ಪ್ರಾಚೀನ ಸಂಸ್ಕೃತಿ ಮತ್ತು ಏಕಾಗ್ರತೆ ಕಲೆಗಳ ಬಗ್ಗೆ ಯುವಸಮೂಹದಲ್ಲಿ ಹೆಚ್ಚಿನ ಅರಿವು ಮೂಡಬೇಕು
ಪ್ರಾಚೀನ ಸಂಸ್ಕೃತಿ ಮತ್ತು ಏಕಾಗ್ರತೆ ಕಲೆಗಳ ಬಗ್ಗೆ ಯುವಸಮೂಹದಲ್ಲಿ ಹೆಚ್ಚಿನ ಅರಿವು ಮೂಡಬೇಕು: ಪದ್ಮಶ್ರೀ ಪುರಸ್ಕøತ ಡಾ ಕಿರಣ್ ಸೇಠ್
ತುಮಕೂರು, ಡಿಸೆಂಬರ್ 30: ಕಳೆದ 45 ವರ್ಷಗಳಿಂದ ದೇಶದ ಯುವಸಮೂಹದಲ್ಲಿ ಭಾರತೀಯ ಪ್ರಾಚೀನ ಸಂಸ್ಕೃತಿ ಮತ್ತು ಏಕಾಗ್ರತೆ ಕಲೆಗಳ ಬಗ್ಗೆ ಅರಿವು ಹೆಚ್ಚಿಸಿ ಬೆಳೆಸುವ ನಿಟ್ಟಿನಲ್ಲಿ ಹಲವಾರು ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಸೇವೆ ಸಲ್ಲಿಸಲಾಗುತ್ತಿದೆ ಎಂದು ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ಸೊಸೈಟಿ ಫಾರ್ ದಿ ಪ್ರಮೋಷನ್ ಆಫ್ ಇಂಡಿಯನ್ ಶಾಸ್ತ್ರೀಯ ಸಂಗೀತದ ಸಂಸ್ಥಾಪಕ ಪದ್ಮಶ್ರೀ ಪುರಸ್ಕøತ ಡಾ ಕಿರಣ್ ಸೇಠ್ ಹೇಳಿದರು.
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಅವರ 145 ದಿನಗಳ ಸೈಕ್ಲಿಂಗ್ ಕಾರ್ಯಾಚರಣೆಯಲ್ಲಿ ಅವರು ಇಂದು ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಎಂಪ್ರೆಸ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ವಾಗತ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತೀಯ ಕಲೆಗಳನ್ನು ಅಭ್ಯಸಿಸುದವರ ಮೂಲಕ ವಿಧ್ಯಾರ್ಥಿಗಳು ತಮ್ಮ ಏಕಾಗ್ರತೆಯನ್ನು ವೃದ್ದಿಸಬಹುದು, ಸ್ವಯಂ ಸೇವಕರಿಂದ ನಡೆಯುವ SPIಅ ಒಂಅಂಙ ಸಂಸ್ಥೆಯು ರಾಷ್ಟ್ರದ ಹಿತಕ್ಕಾಗಿ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದು, ಅಮೂಲಕ ದೇಶ ವಿದೇಶಗಳಲ್ಲಿ ಲಕ್ಷಾಂತರ ಯುವಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುವಲ್ಲಿ ಯಶಸ್ವಿಯಾಗಿದೆ ಎಂದರು.
