ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆ - ಜಿಲ್ಲಾ ಉಸ್ತುವಾರಿ ಸಚಿವರ 74 ನೇ ಗಣರಾಜ್ಯೋತ್ಸವ ಸಂದೇಶ
Kemmannu News Network, 26-01-2023 16:21:20
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ದಿನಾಂಕ 26-01-2023 ರಂದು ನಡೆದ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆ.
ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆ - ಜಿಲ್ಲಾ ಉಸ್ತುವಾರಿ ಸಚಿವರ 74 ನೇ ಗಣರಾಜ್ಯೋತ್ಸವ ಸಂದೇಶ
ಈ ಸಂಭ್ರಮದ ಸಮಾರಂಭದ ಅಧ್ಯಕ್ಷತೆ ವಹಿಸಿರುವ ಶಾಸಕ ರಘುಪತಿ ಭಟ್ ಅವರೇ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅವರೇ , ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಅವರೇ , ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಎಸ್ ಕಲ್ಮಾಡಿ ಅವರೇ,ವೇದಿಕೆ ಮೇಲಿರುವ ಎಲ್ಲಾ ಗಣ್ಯರೇ, ಚುನಾಯಿತ ಪ್ರತಿನಿಧಿಗಳೇ, ಜಿಲ್ಲಾಧಿಕಾರಿಗಳೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೇ, ಎಲ್ಲಾ ಅಧಿಕಾರಿಗಳೇ, ಸಿಬ್ಬಂದಿಗಳೇ, ನಾಗರೀಕ ಬಂಧುಗಳೇ, ಪ್ರೀತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರೇ, ಮಾಧ್ಯಮ ಸ್ನೇಹಿತರೇ…
ಥಮವಾಗಿ ನಿಮ್ಮೆಲ್ಲರಿಗೂ ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ನಾನು ಹಾರ್ದಿಕ ಶುಭ ಕಾಮನೆಗಳನ್ನು ಕೋರುತ್ತೇನೆ.
1950 ಜನವರಿ 26 ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಸ್ವ್ವಾತಂತ್ರ್ಯ ಭಾರತವು ತನ್ನ ಸಂವಿಧಾನವನ್ನು ಅನುಷ್ಠಾನಕ್ಕೆ ತಂದು ದೇಶದ ಆಡಳಿತಕ್ಕೆ ಕಾನೂನು ಚೌಕಟ್ಟನ್ನು ರೂಪಿಸಿದ ಈ ದಿನವು ನಮ್ಮೆಲ್ಲರಿಗೂ ಐತಿಹಾಸಿಕವಾಗಿದೆ. ವಿಶ್ವದ ವಿಶಾಲ ಹಾಗೂ ಅತ್ಯಂತ ಬಲಿಷ್ಠ ಪ್ರಜಾಪ್ರಭುತ್ವವನ್ನು ಮುನ್ನೆಡಸಿಕೊಂಡು ಬಂದ ನಮ್ಮ ದೇಶದ ಎಲ್ಲಾ ಧೀಮಂತ ನಾಯಕರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ.
ಡಾ|| ಬಿ.ಆರ್ ಅಂಬೇಡ್ಕರ್ರವರು ತಮ್ಮ ಅನುಭವ ಜ್ಞಾನ, ಅಧ್ಯಯನ, ದೂರದೃಷ್ಟಿಯ ಒಳನೋಟಗಳಿಂದ ಸಮಾಜದ ಎಲ್ಲಾ ಶೋಷಿತ ಜನ ಸಮುದಾಯದ ಏಳಿಗೆಗೆ, ಸಹಬಾಳ್ವೆಗೆ, ಮುಖ್ಯ ವಾಹಿನಿಗೆ ಬಂದು ಎಲ್ಲರಂತೆ ಬದುಕುವ ಅವಕಾಶಗಳನ್ನು ಕಲ್ಪಿಸುವ ಶ್ರೇಷ್ಠ ಸಂವಿಧಾನವನ್ನು ರಚಿಸಿದ್ದಾರೆ. ಆ ಮೂಲಕ ಮಾನವತೆಯ ಉಳಿವು, ಏಳಿಗೆ ಹಾಗೂ ಬೆಳವಣಿಗೆಗೆ ಸಹಕಾರಿಯಾಗಿದ್ದಾರೆ.
• ಭಾರತಕ್ಕೆ ಸ್ವಾತ್ರಂತ್ರ್ಯ ಬಂದು ಏಳೂವರೆ ದಶಗಳೇ ಕಳೆದು ಹೋಗಿವೆ. 141 ಕೋಟಿಗೂ ಮೀರಿದ ಜನಸಂಖ್ಯೆಯ 29 ರಾಜ್ಯಗಳು, ಏಳು ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟ ವ್ಯವಸ್ಥೆ ಭಾರತದ್ದು, ಪ್ರತಿಯೊಂದು ರಾಜ್ಯವೂ ತನ್ನದೇ ಆದ ಭಾಷೆ, ಸಂಸ್ಕೃತಿ ಮತ್ತು ಜೀವನ ವಿಧಾನ ಹೊಂದಿದೆ. ಆದರೂ ಎಲ್ಲಾ ಭಾಷೆ ಮತ್ತು ಸಂಸ್ಕೃತಿಯನ್ನು ಭಾರತೀಯತೆ ಎನ್ನುವ ಒಂದು ಬಂಧ ಹಿಡಿದಿಟ್ಟಿದೆ. ಅದಕ್ಕಾಗಿ ಭಾರತೀಯರೆಲ್ಲರಿಗೂ ಈ ಒಕ್ಕೂಟ ವ್ಯವಸ್ಥೆಯನ್ನು ಯಶಸ್ವಿಯಾಗಿ ಉಳಿಸಿಕೊಂಡಿರುವುದಕ್ಕಾಗಿ ಅಭಿನಂದಿಸುತ್ತೇನೆ.
• ನಾವು ನಮ್ಮ ಸಂವಿಧಾನವನ್ನು ಒಮ್ಮತದಿಂದ ಅಂಗೀಕರಿಸಿ ಗಣರಾಜ್ಯವಾಗಿ ಇಂದಿಗೆ 74 ವರ್ಷವಾಯಿತು. ಈ ಸಂದರ್ಭದಲ್ಲಿ ಗಣರಾಜ್ಯೋತ್ಸವದ ನಮ್ಮ ಆಶಯಗಳು ಫಲ ನೀಡಿವೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯ ಕಂಡು ಬಂದಿದೆ.
