Brief University college news with pictures
Kemmannu News Network, 05-06-2022 20:40:14
ಜಾಗೃತಿಯಾಯಿತು, ಇನ್ನು ಗಿಡ ನೆಟ್ಟು ಪೋಷಿಸೋಣ: ಡಾ.ಅನಸೂಯಾ ರೈ
ವಿವಿ ಕಾಲೇಜು: ವಿಶ್ವ ಪರಿಸರ ದಿನಾಚರಣೆ, ಚಿಟ್ಟೆ ಉದ್ಯಾನ ರಚನೆ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ನೇಚರ್ ಕ್ಲಬ್, ಸಸ್ಯಶಾಸ್ತ್ರ ವಿಭಾಗ ಮತ್ತು ಯುವ ರೆಡ್ ಕ್ರಾಸ್ ಘಟಕಗಳು ಜಂಟಿಯಾಗಿ ಶನಿವಾರ ಕಾಲೇಜಿನ ಆವರಣದಲ್ಲಿ ಚಿಟ್ಟೆ ಉದ್ಯಾನವನ್ನು ನಿರ್ಮಿಸುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಪ್ರಾಂಶುಪಾಲೆ ಡಾ.ಅನಸೂಯಾ ರೈ, ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಮೂಲಕ ಚಿಟ್ಟೆ ಉದ್ಯಾನವನ್ನು ಉದ್ಘಾಟಿಸಿದರು. “ಯಾವುದೇ ಸದ್ದುಗದ್ದಲ, ಒಣ ಆಡಂಬರ ಮತ್ತು ಪ್ರಚಾರಗಳಿಲ್ಲದೆ ನೀವು ನಿಮಗಾಗಿ ನಿಮಗೆ ಸರಿ ಎನಿಸಿದ ಜಾಗದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಿ,” ಎಂದು ಕರೆ ನೀಡಿದರು. ನೇಚರ್ ಕ್ಲಬ್ನ ಸಂಯೋಜಕ ಡಾ.ಸಿದ್ದರಾಜು ಎಂ.ಎನ್, ಕಳೆ ಬೆಳೆದಿರುವ ಕ್ಯಾಂಪಸ್ನ ಖಾಲಿ ಜಾಗಗಳಲ್ಲಿ ಹೂವಿನ ಗಿಡಗಳು ಮತ್ತು ಔಷಧೀಯ ಸಸ್ಯಗಳನ್ನು ಬೆಳೆಸಲಾಗುವುದು, ಎಂದರು. ನೇಚರ್ ಕ್ಲಬ್ ಮತ್ತು ವೈಆರ್ಸಿ ವಿದ್ಯಾರ್ಥಿಗಳು ಚಿಟ್ಟೆಗಳನ್ನು ಆಕರ್ಷಿಸಲು ಕ್ಯಾಂಪಸ್ನಲ್ಲಿ ವಿವಿಧ ಹೂವಿನ ಗಿಡಗಳನ್ನು ನೆಟ್ಟರು.
ಕಾರ್ಯಕ್ರಮದ ಅಂಗವಾಗಿ ಪ್ರತೀಕಾ ಅವರು ಚಿಟ್ಟೆ ಉದ್ಯಾನದ ಮಹತ್ವವನ್ನು ವಿವರಿಸಿದರು. ಪ್ರಜ್ಞಾಶ್ರೀ ಅವರು ವಿಶ್ವ ಪರಿಸರ ದಿನದ ಕುರಿತು ವಿಶ್ವದಲ್ಲಿ ಹಸಿರುಮನೆ ಪರಿಣಾಮವನ್ನು ವಿವರಿಸಿ ಮಾತನಾಡಿದರು. ವೈಆರ್ಸಿಯ ಸಂಯೋಜಕ ಡಾ.ಕುಮಾರಸ್ವಾಮಿ ಎಂ, ತ್ಯಾಜ್ಯ ಬಾಟಲಿಗಳು ಮತ್ತು ದಿನನಿತ್ಯ ಬಳಸಬಹುದಾದ ಪ್ಲಾಸ್ಟಿಕ್ ಕವರ್ಗಳನ್ನು ಬಳಸಿ ಪ್ಲಾಸ್ಟಿಕ್ ಮರುಬಳಕೆ ಮಾದರಿಯನ್ನು ತೋರಿಸಿದರು.