ವಿದ್ಯಾರ್ಥಿಗಳೊಂದಿಗಿನ ಸಂವಾದ: ಈ ಸಂದರ್ಭದಲ್ಲಿ, ಡಾ ಸೇಠ್, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೌಶಲ್ಯವನ್ನು ರೂಢಿಸಿಕೊಳ್ಳವ ರೀತಿಯ ಬಗ್ಗೆ ತಿಳಿಸಿಕೊಟ್ಟರು, ಪಾಶ್ಚಿಮಾತ್ಯ ಮತ್ತು ಭಾರತೀಯ ಪರಿಕಲ್ಪನೆಯಲ್ಲಿ ಯೋಗವು ಆರೋಗ್ಯಕರ ಬೆಳವಣಿಗೆಗೆ ಮುಖ್ಯವಾಗಿದೆ ಎಂದು ಒತ್ತಿ ಹೇಳಿದರು, ಪ್ರಸ್ತುತ ಜಗತ್ತಿಗೆ ಭಾರತೀಯ ಶಾಸ್ತ್ರೀಯ ಸಂಗೀತದ ಪ್ರಸ್ತುತತೆಯ ಅವಶ್ಯಕತೆ ಹೆಚ್ಚಿದೆ, ಶಾಸ್ತ್ರೀಯ ಸಂಗೀತವು ಮನಸ್ಸನ್ನು ಪ್ರಶಾಂತವಾಗಿಸಿಸುತ್ತದೆ, ಧ್ಯಾನ ಮತ್ತು ಯೋಗದಿಂದ ಆರೋಗ್ಯ ಹಾಗೂ ಏಕಾಗ್ರತೆಯು ಹೆಚ್ಚುತ್ತದೆ ಇದು ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಪೂರಕವಾಗಿದೆ ಎಂದರು ಹಾಗೂ À ಜೀವನದಲ್ಲಿ ಸೈಕಲ್ ಸವಾರಿಯ ಮಹತ್ವವನ್ನು ವಿವರಿಸಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಡಾ.ಕಿರಣ್ ಸೇಠ್ ಅವರು ತಮ್ಮ 73ನೇ ಇಳಿಯ ವಯಸ್ಸಿನಲ್ಲಿ ಸೈಕಲ್ ಜಾಥಾ ಮೂಲಕ 2022ರ ಆಗಸ್ಟ್ 15 ರಂದು ಕಾಶ್ಮಿರದಿಂದ ಹೊರಟ ಅವರು ಭಾರತದ ಸಂಸ್ಕೃತಿ ಮತ್ತು ಕಲಾಚಾರದ ಮಹತ್ವವನ್ನು ದೇಶದ ಮೂಲೆ ಮೂಲೆಗಳಲ್ಲಿರುವ ಜನರಲ್ಲಿ ಜಾಗೃತಿ ಮೂಡಿಸಿ ಕನ್ಯಾಕುಮಾರಿಯಲ್ಲಿ ತಮ್ಮ ಯಾತ್ರೆಯನ್ನು ಪೂರ್ಣಗೊಳಿಸಲಿದ್ದಾರೆ, ಯೋಗ ಮತ್ತು ಭಾರತೀಯ ಸಂಗೀತವು ದೇಶದ ಶಕ್ತಿಯಾಗಿದೆ, ಇದನ್ನು ನಾವು ಪ್ರತಿನಿತ್ಯ ಅಭ್ಯಾಸ ಮಾಡಬೇಕು, ವ್ಯಕ್ತಿಯಲ್ಲಿರುವ ಖಿನ್ನತೆ, ಒತ್ತಡವನ್ನು ಇವು ದೂರ ಮಾಡಿ ಉತ್ತಮ ಮನೋಭಾವನೆ ತರುತ್ತವೆ, ಇದರಿಂದ ಸಮಾಜದಲ್ಲಿ ನಡೆಯುವ ಅಪರಾಧಗಳು ಕಡಿಮೆಯಾಗುತ್ತವೆ, ಉತ್ತಮ ಯೋಗಾಭ್ಯಾಸಿಯು ಖಂಡಿತ ಉತ್ತಮ ಭಾರತೀಯ ಪ್ರಜೆಯಾಗಿ ರೂಪಗೊಳ್ಳುತ್ತಾನೆ, ಯುವ ಸಮೂಹ ಯೋಗ ಮತ್ತು ಭಾರತೀಯ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವಂತೆ ಕರೆ ನೀಡಿದರು.