• ನಾವು ಎಷ್ಟೆಲ್ಲ ನಮ್ಮ ಭಾವೈಕ್ಯತೆಯ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡರೂ ಇಂದಿಗೂ ಸಹ ನಮ್ಮ ದೇಶದ ರಾಜ್ಯ ರಾಜ್ಯಗಳ ನಡುವೆ ಅನೇಕ ವ್ಯಾಜ್ಯಗಳು ಹಾಗೇ ಉಳಿದಿವೆ ಎಂದು ಖೇದದಿಂದಲೇ ಹೇಳಬೇಕಾಗಿದೆ. ಅದು ಗಡಿ ವಿವಾದವಿರಬಹುದು, ಅಂತರ್ರಾಜ್ಯ ಜಲವಿವಾದ ಇರಬಹುದು ಅಥವಾ ಅಭಿವೃದ್ಧಿಯ ಅಸಮತೋಲನದ ಅಸಮಧಾನವಿರಬಹುದು. ಇವೆಲ್ಲವೂ ನಮ್ಮ ರಾಜ್ಯಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದೆ, ಈ ಎಲ್ಲದರ ಮಧ್ಯೆ ಭಾರತ ಶತ್ರು ರಾಷ್ಟ್ರಗಳ ನಿರಂತರ ಕುತಂತ್ರ ಭಯೋತ್ಪಾದನೆ ದಾಳಿಗೆ ಒಳಗಾಗುತ್ತಲೇ ಇದೆ. ಆದರೂ ಈ ಎಲ್ಲವನ್ನು ಮೆಟ್ಟಿ ನಿಲ್ಲುವ ಶಕ್ತಿ ಭಾರತಕ್ಕಿದೆ. ನಾವು ಭಾರತೀಯರು ಎನ್ನುವ ಬಗ್ಗೆ ಹೆಮ್ಮೆ ಇದೆ.
• ದೇಶದಲ್ಲಿ ಯಾವುದೇ ದುಷ್ಟ ಶಕ್ತಿಗಳು ತಲೆ ಎತ್ತದಂತೆ ಮಾಡುವುದರ ಜೊತೆಗೆ ಸರ್ವ ಧರ್ಮಗಳನ್ನು ಗೌರವಿಸಿ ಯಾವುದೇ ಕೋಮು ಗಲಭೆಗಳಿಗೆ ಅವಕಾಶಕೊಡದೇ ಸರ್ವ ಧರ್ಮ ಸಮನ್ವಯ ಭಾವ ಬೆಳೆಸಿಕೊಂಡು ಹೋಗಲು ನಾವುಗಳೆಲ್ಲರೂ ಇಂದು ಪ್ರತಿಜ್ಞೆ ಮಾಡಬೇಕಾಗಿದೆ.
• ದೇಶದ ನಾಗರೀಕರಾಗಿ ಭವ್ಯ ಪರಂಪರೆ, ಸಂಸ್ಕೃತಿ ಇವುಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವತ್ತ ನಾವೆಲ್ಲರೂ ಯೋಚಿಸಬೇಕಾಗಿದೆ. ಜಾತಿ, ಭಾಷೆ, ಪಂಗಡ, ಸಂಕುಚಿತ ಭಾವನೆಯಿಂದ ಹೊರಬಂದು ಸ್ನೇಹ ಹಾಗೂ ಸೌಹಾರ್ದತೆಯ ವಾತಾವರಣ ನಿರ್ಮಿಸಿ ದೇಶದ ಒಗ್ಗಟ್ಟು ಮತ್ತು ಐಕ್ಯತೆಯನ್ನು ಕಾಪಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಾವು ನೀವುಗಳೆಲ್ಲರೂ ಒಟ್ಟಾಗಿ ಸೇರಿ ಶ್ರಮಿಸೋಣ.
• ಇಷ್ಟೆಲ್ಲದರ ಮಧ್ಯೆ ಭಾರತ ಇಂದು ವಿಶ್ವದ ಅತ್ಯಂತ ಬಲಿಷ್ಠ ರಾಷ್ಟ್ರಗಳ ಸಾಲಿಗೆ ಸೇರಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಕಾಶ ವಿಜ್ಞಾನಗಳಲ್ಲಿ ಭಾರತ ತನ್ನ ಸಾಧನೆಯಿಂದ ಪ್ರಪಂಚದ ಗಮನ ಸೆಳೆದಿದೆ. ಮುಖ್ಯವಾಗಿ ತನ್ನ ಮಾನವ ಸಂಪನ್ಮೂಲ ಕ್ಷಮತೆ ಬಗ್ಗೆ ವಿಶ್ವವೇ ಅಚ್ಚರಿಗೊಂಡಿದೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಮೂರುವರೆ ವರ್ಷಗಳನ್ನು ಪೂರೈಸಿದೆ.
ಹೊಸ ಚಿಗುರು ಹಳೆಬೇರು ಕೂಡಿರಲು ಮರ ಸೊಬಗು
ಹೊಸಯುಕ್ತಿ ಹಳೆತತ್ವದೊಡೆಗೂಡೆ ಧರ್ಮ
ಋಷಿ ವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ
ಜಸವು ಜನ ಜೀವನಕೆ – ಮಂಕುತಿಮ್ಮ
• ಡಿ.ವಿ ಗುಂಡಪ್ಪನವರ ಈ ಕವಿ ವಾಣಿಯ ಆಶಯದಂತೆ ನಮ್ಮ ಸರ್ಕಾರ ಅವಕಾಶ ವಂಚಿತರ, ಶೋಷಿತರ ಅಭ್ಯುದಯದ ತಳಹದಿಯ ಮೇಲೆ ಆಧುನಿಕ ಕರ್ನಾಟಕದ ಅಭಿವೃದ್ಧಿ ಸೌಧ ನಿರ್ಮಿಸಬೇಕೆನ್ನುವ ತತ್ವದಲ್ಲಿ ನಂಬಿಕೆ ಇಟ್ಟು ಸಾಮಾಜಿಕ ನ್ಯಾಯ, ಕೋಮು ಸೌಹಾರ್ದತೆ, ಗ್ರಾಮೀಣಾಭಿವೃದ್ಧಿ ಹಾಗೂ ರೈತರು, ಶೋಷಿತರು ಮತ್ತು ಮಹಿಳಾ ಪರ ಚಿಂತನೆಗಳಿಗೆ ಹಾಗೂ ರಾಜ್ಯದ ಸಮಗ್ರ ಬೆಳವಣಿಗೆಗೆ ಶ್ರಮಿಸುತ್ತಿದೆ.