ವಿದ್ಯಾರ್ಥಿಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು ಮತ್ತು ಕಾಲೇಜಿನ ವಿಜ್ಞಾನ ವಿಭಾಗದ ಹಿಂಭಾಗದಲ್ಲಿ ಚಿಟ್ಟೆ ಉದ್ಯಾನವನ್ನು ರಚಿಸಿದರು. ಮೆಲ್ರೀನ್ ಅವರ ದೈವಿಕ ಪ್ರಾರ್ಥನೆ, ಅಶ್ವಿನಿ ಅವರ ಸ್ವಾಗತ ಮತ್ತು ನವಿತಾ ಧನ್ಯವಾದ ಸಮರ್ಪಣೆ ಗಮನ ಸೆಳೆಯಿತು. ನೇಚರ್ ಕ್ಲಬ್ ಕಾರ್ಯಕಾರಿ ಸದಸ್ಯರಾದ ಚೇತನ್, ವೇದಾಶಿನಿ, ಸಂಗೀತಾ ಮತ್ತು ಮೆಲ್ರೀನ್ ಅವರ ಮೇಲ್ವಿಚಾರಣೆಯಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲರಿಗೆ ಆತ್ಮೀಯ ಬೀಳ್ಕೊಡುಗೆ
ವಿವಿ ಕಾಲೇಜು: 5 ವರ್ಷಗಳ ಕಾಲ ಪ್ರಾಂಶುಪಾಲ ಹುದ್ದೆ ಸೇರಿದಂತೆ 28 ವರ್ಷ ಸೇವೆ ಸಲ್ಲಿಸಿದ ಡಾ. ಉದಯ್ ಕುಮಾರ್ ನಿವೃತ್ತಿ
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 5 ವರ್ಷಗಳ ಕಾಲ ಪ್ರಾಂಶುಪಾಲ ಹುದ್ದೆ ಸೇರಿದಂತೆ 28 ವರ್ಷ, ಒಟ್ಟಾರೆ 39 ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ದುಡಿದು ವಯೋನಿವೃತ್ತಿ ಹೊಂದಿದ ಡಾ. ಉದಯ ಕುಮಾರ್ ಎಂ ಎ ಇರ್ವತ್ತೂರು ಅವರನ್ನು ಇತ್ತೀಚೆಗೆ ಭಾವಪೂರ್ಣವಾಗಿ ಬೀಳ್ಕೊಡಲಾಯಿತು.
ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಡಾ. ಉದಯ ಕುಮಾರ್ ಎಂ ಎ ಇರ್ವತ್ತೂರು ಅವರ ಸಾಧನೆಯನ್ನು, ವಿಶೇಷವಾಗಿ ಅವರು ಪ್ರಾಂಶುಪಾಲರಾಗಿದ್ದ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು, ಅಪರೂಪದ ನೆನಪುಗಳನ್ನು ಮೆಲುಕುಹಾಕಿದ ಅವರ ಹಿರಿಯ ಸಹೋದ್ಯೋಗಿಗಳು ಕಾಲೇಜಿನ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ನೆನಪಿಸಿಕೊಂಡರಲ್ಲದೆ, ವಿದ್ಯಾರ್ಥಿಗಳ ಓದಿನ ಬಗ್ಗೆ ಅವರಿಗಿದ್ದ ಕಾಳಜಿಯನ್ನು ಮೆಚ್ಚಿಕೊಂಡರು. ಸಹೋದ್ಯೋಗಿಗಳಿಗೆ ಅವರು ಕಷ್ಟಕಾಲದಲ್ಲಿ ಮಾಡಿದ ಸಹಾಯವನ್ನೂ ಹಲವರು ಕೃತಜ್ಞತೆಯಿಂದ ನೆನಪಿಸಿಕೊಂಡರು.
ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ಡಾ. ದಯಾನಂದ ನಾಯಕ್, ಕ್ರೀಡಾ ವಿಭಾಗದ ಡಾ. ಕೇಶವಮೂರ್ತಿ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ, ರಸಾಯನ ಶಾಸ್ತ್ರ ವಿಭಾಗದ ಡಾ.ಲಕ್ಷ್ಮಣ್, ಡಾ. ಉಷಾ, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಡಾ. ಯತೀಶ್ ಕುಮಾರ್, ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಡಾ. ಗಣಪತಿ ಗೌಡ, ಸೂಕ್ಷ್ಮಾಣುಜೀವಶಾಸ್ತ್ರ ವಿಭಾಗದ ಡಾ. ಭಾರತಿ ಪ್ರಕಾಶ್, ಅರ್ಥಶಾಸ್ತ್ರ ವಿಭಾಗದ ಡಾ. ಜಯವಂತ ನಾಯಕ್, ಪ್ರಾಣಿಶಾಸ್ತ್ರ ವಿಭಾಗದ ಡಾ. ಕೆ ಎ ನಾಗರತ್ನ, ಹಿಂದಿ ವಿಭಾಗದ ಡಾ. ಸುಮಾ ಆರ್, ಕಂಪ್ಯೂಟರ್ ವಿಜ್ಞಾನ ವಿಭಾಗದ ಡಾ. ವೀರಭದ್ರಪ್ಪ, ಹಿರಿಯ ಲೆಕ್ಕಿಗ ಕೃಷ್ಣಯ್ಯ ಶೆಟ್ಟಿಗಾರ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ. ರಾಜಲಕ್ಷ್ಮೀ ಎನ್ ಮೊದಲಾದವರು ಮಾತನಾಡಿದರು.
ಡಾ. ಉದಯ್ ಕುಮಾರ್ ಮಾತನಾಡಿ, “ʼನಾನುʼ ಎಂಬುದಕ್ಕಿಂತ, ನಾವು ಜೊತೆಯಾಗಿ ಸಾಧಿಸಿದ್ದೇ ಹೆಚ್ಚು. ನನ್ನ ಆಡಳಿತಾವಧಿಯಲ್ಲಿ ವಿದ್ಯಾರ್ಥಿಗಳಿಗೆ ನೆರವಾಗಲು ಕೈಲಾದಷ್ಟು ಪ್ರಯತ್ನಿಸಿದ್ದೇನೆ,” ಎಂದು ತಾವು ಪ್ರಾಂಶುಪಾಲರಾಗಿದ್ದ ಅವಧಿಯಲ್ಲಿ ಎಲ್ಲರೂ ನೀಡಿದ ಸಹಕಾರವನ್ನು ನೆನಪಿಸಿಕೊಂಡರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ, ನಿವೃತ್ತ ಪ್ರಾಂಶುಪಾಲರು ತಮ್ಮ ಅವಧಿಯಲ್ಲಿ ಕಾಲೇಜಿಗೆ ಹೊಸ ರೂಪ ನೀಡಿದ್ದಾರೆ, ಎಂದರು. ಕಾಲೇಜಿನ ವತಿಯಿಂದ ಡಾ. ಉದಯ್ ಕುಮಾರ್ ಎಂ ಎ- ಡಾ. ರಾಜಲಕ್ಷ್ಮೀ ಎನ್ ದಂಪತಿಯನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಸುಧಾ ಎನ್ ವೈದ್ಯ, ಕಛೇರಿ ಅಧೀಕ್ಷಕಿ ಭಾಗ್ಯಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಲತಾ ಎ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು. ಭೌತಶಾಸ್ತ್ರ ವಿಭಾಗದ ಅರುಣಾ ಕುಮಾರಿ, ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಡಾ. ಗಣಪತಿ ಗೌಡ, ಪೂರ್ವತನ ಪ್ರಾಂಶುಪಾಲ ಡಾ. ಹರೀಶ ಎ ಸಹಕರಿಸಿದರು.
ಶಿಕ್ಷಣ ವ್ಯಾಪಾರವಾಗದಿರಲಿ : ರವೀಂದ್ರ ಉಳಿದೊಟ್ಟು
ಉಳ್ಳಾಲ ಕಸಾಪ ’ಕನ್ನಡ ಸಂಭ್ರಮ’ ಉದ್ಘಾಟನೆ
ಮಂಗಳೂರು : ಇಂದು ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿ ಬದಲಾಗುತ್ತಿವೆ. ದೇಶ ನಿರ್ಮಾಣ ಮಾಡುವ, ಸಮಾನತೆಯ ಸಮಾಜವನ್ನು ರೂಪಿಸುವ ವಿದ್ಯಾಕೇಂದ್ರಗಳು ಭಾಷೆ, ಸಾಹಿತ್ಯ ಸಂಸ್ಜೃತಿ ಕುರಿತು ಅಭಿಮಾನ ಹುಟ್ಟಿಸುವ ಕಾರ್ಯಕ್ರಮಗಳನ್ನು ನಡೆಸಬೇಕಿದೆ, ಎಂದು ಕರ್ನಾಟಕ ಸರಕಾರದ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ರೈ ಉಳಿದೊಟ್ಟು ಹೇಳಿದರು.
ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ವತಿಯಿಂದ ದೇರಳಕಟ್ಟೆ ವಿದ್ಯಾರತ್ನ ವಿದ್ಯಾಲಯದಲ್ಲಿ ನಡೆದ ಕನ್ನಡ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮನಸ್ಸನ್ನು ಆರೋಗ್ಯಯುತವಾಗಿಡುವ ಸಾಹಿತ್ಯ ಚಟುವಟಿಕೆಗಳು ಹೆಚ್ಚಾಗಬೇಕಿದ್ದು ಸಾಹಿತ್ಯ ಪರಿಷತ್ತಿನ ಸದಸ್ಯರಾಗುವ ಮೂಲಕ ಕನ್ನಡ ಚಟುವಟಿಕೆಗಳಿಗೆ ಬೆಂಬಲ ನೀಡಬೇಕು, ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಂಬಯಿ ಕಲಾ ಜಗತ್ತಿನ ನಿರ್ದೇಶಕ, ಸಿನಿಮಾ ನಿರ್ಮಾಪಕ ಡಾ. ವಿಜಯ ಕುಮಾರ್ ತೋನ್ಸೆ ಮಾತನಾಡಿ, ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಕಲರವ ಉಂಟುಮಾಡುವ ಉಳ್ಳಾಲ ಕಸಾಪದ ಪ್ರಯತ್ನ ಶ್ಲಾಘನೀಯ. ಮಕ್ಕಳಿಗೆ ಪುಸ್ತಕದ ಓದಿನ ಜೊತೆಗೆ ಜೀವನ ಪಾಠವನ್ನು ವಿವರಿಸಬೇಕಿದೆ, ಎಂದರು
ಕನ್ನಡ ಹೃದಯದ ಭಾಷೆ : ಕುಂಬ್ಳೆ
ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ ಜಿಲ್ಲಾ ಕಸಾಪ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ, ಕನ್ನಡ ಹೃದಯದ ಭಾಷೆ. ಇಂಗ್ಲಿಷ್ ವ್ಯಾವಹಾರಿಕ ಭಾಷೆ. ಇಂಗ್ಲಿಷ್ ನಿಂದ ಪದವಿ ಉದ್ಯೋಗ ಸಿಗಬಹುದು. ಆದರೆ ಕನ್ನಡ- ತುಳುವಿನಿಂದ ನೆಮ್ಮದಿ ದೊರಕುವುದು, ಎಂದರು.
ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರ ರೈ ಕಲ್ಲಿಮಾರು ಇವರು ʼಕನ್ನಡದಲ್ಲಿ ಕಾರ್ಯಕ್ರಮ ನಿರೂಪಣೆ: ಸ್ವರೂಪ ಮತ್ತು ವಿನ್ಯಾಸʼ ಎಂಬ ವಿಷಯದ ಕುರಿತಾಗಿ ಮಾರ್ಗದರ್ಶಿ ಉಪನ್ಯಾಸ ನೀಡಿದರು. ಉದ್ಯಮಿ ಲ.ಚಂದ್ರಹಾಸ ಶೆಟ್ಟಿ ದೇರಳಕಟ್ಟೆ, ಉಳ್ಳಾಲ ಚುಸಾಪ ಅಧ್ಯಕ್ಷ ಎಡ್ವರ್ಡ್ ಲೋಬೋ, ವಿದ್ಯಾರತ್ನ ಶಾಲಾ ಕಾರ್ಯದರ್ಶಿ ಸೌಮ್ಯ ಆರ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ನಯೀಮ್ ಹಮೀದ್, ಅಧ್ಯಾಪಕ ರವಿಕುಮಾರ್ ಕೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕವಿ ಗುಣಾಜೆ ರಾಮಚಂದ್ರ ಭಟ್ ಸ್ವಾಗತಿಸಿದರು. ಅಧ್ಯಾಪಕ ನವೀನ್ ರಾವ್ ವಂದಿಸಿದರು. ಕಾರ್ಯಕ್ರಮ ಸಂಚಾಲಕ ರವಿಕುಮಾರ್ ಕೋಡಿ ವಂದಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಂಭ್ರಮದ ಅಂಗವಾಗಿ ಆಯೋಜಿಸಿದ ಕನ್ನಡ ಭಾಷಣ, ಭಾವಗೀತೆ, ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ, ಕನ್ನಡ ಗೀತಗಾಯನ ಮತ್ತು ಜಾನಪದ ನೃತ್ಯ ಕಾರ್ಯಕ್ರಮಗಳು ನಡೆದವು.
