮಲ್ಲಿದೆ. ಇದಕ್ಕೆ ಮುಂಬಯಿವಾಸಿ ತುಳುವರ ಸಹಯೋಗವೂ ಅತ್ಯವಶ್ಯವಾಗಿದೆ ಎಂದು ಸುರೇಶ್ ಭಂಡಾರಿ ತಿಳಿಸಿದರು.
ಪತ್ರಕರ್ತರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎಸ್.ಸುವರ್ಣ ಸ್ವಾಗತಿಸಿ ಪ್ರಸ್ತವನೆಗೈದು ಕನ್ನಡ, ತುಳು, ಹಿಂದಿ, ಮರಾಠಿ ಇತ್ಯಾದಿ ಭಾಷೆಗಳಲ್ಲಿ ನಿಪುಣರೆಣಿಸಿ ಓರ್ವ ವಾಗ್ಮಿಯಾಗಿ ಗುರುತಿಸಿ ಕೊಂಡ ಭಂಡಾರಿ ಈ ಸ್ಥಾನಕ್ಕೆ ಸಮರ್ಥ ವ್ಯಕ್ತಿಯಾಗಿದ್ದಾರೆ. ಇವರೋರ್ವ ವಿದ್ವಾಂಸತ್ವ ಸ್ಥಾನಕ್ಕೂ ಯೋಗ್ಯರು. ಸಮಗ್ರ ಸಮಾಜವನ್ನು ಆರೋಗ್ಯಪೂರ್ಣವಾಗಿಸುವ ಸ್ವಚ್ಛ ಮನೋಭಾವವುಳ್ಳ ಭಂಡಾರಿ ಅವರು ಓರ್ವ ಹೃದಯಶೀಲ ತುಳುವರೂ ಹೌದು. ಡಾ| ಸುನೀತಾ ಎಂ.ಶೆಟ್ಟಿ, ಶಿಮಂತೂರು ಚಂದ್ರಹಾಸ ಸುವರ್ಣ ಇವರ ಬಳಿಕ ಮತ್ತೆ ತುಳು ಅಕಾಡೆಮಿಗೆ ಸದಸ್ಯತ್ವ ನೀಡಿ ಕರ್ನಾಟಕ ಸರಕಾರ ಮುಂಬಯಿ ನೆಲೆಯ ತುಳುವರನ್ನು ಗೌರವಿಸಿದ್ದಂತಾಗಿದೆ ಎಂದರು.
ರೋನ್ಸ್ ಬಂಟ್ವಾಳ್ ಅವರು ಸುರೇಶ್ ಭಂಡಾರಿ ಅವರನ್ನು ಅಭಿನಂದಿಸಿ ಮಾತನಾಡಿ ಸುರೇಶ್ ಭಂಡಾರಿ ಅವರು ಮುಂಬಯಿನಲ್ಲಿನ ದೇವತಾ ಸದ್ಗುಣರು. ತುಳು ಭಾಷೆ-ಸಂಸ್ಕೃತಿಯ ಜೊತೆಗೆ ಎಲ್ಲಾ ಭಾಷಿಗರನ್ನೂ ಪೆÇ್ರೀತ್ಸಹಿಸಿದ ಬಹುಭಾಷಿಗರು. ಸರ್ವರನ್ನೂ ಬಂಧುಗಳಾಗಿ ಕಾಣುವ ಸ್ವಚ್ಛಂದ, ನಿರ್ಮಲ ಮನಸುಳ್ಳ ಇವರು ಮಹಾರಾಷ್ಟ್ರ ಮಾತ್ರವಲ್ಲ ರಾಷ್ಟ್ರದ ಆಸ್ತಿಯಾಗಿದ್ದಾರೆ. ಇಂತಹವರಿಂದ ಮುಂಬಯಿನಲ್ಲಿ ಮತ್ತಷ್ಟು ತುಳುವಿನ ಉನ್ನತಿಯಾಗಲಿ ಎಂದರು.
ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಂಗ ಎಸ್.ಪೂಜಾರಿ, ಗೌರವ ಕಾರ್ಯದರ್ಶಿ ರವೀಂದ್ರ ಶೆಟ್ಟಿ ತಾಳಿಪಾಡಿ, ಗೌರವ ಕೋಶಾಧಿಕಾರಿ ನಾಗೇಶ್ ಪೂಜಾರಿ ಏಳಿಂಜೆ, ಜೊತೆ ಕಾರ್ಯದರ್ಶಿ ಜಯರಾಮ ಎನ್.ಶೆಟ್ಟಿ, ಪತ್ರಕರ್ತರ ಭವನ ಸಮಿತಿ ಕಾರ್ಯಾಧ್ಯಕ್ಷ ಡಾ| ಶಿವ ಮೂಡಿಗೆರೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಡಾ| ದಿನೇಶ್ ಶೆಟ್ಟಿ ರೆಂಜಾಳ, ಜಯಂತ್ ಕೆ.ಸುವರ್ಣ, ವಿಶೇಷ ಆಮಂತ್ರಿತ ಸದಸ್ಯರುಗಳಾದ ಸಾ.ದಯಾ (ದಯಾನಂದ್ ಸಾಲ್ಯಾನ್), ಕರುಣಾಕರ್ ವಿ.ಶೆಟ್ಟಿ, ಸದಸ್ಯರಾದ ಆರೀಫ್ ಕಲಕಟ್ಟಾ, ಸುರೇಶ್ ಕೆ.ಮೂಲ್ಯ ಮತ್ತಿತರರು ಉಪಸ್ಥಿತರಿದ್ದು ಸುರೇಶ್ ಭಂಡಾರಿ ಅವರನ್ನು ಅಭಿನಂದಿಸಿದರು.
ಮಹಿಳಾ ಫುಟ್ಬಾಲ್ ಸ್ಪರ್ಧೆ; ಕು| ಶ್ರೇಯಾ ಗುರುರಾಜ್ ಭಟ್ ತಂಡಕ್ಕೆ
ಮುಂಬಯಿ, ಮಾ.16: ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದ ಜಲಗಾಂನಲ್ಲಿ ನಡೆಸಲ್ಪಟ್ಟ ಜಿಲ್ಲಾ ಮಟ್ಟದ ಮಹಿಳಾ ಫುಟ್ಬಾಲ್ ಸ್ಪರ್ಧೆ ನಡೆಸಲಾಗಿದ್ದು, ಮುಂಬಯಿನಿಂದ ಕು| ಶ್ರೇಯಾ ಗುರುರಾಜ್ ಭಟ್ ತಂಡ ಸ್ಪರ್ಧಿಸಿದ್ದು ಎದುರಾಗಿ ಕೋಲಾಪುರ ತಂಡವನ್ನು ಮಣಿಸಿ ಭರ್ಜರಿ ಜಯಗಳಿಸಿ ಟ್ರೋಫಿಯನ್ನು ತನ್ನದಾಗಿಸಿದೆ.
ಶ್ರೇಯಾ ಭಟ್ ಇವರು ಬಿಎಸ್ಕೆಬಿ ಅಸೋಸಿಯೇಶನ್ ಮುಂಬಯಿ (ಗೋಕುಲ) ಇದರ ಕಾರ್ಯಕಾರಿ ಸಮಿತಿಯ ಸಕ್ರೀಯ ಸದಸ್ಯ, ಮಾಜಿ ಪದಾಧಿಕಾರಿ ವೈ. ಗುರುರಾಜ್ ಭಟ್ ಇವರ ಸುಪುತ್ರಿ ಆಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಎಲ್ಲೂರು ನಿವಾಸಿಯಾಗಿದ್ದು ಸದ್ಯ ಮುಲುಂಡ್ ಪಶ್ಚಿಮದಲ್ಲಿ ನೆಲೆಸಿರುವ ಶ್ರೇಯಾ ಭಟ್ ಓರ್ವ ಅಪ್ರತಿಮ ಪ್ರತಿಭೆಯಾಗಿದ್ದಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Milarchi Lara, Milagres Cathedral, Kallianpur, Parish Bulletin - September 2025