• ರಾಜ್ಯದ ಎಲ್ಲಾ ವರ್ಗದವರ ಅಭಿವೃದ್ಧಿಗೆ ಸಮಗ್ರವಾದ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯ ಆರ್ಥಿಕತೆಯನ್ನು ಹೆಚ್ಚಿಸಿ, ಅದರ ಲಾಭವನ್ನು ಎಲ್ಲರಿಗೂ ತಲುಪಿಸುವ ಸದುದ್ದೇಶದಿಂದ ಸರ್ವರ ವಿಕಾಸಕ್ಕಾಗಿ ಸಮೃದ್ಧ ಕರ್ನಾಟಕ ಕಟ್ಟುವ ಸಂಕಲ್ಪವನ್ನು ನಮ್ಮ ಸರ್ಕಾರ ಮಾಡುತ್ತಿದೆ.
• ಜಾಗತಿಕ ಹೂಡಿಕೆದಾರರ ಸಮಾವೇಶ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಈ ಬಾರಿ 5 ಲಕ್ಷ ಕೋ.ರೂ. ಬಂಡವಾಳ ಹೂಡಿಕೆ, 5 ಲಕ್ಷ ಉದ್ಯೋಗ ಸೃಷ್ಠಿಯಾಗುವ ನಿರೀಕ್ಷೆ ಸರಕಾರದಾಗಿತ್ತು. ಆದರೆ, ಸಮಾವೇಶದಲ್ಲಿ 9.8 ಲಕ್ಷ ಕೋ.ರೂ. ಮೊತ್ತದ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆಯಾಗಿ ಉದ್ಯೋಗ ಸೃಷ್ಠಿ ಮತ್ತಷ್ಟು ಹೆಚ್ಚಲಿದೆ.
• ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಬಿದಿರಿನ ತೂಗುದ್ಯಾನ ಮತ್ತು ಆಧುನಿಕ ತಂತ್ರಜ್ಞಾನದೊಂದಿಗೆ ಆಕರ್ಷಕವಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣಕ್ಕೆ ಸರಿಸಮವಾಗಿಸಿದೆ.
• ರಾಜ್ಯದ ಎಲ್ಲಾ ಬಡತನ ರೇಖೆಗಿಂತ ಕೆಳಗಿರುವ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಮಾಸಿಕ 75 ಯುನಿಟ್ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಗೆ ತರಲಾಗಿದೆ.
• ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕದಡಲೆಂದೇ ಕೆಲವೊಂದು ಸಂಘಟನೆಗಳು ರಾಜ್ಯದಲ್ಲಿ ಹುಟ್ಟಿಕೊಂಡಿದೆ. ನಮ್ಮ ಸರ್ಕಾರವು ಹಲವು ವಿಧಾನಗಳನ್ನು ಪ್ರಯೋಗ ಮಾಡುವ ಮೂಲಕ ಇಂತಹ ಅಹಿತಕರ ಘಟನೆಗಳನ್ನು ನಿಯಂತ್ರಿಸುತ್ತಲೇ ಇದೆ.
• ಪ್ರಸಕ್ತ ವರ್ಷದಲ್ಲಿ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶವನ್ನು ಅತ್ಯುತ್ತಮ ಕರಾವಳಿ ರಾಜ್ಯವೆಂದು ಗುರುತಿಸಿ, ಕೇಂದ್ರ ಸರ್ಕಾರ ಘೋಷಿಸಿದೆ. ಇದು ಹೆಮ್ಮೆಯ ಸಂಗತಿ.
• ಸರಕಾರದ ಮುಜರಾಯಿ ಇಲಾಖೆಯ ಮಹಾತ್ವಾಕಾಂಕ್ಷಿ ಯೋಜನೆಯಾದ ಭಾರತ್ ಗೌರವ್ ಕಾಶಿ ದರ್ಶನ್ ರೈಲು ಸೇವೆ ಆರಂಭಿಸಲಾಗಿದ್ದು, ಇದರಿಂದಾಗಿ ಭಕ್ತರು ಕಡಿಮೆ ವೆಚ್ಚದಲ್ಲಿ ಕಾಶಿ ಯಾತ್ರೆ ಪ್ರಯಾಣ ಮಾಡಬಹುದಾಗಿದೆ.
• ರಾಜ್ಯದೆಲ್ಲೆಡೆಯಿಂದ ರೈತರು ಹಾಗೂ ಸಹಕಾರ ಸದಸ್ಯರ ಬೇಡಿಕೆಗೆ ಸ್ಪಂದಿಸಿ, ಯಶಸ್ವಿನಿ ಯೋಜನೆಯನ್ನು ನವೆಂಬರ್ 1 ರಿಂದ ರಾಜ್ಯದಲ್ಲಿ ಮತ್ತೆ ಮರು ಜಾರಿಗೊಳಿಸಲಾಗಿದೆ. ಇದ್ಕಕಾಗಿ 300 ಕೋ.ರೂ. ಗಳನ್ನು ಕಾಯ್ದಿರಿಸಲಾಗಿದೆ. ಇದರಿಂದ ರೈತಾಪಿ ಹಾಗೂ ಸಹಕಾರಿ ವರ್ಗದ ಬಡ ಕುಟುಂಬಗಳಿಗೆ ತುಂಬಾ ಅನುಕೂಲವಾಗಲಿದೆ.
• ರಾಜ್ಯದ ಹೈನುಗಾರಿಕೆಯ ಅಮೃತದಾರೆಯನ್ನು ವಿಶ್ವಮಾನ್ಯ ಮಾಡುವ ನಿಟ್ಟಿನಲ್ಲಿ ದೇಶದ್ಲಲಿಯೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರ ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಿದೆ. ಇದರಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ.
• ರೈತರ ಅನುಕೂಲ್ಕಕಾಗಿ ಅವರ ಹೊಲದಲ್ಲಿಯೇ ಸಲಹೆ, ಸೂಚನೆ, ಮಾರ್ಗದರ್ಶನ ಹಾಗೂ ತಾಂತ್ರಿಕತೆಯ ಮಾರ್ಗದರ್ಶನ ಮಾಡುವ ಸದುದ್ದೇಶದಿಂದ ಕೃಷಿ ಸಂಜೀವಿನಿ ಸಂಚಾರಿ ಆರೋಗ್ಯ ಚಿಕಿತ್ಸಾಲಯ ಪ್ರಾರಂಭಿಸಿದೆ.