ಡಾ. ಕಿರಣ್ ಸೇಠ್ ರೊಂದಿಗೆ ಕೈ ಜೋಡಿಸಿ ಇಂತಹ ಮಹತ್ವವಾದ ಉದ್ದೇಶವನ್ನು ಹೊತ್ತಿರುವ SPIಅ ಒಂಅಂಙಂ ಯಲ್ಲಿ ಭಾಗವಹಿಸಲು ಈ ಸೈಕಲ್ ಯಾತ್ರೆಯ ಅವಕಾಶ ಕಲ್ಪಿಸಿದೆ, ಇಲ್ಲಿಯವರೆಗೂ 3500 ಕೀ.ಮಿ ಯಾತ್ರೆ ಮಾಡಿದ್ದು, ದೊಡ್ಡಬಳ್ಳಾಪುರ ಮೂಲಕ ಡಿಸೇಂಬರ್ 29 ರಂದು ತುಮಕೂರು ಜಿಲ್ಲೆ ಪ್ರವೇಶಿಸಿದ ಕಿರಣ್ ಸೇಠ್ ಅವರು ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ಪ್ರವೇಶಿಸಲಿದ್ದಾರೆ, ದೇಶದ ಬುನಾದಿಯಾದ ಶಿಕ್ಷಣ ತಜ್ಞರನ್ನು ಶಿಕ್ಷಕವೃಂದ ಮತ್ತು ಯುವ ಪೀಳಿಗೆಯನ್ನು ಉತ್ತೇಜಿಸಲಿದ್ದಾರೆ. SPIಅ ಒಂಅಂಙ ಯೊಂದಿಗೆ ಸಹವರ್ತಿಸಲು ಮತ್ತು ಜೊತೆಗೂಡಲು ಕರ್ನಾಟಕದ ಸ್ವಯಂ ಸೇವಕರನ್ನು ಸಂಪರ್ಕಿಸಿ: 9483537697, 9141219269, 6362093267.
ಈ ಸಂದರ್ಭದಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜನಾಧಿಕಾರಿ ನವೀನ್ ಕುಮಾರ್, ಎಂಪ್ರೆಸ್ ಕಾಲೇಜ್ ಪ್ರಾಚಾರ್ಯ ಷಣ್ಮುಖ ಎಸ್, ಉಪ ಪ್ರಾಚಾರ್ಯ ಶಿವಾಜಿರಾವ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಗ್ರಾಹಕರ ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವುವನ್ನು ಸಾರ್ವಜನಿಕರು ಪಡೆಯಬೇಕು: ಅಧ್ಯಕ್ಷೆ ವಿಜಯಲಕ್ಷ್ಮೀ ಜಿ.ಟಿ
ತುಮಕೂರು, ಡಿಸೆಂಬರ್ ,29: ಗ್ರಾಹಕರ ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವುವನ್ನು ಸಾರ್ವಜನಿಕರು ಪಡೆಯಬೇಕು, ಗ್ರಾಹಕರು ತಾವು ಪಡೆಯುವ ವಸ್ತು, ಸೇವೆಗಳು ಗುಣಮಟ್ಟದಿಂದ ಇವೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಡು ಎಚ್ಚರದಿಂದ ವ್ಯವಹರಿಸಬೇಕು, ಅಗತ್ಯ ಬಿದ್ದರೆ ಗ್ರಾಹÀಕರ ವ್ಯಾಜ್ಯಗಳ ಪರಿಹಾರ ಆಯೋಗದ ಮೂಲಕ ನ್ಯಾಯ ಪಡೆಯಬಹುದು ಎಂದು ಜಿಲ್ಲಾ ಗ್ರಾಹÀಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ವಿಜಯಲಕ್ಷ್ಮೀ ಜಿ.ಟಿ ಹೇಳಿದರು.
ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 29ರ ಗುರುವಾರ ನಗರದ ಸಿದ್ಧಗಂಗಾ ಮಹಿಳಾ ಪದವಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾದ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2022” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಿಸೆಂಬರ್ 24, 1986 ರಂದು ಗ್ರಾಹಕ ಸಂರಕ್ಷಣಾ ಕಾಯಿದೆಯು ಭಾರತದ ರಾಷ್ಟ್ರಪತಿ ಒಪ್ಪಿಗೆಯನ್ನು ಪಡೆದು ಜಾರಿಗೆ ಬಂದಿತು, ಗ್ರಾಹಕರು ತಮ್ಮ ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವುದು ಈ ದಿನದ ಉದ್ದೇಶವಾಗಿದ್ದು, ವಾರ್ಷಿಕವಾಗಿ ಭಾರತದಾದ್ಯಂತ ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ, ದೋಷಯುಕ್ತ ಸರಕುಗಳು, ಸೇವೆಗಳ ಕೊರತೆ ಮತ್ತು ಅನ್ಯಾಯದ ವ್ಯಾಪಾರದಂತಹ ವಿವಿಧ ರೀತಿಯ ಶೋಷಣೆಯ ವಿರುದ್ಧ ಗ್ರಾಹಕರಿಗೆ ಪರಿಣಾಮಕಾರಿ ಸುರಕ್ಷತೆಗಳನ್ನು ಒದಗಿಸುವ ಗುರಿಯನ್ನು ಈ ಕಾಯ್ದೆ ಹೊಂದಿದೆ, ಇ-ಕಾಮರ್ಸ್ ಸೇರಿದಂತೆ ಹಲವು ವ್ಯವಹಾರಗಳನ್ನು ನಿಯಮಗಳಿಗೆ ಸೇರಿಸಲಾಗಿದೆ, ಗ್ರಾಹಕರ ವಿವಾದದ ಇತ್ಯರ್ಥಕ್ಕೆ ಆಯೋಗಗಳನ್ನು ಸ್ಥಾಪಿಸುವ ಮೂಲಕ ಗ್ರಾಹಕರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಗ್ರಾಹಕ ಸಂರಕ್ಷಣಾ ಕಾಯಿದೆ-2019 ಇದೆ, ಈ ವರ್ಷ ರಾಷ್ಟ್ರೀಯ ಗ್ರಾಹಕ ದಿನವನ್ನು ‘ಪರಿಣಾಮಕಾರಿ ಇತ್ಯರ್ಥ " ಎಂಬ ಥೀಮ್ನೊಂದಿಗೆ ಆಚರಿಸಲಾಗುತ್ತಿದೆ,
ಮೋಸ ಹೋದ ಯಾವುದೇ ಗ್ರಾಹಕನು ತನಗಾದ ನಷ್ಟವನ್ನು ಹಿಂಪಡೆಯಲು ಗ್ರಾಹಕನು ವಾಸಿಸುವ ಅಥವಾ ಕೆಲಸ ಮಾಡುವ ಪ್ರದೇಶದ ಗ್ರಾಹಕ ವೇದಿಕೆಗೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಬಹುದು ಪರಿಹಾರ ಕೇಳುವ ಒಟ್ಟು ಮೊತ್ತದ ಆಧಾರದ ಮೇಲೆ ಜಿಲ್ಲಾ ಮಟ್ಟದಲ್ಲಿ, ಜಿಲ್ಲಾ ಗ್ರಾಹÀಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 50 ಲಕ್ಷ ರೂ ಒಳಗಿನ, ರಾಜ್ಯ ಮಟ್ಟದಲ್ಲಿ ರಾಜ್ಯ ಗ್ರಾಹÀಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 50 ಲಕ್ಷದಿಂದ 02 ಕೋಟಿ ರೂ, ರಾಷ್ಟ್ರ ಮಟ್ಟದಲ್ಲಿ ರಾಷ್ಟ್ರೀಯ ಗ್ರಾಹÀಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ 02 ಕೋಟಿ ರೂ.ಗಿಂತ ಅಧಿಕಮೊತ್ತದ ಪರಿಹಾರಕ್ಕಾಗಿ ಉತ್ಪನ್ನ ಅಥವಾ ಸೇವೆಯಿಂದ ಉಂಟಾಗುವ ಹಾನಿಗೆ ಗ್ರಾಹಕರು ಪರಿಹಾರವನ್ನು ಪಡೆಯಬಹುದು, ವಕೀಲರ ಅವಶ್ಯಕತೆ ಇಲ್ಲದೆ ನೇರವಾಗಿ ಸರಳವಾಗಿ ದೂರನ್ನು ಸಲ್ಲಿಸಬಹದಾಗಿದ್ದು, 5 ಲಕ್ಷದವರಗಿನ ಪ್ರಕರಣಗಳಿಗೆ ಸಂಪೂರ್ಣ ಉಚಿತ ನೆರವು ಇರುತ್ತದೆ,ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ಧಗಂಗಾ ಮಹಿಳಾ ಪದವಿ ಕಾಲೇಜ್ನ ಪ್ರಾಚಾರ್ಯರಾದ ಕೆ.ಸಿ ಜಯಸ್ವಾಮಿ ಮಾತನಾಡಿ, ಮೋಸ ಮಾಡುವವರು ತುಂಬಾ ಚಾಣಾಕ್ಷ ನಡೆ ಅನುಸರಿಸುತ್ತಾರೆ. ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಪ್ರತಿಯೊಬ್ಬರೂ ಸುಶಿಕ್ಷತರಾಗಿ ಕಾನೂನುಗಳ ಬಗ್ಗೆ ಅರಿವು ಹೊಂದಬೇಕು, ಅದರಲ್ಲೂ ತಂತ್ರಜ್ಞಾನದ ಮೂಲಕ ನಡೆಯುವ ಅಪರಾಧಗಳ ಬಗ್ಗೆ ಜಾಗರೂಕರಾಗಿರಬೇಕು, ಎಂದು ಕಿವಿಮಾತು ಹೇಳಿದರು.
