ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ನಿಲ್ಲಿಸಿ- ದಿನಕರ ಬಾಬು
Kemmannu News Network, 01-07-2018 18:03:41
ಉಡುಪಿ :- ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಸಮರ್ಪಕವಾಗಿಲ್ಲ, ಪೂರ್ಣವೂ ಆಗಿಲ್ಲ, ದುರಸ್ತಿಯೂ ಮಾಡುತ್ತಿಲ್ಲ. ಆದ್ದರಿಂದ ಹೆದ್ದಾರಿ ದುರಸ್ತಿ ಮಾಡುವವರೆಗೆ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಯಿತು.
ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ ಅವರು ಉಡುಪಿ ಸಂತೆಕಟ್ಟೆ ಭಾಗದಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಪಾದಚಾರಿ ಮೇಲ್ಸೇತುವೆ, ಬಸ್ಸು ನಿಲ್ದಾಣ ನಿರ್ಮಾಣ ಏನಾಗಿದೆ ಎಂದು ಪ್ರಶ್ನಿಸಿದರು. ಅದಕ್ಕೆ ಪೂರಕವಾಗಿ ಸದಸ್ಯೆ ಗೀತಾಂಜಲಿ ಸುವರ್ಣ ಅವರು ಕೂಡ ರಸ್ತೆ ದುರಸ್ತಿ ಮಾಡುತ್ತಿಲ್ಲ. ರಸ್ತೆಗಳಲ್ಲಿ ಗುಂಡಿ ಬಿದ್ದು ಅಪಘಾತಗಳಾಗುತ್ತಿದ್ದು, ಪಾಟ್ ಹೋಲ್ ಗಳನ್ನೂ ದುರಸ್ತಿ ಸಹ ಮಾಡುತ್ತಿಲ್ಲ, ಇದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ಹೇಳಿದರು. ಕಳೆದ ಅನೇಕ ಸಮಯದಿಂದ ಈ ಸಮಸ್ಯೆ ಪ್ರಸ್ತಾವಿಸುತ್ತಿದ್ದರೂ ಯಾವುದೇ ಪರಿಹಾರ ಸಿಗುತ್ತಿಲ್ಲ ಎಂದು ಜಿ.ಪಂ. ಸದಸ್ಯರು ಹೇಳಿದರು.
ಈ ವೇಳೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗುರುರಾಜ್ ಮಾತನಾಡಿ, ಸಂತೆಕಟ್ಟೆ ಪಾದಾಚಾರಿ ಮೇಲ್ಸೇತುವೆಯ ಪ್ರಸ್ತಾವನೆಯನ್ನು ಕಳೆದ ನವೆಂಬರ್ನಲ್ಲಿ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದು, ಇನ್ನೂ ಅನುಮೋದನೆ ಸಿಕ್ಕಿಲ್ಲ. ನಾವು ಕೇಂದ್ರ ಸಚಿವಾಲಯ ಮತ್ತು ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುತ್ತೇವೆ, ರಸ್ತೆ ಹದಗೆಟ್ಟರೆ ಅದನ್ನೂ ಹೇಳುತ್ತೇವೆ. ಆದರೆ ಅದನ್ನು ದುರಸ್ತಿಪಡಿಸುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದರು.
ಈ ಉತ್ತರದಿಂದ ಸದಸ್ಯರು ಮತ್ತಷ್ಟು ಅಸಮಾಧಾನಗೊಂಡರು. ಸದಸ್ಯ ಜನಾರ್ದನ ತೋನ್ಸೆ ಅವರು ಹೆದ್ದಾರಿಗೆ ಸಂಬಂಧಿಸಿ ಪ್ರತ್ಯೇಕ ಸಭೆಯನ್ನು ಕರೆಯುವಂತೆ ಮನವಿ ಮಾಡಿದರು. ಶಾಸಕ ರಘುಪತಿ ಭಟ್ ಮಾತನಾಡಿ, ಹೆದ್ದಾರಿ ದುರಸ್ತಿಯನ್ನೂ ಮಾಡದೆ ಟೋಲ್ ಸಂಗ್ರಹಿಸುವುದು ಬೇಡ, ಜಿ.ಪಂ.ನಲ್ಲಿ ಜಿಲ್ಲೆಯ ಎರಡು ಟೋಲ್ ಕೇಂದ್ರಗಳನ್ನು ಮುಚ್ಚುವ ನಿರ್ಣಯ ಕೈಗೊಂಡು, ಯಾವುದೇ ಭದ್ರತೆ ಒದಗಿಸದಂತೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರಿಗೆ ಸಲ್ಲಿಸುವಂತೆ ಸಲಹೆ ನೀಡಿದರು. ಅದರಂತೆ ಟೋಲ್ ಸ್ಥಗಿತಕ್ಕೆ ನಿರ್ಣಯ ಕೈಗೊಳ್ಳಲಾಯಿತು.
ಜಿಲ್ಲೆಯ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದ್ದು ಅಂತಹ ಆಸ್ಪತ್ರೆಗಳನ್ನು, ಖಾಸಗಿ ವೈದ್ಯಕೀಯ ವಿದ್ಯಾಲಯಗಳಿಗೆ ಮತ್ತು ದೊಡ್ಡ ಖಾಸಗಿ ಆಸ್ಪತ್ರೆಗಳಿಗೆ ನಿರ್ವಹಣೆ ಮಾಡಲು ನೀಡಿದರೆ, ಆ ಸಂಸ್ಥೆಗಳಲ್ಲಿನ ವೈದ್ಯರ ಸೇವೆ ಜನರಿಗೆ ದೊರೆಯುತ್ತದೆ ಈ ಕುರಿತಂತೆ ಜಿಲ್ಲಾ ಪಂಚಾಯತ್ ಮೂಲಕ ನಿರ್ಣಯ ಕೈಗೊಳ್ಳುವಂತೆ ಶಾಸಕ ರಘುಪತಿ ಭಟ್ ತಿಳಿಸಿದರು.
ಉಡುಪಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಉಸ್ತುವಾರಿ ಜಿಲ್ಲಾ ಸರ್ಜನ್ ಅಡಿಯಲ್ಲಿ ಬರಬೇಕು, ಪ್ರಸ್ತುತ ಈ ಆಸ್ಪತ್ರೆಯಲ್ಲಿರುವ ವೈದ್ಯರು ಮತ್ತು ಸಿಬ್ಬಂದಿಯನ್ನು ಅಲ್ಲಿಯೇ ಉಳಿಸಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಬೇಕು, ಸಂಪೂರ್ಣವಾಗಿ ಆಸ್ಪತ್ರೆಯ ಜವಾಬ್ದಾರಿಯನ್ನು ಖಾಸಗಿಯವರಿಗೆ ವಹಿಸಿದರೆ ಮುಂದೆ ಸಮಸ್ಯೆಯಾಗಲಿದೆ, ಈ ಕುರಿತಂತೆ ನಿರ್ಣಯ ಮಾಡಿ ಕಳುಹಿಸಿದರೆ ವಿಧಾನಸಭೆಯಲ್ಲಿ ಚರ್ಚಿಸಲಾಗುವುದು ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಜಿಲ್ಲೆಯಲ್ಲಿ ಮರಳು ಸಮಸ್ಯೆ ಕುರಿತಂತೆ , ಮರಳುಗಾರಿಕೆಗೆ ಆಗಸ್ಟ್ ಮೊದಲ ವಾರದಲ್ಲಿ ಅನುಮತಿ ನೀಡುವಂತೆ ಹಾಗೂ ಜಿಲ್ಲೆಯಲ್ಲಿ ಮರಳು ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಚರ್ಚೆ ನಡೆಯಿತು.
ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಪೂಣ್ ಪ್ರಮಾಣದಲ್ಲಿ ಪಠ್ಯ ಪುಸ್ತಕ ಪೊರೈಕೆಯಗದೇ ತೊಂದರೆಯಾಗಿದೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಸದಸ್ಯೆ ಶಿಲ್ಪಾ ಸುವರ್ಣ ಕೋರಿದರು, ಇದಕ್ಕೆ ಉತ್ತರಿಸಿದ ಡಿಡಿಪಿಐ ಅವರು ಜಿಲ್ಲೆಯಲ್ಲಿ 86% ಪುಸ್ತಕ ವಿತರಣೆ ಈಗಾಗಲೆ ನಡೆದಿದೆ, ನಿನ್ನೆ 3 ಲೋಡ್ ಪುಸ್ತಕ ಬಂದಿದ್ದು ಅವುಗಳನ್ನು ವಿತರಿಸಿದರೆ ಸಮಸ್ಯೆ ಪರಿಹಾರವಾಗಲಿದೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶಾಲಾ ಮಕ್ಕಳಿಗೆ ಉತಮ ಗುಣಮಟ್ಟದ ಸೈಕಲ್ ಹಾಗೂ ಶೂ ಗಳನ್ನು ವಿತರಿಸುವಂತೆ ಹಾಗೂ ಅನುಪಯುಕ್ತ ಶಾಲಾ ಕಟ್ಟಡಗಳನ್ನು ವಿಲೇವಾರಿ ಮಾಡುವಲ್ಲಿ ಸೂಕ್ತ ನಿಯಮಗಳನ್ನು ಪಾಲಿಸುವಂತೆ ಅಧ್ಯಕ್ಷ ದಿನಕರ ಬಾಬು ಹೇಳಿದರು.
ಕಿರಿ ಮಂಜೇಶ್ವರ ಆಸ್ಪತ್ರೆ ಬಳಿ ನೀರು ನಿಂತಿದ್ದು, ರೋಗಿಗಳಿಗೆ ತೊಂದರೆಯಾಗಿದೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಸದಸ್ಯೆ ಗೌರಿ ದೇವಾಡಿಗ ತಿಳಿಸಿದರು.
ಕಾರ್ಕಳದ ವರಂಗ ಗ್ರಾಮ ಪಂಚಯತ್ ನಲ್ಲಿ ಸ್ಮಶಾನಕ್ಕೆ ಮೀಸಲಿಟ್ಟ ಜಾಗದ ಅತಿಕ್ರಮಣ ಆಗಿದ್ದು, ಕ್ರಮ ಕೈಗೊಳ್ಳುವಂತೆ ಸದಸ್ಯೆ ಜ್ಯೋತಿ ಹರೀಶ್ ಕೋರಿದರು.
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸೂಕ್ತ ಪರಿಹಾರ ವಿತರಿಸುವಂತೆ ಸದಸ್ಯೆ ಗೀತಾಂಜಲಿ ಸುವರ್ಣ ಕೋರಿದರು. ಗ್ರಾಮ ಮತ್ತು ಹೋಬಳಿ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ತಂಡಗಳ ರಚನೆ ಆಗಿಲ್ಲ, ತಂಡ ರಚಿಸುವಾಗ ಸ್ಥಳಿಯ ಜನಪ್ರತಿನಿಧಿಗಳನ್ನು ಸೇರಿಸಿಕೊಳ್ಳುವಂತೆ ಜನಾರ್ಧನ ತೋನ್ಸೆ ಹೇಳಿದರು.
ಹಾವಂಜೆ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳು ರಸ್ತೆಗೆ ಅಡ್ಡ ಬಂದು ಅಪಘಾತಗಳಾಗುತ್ತಿದ್ದು, ಅರಣ್ಯ ಇಲಾಖೆವತಿಯಿಂದ ಸೂಕ್ತ ಬೇಲಿ ಅಳವಡಿಸುವಂತೆ ಸದಸ್ಯ ಜನಾರ್ಧನ ತೋನ್ಸೆ ಹಾಗೂ ಉಡುಪಿ ತಾ.ಪಂ, ಅದ್ಯಕ್ಷೆ ನಳನಿ ಪ್ರದೀಪ್ ರಾವ್ ಕೋರಿದರು.
ಸಭೆಯಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಶಾಸಕ ಲಾಲಾಜಿ ಮೆಂಡನ್ , ವಿಧಾನ ಪರಿಷತ್ ಸದಸ್ಯ ಪ್ರತಾಪ ಚಂದ್ರ ಶೆಟ್ಟಿ, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕೋಟ್ಯಾನ್
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಉಪಸ್ಥಿತರಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Funeral Details: Alice Sequeira (78), Barkur