• ದೇಶದ ಬೆಳವಣಿಗೆಯಲ್ಲಿ ಮಹಿಳೆಯರು ಕೂಡ ಮಹತ್ವದ ಪಾತ್ರ ವಹಿಸಿದ್ದು, ಸರ್ಕಾರವು ಮಹಿಳೆಯರು ಉದ್ಯಮಗಳನ್ನು ನಡೆಸಲು ಉತ್ತೇಜಿಸುವ ಸಲುವಾಗಿ ಆಯವ್ಯಯದಲ್ಲಿ ಮಹಿಳಾ ಕಲ್ಯಾಣ ಯೋಜನೆಗಳಿಗೆ 431.88 ಕೋ.ರೂ. ಗಳನ್ನು ಹಂಚಿಕೆ ಮಾಡಲಾಗಿದೆ.
• ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರ ಜೊತೆಯಲ್ಲಿ ಕ್ರೀಡೆಗೆ ಸಂಬಂದಿಸಿದ ಸೌಲಭ್ಯಗಳನ್ನು ದೇಶದ ಉದ್ದಗಲಕ್ಕೆ ಅಭಿವೃದ್ದಿಪಡಿಸಲು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಖೇಲೋ ಇಂಡಿಯಾ ಯೋಜನೆಯನ್ನು ಪ್ರಾರಂಬಿಸಿದರು. ನಮ್ಮ ಉಡುಪಿ ನಗರದಲ್ಲಿ 2 ಕೋಟಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಪ್ರಾರಂಭಿಸಲಾಗಿದೆ
• ಗುಡಿ ಕೈಗಾರಿಕೆ ಕೈಗೊಳ್ಳುವ ಕುಶಲಕರ್ಮಿಗಳಾದ , ಕಮ್ಮಾರ, ಮರಗೆಲಸ, ಕಲ್ಲಿನ ಹಾಗೂ ಮರದ ಕೆತ್ತನೆ,ಕುಂಬಾರಿಕೆ, ಕಸೂತಿ ಕೆಲಸ ಸೇರಿದಂತೆ ಮತ್ತಿತರಿಗೆ ರೂ. 50,000. ದ ಸಾಲ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದೆ.
• ದೇಶದಲ್ಲಿಯೇ ಕರ್ನಾಟಕವು ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಎಂಬ ಹೆಗ್ಗಳಿಕೆಯನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ. ಈವರೆಗೂ 78 ಲಕ್ಷ ರೈತರನ್ನು ಈ ಡಿಜಿಟಲೀಕರಣ ವ್ಯಾಪ್ತಿಗೆ ತರಲಾಗಿದೆ.
• ಅನ್ನದಾತ ರೈತರು ಸಮಾಜದ ಬೆನ್ನೆಲುಬಾಗಿದ್ದು, ಅವರ ಮೊಗದಲ್ಲಿ ನೆಮ್ಮದಿಯ ನಗು ಮೂಡಿಸುವ ಪ್ರಯತ್ನವಾಗಿ ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ಗೊಬ್ಬರ ವಿತರಣೆ, ಮಣ್ಣಿನ ಆರೋಗ್ಯ ಕಾಪಾಡಲು ಮಣ್ಣು ಆರೋಗ್ಯ ಚೀಟಿ ವಿತರಣೆ ಸಾವಯವ ಕೃಷಿಗೆ ಉತ್ತೇಜನ, ಮಳೆಯಾಶ್ರಿತ ರೈತರಿಗೆ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ, ಕೃಷಿ ಯಾಂತ್ರಿಕರಣಕ್ಕೆ ಆದ್ಯತೆ, ಸೇರಿದಂತೆ ಕೃಷಿ ಕ್ಷೇತ್ರವನ್ನು ಸಶಕ್ತಗೊಳಿಸಲು ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದೆ.
• ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನು ಜನಸಾಮಾನ್ಯರಿಗೆ ಪರಿಚಯಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ವೈಚಾರಿಕತೆಗಳನ್ನು ಬೆಳೆಸಲು ಸರ್ಕಾರ ಗಮನ ನೀಡಿದೆ. ರಾಜ್ಯದಲ್ಲಿ ವಿಜ್ಞಾನ ಶಿಕ್ಷಣವನ್ನು ಸದೃಢಗೊಳಿಸುವ ಮತ್ತು ವಿಜ್ಞಾನ ಕಲಿಕೆಯನ್ನು ಉತ್ತಮಗೊಳಿಸುವ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಜನಸಾಮಾನ್ಯರಲ್ಲಿ ಜನಪ್ರಿಯಗೊಳಿಸಲು ಅನೇಕ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಚಾರಿಕತೆ ಮೂಡಿಸಲು ಶ್ರಮಿಸುತ್ತಿದೆ.
• ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಡಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಹಾಗೂ ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವ ಜನೌಷಧಿ ಮಳಿಗೆಗಳನ್ನು ಸ್ಥಾಪಿಸುವಲ್ಲಿ ರಾಜ್ಯವು ಎರಡನೇ ಸ್ಥಾನವನ್ನು ಪಡೆದಿದೆ. ಈವರೆಗೆ ರಾಜ್ಯದಲ್ಲಿ 1052 ಕ್ಕೂ ಹೆಚ್ಚು ಜನೌಷಧಿ ಮಳಿಗೆಗಳನ್ನು ತೆರೆಯಲಾಗಿದೆ.
• ಮೀನಿನ ಆಹಾರಗಳು ರುಚಿಯಾಗಿರುವುದು ಒಂದು ಕಡೆಯಾದರೆ ನಮ್ಮ ದೇಹಕ್ಕೆ ಸಿಗುವ ಪ್ರಯೋಜನಗಳು ಹಲವು. ಮೀನು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವನ್ನಾಗಿ ಮಾಡಲು ಮೀನು ಕೃಷಿಗೆ ಉತ್ತೇಜನ ನೀಡುವುದರ ಜೊತೆಗೆ ರಫ್ತು ಮಾಡಲು ಪ್ರೋತ್ಸಾಹ ನೀಡಲಾಗುತ್ತಿದೆ.
• ಮೀನುಗಾರಿಕಾ ಅಭಿವೃದ್ಧಿ ನಿಗಮವು ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ಸಾರ್ವಜನಿಕರ ಸಹ ಭಾಗಿತ್ವ ಯೋಜನೆಯಡಿ ಜನಸಾಮಾನ್ಯರ ಮನೆಬಾಗಿಲಿಗೆ ತಾಜಾ ಮೀನು ಮತ್ತು ಮೀನಿನ ಉತ್ಪನ್ನಗಳನ್ನು ಶೀಘ್ರವಾಗಿ ತಲುಪಿಸುವ ಯೋಜನೆ ರೂಪಿಸಿದ್ದೇವೆ.