ಮಾರ್ಗದರ್ಶನ ದೊರೆಯದಿದ್ದರೆ ಯುವಜನತೆ ಸಮಾಜಘಾತುಕರಾಗಬಹುದು: ಜಿಲ್ಲಾಧಿಕಾರಿ
ಮಂಗಳೂರು: ಯುವಜನತೆಯೇ ನಮ್ಮ ದೇಶದ ಆಸ್ತಿ. ಆದರೆ ಅವರಿಗೆ ಸೂಕ್ತ ಸಮಯದಲ್ಲಿ ಮಾರ್ಗದರ್ಶನ ದೊರೆಯದಿದ್ದರೆ ಅವರೇ ಸಮಾಜಘಾತುಕರಾಗಬಹುದು. ಈ ನಿಟ್ಟಿನಲ್ಲಿ ಕರ್ನಾಟಕ ಯುವ ನೀತಿ- 2021 ರ ಜಾರಿ ಮುಖ್ಯವಾಗಿದೆ, ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ (ಮೈಸೂರು) ಮತ್ತು ಯುನಿಸೆಫ್ ಹೈದರಾಬಾದ್ ಮತ್ತು ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ (ಕೊಪ್ಪಳ) ಇವುಗಳ ಸಹಯೋಗದೊಂದಿಗೆ ಶನಿವಾರ ನಡೆದ ಕರ್ನಾಟಕ ಯುವ ನೀತಿ- 2021 ಕುರಿತು ಅಭಿಪ್ರಾಯ ಸಂಗ್ರಹಕ್ಕಾಗಿ ನಡೆದ ಪ್ರಾದೇಶಿಕ ಮಟ್ಟದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಯುವ ನೀತಿ- 2021 ರಾಜ್ಯದ ಬೆಳವಣಿಗೆಯ ದಿಕ್ಕನ್ನು ನಿರ್ಧರಿಸಬಲ್ಲುದು. ಇದರ ಯಶಸ್ಸಿಗೆ ಎಲ್ಲರ ಸಲಹೆ, ಮಾರ್ಗದರ್ಶನಗಳು ಅಗತ್ಯ, ಎಂದರು.
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಯುವನೀತಿಯ ಪ್ರಾಮುಖ್ಯತೆ, ವ್ಯಾಪಕತೆಯನ್ನು ನಾವು ಮೊದಲು ಅರಿತುಕೊಳ್ಳಬೇಕು. ಈ ಕಾರ್ಯನೀತಿಯನ್ನು ನಿರ್ಧಿಷ್ಟ ಗುರಿಯೊಂದಿಗೆ, ಒಂದು ಚೌಕಟ್ಟಿನೊಳಗೆ ಜಾರಿಗೆ ತಂದರೆ ಹೆಚ್ಚು ಪರಿಣಾಮಕಾರಿಯಾಗಿರಲು ಸಾಧ್ಯ, ಎಂದರು. ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ರಮೇಶ್ ವೆಂಕಟರಾಮ್, ಯುವ ನೀತಿಯ ಹಿಂದೆ, ಯುವಕರ ಅಭಿವೃದ್ಧಿ ಮತ್ತು ಅಭಿವೃದ್ಧಿಗಾಗಿ ಯುವಕರನ್ನು ರೂಪಿಸುವ ಗುರಿಯಿದೆ. 15 ರಿಂದ 29 ವರ್ಷ ವಯಸ್ಸಿನ ಯುವಜನತೆಯ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯಮಟ್ಟದ ಯೋಜನೆ ರೂಪಿಸಲಾಗಿದೆ, ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜ, ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ (ಕೊಪ್ಪಳ)ಯ ಹರೀಶ್ ಜೋಗಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು, ಎನ್ಎಸ್ಎಸ್ ಅಧಿಕಾರಿಗಳು- ವಿದ್ಯಾರ್ಥಿಗಳು ಹಾಗೂ ಇತರ ಪ್ರತಿನಿಧಿಗಳು ಉಪಸ್ಥಿತರಿದ್ದರು. ಪ್ರತಿನಿಧಿಗಳನ್ನು 6 ತಂಡಗಳಾಗಿ ವಿಂಗಡಿಸಿ, ಯೋಜನೆಯ 6 ಗಮನ ಕೇಂದ್ರೀಕೃತ ಕ್ಷೇತ್ರಗಳ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಯಿತು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link