ನ್ಯಾಯವಾದಿಗಳು ಹಾಗೂ ಸಂಪನ್ಮೂಲ ವ್ಯಕ್ತಿ ಟಿ.ಎಸ್. ನಿರಂಜನ್ ಉಪನ್ಯಾಸ ನೀಡಿದರು.
ಗ್ರಾಹಕ ಮಾಹಿತಿ ಕೇಂದ್ರ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಯುಕ್ತವಾಗಿ ಗ್ರಾಹಕರ ವ್ಯಾಜ್ಯ ಪರಿಹರಿಸಲು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಗ್ರಾಹÀಕರ ವ್ಯಾಜ್ಯಗಳ ಪರಿಹಾರ ಆಯೋಗ ಸ್ಥಾಪಿಸಿದ್ದು, ಜಿಲ್ಲೆಯಲ್ಲಿ, ಅಶೋಕ ರಸ್ತೆಯ ರೆಡ್ ಕ್ರಾಸ್ ಕಟ್ಟಡದಲ್ಲ್ಲಿ ಜಿಲ್ಲಾ ಗ್ರಾಹÀಕರ ವ್ಯಾಜ್ಯಗಳ ಪರಿಹಾರ ಆಯೋಗ ವೀರುತ್ತದೆ, ಮೋಸಕ್ಕೊಳಗಾದ ಗ್ರಾಹಕರು ಪರಿಹಾರದ ನಿಟ್ಟಿನಲ್ಲಿ ದೂರು ಸಲ್ಲಿಸಲು ಸಂಪರ್ಕಿಸಬಹದು, ಹೆಚ್ಚಿನ ಮಾಹಿತಿಗೆ 0816-2273037 ಇ ಮೇಲ್ ವಿಳಾಸ:ಣmಞಜಛಿಜಿ-ಞಚಿ@ಟಿiಛಿ.iಟಿನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಗ್ರಾಹÀಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷರಾದ ವಿಜಯಲಕ್ಷ್ಮೀ ಜಿ.ಟಿ ತಿಳಿಸಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ವಸ್ತುಪ್ರದರ್ಶನ: ಇಲಾಖಾ ವತಿಯಿಂದ ತೂಕದಲ್ಲಿ ಮೋಸ ಹೋಗದಂತೆ ಅರಿವು ಮೂಡಿಸುವ ತೂಕ ಮತ್ತು ಆಳತೆ ವಸ್ತು ಹಾಗೂ ಗ್ರಾಹಕರ ಹಕ್ಕುಗಳ ಮಾಹಿತಿ ಒಳಗೊಂಡ ವಸ್ತು ಪ್ರದರ್ಶನದ ಪ್ರಾತಾಕ್ಷಿತೆಯನ್ನು ಪ್ರದರ್ಶಿಸಲಾಯಿತು, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕರಾದ ರವೀಶ್, ನಿರೀಕ್ಷಕರಾದ ರಾಘವೇಂದ್ರ, ಮಧು ಡಿ, ರವೀಶ ಚಂದ್ರ, ಮೊದಲಾದವರು ಪ್ರದರ್ಶನದಲ್ಲಿ ಇಡಲಾಗಿದ್ದ ತೂಕ, ಆಳತೆ ಪೊಟ್ಟಣ ಸಾಮಗ್ರಿ ಮೊದಲಾದವುಗಳ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆÀ ವಿವರಿಸಿ, ಜಾಗೃತಿ ಮೂಡಿಸಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ರವೀಶ್ ವಂದನಾರ್ಪಣೆ ಮಾಡಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ ,ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಸದಸ್ಯೆ ನಿವೇದಿತಾ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಶಿರಸ್ತೇದಾರ ಡಿ. ನಾಗರಾಜು, , ಸೇರಿದಂತೆ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಿಧ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link