• ಕನ್ನಡ ಮನಸ್ಸುಗಳನ್ನು ಬೆಸೆಯುವ ಮತ್ತು ಜಾಗೃತಗೊಳಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ಕನ್ನಡ ರಾಜ್ಯೋತ್ಸವ ಮುನ್ನಾದಿನಗಳಲ್ಲಿ ಮಾತಾಡ್ ಮಾತಾಡ್ ಕನ್ನಡ , ಕೋಟಿಕಂಠ ಗಾಯನ ಅಪರೂಪದ ಹಾಗೂ ಅಭೂತಪೂರ್ವ ಸಮೂಹ ಗಾಯನದಲ್ಲಿ ಕೋಟಿಗೂ ಹೆಚ್ಚು ಜನ ಭಾಗವಹಿಸಿದ್ದನ್ನು ನಾವು ಕಂಡಿದ್ದೇವೆ.
• ರಾಜ್ಯದಲ್ಲಿ ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ನೀರಿನ ಉಪಯೋಗದ ದಕ್ಷತೆ ಹೆಚ್ಚಿಸಲು ರೈತರಿಗೆ ಶೇ. 90 ರಷ್ಟು ಸಹಾಯಧನದಲ್ಲಿ ತುಂತುರು ಹಾಗೂ ಹನಿ ನೀರಾವರಿ ಘಟಕಗಳನ್ನು ವಿತರಿಸಲಾಗುತ್ತಿದೆ. ರಾಜ್ಯದಲ್ಲಿ 9.58 ಲಕ್ಷ ರೈತರ 9.82 ಲಕ್ಷ ಹೆಕ್ಟೇರ್ ಪ್ರದೇಶ ಈ ಯೋಜನೆಯಡಿ ತರಲು 2010.9 ಕೋ.ರೂ ಸಹಾಯಧನವನ್ನು ಒದಗಿಸಲಾಗಿದೆ.
• ರಾಜ್ಯದ ಹದಿನಾಲ್ಕು ಲಕ್ಷ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ನೀಡಲಾಗುತ್ತಿದೆ. ರೈತ ಕೂಲಿಕಾರರು, ಮೀನುಗಾರರು, ನೇಕಾರರು, ಕಾರ್ಮಿಕರು, ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿಧಿ ವಿಸ್ತರಿಸಲಾಗಿದೆ. ಇದೇ ವರ್ಷ 1 ಲಕ್ಷ ಮೀನುಗಾರರ ಮಕ್ಕಳಿಗೂ ಈ ಯೋಜನೆಯನ್ನು ವಿತರಿಸುವ ಗುರಿ ಹೊಂದಲಾಗಿದೆ.
• ಕೃಷಿಯೇತರ ಚಟುವಟಿಕೆಗಳಿಂದ ರೈತರ ಆದಾಯವನ್ನು ಹೆಚ್ಚಿಸುವ ಸಲುವಾಗಿ ನಮ್ಮ ಸರ್ಕಾರವು ಭಾರತ ದೇಶದಲ್ಲಿಯೇ ಪ್ರಥಮ ಬಾರಿಗೆ “ ಸೆಕೆಂಡರಿ ಅಗ್ರಿಕಲ್ಚರಲ್ ನಿರ್ದೇಶನಾಲಯ” ಸ್ಥಾಪನೆಗೆ ಅದೇಶ ಹೊರಡಿಸಲಾಗಿದೆ.
• ಕಲ್ಯಾಣ ಕರ್ನಾಟಕ ಎಂಬ ಹೆಸರು ಅನ್ವರ್ಥವಾಗುವಂತೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಮೂಲ ಸೌಕರ್ಯ ಒದಗಿಸುವ ಮೂಲಕ ಸಮಾನತೆಯೊಂದಿಗೆ ಗಮನಾರ್ಹ ಸುಧಾರಣೆಗೆ ನಿರ್ದಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದೆ.
• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದ್ದು, ಇವುಗಳ ಅನುಷ್ಠಾನಕೆ ಕಾರ್ಯನಿರ್ವಹಿಸುತ್ತಿರುವ ಇಲಾಖೆಗಳಲ್ಲಿ ಕುಂದು ಕೊರತೆಗಳ ಪರಿಹಾರಕ್ಕಾಗಿ ಸರಕಾರವು ಕಲ್ಯಾಣ ಮಿತ್ರ ಸಹಾಯವಾಣಿಯನ್ನು ಪ್ರಾರಂಭಿಸಿದೆ.
• ಕೇಂದ್ರ ಸರ್ಕಾರದ ಮಹತ್ವದ ಹರ್ ಘರ್ ತಿರಂಗ ಅಭಿಯಾನಕ್ಕೆ ಇಡೀ ದೇಶವೇ ಕೈಜೋಡಿಸುವ ಮೂಲಕ ಯಶಸ್ವಿಗೊಂಡಿತು. ರಾಜ್ಯದ ಕೋಟ್ಯಾಂತರ ಮನೆಗಳ ಹಾಗೂ ಅಂಗಡಿ-ಮುಂಗಟ್ಟುಗಳ ಮೇಲೆ ರಾಷ್ಟ್ರಧ್ವಜ ಹಾರಾಡಿತು. ಇದು ನಮ್ಮ ದೇಶದ ಜನರ ದೇಶಭಕ್ತಿಯನ್ನು ತೋರಿಸುತ್ತದೆ.
• ಗೋಹತ್ಯೆ ನಿಷೇಧ ಕಾಯ್ದೆ ಜಾರಿಯ ನಂತರ ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮ ಸರ್ಕಾರವು ಗೋವುಗಳ ಸಂರಕ್ಷಣೆಗಾಗಿ ಪುಣ್ಯಕೋಟಿ ದತ್ತು ಯೋಜನೆ ಜಾರಿಗೊಳಿಸಿದೆ. ಈ ಕಾರ್ಯಕ್ಕೆ ರಾಜ್ಯ ಸರಕಾರಿ ನೌಕರರು 40 ಕೋ. ರೂ. ಗಳಿಗೂ ಹೆಚ್ಚು ಹಣವನ್ನು ದೇಣಿಗೆ ನೀಡಿದ್ದಾರೆ.