Kemmannu Church - Weekly Announcements.

Mount Rosary Church Annoucement for the week

Free Eye Camp at Mount Rosary, Kallianpur

An Appeal from vittal church

Foundation Stone Laying Ceremony of Nayaab Residency by B. M. Zaffer & fly, Dubai, UAE.

Canara Beach Restaurant, Hoode/Bengre, Udupi.

Pedruchi Chavi January 2019

Delite Catering, Santhekatte

Milarchi Laram - Issue Jan 2019

Canara Beach Restaurant Inaugurated at Bengre, Kemmannu.


ROZARICHO GAANCH DECEMBER 2018

Udupi: Congratulations to Raising smiles who won the first place in RED DROP AD- shoot competition..

Maria Travels

Welcome to Thonse Naturecure Hospital

Delite Caterers and Delite Event Management

An appeal to Kemmannu Parishioners, Friends and Well Wishers:
![An appeal to Kemmannu Parishioners, Friends and Well Wishers:<P> <Center>[Comments]</P> </Center>](adds/1522172742.6fc19114f062a892efb6c1ec75fea642.gif)
Read online Uzvaad:

For all your travel needs contact Sequeira Tourist

Power Care Services, Moodubelle

Read Online Raknno

Kemmannu Platinum Jubilee Souvenir – Amruth Kaanik

Udupi Today



Click here for Kemmannu Knn Facebook Link
Sponsored Albums
Exclusive
Great Relief: Kemmannu road completed

Foundation Stone laid for Nayaab Residency, Udupi.

Miraculous wooden statue of St Peter the Apostle

Rare photograph of Late B. V. Gopalakrishna Rao - Presidential Award Winner from Thonse/Kemmannu.

Monthi (Nativity)Fest 2017 Celebration pictures.

Swarna our little lady - By Aaron Ambrose D’Souza

Your grandparents saw it? Well you can’t - By Aaron Ambrose D’Souza.

Nature Block: How plants save the world on a daily basis By Aaron Ambrose D’Souza

Nature Block: Flora and Fauna of Kemmannu (Thonse) by Aaron Ambrose D’Souza