Final Journey of Mrs. Elizabeth D’Souza (91 years) | LIVE from Udupi

ಮೊಂತಿ ಫೆಸ್ತ್ 2025 | Special Program in collaboration with Kemmannu Youth | Kemmannu.com

Monthi Fest Celebration |ಮೊಂತಿ ಫೆಸ್ತಾಚೊ ದಬಾಜೊ | 8-September-2025 | St. Theresa Church Kemmannu

Final Journey of Philip Saldhana (64 years) | LIVE from Kanajar | Udupi

Feast of Assumption & Independence Day Celebration | St. Theresa Church, Kemmannu

Moiye Krista Maye | ಮರಿಯೆ ಕ್ರಿಸ್ತಾ ಮಾಯೆ | 50 years Anniversary Video | Fr Francis Cornelio

Final Journey of Golbert Suares (65 years) | LIVE from Barkur | Udupi

Final Journey of Gretta Suares (69 years) | LIVE from Barkur

Final Journey of Asha Fernandes (43 years) | LIVE from Thottam | Udupi

Yuva Samagam 2025 | ICYM | LIVE from Sastan, Udupi

Final Journey of John Henry Almeida (71 years) | LIVE from Udyavara

Final Journey of Mrs. Severine Pais (85 years) | LIVE from Milagres, Kallianpur, Udupi

Final Journey of Mrs Lennie Saldanha (89 years) | LIVE from Kemmannu | Udupi

Final Journey of Zita Lewis (77 years) | LIVE from Kallianpur, Udupi

Final Journey of Henry Andrade (83 years) | LIVE from Kemmannu

Mount Rosary Church - Rozaricho Gaanch May 2025 Issue

Land/Houses for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.

Naturya - Taste of Namma Udupi - Order NOW

Focus Studio, Near Hotel Kidiyoor, Udupi


Earth Angels - Kemmannu Since 2023

Kemmannu Channel - Ktv Live Stream - To Book - Contact Here

Click here for Kemmannu Knn Facebook Link
Sponsored Albums
Exclusive
Udupi: Cooking without fire competition at Kemmannu Church [Video]

A ‘Wisdom Home of Memories’, a heritage Museum in Suratkal, Mangaluru

Celebrating 50 Years of Devotion: Iconic Konkani Hymn Moriye Krista Maye Marks Golden Jubilee

Arrest of Nuns’ at Chhattisgarh - Massive Protest Rally in Udupi Echoes a Unified Call for Justice and Harmony [Video]

MCC Bank Inaugurates Its 20th Branch in Byndoor

Mog Ani Balidan’ – A Touching Konkani Novel Released at Anugraha, Udupi [Photographs updated]

Milagres Cathedral celebrates Sacerdotal Ruby Jubilee of Mngr Ferdinand Gonsalves and Parish Community Day with grandeur

Mangalorean Teen Feryl Rodrigues Shines as May Queen 1st Runner-Up at Indian Club Bahrain [Video]

A Saintly Shepherd of Our Times: A Tribute to Pope Francis