• ಸರ್ಕಾರಿ ಶಾಲಾ-ಕಾಲೇಜುಗಳ ಮಕ್ಕಳಿಗೆ ಮೂಲಭೂತ ಅವಶ್ಯಕತೆಗಳಲ್ಲಿ ಪ್ರಮುಖವಾದ ಹೆಚ್ಚುವರಿ ಹಾಗೂ ಸುಸಜ್ಜಿತ ಕಟ್ಟಡಗಳ ನಿರ್ಮಾಣಕ್ಕೆ ವಿವೇಕ ಹೆಸರಿನಲ್ಲಿ ಯೋಜನೆ ಹಮ್ಮಿಕೊಂಡಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 6601 ಕೊಠಡಿ ಹಾಗೂ ಪದವಿ ಪೂರ್ವ ಕಾಲೇಜುಗಳ 1500 ಕೊಠಡಿಗಳು ಸೇರಿದಂತೆ 8101 ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
• ಸರ್ವರಿಗೂ ಆರೋಗ್ಯ ಸೇವೆಯನ್ನು ನೀಡಬೇಕು ಎಂಬ ಧ್ಯೇಯ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುತ್ತಿದ್ದು, ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 1000 ಕೋ.ರೂ. ವೆಚ್ಚದಲ್ಲಿ ಸಮುದಾಯ ಕೇಂದ್ರಗಳನ್ನಾಗಿ ಉನ್ನತೀಕರಣಗೊಳಿಸಲಾಗುತ್ತಿದೆ.
• ರಾಜ್ಯದ ನಗರಗಳಲ್ಲಿ ವಾಸಿಸುವ ಬಡಜನರು ಹಾಗೂ ಮಧ್ಯಮ ವರ್ಗದ ಜನರಿಗಾಗಿ 103 ಕೋ.ರೂ ವೆಚ್ಚದಲ್ಲಿ 438 ನಮ್ಮ ಕ್ಲಿನಿಕ್ಗಳನ್ನು ಸ್ಥಾಪಿಸಲಾಗಿದೆ. ಈ ಕ್ಲಿನಿಕ್ಗಳಲ್ಲಿ ಸುಮಾರು 14 ಕ್ಕೂ ಹೆಚ್ಚಿನ ರೀತಿಯ ತಪಾಸಣೆ ಸೌಕರ್ಯ ಹಾಗೂ ಉಚಿತ ಔಷಧಿ ನೀಡಲಾಗುವುದಲ್ಲದೇ ಹೆಚ್ಚಿನ ಚಿಕಿತ್ಸೆಗೆ ತಜ್ಞರ ಸಲಹೆ ಪಡೆದುಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.
• ಪ್ರವಾಹ ಉಂಟಾದ ಸಂದರ್ಭದಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಗಳಲ್ಲಿ ಇಡೀ ಆಡಳಿತ ಯಂತ್ರ ಒಟ್ಟಾಗಿ ಶ್ರಮಿಸಿ, ಜನರ ಸಂಕಷ್ಟಕ್ಕೆ ಸ್ಪಂದಿಸಿ, ಅದ್ಭುತ ಕೆಲಸ ಮಾಡಲಾಗಿದೆ. ಪರಿಹಾರ ವಿತರಣೆಯನ್ನು ಚುರುಕಾಗಿ ನಿರ್ವಹಿಸಿದೆ.
• ಮೀನುಗಾರಿಕಾ ಅಭಿವೃದ್ಧಿಗೆ ರಾಜ್ಯದ ಆಯವ್ಯಯದಲ್ಲಿ ಪ್ರಸಕ್ತ ಸಾಲಿಗೆ 279.91 ಕೋ.ರೂ.ಗಳನ್ನು ನಿಗಧಿಪಡಿಸಲಾಗಿದೆ.
• ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಈ ಸಾಲಿನಲ್ಲಿ ಈವರೆಗೆ 559 ಫಲಾನುಭವಿಗಳಿಗೆ 2758.70 ಲಕ್ಷ ರೂ. ಗಳ ಸಹಾಯಧನವನ್ನು ವಿವಿಧ ಘಟಕಗಳಿಗೆ ನೀಡಲಾಗಿದೆ.
• ಕರಾವಳಿಯಲ್ಲಿ ಕಾರ್ಯಾಚರಿಸುತ್ತಿರುವ 3329 ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಿಗೆ ರಾಜ್ಯದ ಮಾರಾಟ ಕರ ರಹಿತ ಡೀಸೆಲ್ ಅನ್ನು ಒದಗಿಸಲಾಗುತ್ತಿದೆ. ಅಲ್ಲದೇ 78,983 ಮೀನುಗಾರರನ್ನು ಸಾಮೂಹಿಕ ಅಪಘಾತ ವಿಮಾ ಯೋಜನೆಗೆ ಒಳಪಡಿಸಿ, ವಿಮಾ ಕಂತಿನ ಮೊತ್ತವನ್ನು ಸರ್ಕಾರವೇ ಭರಿಸುತ್ತಿದೆ.
• ಮತ್ಸ್ಯಸಿರಿ ಯೋಜನೆಯಡಿ 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳನ್ನು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಂಯೋಜಿಸಿ ನೀಡಲು ಉದ್ದೇಶಿಸಿದ್ದು, 120 ಕೋ.ರೂ. ಗಳ ಕ್ರಿಯಾಯೋಜನೆಗೆ ಕೇಂದ್ರ ಸರ್ಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದೆ.
• ಮತ್ಸಾ್ಯಶ್ರಯ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 5,000 ವಸತಿ ರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆಯ ಮೇಲೆ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ 69.64 ಕೋ.ರೂ. ಅನುದಾನ ಕಲ್ಪಿಸಲಾಗಿದೆ.
• ಮೀನುಗಾರಿಕಾ ಬಂದರುಗಳಲ್ಲಿ ಮೀನುಗಾರಿಕಾ ದೋಣಿಗಳು ಸುಗಮವಾಗಿ ಹಾಗೂ ವೇಗವಾಗಿ ಚಲಿಸಲು ಅನುಕೂಲವಾಗಿಸುವ ನ್ಯಾವಿಗೇಷನ್ ಚಾನೆಲ್ಗಳಲ್ಲಿ ಹಂತ ಹಂತವಾಗಿ ಹೂಳು ಎತ್ತಲಾಗುವುದು. ಈಗಾಗಲೇ 5 ಮೀನುಗಾರಿಕಾ ಬಂದರುಗಳಲ್ಲಿ 2,000 ಲಕ್ಷ ರೂ. ವೆಚ್ಚದಲ್ಲಿ ಹೂಳೆತ್ತಲು ಅನುಮೋದನೆ ನೀಡಲಾಗಿದೆ.
• ರಾಜ್ಯದ ಆಯ್ದ 5650 ಗ್ರಾಮ ಪಂಚಾಯತ್ ಕೆರೆಗಳಲ್ಲಿ ಜಲವಿಸ್ತೀರ್ಣಕ್ಕನುಗುಣವಾಗಿ ಮೀನುಮರಿಗಳನ್ನು ಉಚಿತವಾಗಿ ದಾಸ್ತಾನು ಮಾಡಿ, ಮೀನು ಕೃಷಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ. ಇದ್ಕಕಾಗಿ 565 ಲಕ್ಷ ರೂ. ಅನುದಾನ ಮೀಸಲಿರಿಸಲಾಗಿದೆ.
• ವಿದ್ಯುತ್ ರಹಿತ ಗ್ರಾಮೀಣ ಭಾಗದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬೆಳಕು ಕಾರ್ಯಕ್ರಮದಡಿ ಈವರೆಗೆ ರಾಜ್ಯದಲ್ಲಿ 1.44 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.
• ಸರ್ಕಾರದ ಸೇವೆ ಪಡೆಯಲು ನಾಗರಿಕರು ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ನಾಗರಿಕರ ಸೇವೆಗೆ ಸಕಾಲ ಯೋಜನೆ ಆರಂಭಗೊಂಡು ದಶಕಗಳು ಕಳೆಯುವುದರೊಂದಿಗೆ ಸಾರ್ವಜನಿಕರಿಗೆ ಸೇವೆ ಒದಗಿಸಿದೆ.
• ಕಾರ್ಮಿಕರ ಹಾಗೂ ಮಾಲೀಕರ ವಿವಾದವನ್ನು ಸೌಹಾರ್ದಿತವಾಗಿ ಮಾತುಕತೆಯ ಮೂಲಕ ಪರಿಹರಿಸಲು ಪ್ರತೀ ತಿಂಗಳು ಕಾರ್ಮಿಕ ಅದಾಲತ್ ನಡೆಸಲಾಗುತ್ತಿದೆ. ಇದರೊಂದಿಗೆ ಕಾರ್ಮಿಕರ ಬವಣೆ ನೀಗಿಸಲು ಮುಂದಾಗಿದ್ದೇವೆ.
• ಸಮಾಜದಲ್ಲಿನ ಅಶಕ್ತ ವರ್ಗದವರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನ ಅಡಿಯಲ್ಲಿ ಜಿಲ್ಲೆಯ 1,51,559 ಜನರಿಗೆ ಮಾಹೆವಾರು ಪಿಂಚಣಿ ನೀಡಲಾಗುತ್ತಿದೆ.
• ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯಡಿಯಲ್ಲಿ ಕೈಗಾರಿಕೋದ್ಯಮಿಗಳಿಗೆ 1212.28 ಲಕ್ಷ ಸಾಲ ನೀಡಲಾಗಿದೆ.
• ಗ್ರಾಮೀಣ ಪ್ರದೇಶಗಳಲ್ಲಿ ನೀರು ಪೂರೈಕೆ ಇಲ್ಲದ ಮನೆಗಳಿಗೆ ಕುಡಿಯುವ ನೀರು ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆ ಮನೆಗೆ ಗಂಗೆ ಯೋಜನೆಯಡಿ ಜಿಲ್ಲೆಯಲ್ಲಿ 2,47,188 ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲು ಗುರಿ ಹೊಂದಿದ್ದು, ಈಗಾಗಲೇ 1,67,701 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸೌಲಭ್ಯವನ್ನು ಕಲ್ಪಿಸಿದೆ. ಉಳಿದ ಮನೆಗಳಿಗೆ ಶೀಘ್ರವಾಗಿ ನಳ ನೀರಿನ ಸಂಪರ್ಕ ಕಲ್ಪಿಸಲಾಗುವುದು.
• ಜಿಲ್ಲೆಯಲ್ಲಿ ಕೋವಿಡ್ ಹರಡುವುದನ್ನು ನಿಯಂತ್ರಿಸಲು ಈವರೆಗೆ ವಯಸ್ಕರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 10,86,815 ಮಂದಿಗೆ ಲಸಿಕೆ ನೀಡಲಾಗಿದೆ. ಇದರ ಜೊತೆಗೆ 3,07,073 ಜನರಿಗೆ ಮುನ್ನೆಚ್ಚರಿಕಾ ಡೋಸ್ ಲಸಿಕೆ ಸಹ ನೀಡಲಾಗಿದೆ.
• ಪಶ್ಚಿಮವಾಹಿನಿ ಯೋಜನೆಯಡಿ ರೂ. 107.00 ಕೋಟಿ ಅಂದಾಜು ಮೊತ್ತದಲ್ಲಿ 81 ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ನಿರ್ಮಾಣ ಮಾಡಿ ಸುಮಾರು 1842.76 ಹೆಕ್ಟೇರ್ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ಈ ಪೈಕಿ 61 ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿ 1241.22 ಹೆಕ್ಟೇರ್ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗಿದೆ.
• ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಸಂರಕ್ಷಣೆಗಾಗಿ ಸುಮಾರು ರೂ. 38.96 ಕೋಟಿ ಅಂದಾಜು ಮೊತ್ತದಲ್ಲಿ 8.56 ಕಿ.ಮೀಟರ್ ಉದ್ದಕ್ಕೆ ನದಿದಂಡೆ ಸಂರಕ್ಷಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.
• ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಕಾರ್ಕಳ, ಹೆಬ್ರಿ ಮತ್ತು ಕಾಪು ತಾಲೂಕುಗಳ ವ್ಯಾಪ್ತಿಯ 122 ಗ್ರಾಮಗಳ 1904 ಗ್ರಾಮೀಣ ಜನ ವಸತಿಗಳಿಗೆ 1600 ಕೋ.ರೂ ಗಳಲ್ಲಿ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 59 ಗ್ರಾಮಗಳಿಗೆ 585.00 ಕೋ.ರೂ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.
• ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಕೃಷಿ ಚಟುವಟಿಕೆಯಲ್ಲಿ ಉತ್ತಮ ಪರಿಕರಗಳನ್ನು ಬಳಸಿ, ಬೆಳೆಗಳ ಆರೋಗ್ಯ ನಿರ್ವಹಣೆ ಮತ್ತು ಹೆಚ್ಚಿನ ಇಳುವರಿ ಪಡೆದು, ನಿರೀಕ್ಷಿತ ಆದಾಯ ಗಳಿಸಲು ನೆರವಾಗಲು ಕೇಂದ್ರ ಸರ್ಕಾರ 6000 ರೂ ಹಾಗೂ ರಾಜ್ಯ ಸರ್ಕಾರ 4000 ರೂ. ಸೇರಿದಂತೆ ವಾರ್ಷಿಕ 10000 ರೂ. ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 150,593 ರೈತರು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಒಟ್ಟಾರೆಯಾಗಿ 386.2 ಕೋ. ರೂ ಅನುದಾನ ಒದಗಿಸಲಾಗುತ್ತಿದೆ.
• ವಾರಾಹಿ ಏತ ನೀರಾವರಿ ಯೋಜನೆಯಡಿ ನಾಲಾ ಕಾಮಗಾರಿಗಳನ್ನು 3000 ಲಕ್ಷ ರೂ. ಗಳಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಎಣ್ಣೆ ಹೊಳೆ ಹಾಗೂ ಸೌಕೂರು ಏತ ನೀರಾವರಿ ಯೋಜನೆಗಳನ್ನು 1400 ಲಕ್ಷ ರೂ. ಗಳಲ್ಲಿ ಕೈಗೊಳ್ಳಲಾಗಿದೆ.
• ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 7.23 ಲಕ್ಷ ಮಾನದ ದಿನಗಳನ್ನು ಸೃಜನಿಸಿ 3851.68 ಲಕ್ಷ ರೂ ಗಳಲ್ಲಿ ವೆಚ್ಚದಲ್ಲಿ ಗ್ರಾಮೀಣ ಭಾಗದಲ್ಲಿ ವಿವಿಧ ಶಾಶ್ವತ ಅಭಿವೃಧ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
• ಹೆಜಮಾಡಿ ಮೀನುಗಾರಿಕಾ ಬಂದರು ನಿರ್ಮಾಣ ಕಾಮಗಾರಿ ಕಾರ್ಯವನ್ನು 188.73 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ.
• ಬೈಂದೂರು ತಾಲೂಕಿನ ಮರವಂತೆಯಲ್ಲಿ 2 ನೇ ಹಂತÀದ ಹೊರ ಬಂದರು ನಿರ್ಮಾಣ ಕಾಮಗಾರಿಯನ್ನು 8500 ಲಕ್ಷ ರೂ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ.
• ಮಲ್ಪೆ ಮೀನುಗಾರಿಕಾ ಬಂದರಿನ ಹೂಳೆತ್ತುವ ಕಾಮಗಾರಿಯ ಚಾಲನೆ ಹಾಗೂ ಮಲ್ಪೆ-ಉದ್ಯಾವರ ನದಿಯಲ್ಲಿ ಹೊಸದಾಗಿ ಜೆಟ್ಟಿ ನಿರ್ಮಾಣ ಮತ್ತು ಯಾಂತ್ರಿಕ ಸ್ಲಿಪ್ ವೇ ಯ ಉದ್ಘಾಟನೆಯನ್ನು ನೆನ್ನೆಯಷ್ಟೇ ಮಾಡಲಾಗಿದೆ.
• ಸಾಗರಮಾಲಾ ಯೋಜನೆಯಡಿಯಲ್ಲಿ ಹಂಗಾರಕಟ್ಟೆಯಿಂದ ಮಣಿಪಾಲದವರೆಗಿನ ಜಲಮಾರ್ಗವನ್ನು 2500 ಲಕ್ಷ ರೂ. ವೆಚ್ಚದಲ್ಲಿ ಅಭಿವೃಧ್ದಿ ಕಾಮಗಾರಿಗಳನ್ನು ಕೈಗೊಳ್ಳಲು ತಾತ್ವಿಕ ಅನುಮೋದನೆ ದೊರಕಿದೆ.
• ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ನಗರೋತ್ಥಾನ 4 ನೇ ಹಂತದಲ್ಲಿ 8000 ಲಕ್ಷ ರೂಗಳಲ್ಲಿ 71 ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.
• ಜಿಲ್ಲೆಯು ಆರಂಭಗೊಂಡು 25 ವರ್ಷಗಳು ಕಳೆದ ರಜತ ಸಂಭ್ರಮದ ಸವಿನೆನಪಿಗಾಗಿ, ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಆಗಿರುವ ಅಭಿವೃದ್ದಿ ಕಾರ್ಯಗಳು ಹಾಗೂ ಮುಂದಿನ 25 ವರ್ಷಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃಧ್ದಿ ಕಾರ್ಯಗಳ ಬಗ್ಗೆ ಚಿಂತನೆ ಸಹ ನಡೆದಿದೆ. ಇದೇ 27 ರಂದು ರಜತ ಮಹೋತ್ಸವದ ಸಮಾರೋಪವು ಪರಶುರಾಮ ಥೀಂ ಪಾರ್ಕ್ ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಕ್ತಾಯಗೊಳ್ಳಲಿದೆ.
• ಪಶ್ಚಿಮಘಟ್ಟ ತಪ್ಪಲಿನ ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ತುಳುನಾಡಿನ ಸೃಷ್ಠಿಕರ್ತನಾದ ಪರಶುರಾಮ ಅವರನ್ನು ನೆನಪಿಸುವ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನೊಳಗೊಂಡ ಥೀಮ್ ಪಾರ್ಕ್ ನ್ನು 15 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ನಾಳೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಯನ್ನು ಮಾಡಲಿದ್ದಾರೆ.
• ಇತ್ತೀಚೆಗೆ ನಡೆದ ಜಿಲ್ಲಾ ಬೀಚ್ ಉತ್ಸವವು ಇದೇ ಮಾಹೆಯ 20 ರಿಂದ 22 ರ ವರೆಗೆ ವೈಭವಯುತವಾಗಿ , ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳು ಹಾಗೂ ಜಲಕ್ರೀಡೆಗಳೊಂದಿಗೆ ಯಶಸ್ವಿಯಾಗಿ ನಡೆದಿದೆ.
• ಈ ರೀತಿಯಾಗಿ ಹತ್ತು ಹಲವು ವಿನೂತನ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ನಮ್ಮ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯನ್ನು ಮನಸ್ಸಿನಲ್ಲಿಟ್ಟುಕೊಂಡು ನಾವೆಲ್ಲರೂ ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಪಣತೊಡುವ ಜೊತೆಗೆ ನಮ್ಮ ಹೆಮ್ಮೆಯ ಗಣರಾಜ್ಯವನ್ನು ಯಶಸ್ವಿಗೊಳಿಸಲು ದೇಶದ ಸರ್ವರೂ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತಾ , ಮತ್ತೊಮ್ಮೆ ತಮ್ಮೆಲ್ಲರಿಗೂ ಗಣರಾಜ್ಯೋತ್ಸವದ ಶುಭಾಷಯಗಳನ್ನು ತಿಳಿಸುತ್ತೇನೆ.
ಜೈ ಹಿಂದ್.. ಜೈ ಕರ್ನಾಟಕ..
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link